Homeಕರ್ನಾಟಕಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

ಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

- Advertisement -
- Advertisement -

ಸ್ವತಂತ್ರ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’ ವೆಬ್‌ಸೈಟ್‌ನ ಮಾತೃ ಸಂಸ್ಥೆಯಾದ ‘ಟ್ರುತ್ ಪ್ರೊ ಫೌಂಡೇಶನ್ ಇಂಡಿಯಾ (ಟಿಪಿಎಫ್‌ಐ)’ ಕೇಂದ್ರ ಸರ್ಕಾರದ ಪರಿಚಯಿಸಿದ ‘ಹೊಸ ಮಾಹಿತಿ ತಂತ್ರಜ್ಞಾನ ನಿಯಮ’ಗಳನ್ನು ಪ್ರಶ್ನಿಸಿ ಕರ್ನಾಟಕ ಹೈಕೋಟ್ ಮೆಟ್ಟಿಲೇರಿದೆ.

ಕೇಂದ್ರವು ಜಾರಿಗೆ ತಂದಿರುವ ‘ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು-2021’, ಅಲ್ಟ್ರಾ ವೈರಸ್‌ ಐಟಿ ಆಕ್ಟ್ ಆಗಿದ್ದು ಇದನ್ನು ದುರುಪಯೋಗ ಪಡಿಸುವಂತೆ ರೂಪಿಸಲಾಗಿದೆ. ಈ ನಿಯಮಗಳು ಮಾಧ್ಯಮ ನಿಯಂತ್ರಣಕ್ಕೆ ರಹದಾರಿಯಾಗಿದೆ ಎಂದು ಪ್ರತಿಧ್ವನಿ ನೀಡಿರುವ ಅರ್ಜಿಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಸ್ವತಂತ್ರ ಮಾಧ್ಯಮಗಳನ್ನು ನಿಯಂತ್ರಿಸುವುದು ಹೇಗೆ?: ಪತ್ರಕರ್ತರೊಂದಿಗಿನ ಕೇಂದ್ರ ಸರ್ಕಾರದ ಗುಪ್ತ ಸಭೆಗಳ ವರದಿ ಸೋರಿಕೆ!

ದಿ ವೈರ್, ಲೈವ್ ಲಾ ಮತ್ತು ದಿ ಕ್ವಿಂಟ್ ವೆಬ್‌ಸೈಟ್‌ಗಳು ಈಗಾಗಲೆ ಕೇಂದ್ರವು ಜಾರಿಗೆ ತಂದಿರುವ ಹೊಸ ಐಟಿ ನಿಯಮಗಳನ್ನು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ‘ಪ್ರತಿಧ್ವನಿ’ ಯು ಕೇಂದ್ರದ ನಿಯಮಗಳನ್ನು ಪ್ರಶ್ನಿಸುತ್ತಿರುವ ನಾಲ್ಕನೆ ಹಾಗೂ ಕನ್ನಡದ ಮೊದಲ ವೆಬ್‌ಸೈಟ್ ಆಗಿದೆ.

ಹೊಸ ಐಟಿ ನಿಯಮಗಳು ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಪ್ರತಿಧ್ವನಿ ಹೇಳಿದ್ದು, “ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅಥವಾ ಇತರ ಘಟಕಗಳ ಮೇಲಿನ ನಿಯಂತ್ರಣಗಳ ಬಗ್ಗೆ ಪ್ರಶ್ನಿಸುತ್ತಿಲ್ಲ” ಎಂದು ಅರ್ಜಿಯಲ್ಲಿ ತಿಳಿಸಿದೆ.

‘ದಿ ವೈರ್’ ವೆಬ್‌ಸೈಟ್‌ ಅನ್ನು ನಡೆಸುತ್ತಿರುವ ‘ಫೌಂಡೇಶನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸಮ್’ ಸ್ಥಾಪಕ ಸಂಪಾದಕ ಎಂ.ಕೆ. ವೇಣು ಮತ್ತು ‘ದಿ ನ್ಯೂಸ್ ಮಿನಿಟ್’ ಸಂಪಾದಕ ಧನ್ಯ ರಾಜೇಂದ್ರನ್ ಅವರು ಹೊಸ ಐಟಿ ನಿಯಮಗಳನ್ನು ವಿರೋಧಿಸಿ ಮಾರ್ಚ್ 9 ರಂದು ದೆಹಲಿ ಹೈಕೋರ್ಟ್‌‌ನಲ್ಲಿ ಅರ್ಜಿ ಸಲ್ಲಿಸಿ ಮೊದಲ ಬಾರಿಗೆ ಕಾನೂನು ಹೋರಾಟಕ್ಕೆ ಇಳಿದಿದ್ದರು.

ಇದನ್ನೂ ಓದಿ:  `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!
ಇದನ್ನೂ ಓದಿ: ಕೇಂದ್ರದ ಇಂಟರ್ನೆಟ್ ನಿಯಂತ್ರಣ: ಮಾಧ್ಯಮ ಸ್ವಾತಂತ್ಯ್ರ & ಮಾಹಿತಿ ಹಕ್ಕಿಗೆ ಧಕ್ಕೆ

ಕಾನೂನು ಸುದ್ದಿ ವೆಬ್‌ಸೈಟ್ ‘ಲೈವ್‌ಲಾ’ ಕೇರಳ ಹೈಕೋರ್ಟ್‌ನಲ್ಲಿ ನಿಯಮಗಳನ್ನು ಪ್ರಶ್ನಿಸಿದ್ದು, ಕ್ವಿಂಟ್‌ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಅರ್ಜಿಯ ಕುರಿತು ಮಾರ್ಚ್ 19 ರಂದು ನ್ಯಾಯಪೀಠವು ಕೇಂದ್ರಕ್ಕೆ ನೋಟಿಸ್ ನೀಡಿದೆ.

ಪ್ರತಿಧ್ವನಿ ಅವರ ಅರ್ಜಿಯ ಪೂರ್ಣ ಪಠ್ಯವನ್ನು ಕೆಳಗೆ ಓದಬಹುದಾಗಿದೆ.

ಇದನ್ನೂ ಓದಿ: ಜಗತ್ತಿನ ಎಲ್ಲ ಹೋರಾಟಗಳನ್ನು ಬೆಸೆಯುವ ಡಿಜಿಟಲ್ ಆಕ್ಟಿವಿಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...