Homeಕರ್ನಾಟಕ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿ ಸಮೀಪ ನಡೆದ ಪ್ರಕರಣದ ವರದಿ ಪ್ರಕಟಿಸಿರುವ ಸಂಬಂಧ ಮೈಸೂರಿನ ಪ್ರಾದೇಶಿಕ ದಿನಪತ್ರಿಕೆ ‘ಆಂದೋಲನ’ ಕುರಿತು ಸಂಸದ ಪ್ರತಾಪ್‌ ಸಿಂಹ ಅವರು ನೀಡಿರುವ ಅಸಂಬದ್ಧ ಹೇಳಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು ಆಗ್ರಹಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಪ್ರತಿಕ್ರಿಯೆ ಪಡೆದು ವರದಿ ಮಾಡಿದ ‘ಆಂದೋಲನ’ ದಿನಪತ್ರಿಕೆಯನ್ನು ಉಲ್ಲೇಖಿಸಿ ಪ್ರತಾಪ್‌ ಸಿಂಹ ಅವರು ಸುದ್ದಿಗೋಷ್ಠಿಯಲ್ಲಿ ‘ಪತ್ರಿಕೆ’ಯನ್ನು ಟಾರ್ಗೆಟ್ ಮಾಡಿ ಮಾತನಾಡಿರುವುದು ಖಂಡನೀಯ. ಈ ಬಗ್ಗೆ ಪ್ರತಾಪ್‌ ಸಿಂಹ ಅವರು ಕೂಡಲೇ ‘ಪತ್ರಿಕೆ’ಯ ಕ್ಷಮೆಯಾಚಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಟ್ವೀಟ್ ಮಾಡಿದ್ದಾರೆ.

ಏನಿದು ವಿವಾದ?

ಸಿದ್ದರಾಮನಹುಂಡಿಯಲ್ಲಿ ಗುರುವಾರ ಸಂಜೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿದೆ ಎನ್ನಲಾದ ಘರ್ಷಣೆ ಕುರಿತು ‘ಆಂದೋಲನ’ ವರದಿ ಪ್ರಕಟಿಸಿತ್ತು. ಪತ್ರಿಕೆಯು ವಾಸ್ತವಾಂಶಗಳನ್ನು ತಿರುಚಿ ಸುದ್ದಿ ಪ್ರಕಟಿಸಿದೆ ಎಂದು ಪ್ರತಾಪ್‌ ಆರೋಪಿಸಿದ್ದರು. ಸಂಸದರ ಹೇಳಿಕೆಯನ್ನು ಖಂಡಿಸಿ ‘ಆಂದೋಲನ’ ಮತ್ತೊಂದು ಟಿಪ್ಪಣಿಯನ್ನು ಪ್ರಕಟಿಸಿತ್ತು. ಜೊತೆಗೆ ತನ್ನ ವರದಿಗೆ ಬದ್ಧ ಎಂದು ಸ್ಪಷ್ಟಪಡಿಸಿತ್ತು.

‘ಆಂದೋಲನ’ ಹೇಳಿದ್ದೇನು?

“ಚುನಾವಣೆ ಸಂದರ್ಭದಲ್ಲಿ ವಿವಾದಗಳು, ವಾಗ್ವಾದಗಳು ಸಹಜ. ಆರೋಪಗಳು, ಆಪಾದನೆಗಳು, ಕೆಲವೊಮ್ಮೆ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಇಂಥ ಸಂದರ್ಭಗಳಲ್ಲಿ ಸಮಾಜದ ಸಾಮರಸ್ಯ ಕೆಡದಂತೆ ಕರ್ತವ್ಯ ನಿರ್ವಹಿಸಬೇಕಾಗಿರುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಧ್ಯಮಗಳ ಹೊಣೆ. ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳ ಹೇಳಿಕೆಗಳನ್ನು ತೆಗೆದುಕೊಂಡು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸಬೇಕು.”

“ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡೇ ಸಿದ್ದರಾಮನಹುಂಡಿ ಘಟನೆ ವರದಿಯನ್ನು ‘ಆಂದೋಲನ’ ಪ್ರಕಟಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ಹೇಳಿಕೆ ಹಾಗೂ ಘಟನಾವಳಿಯನ್ನು ಆಧರಿಸಿಯೇ ಈ ವರದಿ ಮಾಡಲಾಗಿದೆ.”

“ಆದರೆ, ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಈ ಸುದ್ದಿಯ ಜತೆ ಪ್ರಕಟವಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆಯು ಅವರು ಕೊಟ್ಟಿರುವುದಿಲ್ಲ, ಅವರನ್ನು ಕೋಟ್ ಮಾಡಿ ‘ಆಂದೋಲನ’ ಸುಳ್ಳು ಸುದ್ದಿ ಮಾಡಿದೆ. ಇದನ್ನು ನೇರವಾಗಿ ಹೇಳುತ್ತಿದ್ದೇನೆ. ಐ ಡೋಂಟ್ ಕೇರ್ ಎಂದು ಪತ್ರಿಕೆಯ ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ.”

“’ಆಂದೋಲನ’ ಮಾತ್ರವಲ್ಲ, ಬೇರೆ ಪತ್ರಿಕೆಗಳಲ್ಲೂ ಈ ವರದಿ ಪ್ರಕಟವಾಗಿದೆ. ಆದರೆ, ‘ಆಂದೋಲನ’ ದಿನಪತ್ರಿಕೆಯನ್ನು ಮಾತ್ರ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಗುರಿ ಮಾಡಿದ್ದಾರೆ. ಇದು ಸಂಸದರಿಗೆ ಶೋಭೆ ತರುವುದಿಲ್ಲ.”

‘ಆಂದೋಲನ’ ದಿನಪತ್ರಿಕೆ ನೀಡಿರುವ ಪ್ರತಿಕ್ರಿಯೆ

ಪ್ರತಾಪ್ ಸಿಂಹ ಹೇಳಿದ್ದೇನು?

“ನಾನು ನಿಮಗೆ ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ಮೊದಲು ಪೊಲೀಸ್ ಇಲಾಖೆಯವರನ್ನು ಕೇಳಿ, ಎಸ್ಪಿ ಅವರು ಮಾತನಾಡಿಯೇ ಇಲ್ಲ. ‘ಆಂದೋಲನ’ದಲ್ಲಿ ಬಂದಿರುವ ಸತ್ಯಕ್ಕೆ ದೂರವಾದ ಸುದ್ದಿಯನ್ನು ನೋಡಿ ಮಾತನಾಡಬೇಡಿ. ‘ಆಂದೋಲನ’ ಪತ್ರಿಕೆಯವರು ಆಗಾಗ ಪೊಲೀಸರನ್ನು ಕೋಟ್ ಮಾಡಿಕೊಂಡು ಈ ರೀತಿ ಸುಳ್ಳು ಸುದ್ದಿ ಬರೆಯುವುದನ್ನು ನಿಲ್ಲಿಸಬೇಕು. ನಾನು ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ನಾನು ಬೆಳಿಗ್ಗೆ ಎಸ್ಪಿ ಬಳಿ ಯಾಕೆ ಈ ರೀತಿ ಸ್ಟೇಟ್‌ಮೆಂಟ್ ಕೊಟ್ಟಿದ್ದೀರಿ ಎಂದು ಮಾತಾಡ್ಡೆ. ನಾನು ಸ್ಟೇಟ್‌ಮೆಂಟ್ ಕೊಟ್ಟಿಲ್ಲ. ಹಿಂದೇನೂ ‘ಆಂದೋಲನ’ದಲ್ಲಿ ಒಂದು ವರದಿ ಇದೇ ರೀತಿ ಆಗಿದೆ ಎಂದು ತಿಳಿಸಿದ್ದಾರೆ. ಸೋ ಐ ಪರ್ಟಿಕ್ಯುಲರ್ಲಿ ನೇಮಿಂಗ್ ದಿ ನ್ಯೂಸ್ ಪೇಪರ್, ಅಂಡ್ ಐ ಡೋಂಟ್ ಕೇರ್” ಎಂದು ಸಂಸದ ಪ್ರತಾಪ ಸಿಂಹ ಪತ್ರಿಕೆಯನ್ನು ಟೀಕಿಸಿದ್ದರು.

ಶುಕ್ರವಾರ ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ

ದಿವಂಗತ ರಾಜಶೇಖರ ಕೋಟಿಯವರು ಸ್ಥಾಪಿಸಿದ ಆಂದೋಲನ ದಿನಪತ್ರಿಕೆಗೆ ಐವತ್ತು ವರ್ಷಗಳ ಇತಿಹಾಸವಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಪ್ರಸರಣವನ್ನು ಹೊಂದಿರುವ ‘ಆಂದೋಲನ’, ದಲಿತ, ಆದಿವಾಸಿ, ರೈತ, ಕೂಲಿಕಾರ್ಮಿಕ ಮತ್ತು ಭಾಷಾ ಚಳವಳಿಗಳಿಗೆ ಬೆನ್ನೆಲುಬಾಗಿ ನಿಂತ ಇತಿಹಾಸವನ್ನು ಹೊಂದಿದೆ. ಪ್ರಗತಿಪರ ವಿಚಾರಧಾರೆ ಹಾಗೂ ಸೌಹಾರ್ದ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಂದೋಲನ ಮಹತ್ತರವಾದ ಕೆಲಸಗಳನ್ನು ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....