Homeಕರ್ನಾಟಕಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

ಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

- Advertisement -
- Advertisement -

ಸ್ವತಂತ್ರ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’ ವೆಬ್‌ಸೈಟ್‌ನ ಮಾತೃ ಸಂಸ್ಥೆಯಾದ ‘ಟ್ರುತ್ ಪ್ರೊ ಫೌಂಡೇಶನ್ ಇಂಡಿಯಾ (ಟಿಪಿಎಫ್‌ಐ)’ ಕೇಂದ್ರ ಸರ್ಕಾರದ ಪರಿಚಯಿಸಿದ ‘ಹೊಸ ಮಾಹಿತಿ ತಂತ್ರಜ್ಞಾನ ನಿಯಮ’ಗಳನ್ನು ಪ್ರಶ್ನಿಸಿ ಕರ್ನಾಟಕ ಹೈಕೋಟ್ ಮೆಟ್ಟಿಲೇರಿದೆ.

ಕೇಂದ್ರವು ಜಾರಿಗೆ ತಂದಿರುವ ‘ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು-2021’, ಅಲ್ಟ್ರಾ ವೈರಸ್‌ ಐಟಿ ಆಕ್ಟ್ ಆಗಿದ್ದು ಇದನ್ನು ದುರುಪಯೋಗ ಪಡಿಸುವಂತೆ ರೂಪಿಸಲಾಗಿದೆ. ಈ ನಿಯಮಗಳು ಮಾಧ್ಯಮ ನಿಯಂತ್ರಣಕ್ಕೆ ರಹದಾರಿಯಾಗಿದೆ ಎಂದು ಪ್ರತಿಧ್ವನಿ ನೀಡಿರುವ ಅರ್ಜಿಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಸ್ವತಂತ್ರ ಮಾಧ್ಯಮಗಳನ್ನು ನಿಯಂತ್ರಿಸುವುದು ಹೇಗೆ?: ಪತ್ರಕರ್ತರೊಂದಿಗಿನ ಕೇಂದ್ರ ಸರ್ಕಾರದ ಗುಪ್ತ ಸಭೆಗಳ ವರದಿ ಸೋರಿಕೆ!

ದಿ ವೈರ್, ಲೈವ್ ಲಾ ಮತ್ತು ದಿ ಕ್ವಿಂಟ್ ವೆಬ್‌ಸೈಟ್‌ಗಳು ಈಗಾಗಲೆ ಕೇಂದ್ರವು ಜಾರಿಗೆ ತಂದಿರುವ ಹೊಸ ಐಟಿ ನಿಯಮಗಳನ್ನು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ‘ಪ್ರತಿಧ್ವನಿ’ ಯು ಕೇಂದ್ರದ ನಿಯಮಗಳನ್ನು ಪ್ರಶ್ನಿಸುತ್ತಿರುವ ನಾಲ್ಕನೆ ಹಾಗೂ ಕನ್ನಡದ ಮೊದಲ ವೆಬ್‌ಸೈಟ್ ಆಗಿದೆ.

ಹೊಸ ಐಟಿ ನಿಯಮಗಳು ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಪ್ರತಿಧ್ವನಿ ಹೇಳಿದ್ದು, “ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅಥವಾ ಇತರ ಘಟಕಗಳ ಮೇಲಿನ ನಿಯಂತ್ರಣಗಳ ಬಗ್ಗೆ ಪ್ರಶ್ನಿಸುತ್ತಿಲ್ಲ” ಎಂದು ಅರ್ಜಿಯಲ್ಲಿ ತಿಳಿಸಿದೆ.

‘ದಿ ವೈರ್’ ವೆಬ್‌ಸೈಟ್‌ ಅನ್ನು ನಡೆಸುತ್ತಿರುವ ‘ಫೌಂಡೇಶನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸಮ್’ ಸ್ಥಾಪಕ ಸಂಪಾದಕ ಎಂ.ಕೆ. ವೇಣು ಮತ್ತು ‘ದಿ ನ್ಯೂಸ್ ಮಿನಿಟ್’ ಸಂಪಾದಕ ಧನ್ಯ ರಾಜೇಂದ್ರನ್ ಅವರು ಹೊಸ ಐಟಿ ನಿಯಮಗಳನ್ನು ವಿರೋಧಿಸಿ ಮಾರ್ಚ್ 9 ರಂದು ದೆಹಲಿ ಹೈಕೋರ್ಟ್‌‌ನಲ್ಲಿ ಅರ್ಜಿ ಸಲ್ಲಿಸಿ ಮೊದಲ ಬಾರಿಗೆ ಕಾನೂನು ಹೋರಾಟಕ್ಕೆ ಇಳಿದಿದ್ದರು.

ಇದನ್ನೂ ಓದಿ:  `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!
ಇದನ್ನೂ ಓದಿ: ಕೇಂದ್ರದ ಇಂಟರ್ನೆಟ್ ನಿಯಂತ್ರಣ: ಮಾಧ್ಯಮ ಸ್ವಾತಂತ್ಯ್ರ & ಮಾಹಿತಿ ಹಕ್ಕಿಗೆ ಧಕ್ಕೆ

ಕಾನೂನು ಸುದ್ದಿ ವೆಬ್‌ಸೈಟ್ ‘ಲೈವ್‌ಲಾ’ ಕೇರಳ ಹೈಕೋರ್ಟ್‌ನಲ್ಲಿ ನಿಯಮಗಳನ್ನು ಪ್ರಶ್ನಿಸಿದ್ದು, ಕ್ವಿಂಟ್‌ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಅರ್ಜಿಯ ಕುರಿತು ಮಾರ್ಚ್ 19 ರಂದು ನ್ಯಾಯಪೀಠವು ಕೇಂದ್ರಕ್ಕೆ ನೋಟಿಸ್ ನೀಡಿದೆ.

ಪ್ರತಿಧ್ವನಿ ಅವರ ಅರ್ಜಿಯ ಪೂರ್ಣ ಪಠ್ಯವನ್ನು ಕೆಳಗೆ ಓದಬಹುದಾಗಿದೆ.

ಇದನ್ನೂ ಓದಿ: ಜಗತ್ತಿನ ಎಲ್ಲ ಹೋರಾಟಗಳನ್ನು ಬೆಸೆಯುವ ಡಿಜಿಟಲ್ ಆಕ್ಟಿವಿಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...