Homeಕರ್ನಾಟಕಪ್ರತಾಪ್ ಗೌಡ ಪಾಟೀಲರ ಬೇನಾಮಿ ಆಸ್ತಿ ತನಿಖೆಗೆ ಡಿಎಸ್ಎಸ್ ಆಗ್ರಹ : ಸರಣಿ ಪ್ರತಿಭಟನೆಗೆ ನಿರ್ಧಾರ

ಪ್ರತಾಪ್ ಗೌಡ ಪಾಟೀಲರ ಬೇನಾಮಿ ಆಸ್ತಿ ತನಿಖೆಗೆ ಡಿಎಸ್ಎಸ್ ಆಗ್ರಹ : ಸರಣಿ ಪ್ರತಿಭಟನೆಗೆ ನಿರ್ಧಾರ

ಪ್ರತಾಪ್ ಗೌಡ ಬೇನಾಮಿ ಆಸ್ತಿಯನ್ನು ರಕ್ಷಿಸಿಕೊಳ್ಳಲು, ಸಿಕ್ಕಿಬೀಳದಂತೆ ತಡೆಯಲು ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಡಿಎಸ್ಎಸ್ ಆರೋಪಿಸಿದೆ

- Advertisement -
- Advertisement -

11 ವರ್ಷ ಶಾಸಕರಾಗಿದ್ದು ಕ್ಷೇತ್ರದ ಅಭಿವೃದ್ಧಿ ಮಾಡದೇ ಹಣ ನುಂಗಿ ಸಿಂಧನೂರು ತಾಲ್ಲೂಕಿನ ಗೋನವಾಳ, ಬೆಂಗಳೂರಿನ ದೇವನಹಳ್ಳಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ. ಆ ಆಸ್ತಿಯನ್ನು ಭದ್ರಪಡಿಸಿಕೊಳ್ಳಲು ಮತ್ತು ಸಿಕ್ಕಿಬೀಳದಂತೆ ತಡೆಯಲು ಅವರು ಪಕ್ಷಾಂತರ ಮಾಡುತ್ತಿದ್ದಾರೆ ಇದರ ಕುರಿತು ತನಿಖೆಯಾಗಬೇಕೆಂದು ಡಿಎಸ್ಎಸ್ ಒತ್ತಾಯಿಸಿದೆ.

 

ಅತೃಪ್ತರ ಬಣದಲ್ಲಿ ಗುರುತಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಮುಂಬೈ ರೆಸಾರ್ಟ್ ಸೇರಿಕೊಂಡಿರುವ ಪ್ರತಾಪ್ ಗೌಡ ಪಾಟೀಲರಿಗೆ ಒಂದರ ನಂತರ ಮತ್ತೊಂದು ಅಡಚಣೆಗಳು ಎದುರಾಗುತ್ತಿವೆ. 213 ಮತಗಳಿಂದ ಕೂದಲೆಳೆ ಅಂತರದಲ್ಲಿ ಗೆದ್ದು ಮೂರನೇಯ ಬಾರಿಗೆ ಶಾಸಕನಾಗಿದ್ದ ಅವರಿಗೆ ಈಗ ಕ್ಷೇತ್ರದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮೊನ್ನೊ ತಾನೇ ಆರ್.ವೈ.ಎಫ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ಡಿಎಸ್ಎಸ್ ಪ್ರತಿಭಟನೆಗೆ ಮುಂದಾಗಿದ್ದ ಶಾಸಕರ ಅಕ್ರಮ ಆಸ್ತಿ ತನಿಖೆಯಾಗಬೇಕೆಂದು ಆಗ್ರಹಿಸಿದೆ.

ಮಸ್ಕಿ ಕ್ಷೇತ್ರ ರಾಜ್ಯದಲ್ಲಿಯೇ ಹಿಂದುಳಿದ ಪ್ರದೇಶಗಳ ವ್ಯಾಪ್ತಿಗೆ ಬರುತ್ತಿದೆ. ಈ ವರ್ಷ ಬರ ಆವರಿಸಿದೆ. ಕುಡಿಯಲು ನೀರಿಲ್ಲ.  ಜನ ದಿನನಿತ್ಯ ಗುಳೆ ಹೊರಟಿದ್ದಾರೆ. ದಿನಕ್ಕೆ 50 ಟೆಂಪೋಗಳಲ್ಲಿ ಜನ ಉದ್ಯೋಗ ಹುಡುಕಿ ಊರು ಬಿಟ್ಟರೆ ಅದಕ್ಕಾಗಿಯೇ ಬೆಂಗಳೂರಿನ ಬಸ್ ಗಳೆಲ್ಲಾ ತುಂಬಿಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಕ್ಷೇತ್ರದಲ್ಲಿ ತಲೆ ಹಾಕದೇ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡಿ ಹೋಗಿರುವುದು ಖಂಡನೀಯ ಎಂದು ಡಿಎಸ್ಎಸ್ ನ ರಾಜು ಬೊಮ್ಮನಾಳ, ಅನಿಲ್ ಮುದಬಾಳ ಆರೋಪಿಸಿದ್ದಾರೆ.

ಕ್ಷೇತ್ರದಲ್ಲಿ ಶಾಸಕರ ಅಕ್ರಮ ಮದ್ಯದಂಗಡಿಗಳು ತಲೆ ಎತ್ತಿವೆ. ಮಕ್ಕಳಿಗೆ ಮೊಟ್ಟೆ ಸಮವಸ್ತ್ರದಿಂದ ಹಿಡಿದು ರಸ್ತೆ ಕಾಮಗಾರಿಯವರೆಗೂ ಎಲ್ಲವು ಪ್ರತಾಪ್ ಗೌಡ ಪಾಟೀಲರ ಮಕ್ಕಳಿಗೆ ಸಿಗುತ್ತಿವೆ. ಬೋಗಸ್ ಬಿಲ್ ಮಾಡಿ ಕೋಟ್ಯಾಂತರ ಹಣ ವಂಚಿಸಿದ್ದಾರೆ. ಕುಡಿಯುವ ನೀರಿಗಾಗಿ ಬಂದ 50 ಕೋಟಿ ಅನುದಾನವನ್ನೂ ನುಂಗಿ ನೀರು ಕುಡಿದಿದ್ದಾರೆ. ಅದೂ ಸಾಲದೆಂಬಂತೆ ಈಗ ಪಕ್ಷಾಂತರ ಮಾಡಲು ಹವಣಿಸುತ್ತಿರುವುದುನ್ನು ಎಲ್ಲರೂ ಖಂಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರತಾಪ್ ಗೌಡರ ಶಾಸಕ ಸ್ಥಾನ ಅನರ್ಹಗೊಳಿಸಬೇಕು. ಇಂತವರಿಂದ ಏನು ಪ್ರಯೋಜನವಿಲ್ಲ ಎಂದು ಆಗ್ರಹಿಸಿರುವ ಸ್ಥಳೀಯರು ಆತ ಮಸ್ಕಿಗೆ ಬಂದು ಸಾರ್ವಜನಿಕರ ಕ್ಷಮೆ ಕೇಳುವವರೆಗೂ ದಿನನಿತ್ಯ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...