Homeಕರ್ನಾಟಕ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿ ಸಮೀಪ ನಡೆದ ಪ್ರಕರಣದ ವರದಿ ಪ್ರಕಟಿಸಿರುವ ಸಂಬಂಧ ಮೈಸೂರಿನ ಪ್ರಾದೇಶಿಕ ದಿನಪತ್ರಿಕೆ ‘ಆಂದೋಲನ’ ಕುರಿತು ಸಂಸದ ಪ್ರತಾಪ್‌ ಸಿಂಹ ಅವರು ನೀಡಿರುವ ಅಸಂಬದ್ಧ ಹೇಳಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು ಆಗ್ರಹಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಪ್ರತಿಕ್ರಿಯೆ ಪಡೆದು ವರದಿ ಮಾಡಿದ ‘ಆಂದೋಲನ’ ದಿನಪತ್ರಿಕೆಯನ್ನು ಉಲ್ಲೇಖಿಸಿ ಪ್ರತಾಪ್‌ ಸಿಂಹ ಅವರು ಸುದ್ದಿಗೋಷ್ಠಿಯಲ್ಲಿ ‘ಪತ್ರಿಕೆ’ಯನ್ನು ಟಾರ್ಗೆಟ್ ಮಾಡಿ ಮಾತನಾಡಿರುವುದು ಖಂಡನೀಯ. ಈ ಬಗ್ಗೆ ಪ್ರತಾಪ್‌ ಸಿಂಹ ಅವರು ಕೂಡಲೇ ‘ಪತ್ರಿಕೆ’ಯ ಕ್ಷಮೆಯಾಚಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಟ್ವೀಟ್ ಮಾಡಿದ್ದಾರೆ.

ಏನಿದು ವಿವಾದ?

ಸಿದ್ದರಾಮನಹುಂಡಿಯಲ್ಲಿ ಗುರುವಾರ ಸಂಜೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿದೆ ಎನ್ನಲಾದ ಘರ್ಷಣೆ ಕುರಿತು ‘ಆಂದೋಲನ’ ವರದಿ ಪ್ರಕಟಿಸಿತ್ತು. ಪತ್ರಿಕೆಯು ವಾಸ್ತವಾಂಶಗಳನ್ನು ತಿರುಚಿ ಸುದ್ದಿ ಪ್ರಕಟಿಸಿದೆ ಎಂದು ಪ್ರತಾಪ್‌ ಆರೋಪಿಸಿದ್ದರು. ಸಂಸದರ ಹೇಳಿಕೆಯನ್ನು ಖಂಡಿಸಿ ‘ಆಂದೋಲನ’ ಮತ್ತೊಂದು ಟಿಪ್ಪಣಿಯನ್ನು ಪ್ರಕಟಿಸಿತ್ತು. ಜೊತೆಗೆ ತನ್ನ ವರದಿಗೆ ಬದ್ಧ ಎಂದು ಸ್ಪಷ್ಟಪಡಿಸಿತ್ತು.

‘ಆಂದೋಲನ’ ಹೇಳಿದ್ದೇನು?

“ಚುನಾವಣೆ ಸಂದರ್ಭದಲ್ಲಿ ವಿವಾದಗಳು, ವಾಗ್ವಾದಗಳು ಸಹಜ. ಆರೋಪಗಳು, ಆಪಾದನೆಗಳು, ಕೆಲವೊಮ್ಮೆ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಇಂಥ ಸಂದರ್ಭಗಳಲ್ಲಿ ಸಮಾಜದ ಸಾಮರಸ್ಯ ಕೆಡದಂತೆ ಕರ್ತವ್ಯ ನಿರ್ವಹಿಸಬೇಕಾಗಿರುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಧ್ಯಮಗಳ ಹೊಣೆ. ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳ ಹೇಳಿಕೆಗಳನ್ನು ತೆಗೆದುಕೊಂಡು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸಬೇಕು.”

“ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡೇ ಸಿದ್ದರಾಮನಹುಂಡಿ ಘಟನೆ ವರದಿಯನ್ನು ‘ಆಂದೋಲನ’ ಪ್ರಕಟಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ಹೇಳಿಕೆ ಹಾಗೂ ಘಟನಾವಳಿಯನ್ನು ಆಧರಿಸಿಯೇ ಈ ವರದಿ ಮಾಡಲಾಗಿದೆ.”

“ಆದರೆ, ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಈ ಸುದ್ದಿಯ ಜತೆ ಪ್ರಕಟವಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆಯು ಅವರು ಕೊಟ್ಟಿರುವುದಿಲ್ಲ, ಅವರನ್ನು ಕೋಟ್ ಮಾಡಿ ‘ಆಂದೋಲನ’ ಸುಳ್ಳು ಸುದ್ದಿ ಮಾಡಿದೆ. ಇದನ್ನು ನೇರವಾಗಿ ಹೇಳುತ್ತಿದ್ದೇನೆ. ಐ ಡೋಂಟ್ ಕೇರ್ ಎಂದು ಪತ್ರಿಕೆಯ ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ.”

“’ಆಂದೋಲನ’ ಮಾತ್ರವಲ್ಲ, ಬೇರೆ ಪತ್ರಿಕೆಗಳಲ್ಲೂ ಈ ವರದಿ ಪ್ರಕಟವಾಗಿದೆ. ಆದರೆ, ‘ಆಂದೋಲನ’ ದಿನಪತ್ರಿಕೆಯನ್ನು ಮಾತ್ರ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಗುರಿ ಮಾಡಿದ್ದಾರೆ. ಇದು ಸಂಸದರಿಗೆ ಶೋಭೆ ತರುವುದಿಲ್ಲ.”

‘ಆಂದೋಲನ’ ದಿನಪತ್ರಿಕೆ ನೀಡಿರುವ ಪ್ರತಿಕ್ರಿಯೆ

ಪ್ರತಾಪ್ ಸಿಂಹ ಹೇಳಿದ್ದೇನು?

“ನಾನು ನಿಮಗೆ ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ಮೊದಲು ಪೊಲೀಸ್ ಇಲಾಖೆಯವರನ್ನು ಕೇಳಿ, ಎಸ್ಪಿ ಅವರು ಮಾತನಾಡಿಯೇ ಇಲ್ಲ. ‘ಆಂದೋಲನ’ದಲ್ಲಿ ಬಂದಿರುವ ಸತ್ಯಕ್ಕೆ ದೂರವಾದ ಸುದ್ದಿಯನ್ನು ನೋಡಿ ಮಾತನಾಡಬೇಡಿ. ‘ಆಂದೋಲನ’ ಪತ್ರಿಕೆಯವರು ಆಗಾಗ ಪೊಲೀಸರನ್ನು ಕೋಟ್ ಮಾಡಿಕೊಂಡು ಈ ರೀತಿ ಸುಳ್ಳು ಸುದ್ದಿ ಬರೆಯುವುದನ್ನು ನಿಲ್ಲಿಸಬೇಕು. ನಾನು ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ನಾನು ಬೆಳಿಗ್ಗೆ ಎಸ್ಪಿ ಬಳಿ ಯಾಕೆ ಈ ರೀತಿ ಸ್ಟೇಟ್‌ಮೆಂಟ್ ಕೊಟ್ಟಿದ್ದೀರಿ ಎಂದು ಮಾತಾಡ್ಡೆ. ನಾನು ಸ್ಟೇಟ್‌ಮೆಂಟ್ ಕೊಟ್ಟಿಲ್ಲ. ಹಿಂದೇನೂ ‘ಆಂದೋಲನ’ದಲ್ಲಿ ಒಂದು ವರದಿ ಇದೇ ರೀತಿ ಆಗಿದೆ ಎಂದು ತಿಳಿಸಿದ್ದಾರೆ. ಸೋ ಐ ಪರ್ಟಿಕ್ಯುಲರ್ಲಿ ನೇಮಿಂಗ್ ದಿ ನ್ಯೂಸ್ ಪೇಪರ್, ಅಂಡ್ ಐ ಡೋಂಟ್ ಕೇರ್” ಎಂದು ಸಂಸದ ಪ್ರತಾಪ ಸಿಂಹ ಪತ್ರಿಕೆಯನ್ನು ಟೀಕಿಸಿದ್ದರು.

ಶುಕ್ರವಾರ ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ

ದಿವಂಗತ ರಾಜಶೇಖರ ಕೋಟಿಯವರು ಸ್ಥಾಪಿಸಿದ ಆಂದೋಲನ ದಿನಪತ್ರಿಕೆಗೆ ಐವತ್ತು ವರ್ಷಗಳ ಇತಿಹಾಸವಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಪ್ರಸರಣವನ್ನು ಹೊಂದಿರುವ ‘ಆಂದೋಲನ’, ದಲಿತ, ಆದಿವಾಸಿ, ರೈತ, ಕೂಲಿಕಾರ್ಮಿಕ ಮತ್ತು ಭಾಷಾ ಚಳವಳಿಗಳಿಗೆ ಬೆನ್ನೆಲುಬಾಗಿ ನಿಂತ ಇತಿಹಾಸವನ್ನು ಹೊಂದಿದೆ. ಪ್ರಗತಿಪರ ವಿಚಾರಧಾರೆ ಹಾಗೂ ಸೌಹಾರ್ದ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಂದೋಲನ ಮಹತ್ತರವಾದ ಕೆಲಸಗಳನ್ನು ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...