Homeಕರ್ನಾಟಕ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿ ಸಮೀಪ ನಡೆದ ಪ್ರಕರಣದ ವರದಿ ಪ್ರಕಟಿಸಿರುವ ಸಂಬಂಧ ಮೈಸೂರಿನ ಪ್ರಾದೇಶಿಕ ದಿನಪತ್ರಿಕೆ ‘ಆಂದೋಲನ’ ಕುರಿತು ಸಂಸದ ಪ್ರತಾಪ್‌ ಸಿಂಹ ಅವರು ನೀಡಿರುವ ಅಸಂಬದ್ಧ ಹೇಳಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು ಆಗ್ರಹಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಪ್ರತಿಕ್ರಿಯೆ ಪಡೆದು ವರದಿ ಮಾಡಿದ ‘ಆಂದೋಲನ’ ದಿನಪತ್ರಿಕೆಯನ್ನು ಉಲ್ಲೇಖಿಸಿ ಪ್ರತಾಪ್‌ ಸಿಂಹ ಅವರು ಸುದ್ದಿಗೋಷ್ಠಿಯಲ್ಲಿ ‘ಪತ್ರಿಕೆ’ಯನ್ನು ಟಾರ್ಗೆಟ್ ಮಾಡಿ ಮಾತನಾಡಿರುವುದು ಖಂಡನೀಯ. ಈ ಬಗ್ಗೆ ಪ್ರತಾಪ್‌ ಸಿಂಹ ಅವರು ಕೂಡಲೇ ‘ಪತ್ರಿಕೆ’ಯ ಕ್ಷಮೆಯಾಚಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಟ್ವೀಟ್ ಮಾಡಿದ್ದಾರೆ.

ಏನಿದು ವಿವಾದ?

ಸಿದ್ದರಾಮನಹುಂಡಿಯಲ್ಲಿ ಗುರುವಾರ ಸಂಜೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿದೆ ಎನ್ನಲಾದ ಘರ್ಷಣೆ ಕುರಿತು ‘ಆಂದೋಲನ’ ವರದಿ ಪ್ರಕಟಿಸಿತ್ತು. ಪತ್ರಿಕೆಯು ವಾಸ್ತವಾಂಶಗಳನ್ನು ತಿರುಚಿ ಸುದ್ದಿ ಪ್ರಕಟಿಸಿದೆ ಎಂದು ಪ್ರತಾಪ್‌ ಆರೋಪಿಸಿದ್ದರು. ಸಂಸದರ ಹೇಳಿಕೆಯನ್ನು ಖಂಡಿಸಿ ‘ಆಂದೋಲನ’ ಮತ್ತೊಂದು ಟಿಪ್ಪಣಿಯನ್ನು ಪ್ರಕಟಿಸಿತ್ತು. ಜೊತೆಗೆ ತನ್ನ ವರದಿಗೆ ಬದ್ಧ ಎಂದು ಸ್ಪಷ್ಟಪಡಿಸಿತ್ತು.

‘ಆಂದೋಲನ’ ಹೇಳಿದ್ದೇನು?

“ಚುನಾವಣೆ ಸಂದರ್ಭದಲ್ಲಿ ವಿವಾದಗಳು, ವಾಗ್ವಾದಗಳು ಸಹಜ. ಆರೋಪಗಳು, ಆಪಾದನೆಗಳು, ಕೆಲವೊಮ್ಮೆ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಇಂಥ ಸಂದರ್ಭಗಳಲ್ಲಿ ಸಮಾಜದ ಸಾಮರಸ್ಯ ಕೆಡದಂತೆ ಕರ್ತವ್ಯ ನಿರ್ವಹಿಸಬೇಕಾಗಿರುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಧ್ಯಮಗಳ ಹೊಣೆ. ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳ ಹೇಳಿಕೆಗಳನ್ನು ತೆಗೆದುಕೊಂಡು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸಬೇಕು.”

“ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡೇ ಸಿದ್ದರಾಮನಹುಂಡಿ ಘಟನೆ ವರದಿಯನ್ನು ‘ಆಂದೋಲನ’ ಪ್ರಕಟಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ಹೇಳಿಕೆ ಹಾಗೂ ಘಟನಾವಳಿಯನ್ನು ಆಧರಿಸಿಯೇ ಈ ವರದಿ ಮಾಡಲಾಗಿದೆ.”

“ಆದರೆ, ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಈ ಸುದ್ದಿಯ ಜತೆ ಪ್ರಕಟವಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆಯು ಅವರು ಕೊಟ್ಟಿರುವುದಿಲ್ಲ, ಅವರನ್ನು ಕೋಟ್ ಮಾಡಿ ‘ಆಂದೋಲನ’ ಸುಳ್ಳು ಸುದ್ದಿ ಮಾಡಿದೆ. ಇದನ್ನು ನೇರವಾಗಿ ಹೇಳುತ್ತಿದ್ದೇನೆ. ಐ ಡೋಂಟ್ ಕೇರ್ ಎಂದು ಪತ್ರಿಕೆಯ ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ.”

“’ಆಂದೋಲನ’ ಮಾತ್ರವಲ್ಲ, ಬೇರೆ ಪತ್ರಿಕೆಗಳಲ್ಲೂ ಈ ವರದಿ ಪ್ರಕಟವಾಗಿದೆ. ಆದರೆ, ‘ಆಂದೋಲನ’ ದಿನಪತ್ರಿಕೆಯನ್ನು ಮಾತ್ರ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಗುರಿ ಮಾಡಿದ್ದಾರೆ. ಇದು ಸಂಸದರಿಗೆ ಶೋಭೆ ತರುವುದಿಲ್ಲ.”

‘ಆಂದೋಲನ’ ದಿನಪತ್ರಿಕೆ ನೀಡಿರುವ ಪ್ರತಿಕ್ರಿಯೆ

ಪ್ರತಾಪ್ ಸಿಂಹ ಹೇಳಿದ್ದೇನು?

“ನಾನು ನಿಮಗೆ ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ಮೊದಲು ಪೊಲೀಸ್ ಇಲಾಖೆಯವರನ್ನು ಕೇಳಿ, ಎಸ್ಪಿ ಅವರು ಮಾತನಾಡಿಯೇ ಇಲ್ಲ. ‘ಆಂದೋಲನ’ದಲ್ಲಿ ಬಂದಿರುವ ಸತ್ಯಕ್ಕೆ ದೂರವಾದ ಸುದ್ದಿಯನ್ನು ನೋಡಿ ಮಾತನಾಡಬೇಡಿ. ‘ಆಂದೋಲನ’ ಪತ್ರಿಕೆಯವರು ಆಗಾಗ ಪೊಲೀಸರನ್ನು ಕೋಟ್ ಮಾಡಿಕೊಂಡು ಈ ರೀತಿ ಸುಳ್ಳು ಸುದ್ದಿ ಬರೆಯುವುದನ್ನು ನಿಲ್ಲಿಸಬೇಕು. ನಾನು ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ನಾನು ಬೆಳಿಗ್ಗೆ ಎಸ್ಪಿ ಬಳಿ ಯಾಕೆ ಈ ರೀತಿ ಸ್ಟೇಟ್‌ಮೆಂಟ್ ಕೊಟ್ಟಿದ್ದೀರಿ ಎಂದು ಮಾತಾಡ್ಡೆ. ನಾನು ಸ್ಟೇಟ್‌ಮೆಂಟ್ ಕೊಟ್ಟಿಲ್ಲ. ಹಿಂದೇನೂ ‘ಆಂದೋಲನ’ದಲ್ಲಿ ಒಂದು ವರದಿ ಇದೇ ರೀತಿ ಆಗಿದೆ ಎಂದು ತಿಳಿಸಿದ್ದಾರೆ. ಸೋ ಐ ಪರ್ಟಿಕ್ಯುಲರ್ಲಿ ನೇಮಿಂಗ್ ದಿ ನ್ಯೂಸ್ ಪೇಪರ್, ಅಂಡ್ ಐ ಡೋಂಟ್ ಕೇರ್” ಎಂದು ಸಂಸದ ಪ್ರತಾಪ ಸಿಂಹ ಪತ್ರಿಕೆಯನ್ನು ಟೀಕಿಸಿದ್ದರು.

ಶುಕ್ರವಾರ ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ

ದಿವಂಗತ ರಾಜಶೇಖರ ಕೋಟಿಯವರು ಸ್ಥಾಪಿಸಿದ ಆಂದೋಲನ ದಿನಪತ್ರಿಕೆಗೆ ಐವತ್ತು ವರ್ಷಗಳ ಇತಿಹಾಸವಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಪ್ರಸರಣವನ್ನು ಹೊಂದಿರುವ ‘ಆಂದೋಲನ’, ದಲಿತ, ಆದಿವಾಸಿ, ರೈತ, ಕೂಲಿಕಾರ್ಮಿಕ ಮತ್ತು ಭಾಷಾ ಚಳವಳಿಗಳಿಗೆ ಬೆನ್ನೆಲುಬಾಗಿ ನಿಂತ ಇತಿಹಾಸವನ್ನು ಹೊಂದಿದೆ. ಪ್ರಗತಿಪರ ವಿಚಾರಧಾರೆ ಹಾಗೂ ಸೌಹಾರ್ದ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಂದೋಲನ ಮಹತ್ತರವಾದ ಕೆಲಸಗಳನ್ನು ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...