Homeಕರ್ನಾಟಕಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

ಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

- Advertisement -
- Advertisement -

ತೇಜಸ್ವಿ ಸೂರ್ಯನ ಸೆಕ್ಸ್ ಹಗರಣದ ಬಗ್ಗೆ ಸಂತ್ರಸ್ತರು ದೂರಿದ್ದು ಇದೇ ವ್ಯಕ್ತಿಗೆ! ಆದರೆ ಈ ವ್ಯಕ್ತಿಯ ಕಥೆ ಕೇಳಿದರೆ ಬೆಚ್ಚಿ ಬೀಳುತ್ತೀರಿ?

ಏಪ್ರಿಲ್ 16ರ ಸಂಜೆಯ ಹೊತ್ತಿಗೆ ಮೈಸೂರು ಭಾಗದ ಕೆಲವರ ಮೊಬೈಲ್‍ಗೆ ಎರಡು ಆಡಿಯೋಗಳು, ಹುಡುಗಿಯೊಬ್ಬಳು ಹಸ್ತಾಕ್ಷರದಲ್ಲಿ ಬರೆದ 8 ಪುಟಗಳ ಪತ್ರ ಮತ್ತು ಸ್ಕ್ರೀನ್‍ಷಾಟ್‍ಗಳು ತಲುಪಿದವು. ಅದನ್ನು ಮೇಲ್ನೋಟಕ್ಕೆ ನೋಡಿದವರು ಕೂಡಲೇ ಇನ್ನಷ್ಟು ಜನರಿಗೆ ಫಾರ್ವರ್ಡ್ ಮಾಡಿದರು. ನಂತರ ಸಮಯ ಸಿಕ್ಕಾಗ ಆ ಸ್ಕ್ರೀನ್‍ಷಾಟ್‍ಗಳನ್ನು ಓದಿ, ಆಡಿಯೋ ಕೇಳಿದರು. ತೀರಾ ಅಶ್ಲೀಲವಾಗಿದ್ದ ಕಾರಣಕ್ಕೆ, ಮೊದಲು ಫಾರ್ವರ್ಡ್ ಮಾಡಿದ್ದಕ್ಕೆ ಮುಜುಗರ ಪಟ್ಟುಕೊಂಡು, ಕ್ಷಮೆ ಕೇಳಿ ಮತ್ತೆ ಮೆಸೇಜ್ ಮಾಡಿದರು.

ಆ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿದ್ದದ್ದು ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹರ ಲೈಂಗಿಕ ಪುರಾಣ. ಆಡಿಯೋ ಕೇಳಿದ ಎಲ್ಲರಿಗೂ ಅದು ಪ್ರತಾಪ್ ಸಿಂಹರದ್ದೇ ಎಂಬುದರಲ್ಲಿ ಯಾವ ಸಂದೇಹವೂ ಉಳಿಯುವುದಿಲ್ಲ. ಅದರ ಆಚೆಗೆ ಹಸ್ತಾಕ್ಷರದಲ್ಲಿರುವ ಪತ್ರದಲ್ಲಿ ಮಾಡಿರುವ ಆರೋಪಗಳನ್ನು ನೋಡಿದರೆ, ಅಥವಾ ಆಡಿಯೋ ಕೇಳಿದರೆ ಎರಡು ವಿಚಾರಗಳು ಸ್ಪಷ್ಟವಾಗುತ್ತದೆ. ಒಂದು, ಸಂಬಂಧಿಸಿದ ಹುಡುಗಿಯೂ ಸೋಕಾಲ್ಡ್ ಪ್ರೇಮ ಅಥವಾ ಸಂಬಂಧದಲ್ಲಿ ಒಪ್ಪಿಗೆಯಿಂದಲೇ ಆತನ ಜೊತೆಗೆ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಾರೆ ಮತ್ತು ಪ್ರತಾಪ್ ಸಿಂಹ ಸಾರ್ವಜನಿಕವಾಗಿ ಚಾಲ್ತಿಯಲ್ಲಿರುವ ಮೌಲ್ಯಗಳಿಗನುಸಾರ ಅತ್ಯಂತ ಅನೈತಿಕವಾದ ಮತ್ತು ವಿಕೃತವಾದ ಲೈಂಗಿಕ ಆಸಕ್ತಿಗಳನ್ನು ಇಟ್ಟುಕೊಂಡಿದ್ದಾರೆ. ಏಕಕಾಲದಲ್ಲಿ ಹಲವರ ಜೊತೆಗೆ ಲೈಂಗಿಕ ಸಂಬಂಧಗಳನ್ನು ಇಟ್ಟುಕೊಳ್ಳುವ ಚಾಳಿ ಇರುವ ಒಂದು ವರ್ತುಲವನ್ನೇ ಅವರು ಬಿಲ್ಡ್ ಮಾಡಿಕೊಂಡಿದ್ದಾರೆ.

ಇವೆಲ್ಲವನ್ನೂ ಅವರವರ ವ್ಯಕ್ತಿಗತ ವಿಚಾರ ಎಂದು ತಳ್ಳಿ ಹಾಕಲಾಗದು.
ಕಾರಣವಿಷ್ಟೇ. ಪ್ರತಾಪ್ ಸಂಸತ್ ಸದಸ್ಯನಂತಹ ಸ್ಥಾನದಲ್ಲಿರುವ ವ್ಯಕ್ತಿ. ಈ ಸ್ಥಾನವೇ ಹಲವರನ್ನು ಆಕರ್ಷಿಸುವ, ಆಮಿಷ ಒಡ್ಡುವ, ಬೆದರಿಕೆ ಒಡ್ಡುವ ಸಾಧ್ಯತೆಗಳನ್ನು ಕಲ್ಪಿಸಿಕೊಡುತ್ತದೆ. ಹಾಗಾಗಿ ಅದರ ಎಲ್ಲಾ ಬಗೆಯ ದುರ್ಬಳಕೆ ಮಾಡಿಕೊಂಡು ಅಮಾಯಕರಾದ ಎಷ್ಟೋ ಹುಡುಗಿಯರನ್ನು ಬಲೆಗೆ ಕೆಡವಿಕೊಂಡಿರುವ ಸಾಧ್ಯತೆ ಇದ್ದೇ ಇರುತ್ತದೆ. ಅದನ್ನು ಪ್ರತಾಪ್ ಸಿಂಹ ಮಾಡಿದ್ದಾರೆ ಎಂದು ನಂಬುವಂತಹ ಸಾಕ್ಷ್ಯಾಧಾರಗಳು ಸದರಿ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿವೆ.

ಎರಡನೆಯದಾಗಿ, ಭಾರತೀಯ ಸಂಸ್ಕೃತಿ, ಸಚ್ಚಾರಿತ್ರ್ಯ ಇತ್ಯಾದಿಗಳ ಕುರಿತು ಮಾತನಾಡುವ ಆರೆಸ್ಸೆಸ್ ಜೊತೆಗೆ ಅಭಿಮಾನ ಪೂರ್ವಕ ಹೆಮ್ಮೆಯ ಸಂಬಂಧವನ್ನಿಟ್ಟುಕೊಂಡಿರುವುದಾಗಿ ಘೋಷಿಸುವ ಇಂತಹ ವ್ಯಕ್ತಿಗಳು ಹೀಗೇಕೆ ಎಂಬ ಪ್ರಶ್ನೆ ಏಳುತ್ತದೆ. ಮಾತಿಗೂ, ಕೃತಿಗೂ ಸಂಬಂಧವೇ ಇಲ್ಲ. ಅದರಲ್ಲೂ ಹೆಣ್ಣನ್ನು ಇವರುಗಳು ಭೋಗದ ವಸ್ತುವೆಂದಲ್ಲದೇ ಬೇರ್ಯಾವ ರೀತಿಯಲ್ಲೂ ನೋಡುವಂತೆ ಕಾಣುವುದಿಲ್ಲ.
ಬಹಳಷ್ಟು ಜನರಿಗೆ ಗೊತ್ತಿಲ್ಲದ ಸಂಗತಿಯೇನೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಮಹಿಳೆಯರಿಗೆ ಸದಸ್ಯತ್ವವೇ ಇಲ್ಲ. ರಾಷ್ಟ್ರ ಸೇವಿಕಾ ಸಂಘ ಇದೆಯಲ್ಲಾ ಎಂದು ಯಾರಾದರೂ ಕೇಳಬಹುದು. ಭಜರಂಗದಳ, ವಿಶ್ವ ಹಿಂದೂ ಪರಿಷತ್ ರೀತಿಯಲ್ಲಿ ಅದೂ ಒಂದು ಅಂಗಸಂಸ್ಥೆ ಮಾತ್ರವೇ ಆಗಿದೆ. ಕಾಂಗ್ರೆಸ್ ಅಥವಾ ಸಿಪಿಎಂ ಥರದ ಪಕ್ಷಗಳೂ ಹಾಗೆಯೇ ಅಲ್ಲವೇ ಎಂದು ಕೆಲವರು ಅಮಾಯಕ ಪ್ರಶ್ನೆಯನ್ನು ಹಾಕಬಹುದು. ಇಲ್ಲ, ಕಾಂಗ್ರೆಸ್ ಅಥವಾ ಸಿಪಿಎಂ ಪಕ್ಷಗಳಲ್ಲಿ ಮಹಿಳೆಯರೂ ಸದಸ್ಯರು. ಅದರಲ್ಲಿ ತಾರತಮ್ಯ ಇರುವುದಿಲ್ಲ. ಅದರ ಅಧ್ಯಕ್ಷರೂ ಆಗಬಹುದು. ಅದಲ್ಲದೇ ಮಹಿಳಾ ವಿಭಾಗವೂ ಇರುತ್ತದೆ ಅಷ್ಟೇ.

ಆದರೆ, ಇಲ್ಲಿ ಆರೆಸ್ಸೆಸ್‍ನ ನಾಯಕರಾಗುವುದು ಹೋಗಲಿ, ಸದಸ್ಯೆಯರಾಗೂ ಮಹಿಳೆಯರು ಇರುವಂತಿಲ್ಲ. ಮಹಿಳೆಯರು ಎರಡನೆಯ ದರ್ಜೆಯ ಪ್ರಜೆಗಳು, ಅವರು ಮನೆಗೆಲಸ ಮಾಡುವುದಕ್ಕೆ, ಸೇವೆ ಮಾಡುವುದಕ್ಕೆ, ಪುರುಷರ ಭೋಗಕ್ಕೆ ಬಳಕೆಯಾಗಲು ಅಷ್ಟೇ ಇದ್ದಾರೆ ಎಂಬ ಮನೋಭಾವ ಇದ್ದಾಗ, ಅದರ ಸುತ್ತಲಿನ ಪರಿವಾರ ಹೀಗೇ ಇರಲು ಸಾಧ್ಯ. ಹಾಗಾಗಿಯೇ ಕರ್ನಾಟಕವೊಂದರಲ್ಲೇ ಇಂತಹವರ (ಇದು ಆರೆಸ್ಸೆಸ್‍ನ ಲೈಂಗಿಕ ಹಗರಣಗಳ ಪಟ್ಟಿಯಲ್ಲ, ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗಿರುವ ಬಿಜೆಪಿ ನಾಯಕರ ಲೈಂಗಿಕ ಹಗರಣಗಳಲ್ಲಿ ಭಾಗಿಯಾಗಿರುವ ನಾಯಕರ ಪಟ್ಟಿ) ದೊಡ್ಡ ಪಟ್ಟಿ ಸಿಗುತ್ತದೆ. ಹಾಲಪ್ಪ, ರಘುಪತಿ ಭಟ್, ರೇಣುಕಾಚಾರ್ಯ, ಸಿದ್ದು ಸವಡಿ, ಕೃಷ್ಣ ಪಾಲೇಮಾರ್, ಸಿ.ಸಿ.ಪಾಟೀಲ, ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ.
ಇದು ಇಷ್ಟಕ್ಕೇ ಸೀಮಿತವಾಗಿರದು. ಏಕೆಂದರೆ ತೇಜಸ್ವಿ ಸೂರ್ಯನಿಂದ ಕಿರುಕುಳಕ್ಕೆ ಒಳಗಾದ ಇಬ್ಬರು ಮಹಿಳೆಯರು ತಮಗೆ ನೆರವಾಗಬೇಕೆಂದು ಪ್ರತಾಪ್ ಸಿಂಹನ ಮೊರೆ ಹೋಗಿದ್ದಾರೆಂದು ಈಗಾಗಲೇ ಬಹಿರಂಗವಾಗಿದೆ. ಯಾವ ಸಮಸ್ಯೆಯ ಕುರಿತು ಯಾರ ಬಳಿ ಹೋಗಿದ್ದಾರೆಂದು ನೋಡಿದರೆ ಆಘಾತವಾಗುತ್ತದೆ.

ಇಂತಹ ಹಗರಣಗಳು ಬಿಜೆಪಿಗೆ ಮಾತ್ರ ಸೀಮಿತವಾಗಿದೆಯೆಂದು ಅರ್ಥವಲ್ಲ. ಉಳಿದ ಪಕ್ಷಗಳಲ್ಲೂ ನಡೆದಿರುವ ಎಲ್ಲಾ ಹಗರಣಗಳೂ ಹೊರಗೆ ಬಂದಿವೆಯೆಂದೂ ಹೇಳಲಾಗದು. ಆದರೆ, ಬಿಜೆಪಿಯು ನೆಹರೂರಂಥ ನಾಯಕರು ಕುರಿತು ಸುಳ್ಳು ಸುದ್ದಿ, ಫೋಟೋಷಾಪ್ ಫೋಟೋಗಳನ್ನು ಸೃಷ್ಟಿ ಮಾಡುವ ದೊಡ್ಡ ಪಡೆಯನ್ನೇ ಹೊಂದಿದೆ. ತಮ್ಮ ಒಳಗೇ ಅಸಹ್ಯಕರ ಹುಳುಕುಗಳನ್ನು ಇಟ್ಟುಕೊಂಡಿದೆ.
ಬಿಜೆಪಿಯ ಯುವನಾಯಕರುಗಳಿಗೆ ಕೂಡಲೇ ಸೆಕ್ಸ್ ತಜ್ಞರಿಂದ ಕೌನ್ಸೆಲಿಂಗ್‍ನ ಅಗತ್ಯವಿದೆ. ಅದಕ್ಕೆ ವ್ಯವಸ್ಥೆ ಆಗದಿದ್ದರೆ, ಅವರು ದೊಡ್ಡ ಸಮಸ್ಯೆಯನ್ನು ಉಂಟು ಮಾಡಲಿದ್ದಾರೆ.

ಅಪ್‍ಡೇಟ್:
ಮೇಲೆ ಹೇಳಲಾದ ವಾಟ್ಸಾಪ್ ಫಾರ್ವರ್ಡ್‍ಗಳೊಂದಿಗೆ (ಪತ್ರಿಕೆಗೆ ಆ ಫೋಟೋಗಳು ಬಂದಿರಲಿಲ್ಲ) ಪ್ರತಾಪ್ ಸಿಂಹ ಒಬ್ಬ ಹುಡುಗಿಯ ಜೊತೆಗೆ ಇರುವ ಫೋಟೋ ಸಹಾ ಇತ್ತೆಂದು ಹೇಳಲಾಗುತ್ತಿದೆ. ಆ ಫೋಟೋದಲ್ಲಿರುವ ಹುಡುಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸದರಿ ಸುದ್ದಿ ಸುಳ್ಳೆಂದು ದೂರು ನೀಡಿರುವ ಕುರಿತು ವರದಿಯಾಗಿದೆ. ಆದರೆ, ಆಡಿಯೋದಲ್ಲಿ ಮಾತಾಡಿರುವ ಹುಡುಗಿ ಮತ್ತು ಈ ಹುಡುಗಿ ಒಬ್ಬರೇನಾ ಬೇರೆಯವರಾ ಎಂಬುದು ಗೊತ್ತಿಲ್ಲ.
ಈ ಕುರಿತು ನಡೆಯುವ ಇತರ ಬೆಳವಣಿಗೆಗಳ ಕುರಿತು ಈ ಪೇಜ್‍ನಲ್ಲಿ ನಂತರ ಅಪ್‍ಡೇಟ್ ಮಾಡಲಾಗುವುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...