Homeಮುಖಪುಟಪ್ರತಾಪ್ ಸಿಂಹರವರೆ ಸುಳ್ಳು ಹೇಳುವುದನ್ನು ನಿಲ್ಲಿಸಿ: ದಶಪಥ ರಸ್ತೆ ಕಿತ್ತುಹೋದ ಬಗ್ಗೆ ಕಾಂಗ್ರೆಸ್, ಪ್ರಜ್ಞಾವಂತರ ಕಿಡಿ

ಪ್ರತಾಪ್ ಸಿಂಹರವರೆ ಸುಳ್ಳು ಹೇಳುವುದನ್ನು ನಿಲ್ಲಿಸಿ: ದಶಪಥ ರಸ್ತೆ ಕಿತ್ತುಹೋದ ಬಗ್ಗೆ ಕಾಂಗ್ರೆಸ್, ಪ್ರಜ್ಞಾವಂತರ ಕಿಡಿ

ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದರು.

- Advertisement -
- Advertisement -

ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ರಸ್ತೆ ಕಿತ್ತು ಬಂದಿರುವುದು ನಿಜವಾಗಿದ್ದರೂ ಸುಳ್ಳು ಹೇಳಿ ಜನರನ್ನು ಮಂಗ ಮಾಡಬೇಡಿ ಎಂಬ ಆಕ್ರೋಶ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆಯ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ.

ಈ ಕುರಿತು ಹಲವು ಮಾಧ್ಯಮಗಳು ಚಿತ್ರ ಸಮೇತ ವರದಿ ಪ್ರಕಟಿಸಿದ್ದವು. ಇದೇ ಜಾಗದಲ್ಲಿ ಹಿಂದೆ ಲಾರಿ ಪಲ್ಟಿಯಾಗಿತ್ತು ಮತ್ತು ಕೆಎಸ್‌ಆರ್‌ಟಿಸಿ ಬಸ್ ಸೇರಿದಂತೆ ಅನೇಕ ಅಪಘಾತಗಳು ಸಂಭವಿಸಿದ್ದವು ಎಂದು ವರದಿಯಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರವರ ರಸ್ತೆಯು ಹಿಂದೆ ಹೀಗಿತ್ತು ಎಂದು ಚಿತ್ರವೊಂದನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಮೂಲಕ ರಸ್ತೆ ಕಿತ್ತು ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

ಆದರೆ ಸಂಸದ ಪ್ರತಾಪ್ ಸಿಂಹರವರು ಬೇರೆ ಫೋಟೊ ತೋರಿಸಿ, ರಸ್ತೆ ಸರಿಯಾಗಿತ್ತು ಎಂದು ಸುಳ್ಳು ಹೇಳುತ್ತಿದ್ದಾರೆ. ಅವರು ಹಂಚಿಕೊಂಡಿರುವ ಫೋಟೊದಲ್ಲಿನ ರಸ್ತೆ ಬದಿಯ ಡಿವೈಡರ್‌ಗೆ ಹಳದಿ – ಕಪ್ಪು ಬಣ್ಣ ಬಳಿಯಲಾಗಿದೆ. ಆದರೆ ಸದ್ಯ ಕಿತ್ತು ಹೋಗಿರುವ ರಸ್ತೆ ಬದಿಯ ಡಿವೈಡರ್‌ಗೆ ಬಿಳಿ ಮತ್ತು ಕಪ್ಪು ಬಣ್ಣ ಬಳಿಯಲಾಗಿದೆ. ಅಂದರೆ ಸಂಸದರು ತಮ್ಮ ಹುಳುಕು ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಸೇರಿ ಹಲವು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಎಷ್ಟು ಸುಲಭವಾಗಿ ಸಂಸದರು ಸುಳ್ಳು ಹೇಳ್ತಿದ್ದಾರೆ.
ಮೊದಲ ಫೋಟೋದಲ್ಲಿ ರಸ್ತೆಯ ಬದಿಯಲ್ಲಿ ಹಳದಿ, ಕಪ್ಪು ಬಣ್ಣವೇ ಇಲ್ಲ.
ಎರಡನೆಯ ಫೋಟೋದಲ್ಲಿ ಹಳದಿ, ಕಪ್ಪು ಬಣ್ಣ ಇದೆ.
ಎಷ್ಟು ಚನ್ನಾಗಿ ಒಂದಕ್ಕೊಂದು ಸಂಬಂಧವೇ ಇಲ್ಲದ ಬೇರೆ ಬೇರೆ ಫೋಟೋಗಳನ್ನ ತೋರಿಸಿ ಜನರನ್ನ ಮಂಗ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಶರತ್ ಚಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಸಹ ಕಿಡಿಕಾರಿದೆ. “ಮಾನ್ಯ ಸಂಸದರೇ, ಯಾರ ಕಿವ ಮೇಲೆ ಹೂವ ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ
◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ?
◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ?
◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ಒಟ್ಟಿನಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಬಿಜೆಪಿ ಸರ್ಕಾರ ಮತ್ತು ಸಂಸದ ಪ್ರತಾಪ್ ಸಿಂಹರವರು ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಪ್ರತಾಪ್ ಸಿಂಹರವರಂತೂ ವಾರಕ್ಕೊಮ್ಮೆಯಾದರೂ ಫೇಸ್‌ಬುಕ್ ಲೈವ್ ಬಂದು ಕಾಮಗಾರಿ ಕುರಿತು ಮಾತನಾಡುತ್ತಿದ್ದರು. ಆದರೆ ಕಳಪೆ ಮತ್ತು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ, ಕಮಿಷನ್ ಹೊಡೆಯಲಾಗಿದೆ, ಅಧಿಕ ಟೋಲ್ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಈಗಾಗಲೇ 80ಕ್ಕೆ ಹೆಚ್ಚು ಅಪಘಾತಗಳು ಸಂಭವಿಸಿದ್ದು ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಕ್ರೆಡಿಟ್ ಸಹ ಬಿಜೆಪಿಯವರಿಗೆ ಸಲ್ಲಬೇಕೆಲ್ಲವೆ ಎಂಬ ಆಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...