Homeಕರ್ನಾಟಕಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

ಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

- Advertisement -
- Advertisement -

ತೇಜಸ್ವಿ ಸೂರ್ಯನ ಸೆಕ್ಸ್ ಹಗರಣದ ಬಗ್ಗೆ ಸಂತ್ರಸ್ತರು ದೂರಿದ್ದು ಇದೇ ವ್ಯಕ್ತಿಗೆ! ಆದರೆ ಈ ವ್ಯಕ್ತಿಯ ಕಥೆ ಕೇಳಿದರೆ ಬೆಚ್ಚಿ ಬೀಳುತ್ತೀರಿ?

ಏಪ್ರಿಲ್ 16ರ ಸಂಜೆಯ ಹೊತ್ತಿಗೆ ಮೈಸೂರು ಭಾಗದ ಕೆಲವರ ಮೊಬೈಲ್‍ಗೆ ಎರಡು ಆಡಿಯೋಗಳು, ಹುಡುಗಿಯೊಬ್ಬಳು ಹಸ್ತಾಕ್ಷರದಲ್ಲಿ ಬರೆದ 8 ಪುಟಗಳ ಪತ್ರ ಮತ್ತು ಸ್ಕ್ರೀನ್‍ಷಾಟ್‍ಗಳು ತಲುಪಿದವು. ಅದನ್ನು ಮೇಲ್ನೋಟಕ್ಕೆ ನೋಡಿದವರು ಕೂಡಲೇ ಇನ್ನಷ್ಟು ಜನರಿಗೆ ಫಾರ್ವರ್ಡ್ ಮಾಡಿದರು. ನಂತರ ಸಮಯ ಸಿಕ್ಕಾಗ ಆ ಸ್ಕ್ರೀನ್‍ಷಾಟ್‍ಗಳನ್ನು ಓದಿ, ಆಡಿಯೋ ಕೇಳಿದರು. ತೀರಾ ಅಶ್ಲೀಲವಾಗಿದ್ದ ಕಾರಣಕ್ಕೆ, ಮೊದಲು ಫಾರ್ವರ್ಡ್ ಮಾಡಿದ್ದಕ್ಕೆ ಮುಜುಗರ ಪಟ್ಟುಕೊಂಡು, ಕ್ಷಮೆ ಕೇಳಿ ಮತ್ತೆ ಮೆಸೇಜ್ ಮಾಡಿದರು.

ಆ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿದ್ದದ್ದು ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹರ ಲೈಂಗಿಕ ಪುರಾಣ. ಆಡಿಯೋ ಕೇಳಿದ ಎಲ್ಲರಿಗೂ ಅದು ಪ್ರತಾಪ್ ಸಿಂಹರದ್ದೇ ಎಂಬುದರಲ್ಲಿ ಯಾವ ಸಂದೇಹವೂ ಉಳಿಯುವುದಿಲ್ಲ. ಅದರ ಆಚೆಗೆ ಹಸ್ತಾಕ್ಷರದಲ್ಲಿರುವ ಪತ್ರದಲ್ಲಿ ಮಾಡಿರುವ ಆರೋಪಗಳನ್ನು ನೋಡಿದರೆ, ಅಥವಾ ಆಡಿಯೋ ಕೇಳಿದರೆ ಎರಡು ವಿಚಾರಗಳು ಸ್ಪಷ್ಟವಾಗುತ್ತದೆ. ಒಂದು, ಸಂಬಂಧಿಸಿದ ಹುಡುಗಿಯೂ ಸೋಕಾಲ್ಡ್ ಪ್ರೇಮ ಅಥವಾ ಸಂಬಂಧದಲ್ಲಿ ಒಪ್ಪಿಗೆಯಿಂದಲೇ ಆತನ ಜೊತೆಗೆ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಾರೆ ಮತ್ತು ಪ್ರತಾಪ್ ಸಿಂಹ ಸಾರ್ವಜನಿಕವಾಗಿ ಚಾಲ್ತಿಯಲ್ಲಿರುವ ಮೌಲ್ಯಗಳಿಗನುಸಾರ ಅತ್ಯಂತ ಅನೈತಿಕವಾದ ಮತ್ತು ವಿಕೃತವಾದ ಲೈಂಗಿಕ ಆಸಕ್ತಿಗಳನ್ನು ಇಟ್ಟುಕೊಂಡಿದ್ದಾರೆ. ಏಕಕಾಲದಲ್ಲಿ ಹಲವರ ಜೊತೆಗೆ ಲೈಂಗಿಕ ಸಂಬಂಧಗಳನ್ನು ಇಟ್ಟುಕೊಳ್ಳುವ ಚಾಳಿ ಇರುವ ಒಂದು ವರ್ತುಲವನ್ನೇ ಅವರು ಬಿಲ್ಡ್ ಮಾಡಿಕೊಂಡಿದ್ದಾರೆ.

ಇವೆಲ್ಲವನ್ನೂ ಅವರವರ ವ್ಯಕ್ತಿಗತ ವಿಚಾರ ಎಂದು ತಳ್ಳಿ ಹಾಕಲಾಗದು.
ಕಾರಣವಿಷ್ಟೇ. ಪ್ರತಾಪ್ ಸಂಸತ್ ಸದಸ್ಯನಂತಹ ಸ್ಥಾನದಲ್ಲಿರುವ ವ್ಯಕ್ತಿ. ಈ ಸ್ಥಾನವೇ ಹಲವರನ್ನು ಆಕರ್ಷಿಸುವ, ಆಮಿಷ ಒಡ್ಡುವ, ಬೆದರಿಕೆ ಒಡ್ಡುವ ಸಾಧ್ಯತೆಗಳನ್ನು ಕಲ್ಪಿಸಿಕೊಡುತ್ತದೆ. ಹಾಗಾಗಿ ಅದರ ಎಲ್ಲಾ ಬಗೆಯ ದುರ್ಬಳಕೆ ಮಾಡಿಕೊಂಡು ಅಮಾಯಕರಾದ ಎಷ್ಟೋ ಹುಡುಗಿಯರನ್ನು ಬಲೆಗೆ ಕೆಡವಿಕೊಂಡಿರುವ ಸಾಧ್ಯತೆ ಇದ್ದೇ ಇರುತ್ತದೆ. ಅದನ್ನು ಪ್ರತಾಪ್ ಸಿಂಹ ಮಾಡಿದ್ದಾರೆ ಎಂದು ನಂಬುವಂತಹ ಸಾಕ್ಷ್ಯಾಧಾರಗಳು ಸದರಿ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿವೆ.

ಎರಡನೆಯದಾಗಿ, ಭಾರತೀಯ ಸಂಸ್ಕೃತಿ, ಸಚ್ಚಾರಿತ್ರ್ಯ ಇತ್ಯಾದಿಗಳ ಕುರಿತು ಮಾತನಾಡುವ ಆರೆಸ್ಸೆಸ್ ಜೊತೆಗೆ ಅಭಿಮಾನ ಪೂರ್ವಕ ಹೆಮ್ಮೆಯ ಸಂಬಂಧವನ್ನಿಟ್ಟುಕೊಂಡಿರುವುದಾಗಿ ಘೋಷಿಸುವ ಇಂತಹ ವ್ಯಕ್ತಿಗಳು ಹೀಗೇಕೆ ಎಂಬ ಪ್ರಶ್ನೆ ಏಳುತ್ತದೆ. ಮಾತಿಗೂ, ಕೃತಿಗೂ ಸಂಬಂಧವೇ ಇಲ್ಲ. ಅದರಲ್ಲೂ ಹೆಣ್ಣನ್ನು ಇವರುಗಳು ಭೋಗದ ವಸ್ತುವೆಂದಲ್ಲದೇ ಬೇರ್ಯಾವ ರೀತಿಯಲ್ಲೂ ನೋಡುವಂತೆ ಕಾಣುವುದಿಲ್ಲ.
ಬಹಳಷ್ಟು ಜನರಿಗೆ ಗೊತ್ತಿಲ್ಲದ ಸಂಗತಿಯೇನೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಮಹಿಳೆಯರಿಗೆ ಸದಸ್ಯತ್ವವೇ ಇಲ್ಲ. ರಾಷ್ಟ್ರ ಸೇವಿಕಾ ಸಂಘ ಇದೆಯಲ್ಲಾ ಎಂದು ಯಾರಾದರೂ ಕೇಳಬಹುದು. ಭಜರಂಗದಳ, ವಿಶ್ವ ಹಿಂದೂ ಪರಿಷತ್ ರೀತಿಯಲ್ಲಿ ಅದೂ ಒಂದು ಅಂಗಸಂಸ್ಥೆ ಮಾತ್ರವೇ ಆಗಿದೆ. ಕಾಂಗ್ರೆಸ್ ಅಥವಾ ಸಿಪಿಎಂ ಥರದ ಪಕ್ಷಗಳೂ ಹಾಗೆಯೇ ಅಲ್ಲವೇ ಎಂದು ಕೆಲವರು ಅಮಾಯಕ ಪ್ರಶ್ನೆಯನ್ನು ಹಾಕಬಹುದು. ಇಲ್ಲ, ಕಾಂಗ್ರೆಸ್ ಅಥವಾ ಸಿಪಿಎಂ ಪಕ್ಷಗಳಲ್ಲಿ ಮಹಿಳೆಯರೂ ಸದಸ್ಯರು. ಅದರಲ್ಲಿ ತಾರತಮ್ಯ ಇರುವುದಿಲ್ಲ. ಅದರ ಅಧ್ಯಕ್ಷರೂ ಆಗಬಹುದು. ಅದಲ್ಲದೇ ಮಹಿಳಾ ವಿಭಾಗವೂ ಇರುತ್ತದೆ ಅಷ್ಟೇ.

ಆದರೆ, ಇಲ್ಲಿ ಆರೆಸ್ಸೆಸ್‍ನ ನಾಯಕರಾಗುವುದು ಹೋಗಲಿ, ಸದಸ್ಯೆಯರಾಗೂ ಮಹಿಳೆಯರು ಇರುವಂತಿಲ್ಲ. ಮಹಿಳೆಯರು ಎರಡನೆಯ ದರ್ಜೆಯ ಪ್ರಜೆಗಳು, ಅವರು ಮನೆಗೆಲಸ ಮಾಡುವುದಕ್ಕೆ, ಸೇವೆ ಮಾಡುವುದಕ್ಕೆ, ಪುರುಷರ ಭೋಗಕ್ಕೆ ಬಳಕೆಯಾಗಲು ಅಷ್ಟೇ ಇದ್ದಾರೆ ಎಂಬ ಮನೋಭಾವ ಇದ್ದಾಗ, ಅದರ ಸುತ್ತಲಿನ ಪರಿವಾರ ಹೀಗೇ ಇರಲು ಸಾಧ್ಯ. ಹಾಗಾಗಿಯೇ ಕರ್ನಾಟಕವೊಂದರಲ್ಲೇ ಇಂತಹವರ (ಇದು ಆರೆಸ್ಸೆಸ್‍ನ ಲೈಂಗಿಕ ಹಗರಣಗಳ ಪಟ್ಟಿಯಲ್ಲ, ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗಿರುವ ಬಿಜೆಪಿ ನಾಯಕರ ಲೈಂಗಿಕ ಹಗರಣಗಳಲ್ಲಿ ಭಾಗಿಯಾಗಿರುವ ನಾಯಕರ ಪಟ್ಟಿ) ದೊಡ್ಡ ಪಟ್ಟಿ ಸಿಗುತ್ತದೆ. ಹಾಲಪ್ಪ, ರಘುಪತಿ ಭಟ್, ರೇಣುಕಾಚಾರ್ಯ, ಸಿದ್ದು ಸವಡಿ, ಕೃಷ್ಣ ಪಾಲೇಮಾರ್, ಸಿ.ಸಿ.ಪಾಟೀಲ, ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ.
ಇದು ಇಷ್ಟಕ್ಕೇ ಸೀಮಿತವಾಗಿರದು. ಏಕೆಂದರೆ ತೇಜಸ್ವಿ ಸೂರ್ಯನಿಂದ ಕಿರುಕುಳಕ್ಕೆ ಒಳಗಾದ ಇಬ್ಬರು ಮಹಿಳೆಯರು ತಮಗೆ ನೆರವಾಗಬೇಕೆಂದು ಪ್ರತಾಪ್ ಸಿಂಹನ ಮೊರೆ ಹೋಗಿದ್ದಾರೆಂದು ಈಗಾಗಲೇ ಬಹಿರಂಗವಾಗಿದೆ. ಯಾವ ಸಮಸ್ಯೆಯ ಕುರಿತು ಯಾರ ಬಳಿ ಹೋಗಿದ್ದಾರೆಂದು ನೋಡಿದರೆ ಆಘಾತವಾಗುತ್ತದೆ.

ಇಂತಹ ಹಗರಣಗಳು ಬಿಜೆಪಿಗೆ ಮಾತ್ರ ಸೀಮಿತವಾಗಿದೆಯೆಂದು ಅರ್ಥವಲ್ಲ. ಉಳಿದ ಪಕ್ಷಗಳಲ್ಲೂ ನಡೆದಿರುವ ಎಲ್ಲಾ ಹಗರಣಗಳೂ ಹೊರಗೆ ಬಂದಿವೆಯೆಂದೂ ಹೇಳಲಾಗದು. ಆದರೆ, ಬಿಜೆಪಿಯು ನೆಹರೂರಂಥ ನಾಯಕರು ಕುರಿತು ಸುಳ್ಳು ಸುದ್ದಿ, ಫೋಟೋಷಾಪ್ ಫೋಟೋಗಳನ್ನು ಸೃಷ್ಟಿ ಮಾಡುವ ದೊಡ್ಡ ಪಡೆಯನ್ನೇ ಹೊಂದಿದೆ. ತಮ್ಮ ಒಳಗೇ ಅಸಹ್ಯಕರ ಹುಳುಕುಗಳನ್ನು ಇಟ್ಟುಕೊಂಡಿದೆ.
ಬಿಜೆಪಿಯ ಯುವನಾಯಕರುಗಳಿಗೆ ಕೂಡಲೇ ಸೆಕ್ಸ್ ತಜ್ಞರಿಂದ ಕೌನ್ಸೆಲಿಂಗ್‍ನ ಅಗತ್ಯವಿದೆ. ಅದಕ್ಕೆ ವ್ಯವಸ್ಥೆ ಆಗದಿದ್ದರೆ, ಅವರು ದೊಡ್ಡ ಸಮಸ್ಯೆಯನ್ನು ಉಂಟು ಮಾಡಲಿದ್ದಾರೆ.

ಅಪ್‍ಡೇಟ್:
ಮೇಲೆ ಹೇಳಲಾದ ವಾಟ್ಸಾಪ್ ಫಾರ್ವರ್ಡ್‍ಗಳೊಂದಿಗೆ (ಪತ್ರಿಕೆಗೆ ಆ ಫೋಟೋಗಳು ಬಂದಿರಲಿಲ್ಲ) ಪ್ರತಾಪ್ ಸಿಂಹ ಒಬ್ಬ ಹುಡುಗಿಯ ಜೊತೆಗೆ ಇರುವ ಫೋಟೋ ಸಹಾ ಇತ್ತೆಂದು ಹೇಳಲಾಗುತ್ತಿದೆ. ಆ ಫೋಟೋದಲ್ಲಿರುವ ಹುಡುಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸದರಿ ಸುದ್ದಿ ಸುಳ್ಳೆಂದು ದೂರು ನೀಡಿರುವ ಕುರಿತು ವರದಿಯಾಗಿದೆ. ಆದರೆ, ಆಡಿಯೋದಲ್ಲಿ ಮಾತಾಡಿರುವ ಹುಡುಗಿ ಮತ್ತು ಈ ಹುಡುಗಿ ಒಬ್ಬರೇನಾ ಬೇರೆಯವರಾ ಎಂಬುದು ಗೊತ್ತಿಲ್ಲ.
ಈ ಕುರಿತು ನಡೆಯುವ ಇತರ ಬೆಳವಣಿಗೆಗಳ ಕುರಿತು ಈ ಪೇಜ್‍ನಲ್ಲಿ ನಂತರ ಅಪ್‍ಡೇಟ್ ಮಾಡಲಾಗುವುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...