Homeಕರ್ನಾಟಕಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

ಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

- Advertisement -
- Advertisement -

ತೇಜಸ್ವಿ ಸೂರ್ಯನ ಸೆಕ್ಸ್ ಹಗರಣದ ಬಗ್ಗೆ ಸಂತ್ರಸ್ತರು ದೂರಿದ್ದು ಇದೇ ವ್ಯಕ್ತಿಗೆ! ಆದರೆ ಈ ವ್ಯಕ್ತಿಯ ಕಥೆ ಕೇಳಿದರೆ ಬೆಚ್ಚಿ ಬೀಳುತ್ತೀರಿ?

ಏಪ್ರಿಲ್ 16ರ ಸಂಜೆಯ ಹೊತ್ತಿಗೆ ಮೈಸೂರು ಭಾಗದ ಕೆಲವರ ಮೊಬೈಲ್‍ಗೆ ಎರಡು ಆಡಿಯೋಗಳು, ಹುಡುಗಿಯೊಬ್ಬಳು ಹಸ್ತಾಕ್ಷರದಲ್ಲಿ ಬರೆದ 8 ಪುಟಗಳ ಪತ್ರ ಮತ್ತು ಸ್ಕ್ರೀನ್‍ಷಾಟ್‍ಗಳು ತಲುಪಿದವು. ಅದನ್ನು ಮೇಲ್ನೋಟಕ್ಕೆ ನೋಡಿದವರು ಕೂಡಲೇ ಇನ್ನಷ್ಟು ಜನರಿಗೆ ಫಾರ್ವರ್ಡ್ ಮಾಡಿದರು. ನಂತರ ಸಮಯ ಸಿಕ್ಕಾಗ ಆ ಸ್ಕ್ರೀನ್‍ಷಾಟ್‍ಗಳನ್ನು ಓದಿ, ಆಡಿಯೋ ಕೇಳಿದರು. ತೀರಾ ಅಶ್ಲೀಲವಾಗಿದ್ದ ಕಾರಣಕ್ಕೆ, ಮೊದಲು ಫಾರ್ವರ್ಡ್ ಮಾಡಿದ್ದಕ್ಕೆ ಮುಜುಗರ ಪಟ್ಟುಕೊಂಡು, ಕ್ಷಮೆ ಕೇಳಿ ಮತ್ತೆ ಮೆಸೇಜ್ ಮಾಡಿದರು.

ಆ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿದ್ದದ್ದು ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹರ ಲೈಂಗಿಕ ಪುರಾಣ. ಆಡಿಯೋ ಕೇಳಿದ ಎಲ್ಲರಿಗೂ ಅದು ಪ್ರತಾಪ್ ಸಿಂಹರದ್ದೇ ಎಂಬುದರಲ್ಲಿ ಯಾವ ಸಂದೇಹವೂ ಉಳಿಯುವುದಿಲ್ಲ. ಅದರ ಆಚೆಗೆ ಹಸ್ತಾಕ್ಷರದಲ್ಲಿರುವ ಪತ್ರದಲ್ಲಿ ಮಾಡಿರುವ ಆರೋಪಗಳನ್ನು ನೋಡಿದರೆ, ಅಥವಾ ಆಡಿಯೋ ಕೇಳಿದರೆ ಎರಡು ವಿಚಾರಗಳು ಸ್ಪಷ್ಟವಾಗುತ್ತದೆ. ಒಂದು, ಸಂಬಂಧಿಸಿದ ಹುಡುಗಿಯೂ ಸೋಕಾಲ್ಡ್ ಪ್ರೇಮ ಅಥವಾ ಸಂಬಂಧದಲ್ಲಿ ಒಪ್ಪಿಗೆಯಿಂದಲೇ ಆತನ ಜೊತೆಗೆ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಾರೆ ಮತ್ತು ಪ್ರತಾಪ್ ಸಿಂಹ ಸಾರ್ವಜನಿಕವಾಗಿ ಚಾಲ್ತಿಯಲ್ಲಿರುವ ಮೌಲ್ಯಗಳಿಗನುಸಾರ ಅತ್ಯಂತ ಅನೈತಿಕವಾದ ಮತ್ತು ವಿಕೃತವಾದ ಲೈಂಗಿಕ ಆಸಕ್ತಿಗಳನ್ನು ಇಟ್ಟುಕೊಂಡಿದ್ದಾರೆ. ಏಕಕಾಲದಲ್ಲಿ ಹಲವರ ಜೊತೆಗೆ ಲೈಂಗಿಕ ಸಂಬಂಧಗಳನ್ನು ಇಟ್ಟುಕೊಳ್ಳುವ ಚಾಳಿ ಇರುವ ಒಂದು ವರ್ತುಲವನ್ನೇ ಅವರು ಬಿಲ್ಡ್ ಮಾಡಿಕೊಂಡಿದ್ದಾರೆ.

ಇವೆಲ್ಲವನ್ನೂ ಅವರವರ ವ್ಯಕ್ತಿಗತ ವಿಚಾರ ಎಂದು ತಳ್ಳಿ ಹಾಕಲಾಗದು.
ಕಾರಣವಿಷ್ಟೇ. ಪ್ರತಾಪ್ ಸಂಸತ್ ಸದಸ್ಯನಂತಹ ಸ್ಥಾನದಲ್ಲಿರುವ ವ್ಯಕ್ತಿ. ಈ ಸ್ಥಾನವೇ ಹಲವರನ್ನು ಆಕರ್ಷಿಸುವ, ಆಮಿಷ ಒಡ್ಡುವ, ಬೆದರಿಕೆ ಒಡ್ಡುವ ಸಾಧ್ಯತೆಗಳನ್ನು ಕಲ್ಪಿಸಿಕೊಡುತ್ತದೆ. ಹಾಗಾಗಿ ಅದರ ಎಲ್ಲಾ ಬಗೆಯ ದುರ್ಬಳಕೆ ಮಾಡಿಕೊಂಡು ಅಮಾಯಕರಾದ ಎಷ್ಟೋ ಹುಡುಗಿಯರನ್ನು ಬಲೆಗೆ ಕೆಡವಿಕೊಂಡಿರುವ ಸಾಧ್ಯತೆ ಇದ್ದೇ ಇರುತ್ತದೆ. ಅದನ್ನು ಪ್ರತಾಪ್ ಸಿಂಹ ಮಾಡಿದ್ದಾರೆ ಎಂದು ನಂಬುವಂತಹ ಸಾಕ್ಷ್ಯಾಧಾರಗಳು ಸದರಿ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿವೆ.

ಎರಡನೆಯದಾಗಿ, ಭಾರತೀಯ ಸಂಸ್ಕೃತಿ, ಸಚ್ಚಾರಿತ್ರ್ಯ ಇತ್ಯಾದಿಗಳ ಕುರಿತು ಮಾತನಾಡುವ ಆರೆಸ್ಸೆಸ್ ಜೊತೆಗೆ ಅಭಿಮಾನ ಪೂರ್ವಕ ಹೆಮ್ಮೆಯ ಸಂಬಂಧವನ್ನಿಟ್ಟುಕೊಂಡಿರುವುದಾಗಿ ಘೋಷಿಸುವ ಇಂತಹ ವ್ಯಕ್ತಿಗಳು ಹೀಗೇಕೆ ಎಂಬ ಪ್ರಶ್ನೆ ಏಳುತ್ತದೆ. ಮಾತಿಗೂ, ಕೃತಿಗೂ ಸಂಬಂಧವೇ ಇಲ್ಲ. ಅದರಲ್ಲೂ ಹೆಣ್ಣನ್ನು ಇವರುಗಳು ಭೋಗದ ವಸ್ತುವೆಂದಲ್ಲದೇ ಬೇರ್ಯಾವ ರೀತಿಯಲ್ಲೂ ನೋಡುವಂತೆ ಕಾಣುವುದಿಲ್ಲ.
ಬಹಳಷ್ಟು ಜನರಿಗೆ ಗೊತ್ತಿಲ್ಲದ ಸಂಗತಿಯೇನೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಮಹಿಳೆಯರಿಗೆ ಸದಸ್ಯತ್ವವೇ ಇಲ್ಲ. ರಾಷ್ಟ್ರ ಸೇವಿಕಾ ಸಂಘ ಇದೆಯಲ್ಲಾ ಎಂದು ಯಾರಾದರೂ ಕೇಳಬಹುದು. ಭಜರಂಗದಳ, ವಿಶ್ವ ಹಿಂದೂ ಪರಿಷತ್ ರೀತಿಯಲ್ಲಿ ಅದೂ ಒಂದು ಅಂಗಸಂಸ್ಥೆ ಮಾತ್ರವೇ ಆಗಿದೆ. ಕಾಂಗ್ರೆಸ್ ಅಥವಾ ಸಿಪಿಎಂ ಥರದ ಪಕ್ಷಗಳೂ ಹಾಗೆಯೇ ಅಲ್ಲವೇ ಎಂದು ಕೆಲವರು ಅಮಾಯಕ ಪ್ರಶ್ನೆಯನ್ನು ಹಾಕಬಹುದು. ಇಲ್ಲ, ಕಾಂಗ್ರೆಸ್ ಅಥವಾ ಸಿಪಿಎಂ ಪಕ್ಷಗಳಲ್ಲಿ ಮಹಿಳೆಯರೂ ಸದಸ್ಯರು. ಅದರಲ್ಲಿ ತಾರತಮ್ಯ ಇರುವುದಿಲ್ಲ. ಅದರ ಅಧ್ಯಕ್ಷರೂ ಆಗಬಹುದು. ಅದಲ್ಲದೇ ಮಹಿಳಾ ವಿಭಾಗವೂ ಇರುತ್ತದೆ ಅಷ್ಟೇ.

ಆದರೆ, ಇಲ್ಲಿ ಆರೆಸ್ಸೆಸ್‍ನ ನಾಯಕರಾಗುವುದು ಹೋಗಲಿ, ಸದಸ್ಯೆಯರಾಗೂ ಮಹಿಳೆಯರು ಇರುವಂತಿಲ್ಲ. ಮಹಿಳೆಯರು ಎರಡನೆಯ ದರ್ಜೆಯ ಪ್ರಜೆಗಳು, ಅವರು ಮನೆಗೆಲಸ ಮಾಡುವುದಕ್ಕೆ, ಸೇವೆ ಮಾಡುವುದಕ್ಕೆ, ಪುರುಷರ ಭೋಗಕ್ಕೆ ಬಳಕೆಯಾಗಲು ಅಷ್ಟೇ ಇದ್ದಾರೆ ಎಂಬ ಮನೋಭಾವ ಇದ್ದಾಗ, ಅದರ ಸುತ್ತಲಿನ ಪರಿವಾರ ಹೀಗೇ ಇರಲು ಸಾಧ್ಯ. ಹಾಗಾಗಿಯೇ ಕರ್ನಾಟಕವೊಂದರಲ್ಲೇ ಇಂತಹವರ (ಇದು ಆರೆಸ್ಸೆಸ್‍ನ ಲೈಂಗಿಕ ಹಗರಣಗಳ ಪಟ್ಟಿಯಲ್ಲ, ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗಿರುವ ಬಿಜೆಪಿ ನಾಯಕರ ಲೈಂಗಿಕ ಹಗರಣಗಳಲ್ಲಿ ಭಾಗಿಯಾಗಿರುವ ನಾಯಕರ ಪಟ್ಟಿ) ದೊಡ್ಡ ಪಟ್ಟಿ ಸಿಗುತ್ತದೆ. ಹಾಲಪ್ಪ, ರಘುಪತಿ ಭಟ್, ರೇಣುಕಾಚಾರ್ಯ, ಸಿದ್ದು ಸವಡಿ, ಕೃಷ್ಣ ಪಾಲೇಮಾರ್, ಸಿ.ಸಿ.ಪಾಟೀಲ, ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ.
ಇದು ಇಷ್ಟಕ್ಕೇ ಸೀಮಿತವಾಗಿರದು. ಏಕೆಂದರೆ ತೇಜಸ್ವಿ ಸೂರ್ಯನಿಂದ ಕಿರುಕುಳಕ್ಕೆ ಒಳಗಾದ ಇಬ್ಬರು ಮಹಿಳೆಯರು ತಮಗೆ ನೆರವಾಗಬೇಕೆಂದು ಪ್ರತಾಪ್ ಸಿಂಹನ ಮೊರೆ ಹೋಗಿದ್ದಾರೆಂದು ಈಗಾಗಲೇ ಬಹಿರಂಗವಾಗಿದೆ. ಯಾವ ಸಮಸ್ಯೆಯ ಕುರಿತು ಯಾರ ಬಳಿ ಹೋಗಿದ್ದಾರೆಂದು ನೋಡಿದರೆ ಆಘಾತವಾಗುತ್ತದೆ.

ಇಂತಹ ಹಗರಣಗಳು ಬಿಜೆಪಿಗೆ ಮಾತ್ರ ಸೀಮಿತವಾಗಿದೆಯೆಂದು ಅರ್ಥವಲ್ಲ. ಉಳಿದ ಪಕ್ಷಗಳಲ್ಲೂ ನಡೆದಿರುವ ಎಲ್ಲಾ ಹಗರಣಗಳೂ ಹೊರಗೆ ಬಂದಿವೆಯೆಂದೂ ಹೇಳಲಾಗದು. ಆದರೆ, ಬಿಜೆಪಿಯು ನೆಹರೂರಂಥ ನಾಯಕರು ಕುರಿತು ಸುಳ್ಳು ಸುದ್ದಿ, ಫೋಟೋಷಾಪ್ ಫೋಟೋಗಳನ್ನು ಸೃಷ್ಟಿ ಮಾಡುವ ದೊಡ್ಡ ಪಡೆಯನ್ನೇ ಹೊಂದಿದೆ. ತಮ್ಮ ಒಳಗೇ ಅಸಹ್ಯಕರ ಹುಳುಕುಗಳನ್ನು ಇಟ್ಟುಕೊಂಡಿದೆ.
ಬಿಜೆಪಿಯ ಯುವನಾಯಕರುಗಳಿಗೆ ಕೂಡಲೇ ಸೆಕ್ಸ್ ತಜ್ಞರಿಂದ ಕೌನ್ಸೆಲಿಂಗ್‍ನ ಅಗತ್ಯವಿದೆ. ಅದಕ್ಕೆ ವ್ಯವಸ್ಥೆ ಆಗದಿದ್ದರೆ, ಅವರು ದೊಡ್ಡ ಸಮಸ್ಯೆಯನ್ನು ಉಂಟು ಮಾಡಲಿದ್ದಾರೆ.

ಅಪ್‍ಡೇಟ್:
ಮೇಲೆ ಹೇಳಲಾದ ವಾಟ್ಸಾಪ್ ಫಾರ್ವರ್ಡ್‍ಗಳೊಂದಿಗೆ (ಪತ್ರಿಕೆಗೆ ಆ ಫೋಟೋಗಳು ಬಂದಿರಲಿಲ್ಲ) ಪ್ರತಾಪ್ ಸಿಂಹ ಒಬ್ಬ ಹುಡುಗಿಯ ಜೊತೆಗೆ ಇರುವ ಫೋಟೋ ಸಹಾ ಇತ್ತೆಂದು ಹೇಳಲಾಗುತ್ತಿದೆ. ಆ ಫೋಟೋದಲ್ಲಿರುವ ಹುಡುಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸದರಿ ಸುದ್ದಿ ಸುಳ್ಳೆಂದು ದೂರು ನೀಡಿರುವ ಕುರಿತು ವರದಿಯಾಗಿದೆ. ಆದರೆ, ಆಡಿಯೋದಲ್ಲಿ ಮಾತಾಡಿರುವ ಹುಡುಗಿ ಮತ್ತು ಈ ಹುಡುಗಿ ಒಬ್ಬರೇನಾ ಬೇರೆಯವರಾ ಎಂಬುದು ಗೊತ್ತಿಲ್ಲ.
ಈ ಕುರಿತು ನಡೆಯುವ ಇತರ ಬೆಳವಣಿಗೆಗಳ ಕುರಿತು ಈ ಪೇಜ್‍ನಲ್ಲಿ ನಂತರ ಅಪ್‍ಡೇಟ್ ಮಾಡಲಾಗುವುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...