Homeಕರ್ನಾಟಕಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

ಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

- Advertisement -
- Advertisement -

ಸ್ವತಂತ್ರ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’ ವೆಬ್‌ಸೈಟ್‌ನ ಮಾತೃ ಸಂಸ್ಥೆಯಾದ ‘ಟ್ರುತ್ ಪ್ರೊ ಫೌಂಡೇಶನ್ ಇಂಡಿಯಾ (ಟಿಪಿಎಫ್‌ಐ)’ ಕೇಂದ್ರ ಸರ್ಕಾರದ ಪರಿಚಯಿಸಿದ ‘ಹೊಸ ಮಾಹಿತಿ ತಂತ್ರಜ್ಞಾನ ನಿಯಮ’ಗಳನ್ನು ಪ್ರಶ್ನಿಸಿ ಕರ್ನಾಟಕ ಹೈಕೋಟ್ ಮೆಟ್ಟಿಲೇರಿದೆ.

ಕೇಂದ್ರವು ಜಾರಿಗೆ ತಂದಿರುವ ‘ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು-2021’, ಅಲ್ಟ್ರಾ ವೈರಸ್‌ ಐಟಿ ಆಕ್ಟ್ ಆಗಿದ್ದು ಇದನ್ನು ದುರುಪಯೋಗ ಪಡಿಸುವಂತೆ ರೂಪಿಸಲಾಗಿದೆ. ಈ ನಿಯಮಗಳು ಮಾಧ್ಯಮ ನಿಯಂತ್ರಣಕ್ಕೆ ರಹದಾರಿಯಾಗಿದೆ ಎಂದು ಪ್ರತಿಧ್ವನಿ ನೀಡಿರುವ ಅರ್ಜಿಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಸ್ವತಂತ್ರ ಮಾಧ್ಯಮಗಳನ್ನು ನಿಯಂತ್ರಿಸುವುದು ಹೇಗೆ?: ಪತ್ರಕರ್ತರೊಂದಿಗಿನ ಕೇಂದ್ರ ಸರ್ಕಾರದ ಗುಪ್ತ ಸಭೆಗಳ ವರದಿ ಸೋರಿಕೆ!

ದಿ ವೈರ್, ಲೈವ್ ಲಾ ಮತ್ತು ದಿ ಕ್ವಿಂಟ್ ವೆಬ್‌ಸೈಟ್‌ಗಳು ಈಗಾಗಲೆ ಕೇಂದ್ರವು ಜಾರಿಗೆ ತಂದಿರುವ ಹೊಸ ಐಟಿ ನಿಯಮಗಳನ್ನು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ‘ಪ್ರತಿಧ್ವನಿ’ ಯು ಕೇಂದ್ರದ ನಿಯಮಗಳನ್ನು ಪ್ರಶ್ನಿಸುತ್ತಿರುವ ನಾಲ್ಕನೆ ಹಾಗೂ ಕನ್ನಡದ ಮೊದಲ ವೆಬ್‌ಸೈಟ್ ಆಗಿದೆ.

ಹೊಸ ಐಟಿ ನಿಯಮಗಳು ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಪ್ರತಿಧ್ವನಿ ಹೇಳಿದ್ದು, “ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅಥವಾ ಇತರ ಘಟಕಗಳ ಮೇಲಿನ ನಿಯಂತ್ರಣಗಳ ಬಗ್ಗೆ ಪ್ರಶ್ನಿಸುತ್ತಿಲ್ಲ” ಎಂದು ಅರ್ಜಿಯಲ್ಲಿ ತಿಳಿಸಿದೆ.

‘ದಿ ವೈರ್’ ವೆಬ್‌ಸೈಟ್‌ ಅನ್ನು ನಡೆಸುತ್ತಿರುವ ‘ಫೌಂಡೇಶನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸಮ್’ ಸ್ಥಾಪಕ ಸಂಪಾದಕ ಎಂ.ಕೆ. ವೇಣು ಮತ್ತು ‘ದಿ ನ್ಯೂಸ್ ಮಿನಿಟ್’ ಸಂಪಾದಕ ಧನ್ಯ ರಾಜೇಂದ್ರನ್ ಅವರು ಹೊಸ ಐಟಿ ನಿಯಮಗಳನ್ನು ವಿರೋಧಿಸಿ ಮಾರ್ಚ್ 9 ರಂದು ದೆಹಲಿ ಹೈಕೋರ್ಟ್‌‌ನಲ್ಲಿ ಅರ್ಜಿ ಸಲ್ಲಿಸಿ ಮೊದಲ ಬಾರಿಗೆ ಕಾನೂನು ಹೋರಾಟಕ್ಕೆ ಇಳಿದಿದ್ದರು.

ಇದನ್ನೂ ಓದಿ:  `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!
ಇದನ್ನೂ ಓದಿ: ಕೇಂದ್ರದ ಇಂಟರ್ನೆಟ್ ನಿಯಂತ್ರಣ: ಮಾಧ್ಯಮ ಸ್ವಾತಂತ್ಯ್ರ & ಮಾಹಿತಿ ಹಕ್ಕಿಗೆ ಧಕ್ಕೆ

ಕಾನೂನು ಸುದ್ದಿ ವೆಬ್‌ಸೈಟ್ ‘ಲೈವ್‌ಲಾ’ ಕೇರಳ ಹೈಕೋರ್ಟ್‌ನಲ್ಲಿ ನಿಯಮಗಳನ್ನು ಪ್ರಶ್ನಿಸಿದ್ದು, ಕ್ವಿಂಟ್‌ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಅರ್ಜಿಯ ಕುರಿತು ಮಾರ್ಚ್ 19 ರಂದು ನ್ಯಾಯಪೀಠವು ಕೇಂದ್ರಕ್ಕೆ ನೋಟಿಸ್ ನೀಡಿದೆ.

ಪ್ರತಿಧ್ವನಿ ಅವರ ಅರ್ಜಿಯ ಪೂರ್ಣ ಪಠ್ಯವನ್ನು ಕೆಳಗೆ ಓದಬಹುದಾಗಿದೆ.

ಇದನ್ನೂ ಓದಿ: ಜಗತ್ತಿನ ಎಲ್ಲ ಹೋರಾಟಗಳನ್ನು ಬೆಸೆಯುವ ಡಿಜಿಟಲ್ ಆಕ್ಟಿವಿಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...