Homeಮುಖಪುಟವಂದೆ ಮಾತರಂ ಹೇಳದವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿದೆಯೇ? - ಪ್ರತಾಪ ಚಂದ್ರ ಸಾರಂಗಿ ಪ್ರಶ್ನೆ

ವಂದೆ ಮಾತರಂ ಹೇಳದವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿದೆಯೇ? – ಪ್ರತಾಪ ಚಂದ್ರ ಸಾರಂಗಿ ಪ್ರಶ್ನೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕೇಂದ್ರ ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆ ಸಚಿವರಾದ ಒಡಿಸ್ಸಾದ ಪ್ರತಾಪ ಚಂದ್ರ ಸಾರಂಗಿಯವರು ತಮ್ಮ ಮೊದಲ ಸಂಸತ್ ಭಾಷಣದಲ್ಲಿ ವಂದೆ ಮಾತರಂ ಹೇಳದವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿದೆಯೇ? ಸಂಸತ್ ದಾಳಿಯ ಆಪಾದಿತ ಅಫ್ಜಲ್ ಗುರು ಹೊಗಳುವವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿದೆಯೇ ಎಂದು ಪ್ರಶ್ನಿಸಿದ್ದಾರೆ.

ತುಕ್ಡೆ ತುಕ್ಡೆ ಗ್ಯಾಂಗ್ ಅನ್ನು ಎಂದಿಗೂ ಭಾರತ ಸ್ವೀಕರಿಸುವುದಿಲ್ಲ ಎಂದ ಅವರು ದೇಶವು ಪ್ರಧಾನಿಯೊಂದಿಗಿದೆ ಎಂಬುದನ್ನು ಪುನರುಚ್ಚರಿಸಿದ್ದಾರೆ. ಅವರ ಈ ಭಾಷಣವನ್ನು ಮೇಜು ಕುಟ್ಟಿ ಸ್ವಾಗತಿಸಿರುವ ಬಿಜೆಪಿ ಸಂಸದರು ಅವರ ಪ್ರಶ್ನೆಗಳಿಗೆ ಇಲ್ಲ, ಸಾಧ್ಯವೇ ಇಲ್ಲ ಎಂದು ಕೂಗುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ ತೋರಿಸದ ಮಾಧ್ಯಮಗಳು

ಕಳೆದ ವಾರ ಸಂಸತ್ ನಲ್ಲಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ವಂದೆ ಮಾತರಂ ಕುರಿತು ಸಮಾಜವಾದ ಪಕ್ಷದ ಸಂಸದರಾದ ಶಫಿಕೂರ್ ರಹಮಾನ್ ಬಾರ್ಕ್ ರವರು ಇದು ಇಸ್ಲಾಂಗೆ ವಿರುದ್ಧವಾಗಿದೆ ಎಂದು ಹೇಳಿದ್ದು ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿಯೇ ಸಾರಂಗಿಯವರು ಮಾತನಾಡಿದ್ದಾರೆ.

ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ಅನ್ನು ತೀವ್ರವಾಗಿ ಟೀಕಿಸಿದ ಅವರು ಬಿಜೆಪಿ ಎಲ್ಲಾ ವರ್ಗದ ಜನರ ವಿಶ್ವಾಸವನ್ನು ಗೆದ್ದಿದೆ ಮತ್ತು ಅವರ ಪಾಲ್ಗೊಳ್ಳುವಿಕೆಯೊಂದಿಗೆ ಸರ್ಕಾರವನ್ನು ನಡೆಸಲಾಗುತ್ತಿದೆ ಬಿಜೆಪಿಯನ್ನು ಹೊಗಳಿದ್ದಾರೆ.

ಪ್ರಖರ ಹಿಂದೂತ್ವವಾದಿ ನಿಲುವಿಗೆ ಹೆಸರಾದ ಇವರ ಮೇಲೆ ಹಲವು ಆರೋಪಗಳು ಇವೆ. 2002ರ ಮಾರ್ಚ್ ನಲ್ಲಿ ಒರಿಸ್ಸಾದ ವಿಧಾನಸಭೆಯ ಮೇಲೆ ಭಜರಂಗದಳದ ಸುಮಾರು 500 ಶಸ್ತ್ರದಾರಿ ಸದಸ್ಯರು ದಾಳಿ ನಡೆಸಿದಾಗ ಅದರ ರಾಜ್ಯ ಅಧ್ಯಕ್ಷರಾಗಿದ್ದು ಇದೇ ಸಾರಂಗಿ. 1999ರ ಫೆಬ್ರವರಿಯಲ್ಲಿ ಕ್ರೈಸ್ತ ಧರ್ಮದ ಪ್ರಚಾರಕ ಗ್ರಹಾಂ ಸ್ಟೈನ್ ಅವರ ಪುಟ್ಟ ಮಕ್ಕಳು ಮತ್ತು ಒಬ್ಬ ಕ್ರೈಸ್ತ ಪಾದ್ರಿಯನ್ನು ವಾಹನಕ್ಕೆ ದೂಡಿ ಬೆಂಕಿ ಹಚ್ಚಿ ಸುಟ್ಟುಹಾಕಿದ ದಾರಾಸಿಂಗನ ಗುರು ಈ ಸಾರಂಗಿ ಎಂದು ಹೇಳಲಾಗಿದೆ.

ಸಾರಂಗಿಯವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಚುನಾವಣಾ ಅಫಿಡವಿಟ್ ನಲ್ಲಿ ತನ್ನ ಮೇಲೆ 10 ಕ್ರಿಮಿನಲ್ ಪ್ರಕರಣಗಳಿವೆ ಎಂದು ಹೇಳಿಕೊಂಡಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...