Homeಕರ್ನಾಟಕಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

ಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

- Advertisement -
- Advertisement -

ತೇಜಸ್ವಿ ಸೂರ್ಯನ ಸೆಕ್ಸ್ ಹಗರಣದ ಬಗ್ಗೆ ಸಂತ್ರಸ್ತರು ದೂರಿದ್ದು ಇದೇ ವ್ಯಕ್ತಿಗೆ! ಆದರೆ ಈ ವ್ಯಕ್ತಿಯ ಕಥೆ ಕೇಳಿದರೆ ಬೆಚ್ಚಿ ಬೀಳುತ್ತೀರಿ?

ಏಪ್ರಿಲ್ 16ರ ಸಂಜೆಯ ಹೊತ್ತಿಗೆ ಮೈಸೂರು ಭಾಗದ ಕೆಲವರ ಮೊಬೈಲ್‍ಗೆ ಎರಡು ಆಡಿಯೋಗಳು, ಹುಡುಗಿಯೊಬ್ಬಳು ಹಸ್ತಾಕ್ಷರದಲ್ಲಿ ಬರೆದ 8 ಪುಟಗಳ ಪತ್ರ ಮತ್ತು ಸ್ಕ್ರೀನ್‍ಷಾಟ್‍ಗಳು ತಲುಪಿದವು. ಅದನ್ನು ಮೇಲ್ನೋಟಕ್ಕೆ ನೋಡಿದವರು ಕೂಡಲೇ ಇನ್ನಷ್ಟು ಜನರಿಗೆ ಫಾರ್ವರ್ಡ್ ಮಾಡಿದರು. ನಂತರ ಸಮಯ ಸಿಕ್ಕಾಗ ಆ ಸ್ಕ್ರೀನ್‍ಷಾಟ್‍ಗಳನ್ನು ಓದಿ, ಆಡಿಯೋ ಕೇಳಿದರು. ತೀರಾ ಅಶ್ಲೀಲವಾಗಿದ್ದ ಕಾರಣಕ್ಕೆ, ಮೊದಲು ಫಾರ್ವರ್ಡ್ ಮಾಡಿದ್ದಕ್ಕೆ ಮುಜುಗರ ಪಟ್ಟುಕೊಂಡು, ಕ್ಷಮೆ ಕೇಳಿ ಮತ್ತೆ ಮೆಸೇಜ್ ಮಾಡಿದರು.

ಆ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿದ್ದದ್ದು ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹರ ಲೈಂಗಿಕ ಪುರಾಣ. ಆಡಿಯೋ ಕೇಳಿದ ಎಲ್ಲರಿಗೂ ಅದು ಪ್ರತಾಪ್ ಸಿಂಹರದ್ದೇ ಎಂಬುದರಲ್ಲಿ ಯಾವ ಸಂದೇಹವೂ ಉಳಿಯುವುದಿಲ್ಲ. ಅದರ ಆಚೆಗೆ ಹಸ್ತಾಕ್ಷರದಲ್ಲಿರುವ ಪತ್ರದಲ್ಲಿ ಮಾಡಿರುವ ಆರೋಪಗಳನ್ನು ನೋಡಿದರೆ, ಅಥವಾ ಆಡಿಯೋ ಕೇಳಿದರೆ ಎರಡು ವಿಚಾರಗಳು ಸ್ಪಷ್ಟವಾಗುತ್ತದೆ. ಒಂದು, ಸಂಬಂಧಿಸಿದ ಹುಡುಗಿಯೂ ಸೋಕಾಲ್ಡ್ ಪ್ರೇಮ ಅಥವಾ ಸಂಬಂಧದಲ್ಲಿ ಒಪ್ಪಿಗೆಯಿಂದಲೇ ಆತನ ಜೊತೆಗೆ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಾರೆ ಮತ್ತು ಪ್ರತಾಪ್ ಸಿಂಹ ಸಾರ್ವಜನಿಕವಾಗಿ ಚಾಲ್ತಿಯಲ್ಲಿರುವ ಮೌಲ್ಯಗಳಿಗನುಸಾರ ಅತ್ಯಂತ ಅನೈತಿಕವಾದ ಮತ್ತು ವಿಕೃತವಾದ ಲೈಂಗಿಕ ಆಸಕ್ತಿಗಳನ್ನು ಇಟ್ಟುಕೊಂಡಿದ್ದಾರೆ. ಏಕಕಾಲದಲ್ಲಿ ಹಲವರ ಜೊತೆಗೆ ಲೈಂಗಿಕ ಸಂಬಂಧಗಳನ್ನು ಇಟ್ಟುಕೊಳ್ಳುವ ಚಾಳಿ ಇರುವ ಒಂದು ವರ್ತುಲವನ್ನೇ ಅವರು ಬಿಲ್ಡ್ ಮಾಡಿಕೊಂಡಿದ್ದಾರೆ.

ಇವೆಲ್ಲವನ್ನೂ ಅವರವರ ವ್ಯಕ್ತಿಗತ ವಿಚಾರ ಎಂದು ತಳ್ಳಿ ಹಾಕಲಾಗದು.
ಕಾರಣವಿಷ್ಟೇ. ಪ್ರತಾಪ್ ಸಂಸತ್ ಸದಸ್ಯನಂತಹ ಸ್ಥಾನದಲ್ಲಿರುವ ವ್ಯಕ್ತಿ. ಈ ಸ್ಥಾನವೇ ಹಲವರನ್ನು ಆಕರ್ಷಿಸುವ, ಆಮಿಷ ಒಡ್ಡುವ, ಬೆದರಿಕೆ ಒಡ್ಡುವ ಸಾಧ್ಯತೆಗಳನ್ನು ಕಲ್ಪಿಸಿಕೊಡುತ್ತದೆ. ಹಾಗಾಗಿ ಅದರ ಎಲ್ಲಾ ಬಗೆಯ ದುರ್ಬಳಕೆ ಮಾಡಿಕೊಂಡು ಅಮಾಯಕರಾದ ಎಷ್ಟೋ ಹುಡುಗಿಯರನ್ನು ಬಲೆಗೆ ಕೆಡವಿಕೊಂಡಿರುವ ಸಾಧ್ಯತೆ ಇದ್ದೇ ಇರುತ್ತದೆ. ಅದನ್ನು ಪ್ರತಾಪ್ ಸಿಂಹ ಮಾಡಿದ್ದಾರೆ ಎಂದು ನಂಬುವಂತಹ ಸಾಕ್ಷ್ಯಾಧಾರಗಳು ಸದರಿ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿವೆ.

ಎರಡನೆಯದಾಗಿ, ಭಾರತೀಯ ಸಂಸ್ಕೃತಿ, ಸಚ್ಚಾರಿತ್ರ್ಯ ಇತ್ಯಾದಿಗಳ ಕುರಿತು ಮಾತನಾಡುವ ಆರೆಸ್ಸೆಸ್ ಜೊತೆಗೆ ಅಭಿಮಾನ ಪೂರ್ವಕ ಹೆಮ್ಮೆಯ ಸಂಬಂಧವನ್ನಿಟ್ಟುಕೊಂಡಿರುವುದಾಗಿ ಘೋಷಿಸುವ ಇಂತಹ ವ್ಯಕ್ತಿಗಳು ಹೀಗೇಕೆ ಎಂಬ ಪ್ರಶ್ನೆ ಏಳುತ್ತದೆ. ಮಾತಿಗೂ, ಕೃತಿಗೂ ಸಂಬಂಧವೇ ಇಲ್ಲ. ಅದರಲ್ಲೂ ಹೆಣ್ಣನ್ನು ಇವರುಗಳು ಭೋಗದ ವಸ್ತುವೆಂದಲ್ಲದೇ ಬೇರ್ಯಾವ ರೀತಿಯಲ್ಲೂ ನೋಡುವಂತೆ ಕಾಣುವುದಿಲ್ಲ.
ಬಹಳಷ್ಟು ಜನರಿಗೆ ಗೊತ್ತಿಲ್ಲದ ಸಂಗತಿಯೇನೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಮಹಿಳೆಯರಿಗೆ ಸದಸ್ಯತ್ವವೇ ಇಲ್ಲ. ರಾಷ್ಟ್ರ ಸೇವಿಕಾ ಸಂಘ ಇದೆಯಲ್ಲಾ ಎಂದು ಯಾರಾದರೂ ಕೇಳಬಹುದು. ಭಜರಂಗದಳ, ವಿಶ್ವ ಹಿಂದೂ ಪರಿಷತ್ ರೀತಿಯಲ್ಲಿ ಅದೂ ಒಂದು ಅಂಗಸಂಸ್ಥೆ ಮಾತ್ರವೇ ಆಗಿದೆ. ಕಾಂಗ್ರೆಸ್ ಅಥವಾ ಸಿಪಿಎಂ ಥರದ ಪಕ್ಷಗಳೂ ಹಾಗೆಯೇ ಅಲ್ಲವೇ ಎಂದು ಕೆಲವರು ಅಮಾಯಕ ಪ್ರಶ್ನೆಯನ್ನು ಹಾಕಬಹುದು. ಇಲ್ಲ, ಕಾಂಗ್ರೆಸ್ ಅಥವಾ ಸಿಪಿಎಂ ಪಕ್ಷಗಳಲ್ಲಿ ಮಹಿಳೆಯರೂ ಸದಸ್ಯರು. ಅದರಲ್ಲಿ ತಾರತಮ್ಯ ಇರುವುದಿಲ್ಲ. ಅದರ ಅಧ್ಯಕ್ಷರೂ ಆಗಬಹುದು. ಅದಲ್ಲದೇ ಮಹಿಳಾ ವಿಭಾಗವೂ ಇರುತ್ತದೆ ಅಷ್ಟೇ.

ಆದರೆ, ಇಲ್ಲಿ ಆರೆಸ್ಸೆಸ್‍ನ ನಾಯಕರಾಗುವುದು ಹೋಗಲಿ, ಸದಸ್ಯೆಯರಾಗೂ ಮಹಿಳೆಯರು ಇರುವಂತಿಲ್ಲ. ಮಹಿಳೆಯರು ಎರಡನೆಯ ದರ್ಜೆಯ ಪ್ರಜೆಗಳು, ಅವರು ಮನೆಗೆಲಸ ಮಾಡುವುದಕ್ಕೆ, ಸೇವೆ ಮಾಡುವುದಕ್ಕೆ, ಪುರುಷರ ಭೋಗಕ್ಕೆ ಬಳಕೆಯಾಗಲು ಅಷ್ಟೇ ಇದ್ದಾರೆ ಎಂಬ ಮನೋಭಾವ ಇದ್ದಾಗ, ಅದರ ಸುತ್ತಲಿನ ಪರಿವಾರ ಹೀಗೇ ಇರಲು ಸಾಧ್ಯ. ಹಾಗಾಗಿಯೇ ಕರ್ನಾಟಕವೊಂದರಲ್ಲೇ ಇಂತಹವರ (ಇದು ಆರೆಸ್ಸೆಸ್‍ನ ಲೈಂಗಿಕ ಹಗರಣಗಳ ಪಟ್ಟಿಯಲ್ಲ, ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗಿರುವ ಬಿಜೆಪಿ ನಾಯಕರ ಲೈಂಗಿಕ ಹಗರಣಗಳಲ್ಲಿ ಭಾಗಿಯಾಗಿರುವ ನಾಯಕರ ಪಟ್ಟಿ) ದೊಡ್ಡ ಪಟ್ಟಿ ಸಿಗುತ್ತದೆ. ಹಾಲಪ್ಪ, ರಘುಪತಿ ಭಟ್, ರೇಣುಕಾಚಾರ್ಯ, ಸಿದ್ದು ಸವಡಿ, ಕೃಷ್ಣ ಪಾಲೇಮಾರ್, ಸಿ.ಸಿ.ಪಾಟೀಲ, ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ.
ಇದು ಇಷ್ಟಕ್ಕೇ ಸೀಮಿತವಾಗಿರದು. ಏಕೆಂದರೆ ತೇಜಸ್ವಿ ಸೂರ್ಯನಿಂದ ಕಿರುಕುಳಕ್ಕೆ ಒಳಗಾದ ಇಬ್ಬರು ಮಹಿಳೆಯರು ತಮಗೆ ನೆರವಾಗಬೇಕೆಂದು ಪ್ರತಾಪ್ ಸಿಂಹನ ಮೊರೆ ಹೋಗಿದ್ದಾರೆಂದು ಈಗಾಗಲೇ ಬಹಿರಂಗವಾಗಿದೆ. ಯಾವ ಸಮಸ್ಯೆಯ ಕುರಿತು ಯಾರ ಬಳಿ ಹೋಗಿದ್ದಾರೆಂದು ನೋಡಿದರೆ ಆಘಾತವಾಗುತ್ತದೆ.

ಇಂತಹ ಹಗರಣಗಳು ಬಿಜೆಪಿಗೆ ಮಾತ್ರ ಸೀಮಿತವಾಗಿದೆಯೆಂದು ಅರ್ಥವಲ್ಲ. ಉಳಿದ ಪಕ್ಷಗಳಲ್ಲೂ ನಡೆದಿರುವ ಎಲ್ಲಾ ಹಗರಣಗಳೂ ಹೊರಗೆ ಬಂದಿವೆಯೆಂದೂ ಹೇಳಲಾಗದು. ಆದರೆ, ಬಿಜೆಪಿಯು ನೆಹರೂರಂಥ ನಾಯಕರು ಕುರಿತು ಸುಳ್ಳು ಸುದ್ದಿ, ಫೋಟೋಷಾಪ್ ಫೋಟೋಗಳನ್ನು ಸೃಷ್ಟಿ ಮಾಡುವ ದೊಡ್ಡ ಪಡೆಯನ್ನೇ ಹೊಂದಿದೆ. ತಮ್ಮ ಒಳಗೇ ಅಸಹ್ಯಕರ ಹುಳುಕುಗಳನ್ನು ಇಟ್ಟುಕೊಂಡಿದೆ.
ಬಿಜೆಪಿಯ ಯುವನಾಯಕರುಗಳಿಗೆ ಕೂಡಲೇ ಸೆಕ್ಸ್ ತಜ್ಞರಿಂದ ಕೌನ್ಸೆಲಿಂಗ್‍ನ ಅಗತ್ಯವಿದೆ. ಅದಕ್ಕೆ ವ್ಯವಸ್ಥೆ ಆಗದಿದ್ದರೆ, ಅವರು ದೊಡ್ಡ ಸಮಸ್ಯೆಯನ್ನು ಉಂಟು ಮಾಡಲಿದ್ದಾರೆ.

ಅಪ್‍ಡೇಟ್:
ಮೇಲೆ ಹೇಳಲಾದ ವಾಟ್ಸಾಪ್ ಫಾರ್ವರ್ಡ್‍ಗಳೊಂದಿಗೆ (ಪತ್ರಿಕೆಗೆ ಆ ಫೋಟೋಗಳು ಬಂದಿರಲಿಲ್ಲ) ಪ್ರತಾಪ್ ಸಿಂಹ ಒಬ್ಬ ಹುಡುಗಿಯ ಜೊತೆಗೆ ಇರುವ ಫೋಟೋ ಸಹಾ ಇತ್ತೆಂದು ಹೇಳಲಾಗುತ್ತಿದೆ. ಆ ಫೋಟೋದಲ್ಲಿರುವ ಹುಡುಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸದರಿ ಸುದ್ದಿ ಸುಳ್ಳೆಂದು ದೂರು ನೀಡಿರುವ ಕುರಿತು ವರದಿಯಾಗಿದೆ. ಆದರೆ, ಆಡಿಯೋದಲ್ಲಿ ಮಾತಾಡಿರುವ ಹುಡುಗಿ ಮತ್ತು ಈ ಹುಡುಗಿ ಒಬ್ಬರೇನಾ ಬೇರೆಯವರಾ ಎಂಬುದು ಗೊತ್ತಿಲ್ಲ.
ಈ ಕುರಿತು ನಡೆಯುವ ಇತರ ಬೆಳವಣಿಗೆಗಳ ಕುರಿತು ಈ ಪೇಜ್‍ನಲ್ಲಿ ನಂತರ ಅಪ್‍ಡೇಟ್ ಮಾಡಲಾಗುವುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...