Homeಕರ್ನಾಟಕಪ್ರತಾಪ್ ಗೌಡ ಪಾಟೀಲರ ಬೇನಾಮಿ ಆಸ್ತಿ ತನಿಖೆಗೆ ಡಿಎಸ್ಎಸ್ ಆಗ್ರಹ : ಸರಣಿ ಪ್ರತಿಭಟನೆಗೆ ನಿರ್ಧಾರ

ಪ್ರತಾಪ್ ಗೌಡ ಪಾಟೀಲರ ಬೇನಾಮಿ ಆಸ್ತಿ ತನಿಖೆಗೆ ಡಿಎಸ್ಎಸ್ ಆಗ್ರಹ : ಸರಣಿ ಪ್ರತಿಭಟನೆಗೆ ನಿರ್ಧಾರ

ಪ್ರತಾಪ್ ಗೌಡ ಬೇನಾಮಿ ಆಸ್ತಿಯನ್ನು ರಕ್ಷಿಸಿಕೊಳ್ಳಲು, ಸಿಕ್ಕಿಬೀಳದಂತೆ ತಡೆಯಲು ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಡಿಎಸ್ಎಸ್ ಆರೋಪಿಸಿದೆ

- Advertisement -
- Advertisement -

11 ವರ್ಷ ಶಾಸಕರಾಗಿದ್ದು ಕ್ಷೇತ್ರದ ಅಭಿವೃದ್ಧಿ ಮಾಡದೇ ಹಣ ನುಂಗಿ ಸಿಂಧನೂರು ತಾಲ್ಲೂಕಿನ ಗೋನವಾಳ, ಬೆಂಗಳೂರಿನ ದೇವನಹಳ್ಳಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ. ಆ ಆಸ್ತಿಯನ್ನು ಭದ್ರಪಡಿಸಿಕೊಳ್ಳಲು ಮತ್ತು ಸಿಕ್ಕಿಬೀಳದಂತೆ ತಡೆಯಲು ಅವರು ಪಕ್ಷಾಂತರ ಮಾಡುತ್ತಿದ್ದಾರೆ ಇದರ ಕುರಿತು ತನಿಖೆಯಾಗಬೇಕೆಂದು ಡಿಎಸ್ಎಸ್ ಒತ್ತಾಯಿಸಿದೆ.

 

ಅತೃಪ್ತರ ಬಣದಲ್ಲಿ ಗುರುತಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಮುಂಬೈ ರೆಸಾರ್ಟ್ ಸೇರಿಕೊಂಡಿರುವ ಪ್ರತಾಪ್ ಗೌಡ ಪಾಟೀಲರಿಗೆ ಒಂದರ ನಂತರ ಮತ್ತೊಂದು ಅಡಚಣೆಗಳು ಎದುರಾಗುತ್ತಿವೆ. 213 ಮತಗಳಿಂದ ಕೂದಲೆಳೆ ಅಂತರದಲ್ಲಿ ಗೆದ್ದು ಮೂರನೇಯ ಬಾರಿಗೆ ಶಾಸಕನಾಗಿದ್ದ ಅವರಿಗೆ ಈಗ ಕ್ಷೇತ್ರದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮೊನ್ನೊ ತಾನೇ ಆರ್.ವೈ.ಎಫ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ಡಿಎಸ್ಎಸ್ ಪ್ರತಿಭಟನೆಗೆ ಮುಂದಾಗಿದ್ದ ಶಾಸಕರ ಅಕ್ರಮ ಆಸ್ತಿ ತನಿಖೆಯಾಗಬೇಕೆಂದು ಆಗ್ರಹಿಸಿದೆ.

ಮಸ್ಕಿ ಕ್ಷೇತ್ರ ರಾಜ್ಯದಲ್ಲಿಯೇ ಹಿಂದುಳಿದ ಪ್ರದೇಶಗಳ ವ್ಯಾಪ್ತಿಗೆ ಬರುತ್ತಿದೆ. ಈ ವರ್ಷ ಬರ ಆವರಿಸಿದೆ. ಕುಡಿಯಲು ನೀರಿಲ್ಲ.  ಜನ ದಿನನಿತ್ಯ ಗುಳೆ ಹೊರಟಿದ್ದಾರೆ. ದಿನಕ್ಕೆ 50 ಟೆಂಪೋಗಳಲ್ಲಿ ಜನ ಉದ್ಯೋಗ ಹುಡುಕಿ ಊರು ಬಿಟ್ಟರೆ ಅದಕ್ಕಾಗಿಯೇ ಬೆಂಗಳೂರಿನ ಬಸ್ ಗಳೆಲ್ಲಾ ತುಂಬಿಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಕ್ಷೇತ್ರದಲ್ಲಿ ತಲೆ ಹಾಕದೇ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡಿ ಹೋಗಿರುವುದು ಖಂಡನೀಯ ಎಂದು ಡಿಎಸ್ಎಸ್ ನ ರಾಜು ಬೊಮ್ಮನಾಳ, ಅನಿಲ್ ಮುದಬಾಳ ಆರೋಪಿಸಿದ್ದಾರೆ.

ಕ್ಷೇತ್ರದಲ್ಲಿ ಶಾಸಕರ ಅಕ್ರಮ ಮದ್ಯದಂಗಡಿಗಳು ತಲೆ ಎತ್ತಿವೆ. ಮಕ್ಕಳಿಗೆ ಮೊಟ್ಟೆ ಸಮವಸ್ತ್ರದಿಂದ ಹಿಡಿದು ರಸ್ತೆ ಕಾಮಗಾರಿಯವರೆಗೂ ಎಲ್ಲವು ಪ್ರತಾಪ್ ಗೌಡ ಪಾಟೀಲರ ಮಕ್ಕಳಿಗೆ ಸಿಗುತ್ತಿವೆ. ಬೋಗಸ್ ಬಿಲ್ ಮಾಡಿ ಕೋಟ್ಯಾಂತರ ಹಣ ವಂಚಿಸಿದ್ದಾರೆ. ಕುಡಿಯುವ ನೀರಿಗಾಗಿ ಬಂದ 50 ಕೋಟಿ ಅನುದಾನವನ್ನೂ ನುಂಗಿ ನೀರು ಕುಡಿದಿದ್ದಾರೆ. ಅದೂ ಸಾಲದೆಂಬಂತೆ ಈಗ ಪಕ್ಷಾಂತರ ಮಾಡಲು ಹವಣಿಸುತ್ತಿರುವುದುನ್ನು ಎಲ್ಲರೂ ಖಂಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರತಾಪ್ ಗೌಡರ ಶಾಸಕ ಸ್ಥಾನ ಅನರ್ಹಗೊಳಿಸಬೇಕು. ಇಂತವರಿಂದ ಏನು ಪ್ರಯೋಜನವಿಲ್ಲ ಎಂದು ಆಗ್ರಹಿಸಿರುವ ಸ್ಥಳೀಯರು ಆತ ಮಸ್ಕಿಗೆ ಬಂದು ಸಾರ್ವಜನಿಕರ ಕ್ಷಮೆ ಕೇಳುವವರೆಗೂ ದಿನನಿತ್ಯ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...