Homeಕರ್ನಾಟಕಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

ಅಸಹ್ಯ ಹುಟ್ಟಿಸುವ ಪ್ರತಾಪ್ ಸಿಂಹನ ಲೈಂಗಿಕ ಹಗರಣ

- Advertisement -
- Advertisement -

ತೇಜಸ್ವಿ ಸೂರ್ಯನ ಸೆಕ್ಸ್ ಹಗರಣದ ಬಗ್ಗೆ ಸಂತ್ರಸ್ತರು ದೂರಿದ್ದು ಇದೇ ವ್ಯಕ್ತಿಗೆ! ಆದರೆ ಈ ವ್ಯಕ್ತಿಯ ಕಥೆ ಕೇಳಿದರೆ ಬೆಚ್ಚಿ ಬೀಳುತ್ತೀರಿ?

ಏಪ್ರಿಲ್ 16ರ ಸಂಜೆಯ ಹೊತ್ತಿಗೆ ಮೈಸೂರು ಭಾಗದ ಕೆಲವರ ಮೊಬೈಲ್‍ಗೆ ಎರಡು ಆಡಿಯೋಗಳು, ಹುಡುಗಿಯೊಬ್ಬಳು ಹಸ್ತಾಕ್ಷರದಲ್ಲಿ ಬರೆದ 8 ಪುಟಗಳ ಪತ್ರ ಮತ್ತು ಸ್ಕ್ರೀನ್‍ಷಾಟ್‍ಗಳು ತಲುಪಿದವು. ಅದನ್ನು ಮೇಲ್ನೋಟಕ್ಕೆ ನೋಡಿದವರು ಕೂಡಲೇ ಇನ್ನಷ್ಟು ಜನರಿಗೆ ಫಾರ್ವರ್ಡ್ ಮಾಡಿದರು. ನಂತರ ಸಮಯ ಸಿಕ್ಕಾಗ ಆ ಸ್ಕ್ರೀನ್‍ಷಾಟ್‍ಗಳನ್ನು ಓದಿ, ಆಡಿಯೋ ಕೇಳಿದರು. ತೀರಾ ಅಶ್ಲೀಲವಾಗಿದ್ದ ಕಾರಣಕ್ಕೆ, ಮೊದಲು ಫಾರ್ವರ್ಡ್ ಮಾಡಿದ್ದಕ್ಕೆ ಮುಜುಗರ ಪಟ್ಟುಕೊಂಡು, ಕ್ಷಮೆ ಕೇಳಿ ಮತ್ತೆ ಮೆಸೇಜ್ ಮಾಡಿದರು.

ಆ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿದ್ದದ್ದು ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹರ ಲೈಂಗಿಕ ಪುರಾಣ. ಆಡಿಯೋ ಕೇಳಿದ ಎಲ್ಲರಿಗೂ ಅದು ಪ್ರತಾಪ್ ಸಿಂಹರದ್ದೇ ಎಂಬುದರಲ್ಲಿ ಯಾವ ಸಂದೇಹವೂ ಉಳಿಯುವುದಿಲ್ಲ. ಅದರ ಆಚೆಗೆ ಹಸ್ತಾಕ್ಷರದಲ್ಲಿರುವ ಪತ್ರದಲ್ಲಿ ಮಾಡಿರುವ ಆರೋಪಗಳನ್ನು ನೋಡಿದರೆ, ಅಥವಾ ಆಡಿಯೋ ಕೇಳಿದರೆ ಎರಡು ವಿಚಾರಗಳು ಸ್ಪಷ್ಟವಾಗುತ್ತದೆ. ಒಂದು, ಸಂಬಂಧಿಸಿದ ಹುಡುಗಿಯೂ ಸೋಕಾಲ್ಡ್ ಪ್ರೇಮ ಅಥವಾ ಸಂಬಂಧದಲ್ಲಿ ಒಪ್ಪಿಗೆಯಿಂದಲೇ ಆತನ ಜೊತೆಗೆ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಾರೆ ಮತ್ತು ಪ್ರತಾಪ್ ಸಿಂಹ ಸಾರ್ವಜನಿಕವಾಗಿ ಚಾಲ್ತಿಯಲ್ಲಿರುವ ಮೌಲ್ಯಗಳಿಗನುಸಾರ ಅತ್ಯಂತ ಅನೈತಿಕವಾದ ಮತ್ತು ವಿಕೃತವಾದ ಲೈಂಗಿಕ ಆಸಕ್ತಿಗಳನ್ನು ಇಟ್ಟುಕೊಂಡಿದ್ದಾರೆ. ಏಕಕಾಲದಲ್ಲಿ ಹಲವರ ಜೊತೆಗೆ ಲೈಂಗಿಕ ಸಂಬಂಧಗಳನ್ನು ಇಟ್ಟುಕೊಳ್ಳುವ ಚಾಳಿ ಇರುವ ಒಂದು ವರ್ತುಲವನ್ನೇ ಅವರು ಬಿಲ್ಡ್ ಮಾಡಿಕೊಂಡಿದ್ದಾರೆ.

ಇವೆಲ್ಲವನ್ನೂ ಅವರವರ ವ್ಯಕ್ತಿಗತ ವಿಚಾರ ಎಂದು ತಳ್ಳಿ ಹಾಕಲಾಗದು.
ಕಾರಣವಿಷ್ಟೇ. ಪ್ರತಾಪ್ ಸಂಸತ್ ಸದಸ್ಯನಂತಹ ಸ್ಥಾನದಲ್ಲಿರುವ ವ್ಯಕ್ತಿ. ಈ ಸ್ಥಾನವೇ ಹಲವರನ್ನು ಆಕರ್ಷಿಸುವ, ಆಮಿಷ ಒಡ್ಡುವ, ಬೆದರಿಕೆ ಒಡ್ಡುವ ಸಾಧ್ಯತೆಗಳನ್ನು ಕಲ್ಪಿಸಿಕೊಡುತ್ತದೆ. ಹಾಗಾಗಿ ಅದರ ಎಲ್ಲಾ ಬಗೆಯ ದುರ್ಬಳಕೆ ಮಾಡಿಕೊಂಡು ಅಮಾಯಕರಾದ ಎಷ್ಟೋ ಹುಡುಗಿಯರನ್ನು ಬಲೆಗೆ ಕೆಡವಿಕೊಂಡಿರುವ ಸಾಧ್ಯತೆ ಇದ್ದೇ ಇರುತ್ತದೆ. ಅದನ್ನು ಪ್ರತಾಪ್ ಸಿಂಹ ಮಾಡಿದ್ದಾರೆ ಎಂದು ನಂಬುವಂತಹ ಸಾಕ್ಷ್ಯಾಧಾರಗಳು ಸದರಿ ವಾಟ್ಸಾಪ್ ಫಾರ್ವರ್ಡ್‍ಗಳಲ್ಲಿವೆ.

ಎರಡನೆಯದಾಗಿ, ಭಾರತೀಯ ಸಂಸ್ಕೃತಿ, ಸಚ್ಚಾರಿತ್ರ್ಯ ಇತ್ಯಾದಿಗಳ ಕುರಿತು ಮಾತನಾಡುವ ಆರೆಸ್ಸೆಸ್ ಜೊತೆಗೆ ಅಭಿಮಾನ ಪೂರ್ವಕ ಹೆಮ್ಮೆಯ ಸಂಬಂಧವನ್ನಿಟ್ಟುಕೊಂಡಿರುವುದಾಗಿ ಘೋಷಿಸುವ ಇಂತಹ ವ್ಯಕ್ತಿಗಳು ಹೀಗೇಕೆ ಎಂಬ ಪ್ರಶ್ನೆ ಏಳುತ್ತದೆ. ಮಾತಿಗೂ, ಕೃತಿಗೂ ಸಂಬಂಧವೇ ಇಲ್ಲ. ಅದರಲ್ಲೂ ಹೆಣ್ಣನ್ನು ಇವರುಗಳು ಭೋಗದ ವಸ್ತುವೆಂದಲ್ಲದೇ ಬೇರ್ಯಾವ ರೀತಿಯಲ್ಲೂ ನೋಡುವಂತೆ ಕಾಣುವುದಿಲ್ಲ.
ಬಹಳಷ್ಟು ಜನರಿಗೆ ಗೊತ್ತಿಲ್ಲದ ಸಂಗತಿಯೇನೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಮಹಿಳೆಯರಿಗೆ ಸದಸ್ಯತ್ವವೇ ಇಲ್ಲ. ರಾಷ್ಟ್ರ ಸೇವಿಕಾ ಸಂಘ ಇದೆಯಲ್ಲಾ ಎಂದು ಯಾರಾದರೂ ಕೇಳಬಹುದು. ಭಜರಂಗದಳ, ವಿಶ್ವ ಹಿಂದೂ ಪರಿಷತ್ ರೀತಿಯಲ್ಲಿ ಅದೂ ಒಂದು ಅಂಗಸಂಸ್ಥೆ ಮಾತ್ರವೇ ಆಗಿದೆ. ಕಾಂಗ್ರೆಸ್ ಅಥವಾ ಸಿಪಿಎಂ ಥರದ ಪಕ್ಷಗಳೂ ಹಾಗೆಯೇ ಅಲ್ಲವೇ ಎಂದು ಕೆಲವರು ಅಮಾಯಕ ಪ್ರಶ್ನೆಯನ್ನು ಹಾಕಬಹುದು. ಇಲ್ಲ, ಕಾಂಗ್ರೆಸ್ ಅಥವಾ ಸಿಪಿಎಂ ಪಕ್ಷಗಳಲ್ಲಿ ಮಹಿಳೆಯರೂ ಸದಸ್ಯರು. ಅದರಲ್ಲಿ ತಾರತಮ್ಯ ಇರುವುದಿಲ್ಲ. ಅದರ ಅಧ್ಯಕ್ಷರೂ ಆಗಬಹುದು. ಅದಲ್ಲದೇ ಮಹಿಳಾ ವಿಭಾಗವೂ ಇರುತ್ತದೆ ಅಷ್ಟೇ.

ಆದರೆ, ಇಲ್ಲಿ ಆರೆಸ್ಸೆಸ್‍ನ ನಾಯಕರಾಗುವುದು ಹೋಗಲಿ, ಸದಸ್ಯೆಯರಾಗೂ ಮಹಿಳೆಯರು ಇರುವಂತಿಲ್ಲ. ಮಹಿಳೆಯರು ಎರಡನೆಯ ದರ್ಜೆಯ ಪ್ರಜೆಗಳು, ಅವರು ಮನೆಗೆಲಸ ಮಾಡುವುದಕ್ಕೆ, ಸೇವೆ ಮಾಡುವುದಕ್ಕೆ, ಪುರುಷರ ಭೋಗಕ್ಕೆ ಬಳಕೆಯಾಗಲು ಅಷ್ಟೇ ಇದ್ದಾರೆ ಎಂಬ ಮನೋಭಾವ ಇದ್ದಾಗ, ಅದರ ಸುತ್ತಲಿನ ಪರಿವಾರ ಹೀಗೇ ಇರಲು ಸಾಧ್ಯ. ಹಾಗಾಗಿಯೇ ಕರ್ನಾಟಕವೊಂದರಲ್ಲೇ ಇಂತಹವರ (ಇದು ಆರೆಸ್ಸೆಸ್‍ನ ಲೈಂಗಿಕ ಹಗರಣಗಳ ಪಟ್ಟಿಯಲ್ಲ, ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗಿರುವ ಬಿಜೆಪಿ ನಾಯಕರ ಲೈಂಗಿಕ ಹಗರಣಗಳಲ್ಲಿ ಭಾಗಿಯಾಗಿರುವ ನಾಯಕರ ಪಟ್ಟಿ) ದೊಡ್ಡ ಪಟ್ಟಿ ಸಿಗುತ್ತದೆ. ಹಾಲಪ್ಪ, ರಘುಪತಿ ಭಟ್, ರೇಣುಕಾಚಾರ್ಯ, ಸಿದ್ದು ಸವಡಿ, ಕೃಷ್ಣ ಪಾಲೇಮಾರ್, ಸಿ.ಸಿ.ಪಾಟೀಲ, ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ.
ಇದು ಇಷ್ಟಕ್ಕೇ ಸೀಮಿತವಾಗಿರದು. ಏಕೆಂದರೆ ತೇಜಸ್ವಿ ಸೂರ್ಯನಿಂದ ಕಿರುಕುಳಕ್ಕೆ ಒಳಗಾದ ಇಬ್ಬರು ಮಹಿಳೆಯರು ತಮಗೆ ನೆರವಾಗಬೇಕೆಂದು ಪ್ರತಾಪ್ ಸಿಂಹನ ಮೊರೆ ಹೋಗಿದ್ದಾರೆಂದು ಈಗಾಗಲೇ ಬಹಿರಂಗವಾಗಿದೆ. ಯಾವ ಸಮಸ್ಯೆಯ ಕುರಿತು ಯಾರ ಬಳಿ ಹೋಗಿದ್ದಾರೆಂದು ನೋಡಿದರೆ ಆಘಾತವಾಗುತ್ತದೆ.

ಇಂತಹ ಹಗರಣಗಳು ಬಿಜೆಪಿಗೆ ಮಾತ್ರ ಸೀಮಿತವಾಗಿದೆಯೆಂದು ಅರ್ಥವಲ್ಲ. ಉಳಿದ ಪಕ್ಷಗಳಲ್ಲೂ ನಡೆದಿರುವ ಎಲ್ಲಾ ಹಗರಣಗಳೂ ಹೊರಗೆ ಬಂದಿವೆಯೆಂದೂ ಹೇಳಲಾಗದು. ಆದರೆ, ಬಿಜೆಪಿಯು ನೆಹರೂರಂಥ ನಾಯಕರು ಕುರಿತು ಸುಳ್ಳು ಸುದ್ದಿ, ಫೋಟೋಷಾಪ್ ಫೋಟೋಗಳನ್ನು ಸೃಷ್ಟಿ ಮಾಡುವ ದೊಡ್ಡ ಪಡೆಯನ್ನೇ ಹೊಂದಿದೆ. ತಮ್ಮ ಒಳಗೇ ಅಸಹ್ಯಕರ ಹುಳುಕುಗಳನ್ನು ಇಟ್ಟುಕೊಂಡಿದೆ.
ಬಿಜೆಪಿಯ ಯುವನಾಯಕರುಗಳಿಗೆ ಕೂಡಲೇ ಸೆಕ್ಸ್ ತಜ್ಞರಿಂದ ಕೌನ್ಸೆಲಿಂಗ್‍ನ ಅಗತ್ಯವಿದೆ. ಅದಕ್ಕೆ ವ್ಯವಸ್ಥೆ ಆಗದಿದ್ದರೆ, ಅವರು ದೊಡ್ಡ ಸಮಸ್ಯೆಯನ್ನು ಉಂಟು ಮಾಡಲಿದ್ದಾರೆ.

ಅಪ್‍ಡೇಟ್:
ಮೇಲೆ ಹೇಳಲಾದ ವಾಟ್ಸಾಪ್ ಫಾರ್ವರ್ಡ್‍ಗಳೊಂದಿಗೆ (ಪತ್ರಿಕೆಗೆ ಆ ಫೋಟೋಗಳು ಬಂದಿರಲಿಲ್ಲ) ಪ್ರತಾಪ್ ಸಿಂಹ ಒಬ್ಬ ಹುಡುಗಿಯ ಜೊತೆಗೆ ಇರುವ ಫೋಟೋ ಸಹಾ ಇತ್ತೆಂದು ಹೇಳಲಾಗುತ್ತಿದೆ. ಆ ಫೋಟೋದಲ್ಲಿರುವ ಹುಡುಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸದರಿ ಸುದ್ದಿ ಸುಳ್ಳೆಂದು ದೂರು ನೀಡಿರುವ ಕುರಿತು ವರದಿಯಾಗಿದೆ. ಆದರೆ, ಆಡಿಯೋದಲ್ಲಿ ಮಾತಾಡಿರುವ ಹುಡುಗಿ ಮತ್ತು ಈ ಹುಡುಗಿ ಒಬ್ಬರೇನಾ ಬೇರೆಯವರಾ ಎಂಬುದು ಗೊತ್ತಿಲ್ಲ.
ಈ ಕುರಿತು ನಡೆಯುವ ಇತರ ಬೆಳವಣಿಗೆಗಳ ಕುರಿತು ಈ ಪೇಜ್‍ನಲ್ಲಿ ನಂತರ ಅಪ್‍ಡೇಟ್ ಮಾಡಲಾಗುವುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...