Homeಕರ್ನಾಟಕ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿ ಸಮೀಪ ನಡೆದ ಪ್ರಕರಣದ ವರದಿ ಪ್ರಕಟಿಸಿರುವ ಸಂಬಂಧ ಮೈಸೂರಿನ ಪ್ರಾದೇಶಿಕ ದಿನಪತ್ರಿಕೆ ‘ಆಂದೋಲನ’ ಕುರಿತು ಸಂಸದ ಪ್ರತಾಪ್‌ ಸಿಂಹ ಅವರು ನೀಡಿರುವ ಅಸಂಬದ್ಧ ಹೇಳಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು ಆಗ್ರಹಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಪ್ರತಿಕ್ರಿಯೆ ಪಡೆದು ವರದಿ ಮಾಡಿದ ‘ಆಂದೋಲನ’ ದಿನಪತ್ರಿಕೆಯನ್ನು ಉಲ್ಲೇಖಿಸಿ ಪ್ರತಾಪ್‌ ಸಿಂಹ ಅವರು ಸುದ್ದಿಗೋಷ್ಠಿಯಲ್ಲಿ ‘ಪತ್ರಿಕೆ’ಯನ್ನು ಟಾರ್ಗೆಟ್ ಮಾಡಿ ಮಾತನಾಡಿರುವುದು ಖಂಡನೀಯ. ಈ ಬಗ್ಗೆ ಪ್ರತಾಪ್‌ ಸಿಂಹ ಅವರು ಕೂಡಲೇ ‘ಪತ್ರಿಕೆ’ಯ ಕ್ಷಮೆಯಾಚಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಟ್ವೀಟ್ ಮಾಡಿದ್ದಾರೆ.

ಏನಿದು ವಿವಾದ?

ಸಿದ್ದರಾಮನಹುಂಡಿಯಲ್ಲಿ ಗುರುವಾರ ಸಂಜೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿದೆ ಎನ್ನಲಾದ ಘರ್ಷಣೆ ಕುರಿತು ‘ಆಂದೋಲನ’ ವರದಿ ಪ್ರಕಟಿಸಿತ್ತು. ಪತ್ರಿಕೆಯು ವಾಸ್ತವಾಂಶಗಳನ್ನು ತಿರುಚಿ ಸುದ್ದಿ ಪ್ರಕಟಿಸಿದೆ ಎಂದು ಪ್ರತಾಪ್‌ ಆರೋಪಿಸಿದ್ದರು. ಸಂಸದರ ಹೇಳಿಕೆಯನ್ನು ಖಂಡಿಸಿ ‘ಆಂದೋಲನ’ ಮತ್ತೊಂದು ಟಿಪ್ಪಣಿಯನ್ನು ಪ್ರಕಟಿಸಿತ್ತು. ಜೊತೆಗೆ ತನ್ನ ವರದಿಗೆ ಬದ್ಧ ಎಂದು ಸ್ಪಷ್ಟಪಡಿಸಿತ್ತು.

‘ಆಂದೋಲನ’ ಹೇಳಿದ್ದೇನು?

“ಚುನಾವಣೆ ಸಂದರ್ಭದಲ್ಲಿ ವಿವಾದಗಳು, ವಾಗ್ವಾದಗಳು ಸಹಜ. ಆರೋಪಗಳು, ಆಪಾದನೆಗಳು, ಕೆಲವೊಮ್ಮೆ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಇಂಥ ಸಂದರ್ಭಗಳಲ್ಲಿ ಸಮಾಜದ ಸಾಮರಸ್ಯ ಕೆಡದಂತೆ ಕರ್ತವ್ಯ ನಿರ್ವಹಿಸಬೇಕಾಗಿರುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಧ್ಯಮಗಳ ಹೊಣೆ. ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳ ಹೇಳಿಕೆಗಳನ್ನು ತೆಗೆದುಕೊಂಡು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸಬೇಕು.”

“ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡೇ ಸಿದ್ದರಾಮನಹುಂಡಿ ಘಟನೆ ವರದಿಯನ್ನು ‘ಆಂದೋಲನ’ ಪ್ರಕಟಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ಹೇಳಿಕೆ ಹಾಗೂ ಘಟನಾವಳಿಯನ್ನು ಆಧರಿಸಿಯೇ ಈ ವರದಿ ಮಾಡಲಾಗಿದೆ.”

“ಆದರೆ, ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಈ ಸುದ್ದಿಯ ಜತೆ ಪ್ರಕಟವಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆಯು ಅವರು ಕೊಟ್ಟಿರುವುದಿಲ್ಲ, ಅವರನ್ನು ಕೋಟ್ ಮಾಡಿ ‘ಆಂದೋಲನ’ ಸುಳ್ಳು ಸುದ್ದಿ ಮಾಡಿದೆ. ಇದನ್ನು ನೇರವಾಗಿ ಹೇಳುತ್ತಿದ್ದೇನೆ. ಐ ಡೋಂಟ್ ಕೇರ್ ಎಂದು ಪತ್ರಿಕೆಯ ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ.”

“’ಆಂದೋಲನ’ ಮಾತ್ರವಲ್ಲ, ಬೇರೆ ಪತ್ರಿಕೆಗಳಲ್ಲೂ ಈ ವರದಿ ಪ್ರಕಟವಾಗಿದೆ. ಆದರೆ, ‘ಆಂದೋಲನ’ ದಿನಪತ್ರಿಕೆಯನ್ನು ಮಾತ್ರ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಗುರಿ ಮಾಡಿದ್ದಾರೆ. ಇದು ಸಂಸದರಿಗೆ ಶೋಭೆ ತರುವುದಿಲ್ಲ.”

‘ಆಂದೋಲನ’ ದಿನಪತ್ರಿಕೆ ನೀಡಿರುವ ಪ್ರತಿಕ್ರಿಯೆ

ಪ್ರತಾಪ್ ಸಿಂಹ ಹೇಳಿದ್ದೇನು?

“ನಾನು ನಿಮಗೆ ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ಮೊದಲು ಪೊಲೀಸ್ ಇಲಾಖೆಯವರನ್ನು ಕೇಳಿ, ಎಸ್ಪಿ ಅವರು ಮಾತನಾಡಿಯೇ ಇಲ್ಲ. ‘ಆಂದೋಲನ’ದಲ್ಲಿ ಬಂದಿರುವ ಸತ್ಯಕ್ಕೆ ದೂರವಾದ ಸುದ್ದಿಯನ್ನು ನೋಡಿ ಮಾತನಾಡಬೇಡಿ. ‘ಆಂದೋಲನ’ ಪತ್ರಿಕೆಯವರು ಆಗಾಗ ಪೊಲೀಸರನ್ನು ಕೋಟ್ ಮಾಡಿಕೊಂಡು ಈ ರೀತಿ ಸುಳ್ಳು ಸುದ್ದಿ ಬರೆಯುವುದನ್ನು ನಿಲ್ಲಿಸಬೇಕು. ನಾನು ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ನಾನು ಬೆಳಿಗ್ಗೆ ಎಸ್ಪಿ ಬಳಿ ಯಾಕೆ ಈ ರೀತಿ ಸ್ಟೇಟ್‌ಮೆಂಟ್ ಕೊಟ್ಟಿದ್ದೀರಿ ಎಂದು ಮಾತಾಡ್ಡೆ. ನಾನು ಸ್ಟೇಟ್‌ಮೆಂಟ್ ಕೊಟ್ಟಿಲ್ಲ. ಹಿಂದೇನೂ ‘ಆಂದೋಲನ’ದಲ್ಲಿ ಒಂದು ವರದಿ ಇದೇ ರೀತಿ ಆಗಿದೆ ಎಂದು ತಿಳಿಸಿದ್ದಾರೆ. ಸೋ ಐ ಪರ್ಟಿಕ್ಯುಲರ್ಲಿ ನೇಮಿಂಗ್ ದಿ ನ್ಯೂಸ್ ಪೇಪರ್, ಅಂಡ್ ಐ ಡೋಂಟ್ ಕೇರ್” ಎಂದು ಸಂಸದ ಪ್ರತಾಪ ಸಿಂಹ ಪತ್ರಿಕೆಯನ್ನು ಟೀಕಿಸಿದ್ದರು.

ಶುಕ್ರವಾರ ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ

ದಿವಂಗತ ರಾಜಶೇಖರ ಕೋಟಿಯವರು ಸ್ಥಾಪಿಸಿದ ಆಂದೋಲನ ದಿನಪತ್ರಿಕೆಗೆ ಐವತ್ತು ವರ್ಷಗಳ ಇತಿಹಾಸವಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಪ್ರಸರಣವನ್ನು ಹೊಂದಿರುವ ‘ಆಂದೋಲನ’, ದಲಿತ, ಆದಿವಾಸಿ, ರೈತ, ಕೂಲಿಕಾರ್ಮಿಕ ಮತ್ತು ಭಾಷಾ ಚಳವಳಿಗಳಿಗೆ ಬೆನ್ನೆಲುಬಾಗಿ ನಿಂತ ಇತಿಹಾಸವನ್ನು ಹೊಂದಿದೆ. ಪ್ರಗತಿಪರ ವಿಚಾರಧಾರೆ ಹಾಗೂ ಸೌಹಾರ್ದ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಂದೋಲನ ಮಹತ್ತರವಾದ ಕೆಲಸಗಳನ್ನು ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...