Homeಕರ್ನಾಟಕಮೋದಿ ಹೆಸರೇಳದಿದ್ದರೆ ಸೂಲಿಬೆಲೆ ಭಾಷಣ ಕೇಳಲು ಯಾರು ಬರುತ್ತಾರೆ? ಪ್ರತಾಪ್ ಸಿಂಹ ತಿರುಗೇಟು..

ಮೋದಿ ಹೆಸರೇಳದಿದ್ದರೆ ಸೂಲಿಬೆಲೆ ಭಾಷಣ ಕೇಳಲು ಯಾರು ಬರುತ್ತಾರೆ? ಪ್ರತಾಪ್ ಸಿಂಹ ತಿರುಗೇಟು..

- Advertisement -
- Advertisement -

ಇಂದು ಪ್ರವಾಹ ಪರಿಹಾರದ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾತನಾಡುವವರಿಗೆ ಮೋದಿಯೇ ಬಂಡವಾಳವಾಗಿದ್ದಾರೆ. ಮೋದಿ ಹೆಸರೇಳದಿದ್ದರೆ ಅವರ ಭಾಷಣ ಕೇಳಲು ಯಾರು ಬರುತ್ತಾರೆ? ಎಂದು ಪರೋಕ್ಷವಾಗಿ ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮೋದಿ ಹೆಸರನ್ನು ಹೇಳಿಕೊಂಡು ಕೆಲ ಸಂಸದರು ಗೆದ್ದಿದ್ದಾರೆ ಎಂಬ ಟೀಕೆ ಬರುತ್ತಿದೆ ಎಂಬ ಪ್ರಶ್ನೆಗೆ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪ್ರತಾಪ್ ಸಿಂಹ, ಇವರು ಭಾಷಣ ಶುರುಮಾಡುವುದಕ್ಕಿಂತ ಮುಂಚೆಯೇ ನಾನು ಮೋದಿಯವರ ಆತ್ಮಕಥೆ ಬರೆದಿದ್ದೆ. ೨೦೦೪ರಿಂದಲೇ ನಾನು ಮೋದಿ ಅಭಿಮಾನಿ. ಇವರಿಂದ ನಾನು ಮೋದಿ ಪ್ರೇಮ ಕಲಿಯಬೇಕಾಗಿಲ್ಲ. ಇವರ ಟೀಕೆ ವಿವೇಚನ ರಹಿತವಾಗಿದೆ ಎಂದಿದ್ದಾರೆ.

ನಿನ್ನೆ ಪ್ರತಾಪ್ ಸಿಂಹ ಮೋದಿ ಬಗ್ಗೆ ಟೀಕೆ ಮಾಡುವವರು ಆಕಾಶಕ್ಕೆ ಉಗುಳಿದ ಹಾಗೆ ಅದು ಅವರ ಮೇಲೆಯೇ ಬೀಳುತ್ತದೆ ಎಂದು ಸೂಲಿಬೆಲೆ ವಿರುದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಅಜ್ಞಾನಿ ಎಂದು ಕರೆದಿದ್ದರು. ಜೊತೆಗೆ ಮೋದಿ ಹೆಸರೇಳಿಕೊಂಡು ಸಂಸದರಾದವರು ಎಂದು ಜರಿದಿದ್ದರು.

ಹೌದು ನಾನು ಮತ್ತು ಕೆಲ ಸಂಸದರು ಗೆದ್ದಿದ್ದು ಮೋದಿಯವರ ಹೆಸರಿನಿಂದಲೇ ಒಪ್ಪಿಕೊಳ್ಳುತ್ತೇನೆ. ಆದರೆ ಸದಾನಂದಗೌಡ, ರಮೇಶ್ ಜಿಗಜಣಗಿ, ನಳಿನ್ ಕುಮಾರ್ ಕಟೀಲ್ ಮುಂತಾದ ಸಂಸದರು ಮೋದಿಯವರು ರಾಷ್ಟ್ರ ರಾಜಕಾರಣಕ್ಕೆ ಬರುವ ಮೊದಲೇ ಸಂಸದರಾಗಿದ್ದಾರೆ. ಟೀಕೆ ಮಾಡುವ ವ್ಯಕ್ತಿ ಇದನ್ನು ನೆನಪಿಟ್ಟುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಮೋದಿ ಮಾಡಿದನ್ನು ನಿನ್ನೆ ಸ್ಪಷ್ಟವಾಗಿ ಹೇಳಿದ್ದೇನೆ. ಕರ್ನಾಟಕದ ಎಲ್ಲ ವಿಚಾರವಾಗಿ ಮೋದಿ ನಮ್ಮ ಪರ ಇದ್ದಾರೆ. ರಾಜ್ಯ ಹೇಗೆ ಪರಿಹಾರಕ್ಕೆ ಕಾಯುತ್ತಿದೇಯೋ ಹಾಗೇಯೇ ನಾವು ಸಂಸದರುಗಳು ಕಾಯುತ್ತಿದ್ದೇವೆ. ನಾವಷ್ಟೆ ಅಲ್ಲ ಮಹಾರಾಷ್ಟ್ರ, ಉತ್ತರಪ್ರದೇಶ, ಕೇರಳ, ತಮಿಳುನಾಡು, ಗುಜರಾತ್‌ ರಾಜ್ಯದವರು ಕಾಯ್ತಿದ್ದಾರೆ ಎಂದಿದ್ದಾರೆ.

ನಿನ್ನೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪರಿಹಾರ ಎಂಬುದೊಂದು ಇಲ್ಲವೇ ಇಲ್ಲ. ಎನ್‌.ಆರ್‌.ಡಿ.ಎಫ್ ಮತ್ತು ಸಿ.ಆರ್‌.ಡಿ.ಎಫ್‌ ಮಾತ್ರ ಇರುತ್ತದೆ ಎಂದಿದ್ದ ಪ್ರತಾಪ್ ಸಿಂಹ ಇಂದು ಪರಿಹಾರಕ್ಕಾಗಿ ಕಾಯುತ್ತಿದ್ದೇವೆ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.

ಒಟ್ಟಿನಲ್ಲಿ ಸಂಸತ್ ಚುನಾವಣೆಗೆ ಮುನ್ನ ಅಣ್ಣ ತಮ್ಮಂದಿರಂತೆ ಇದ್ದ ಪ್ರತಾಪ್ ಸಿಂಹ ಮತ್ತು ಸೂಲಿಬೆಲೆ ಇಂದು ದಯಾದಿ ಕಲಹಕ್ಕಿಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...