Homeಕರ್ನಾಟಕಪ್ರತಾಪ್ ಗೌಡ ಪಾಟೀಲರ ಬೇನಾಮಿ ಆಸ್ತಿ ತನಿಖೆಗೆ ಡಿಎಸ್ಎಸ್ ಆಗ್ರಹ : ಸರಣಿ ಪ್ರತಿಭಟನೆಗೆ ನಿರ್ಧಾರ

ಪ್ರತಾಪ್ ಗೌಡ ಪಾಟೀಲರ ಬೇನಾಮಿ ಆಸ್ತಿ ತನಿಖೆಗೆ ಡಿಎಸ್ಎಸ್ ಆಗ್ರಹ : ಸರಣಿ ಪ್ರತಿಭಟನೆಗೆ ನಿರ್ಧಾರ

ಪ್ರತಾಪ್ ಗೌಡ ಬೇನಾಮಿ ಆಸ್ತಿಯನ್ನು ರಕ್ಷಿಸಿಕೊಳ್ಳಲು, ಸಿಕ್ಕಿಬೀಳದಂತೆ ತಡೆಯಲು ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಡಿಎಸ್ಎಸ್ ಆರೋಪಿಸಿದೆ

- Advertisement -
- Advertisement -

11 ವರ್ಷ ಶಾಸಕರಾಗಿದ್ದು ಕ್ಷೇತ್ರದ ಅಭಿವೃದ್ಧಿ ಮಾಡದೇ ಹಣ ನುಂಗಿ ಸಿಂಧನೂರು ತಾಲ್ಲೂಕಿನ ಗೋನವಾಳ, ಬೆಂಗಳೂರಿನ ದೇವನಹಳ್ಳಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ. ಆ ಆಸ್ತಿಯನ್ನು ಭದ್ರಪಡಿಸಿಕೊಳ್ಳಲು ಮತ್ತು ಸಿಕ್ಕಿಬೀಳದಂತೆ ತಡೆಯಲು ಅವರು ಪಕ್ಷಾಂತರ ಮಾಡುತ್ತಿದ್ದಾರೆ ಇದರ ಕುರಿತು ತನಿಖೆಯಾಗಬೇಕೆಂದು ಡಿಎಸ್ಎಸ್ ಒತ್ತಾಯಿಸಿದೆ.

 

ಅತೃಪ್ತರ ಬಣದಲ್ಲಿ ಗುರುತಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಮುಂಬೈ ರೆಸಾರ್ಟ್ ಸೇರಿಕೊಂಡಿರುವ ಪ್ರತಾಪ್ ಗೌಡ ಪಾಟೀಲರಿಗೆ ಒಂದರ ನಂತರ ಮತ್ತೊಂದು ಅಡಚಣೆಗಳು ಎದುರಾಗುತ್ತಿವೆ. 213 ಮತಗಳಿಂದ ಕೂದಲೆಳೆ ಅಂತರದಲ್ಲಿ ಗೆದ್ದು ಮೂರನೇಯ ಬಾರಿಗೆ ಶಾಸಕನಾಗಿದ್ದ ಅವರಿಗೆ ಈಗ ಕ್ಷೇತ್ರದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮೊನ್ನೊ ತಾನೇ ಆರ್.ವೈ.ಎಫ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ಡಿಎಸ್ಎಸ್ ಪ್ರತಿಭಟನೆಗೆ ಮುಂದಾಗಿದ್ದ ಶಾಸಕರ ಅಕ್ರಮ ಆಸ್ತಿ ತನಿಖೆಯಾಗಬೇಕೆಂದು ಆಗ್ರಹಿಸಿದೆ.

ಮಸ್ಕಿ ಕ್ಷೇತ್ರ ರಾಜ್ಯದಲ್ಲಿಯೇ ಹಿಂದುಳಿದ ಪ್ರದೇಶಗಳ ವ್ಯಾಪ್ತಿಗೆ ಬರುತ್ತಿದೆ. ಈ ವರ್ಷ ಬರ ಆವರಿಸಿದೆ. ಕುಡಿಯಲು ನೀರಿಲ್ಲ.  ಜನ ದಿನನಿತ್ಯ ಗುಳೆ ಹೊರಟಿದ್ದಾರೆ. ದಿನಕ್ಕೆ 50 ಟೆಂಪೋಗಳಲ್ಲಿ ಜನ ಉದ್ಯೋಗ ಹುಡುಕಿ ಊರು ಬಿಟ್ಟರೆ ಅದಕ್ಕಾಗಿಯೇ ಬೆಂಗಳೂರಿನ ಬಸ್ ಗಳೆಲ್ಲಾ ತುಂಬಿಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಕ್ಷೇತ್ರದಲ್ಲಿ ತಲೆ ಹಾಕದೇ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡಿ ಹೋಗಿರುವುದು ಖಂಡನೀಯ ಎಂದು ಡಿಎಸ್ಎಸ್ ನ ರಾಜು ಬೊಮ್ಮನಾಳ, ಅನಿಲ್ ಮುದಬಾಳ ಆರೋಪಿಸಿದ್ದಾರೆ.

ಕ್ಷೇತ್ರದಲ್ಲಿ ಶಾಸಕರ ಅಕ್ರಮ ಮದ್ಯದಂಗಡಿಗಳು ತಲೆ ಎತ್ತಿವೆ. ಮಕ್ಕಳಿಗೆ ಮೊಟ್ಟೆ ಸಮವಸ್ತ್ರದಿಂದ ಹಿಡಿದು ರಸ್ತೆ ಕಾಮಗಾರಿಯವರೆಗೂ ಎಲ್ಲವು ಪ್ರತಾಪ್ ಗೌಡ ಪಾಟೀಲರ ಮಕ್ಕಳಿಗೆ ಸಿಗುತ್ತಿವೆ. ಬೋಗಸ್ ಬಿಲ್ ಮಾಡಿ ಕೋಟ್ಯಾಂತರ ಹಣ ವಂಚಿಸಿದ್ದಾರೆ. ಕುಡಿಯುವ ನೀರಿಗಾಗಿ ಬಂದ 50 ಕೋಟಿ ಅನುದಾನವನ್ನೂ ನುಂಗಿ ನೀರು ಕುಡಿದಿದ್ದಾರೆ. ಅದೂ ಸಾಲದೆಂಬಂತೆ ಈಗ ಪಕ್ಷಾಂತರ ಮಾಡಲು ಹವಣಿಸುತ್ತಿರುವುದುನ್ನು ಎಲ್ಲರೂ ಖಂಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರತಾಪ್ ಗೌಡರ ಶಾಸಕ ಸ್ಥಾನ ಅನರ್ಹಗೊಳಿಸಬೇಕು. ಇಂತವರಿಂದ ಏನು ಪ್ರಯೋಜನವಿಲ್ಲ ಎಂದು ಆಗ್ರಹಿಸಿರುವ ಸ್ಥಳೀಯರು ಆತ ಮಸ್ಕಿಗೆ ಬಂದು ಸಾರ್ವಜನಿಕರ ಕ್ಷಮೆ ಕೇಳುವವರೆಗೂ ದಿನನಿತ್ಯ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...