Homeಅಂಕಣಗಳುಜಗಳೂರೆಂಬ ಬರಡು ನೆಲದ ಭಗೀರಥ ಪ್ರತಿಭೆ: ಪ್ರವೀಣ್ ಕುಮಾರ್

ಜಗಳೂರೆಂಬ ಬರಡು ನೆಲದ ಭಗೀರಥ ಪ್ರತಿಭೆ: ಪ್ರವೀಣ್ ಕುಮಾರ್

- Advertisement -
- Advertisement -
ಎಲೆಮರೆ-34
ಅರುಣ್ ಜೋಳದಕೂಡ್ಲಿಗಿ

ಕುಡಿಯುವ ನೀರಿಗೆ ಬರ ಇರುವ, ಅಂತರ್ಜಲ ತುಂಬಾ ಆಳಕ್ಕೆ ಕುಸಿದಿರುವ ಜಗಳೂರಿನಂತಹ ಬರಡು ನೆಲದಲ್ಲಿ, ಪ್ರವೀಣ್ ಕುಮಾರ್ ಭೂಗರ್ಭ ಶಾಸ್ತ್ರದಲ್ಲಿ ತಜ್ಞತೆ ಪಡೆದು, ತನ್ನ ಪಿಹೆಚ್‍ಡಿ ಸಂಶೋಧನೆಗೆ ಜಗಳೂರನ್ನೆ ಆಯ್ಕೆ ಮಾಡಿಕೊಂಡಿರುವುದು ವಿಶೇಷವಾಗಿದೆ.

ಓಮ್ನಿ ಕಾರಲ್ಲಿ ಇಬ್ಬರು ಯುವಕರು ಬಂದು ಯಾವು ಯಾವುದೋ ಮಿಷನ್ ತೆಗೆದುಕೊಂಡು ನೆಲದ ಮೇಲಿಟ್ಟು ಪರೀಕ್ಷೆ ಮಾಡುತ್ತಿದ್ದದ್ದು ರೈತರಿಗೆ ವಿಶೇಷವೆನ್ನಿಸಿತ್ತು. ಕುತೂಹಲಗೊಂಡು ಹೀಗೆ ಪರೀಕ್ಷೆ ಮಾಡುವ ಹುಡುಗನನ್ನು `ಏನ್ ಸ್ವಾಮಿ ಇದು?’ ಎಂದು ಕೇಳಿಯೇ ಬಿಟ್ಟರು. `ನಮ್ಮ ಭಾಗದಲ್ಲಿ ನೆಲದ ಒಳಗಿನ ನೀರು ಕಡಿಮೆಯಾಗುತ್ತಿದೆ, ಅದರ ಬಗ್ಗೆ ಸಂಶೋಧನೆ ಮಾಡ್ತಿದಿನಿ, ಎಷ್ಟು ಆಳಕ್ಕೆ ನೀರು ಹೋಗಿದೆ, ಯಾಕೆ ಹೋಗಿದೆ? ಮತ್ತೆ ನೀರು ಬರಬೇಕಂದ್ರೆ ಏನು ಮಾಡಬೇಕು ಅನ್ನೋದನ್ನು ಪರೀಕ್ಷೆ ಮಾಡತೀನಿ’ ಎಂದು ಒಬ್ಬ ಯುವಕ ರೈತರಿಗೆ ಸರಳವಾಗಿ ಅರ್ಥವಾಗುವಂತೆ ವಿವರಿಸುತ್ತಾನೆ. ಅದಕ್ಕೆ ರೈತರು `ಹೋದ ನೀರನ್ನು ವಾಪಾಸ್ ಹೆಂಗೆ ತರ್ತೀರಿ? ಎಂದು ಮರುಪ್ರಶ್ನೆ ಮಾಡುತ್ತಾರೆ. ಆ ಯುವಕ ತಾಳ್ಮೆಯಿಂದಲೆ `ಹೇಗೆ ನೀರನ್ನು ಮತ್ತೆ ತರಬೇಕು ಅಂತಾನೆ ಸಂಶೋಧನೆ ಮಾಡ್ತಿದಿನಿ, ನಾಲ್ಕೈದು ವರ್ಷ ಸಂಶೋಧನೆ ಮಾಡಿದ ಮೇಲೆ ಏನೇನು ಮಾಡಬಹುದು ಅಂತ ಹೇಳಬಹುದು, ಈಗಲೆ ಹೇಳೋಕೆ ಆಗಲ್ಲ’ ಎಂದು ಉತ್ತರಿಸುತ್ತಾನೆ. ಈ ಸಂಭಾಷಣೆ ನಡೆದದ್ದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅರಿಶಿಣಗುಂಡಿ ಗ್ರಾಮದಲ್ಲಿ. ಈ ಪ್ರಯೋಗ ಮಾಡಿದ ಯುವಕ ಜಗಳೂರು ತಾಲೂಕಿನ ಜ್ಯೋತಿಪುರದ ಪ್ರವೀಣ್ ತನ್ನ ಪಿಹೆಚ್.ಡಿ ಸಂಶೋಧನೆಯ ವಿಷಯವಾದ `ಹೈಡ್ರೋ ಜಿಯಾಲಜಿಕಲ್ ಅಕೌಂಟಿಂಗ್ ಆಫ್ ಜಗಳೂರ್ ತಾಲೂಕ್ ದಾವಣಗೆರೆ ಡಿಸ್ಟ್ರಿಕ್ಟ್ ಕರ್ನಾಟಕ ಸ್ಟೇಟ್ ಇನ್ ದ ಪರ್ಸ್‍ಸ್ಪೆಕ್ಟಿವ್ ಆಫ್ ಆರ್ಟಿಫಿಷಿಯಲ್ ರೀಚಾರ್ಜ್’ ಕುರಿತು ಸಂಶೋಧನೆಗಾಗಿ.

ಸಮಾಜ ವಿಜ್ಞಾನ ಮತ್ತು ಮಾನವಿಕ ವಿಷಯದ ಸಂಶೋಧನೆಗಳಲ್ಲಿ ತಮ್ಮ ಪ್ರದೇಶದ ಸಂಸ್ಕøತಿ ಇತಿಹಾಸವನ್ನು ಕುರಿತು ಅಧ್ಯಯನ ಮಾಡುವುದು ಸಾಮಾನ್ಯ ಸಂಗತಿ. ಆದರೆ ಭೂಗರ್ಭ ಶಾಸ್ತ್ರ ಕಲಿಯುತ್ತಿರುವ ವಿಜ್ಞಾನದ ವಿದ್ಯಾರ್ಥಿಯೊಬ್ಬ ತನ್ನದೇ ಪ್ರದೇಶದ ಸಮಸ್ಯೆಯೊಂದನ್ನು ಆಯ್ದುಕೊಂಡು ಸಂಶೋಧನೆ ಮಾಡುವುದು ನಿಜಕ್ಕೂ ವಿಶಿಷ್ಟವಾದದ್ದು. ಜಗಳೂರು ತಾಲೂಕು ನೀರಿನ ಬವಣೆಯಲ್ಲಿದೆ. ಅಂತರ್ಜಲ ದೊಡ್ಡಮಟ್ಟದಲ್ಲಿ ಕೆಳಗಿಳಿದಿದೆ. ಇದೇ ನೆಲದಲ್ಲಿ ಬೆಳೆದ ತಾನು ತನ್ನ ಸಂಶೋಧನೆಯಿಂದ ಈ ಪ್ರದೇಶದ ರೈತರಿಗೆ, ಜನ ಸಾಮಾನ್ಯರಿಗೆ ಉಪಯುಕ್ತ ಆಗುವಂತೆ ಅಂತರ್ಜಲವನ್ನು ಹೆಚ್ಚಿಸುವ ಕುರಿತು ವೈಜ್ಞಾನಿಕ ಸಂಶೋಧನೆ ಕೈಗೊಂಡ ಈ ಯುವಕನೇ ಪ್ರವೀಣ್.

ಅರಣ್ಯ ಇಲಾಖೆಯ ದಿನಗೂಲಿ ನೌಕರ ದಲಿತ ಸಮುದಾಯದ ಡಿ.ವೆಂಕಟೇಶ್ ಮತ್ತು ಅಂಗನವಾಡಿ ಕಾರ್ಯಕರ್ತೆ ಮಹಾಂತಮ್ಮ ದಂಪತಿಗಳ ಮಗನಾದ ಪ್ರವೀಣ್ ಜಗಳೂರಿನಂತಹ ಬರಡು ಪ್ರದೇಶದಲ್ಲಿ ಕಡುಕಷ್ಟದಲ್ಲಿ ಓದಿದ ಯುವಕ. ಪಿ.ಯು ತನಕ ಜಗಳೂರಿನ ನಲಂದಾ ಕಾಲೇಜಿನಲ್ಲಿ ಓದಿದ ಪ್ರವೀಣ್ ಕೇಂದ್ರೀಯ ವಿಶ್ವವಿದ್ಯಾಲಯಗಳ ಸಿಇಟಿಯಲ್ಲಿ ಉತ್ತಮ ಅಂಕ ಗಳಿಸಿ ಸೆಂಟ್ರಲ್ ಯುನಿವರ್ಸಿಟಿ ಗುಲ್ಬರ್ಗಾಕ್ಕೆ 2012ರಲ್ಲಿ ಸೇರುತ್ತಾನೆ. ಭೂವಿಜ್ಞಾನ ವಿಭಾಗದಲ್ಲಿ ಬಿಎಸ್ಸಿ ಆನರ್ಸ್ ನಾಲ್ಕನೆ ರ್ಯಾಂಕ್ ಪಡೆಯುತ್ತಾರೆ. ಆನ್ವಯಿಕ ಭೂವಿಜ್ಞಾನ ಮತ್ತು ಜಿಯೋ ಇನ್ಪಾರ್ಮಾಟಿಕ್‍ನಲ್ಲಿ ಎಂ.ಎಸ್ಸಿ ಪದವಿಯನ್ನು ಪಡೆಯುತ್ತಾನೆ. ಇದೀಗ ಪ್ರೊ.ಮಹಮದ್ ಅಸ್ಲಾಂ ಅವರ ಮಾರ್ಗದರ್ಶನದಲ್ಲಿ ಜಗಳೂರು ಭಾಗದಲ್ಲಿ ಅಂತರ್ಜಲವನ್ನು ಹೆಚ್ಚಿಸುವ ಸಾಧ್ಯತೆಗಳ ಕುರಿತು ಸಂಶೋಧನೆ ಮಾಡುತ್ತಿದ್ದಾರೆ.

ಈ ಸಂಶೋಧನೆ ಕುರಿತಂತೆ, ಪ್ರವೀಣ್ ಕುಮಾರ್ `ಜಗಳೂರು ಭಾಗದಲ್ಲಿ ಮಳೆ ನೀರಿನಿಂದ ರೀಚಾರ್ಜ್ ಮಾಡುವುದು ಹೇಗೆ? ಈ ಭಾಗದಲ್ಲಿ ನೀರಿನ ಆಳ ಎಷ್ಟಿದೆ, ಒಳಗಡೆ ಪ್ಲೆಕ್ಚಿಯೇಷನ್ ಹೇಗಿದೆ? ಇದೆಲ್ಲವನ್ನು ನೂರು ವರ್ಷದ ಮಳೆಯ ಅಂಕಿಅಂಶಗಳನ್ನು ಆಧರಿಸಿ ಅಧ್ಯಯನ ಮಾಡುತ್ತಿದ್ದೇನೆ. ಜಗಳೂರಿನ ಕುಡಿವ ನೀರಿನ ಗುಣಮಟ್ಟದ ಪರೀಕ್ಷೆಯನ್ನು 30 ಹಳ್ಳಿಗಳಲ್ಲಿಯೂ, 50 ಹಳ್ಳಿಗಳ ಲೋಕೇಷನ್ನುಗಳಲ್ಲಿ ವರ್ಟಿಕಲ್ ಎಲೆಕ್ರಿಕ್ಟ್ ಸರ್ವೆ ಮಾಡಲಾಗಿದೆ. ಅಂತಿಮವಾಗಿ ಈ ಸಂಶೋಧನೆಯಿಂದ ಜಗಳೂರು ಭಾಗದಲ್ಲಿ ಅಂತರ್ಜಲವನ್ನು ಹೇಗೆ ವೃದ್ಧಿಸಬಹುದು ಎನ್ನುವುದಕ್ಕೆ ಭೂಗರ್ಭ ಶಾಸ್ತ್ರದ ನೆಲೆಯ ವೈಜ್ಞಾನಿಕ ಮಾರ್ಗಗಳನ್ನು ಕಂಡುಹಿಡಿಯಲಾಗುವುದು’ ಎಂದು ಹೇಳುತ್ತಾನೆ.

ಭೂಗರ್ಭ ಶಾಸ್ತ್ರದ ಸಂಶೋಧನೆಗಳಲ್ಲಿ ಪ್ರವೀಣ್ ಕುಮಾರ್ ನಿರಂತರವಾಗಿ ತೊಡಗಿಕೊಂಡ ಕಾರಣ ಹೊಸ ಹೊಸ ಸಂಶೋಧನೆಗಳ ಮೂಲಕ ಗಮನಸೆಳೆದಿದ್ದಾನೆ. ಇಂತಹ ಪ್ರಯತ್ನಗಳಿಗಾಗಿ ಹಲವು ಪ್ರಶಸ್ತಿಗಳು ಪ್ರವೀಣ್ ಅವರನ್ನು ಗುರುತಿಸಿವೆ. ಕೊಲ್ಕತ್ತಾದ ಅಂತರಾಷ್ಟ್ರೀಯ ಎನ್ವಿರಾನ್‍ಮೆಂಟ್ ಅಂಡ್ ಇಕಾಲಜಿ ಪೌಂಡೇಷನ್ ಅವರು 2017ರ `ಜೂನಿಯರ್ ಸೈಂಟಿಸ್ಟ್’ ಪ್ರಶಸ್ತಿ, ಕೊಲ್ಕತ್ತಾದ ವಲ್ರ್ಡ್ ಅಚೀವರ್ಸ್ ಪೌಂಡೇಷನ್ 2018ರಲ್ಲಿ `ಕ್ಲೀನ್ ಎನ್ವಿರಾನ್‍ಮೆಂಟ್ ಎಜುಕೇಷನ್ ಅಂಡ್ ಪ್ರಮೋಷನ್’ ಪ್ರಶಸ್ತಿ, 2019ರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗೆಗೆ ಕೇಂದ್ರ ಮತ್ತು ಯುವಜನ ಸಚಿವಾಲಯ ಪ್ರಾಯೋಜಿಸಿದ ಸೆಮಿನಾರಿನಲ್ಲಿ `ಸ್ವಾಮಿ ವಿವೇಕಾನಂದ ಎಕ್ಸಲೆನ್ಸ್ ಅವಾರ್ಡ್’, ಥಾಯಲ್ಯಾಂಡಿನ ಬ್ಯಾಂಕಾಕ್‍ನಲ್ಲಿ ಆಯೋಜಿಸಿದ ಎರಡನೆ ಅಂತರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನದ ಸಮ್ಮೇಳನದಲ್ಲಿ 2019ರ `ಯುವ ವಿಜ್ಞಾನಿ’ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಈಚೆಗೆ ಆಸ್ಟ್ರಿಯಾ ದೇಶದ ಯುನೈಟೆಡ್ ಸ್ಪೇಸ್ ರಿಸರ್ಚ್ ಕೇಂದ್ರವು ಥಾಯ್‍ಲ್ಯಾಂಡ್‍ನ ಏಷಿಯನ್ ಇನ್‍ಸ್ಟಿಟೂಟ್ ಆಫ್ ಟೆಕ್ನಾಲಜೀಸ್‍ನ ಸಹಯೋಗದಲ್ಲಿ ಥಾಯಲ್ಯಾಂಡಿನ ಪತುಮಥನಿಯಲ್ಲಿ 202 ರ ಜನವರಿ 6ರಿಂದ 10ರ ವರೆಗೆ ಅಂತರಾಷ್ಟ್ರೀಯ ತರಬೇತಿ ಶಿಬಿರವನ್ನು ಆಯೋಜಿಸಿತ್ತು. ಆಸ್ಟ್ರಿಯಾ ಸರಕಾರವು ಸೆಟಲೈಟ್ ತಂತ್ರಜ್ಞಾನದಲ್ಲಿ ಆಧುನಿಕ ಸಾಫ್ಟ್‍ವೇರ್ ಅಭಿವೃದ್ಧಿಯನ್ನು ಉತ್ತೇಜಿಸಲು, ಈ ಕ್ಷೇತ್ರದಲ್ಲಿ ತಜ್ಞತೆ ಪಡೆದವರಿಂದ ಅರ್ಜಿ ಕರೆಯಲಾಗಿತ್ತು. ಅರ್ಜಿ ಸ್ವೀಕೃತಿಯ ನಂತರ ಅರ್ಜಿದಾರರಿಗೆ ಈ ಸಂಶೋಧನೆಯಿಂದ ನಿಮ್ಮ ದೇಶಕ್ಕೆ ಏನು ಕೊಡುಗೆ ನೀಡುತ್ತೀರಿ? ಎಂದು ಕೇಳಲಾಗಿತ್ತು. ಇದಕ್ಕೆ ಸಮರ್ಥವಾದ ಉತ್ತರ ನೀಡಿದ 18 ಜನರನ್ನು ಅಂತಿಮವಾಗಿ ಆರಿಸಿ, ಪ್ರತಿ ದೇಶದಿಂದ ಆಯ್ದ ಇಬ್ಬರಿಗೆ ಅವಕಾಶ ನೀಡಲಾಗಿತ್ತು. ಹಾಗಾಗಿ ಭಾರತದ ಪ್ರತಿನಿಧಿಗಳಾಗಿ ಉತ್ತರಖಂಡದ ಐಐಟಿ ರೂರ್ಕಿಯಿಂದ ಒಬ್ಬರು ಆಯ್ಕೆಯಾದರೆ, ಮತ್ತೊಬ್ಬರು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಜ್ಯೋತಿಪುರದ ಪ್ರವೀಣ್ ಆಯ್ಕೆಯಾಗಿದ್ದರು.

ಈ ತರಬೇತಿ ಶಿಬಿರದಲ್ಲಿ ಲ್ಯಾಂಡ್ ಸರ್ವೆ, ವೆಹಿಕಲ್ ಟ್ರಾಕಿಂಗ್, ಫಾರೆಸ್ಟ್ ನ್ಯಾವಿಗೇಷನ್, ಶಿಪ್ ನ್ಯಾವಿಗೇಷನ್ ಮುಂತಾದ ಹೊಸ ಸಂಶೋಧನೆಗಳ ಬಗೆಗೆ ಚರ್ಚೆಯಾಯಿತು. ಉದಾಹರಣೆಗೆ ಲ್ಯಾಂಡ್ ಸರ್ವೆ ಎಂದರೆ ಈಗಲೂ ಚೈನ್ ಹಿಡಿದು ಅಳತೆ ಮಾಡಲಾಗುತ್ತದೆ. ಆದರೆ ಲ್ಯಾಂಡ್ ಸರ್ವೆ ಸಾಫ್ಟ್‍ವೇರ್ ಅಭಿವೃದ್ಧಿಯಾದರೆ ಅಳತೆ ಮಾಡುವ ನೆಲದ ನಾಲ್ಕು ಬಿಂದುಗಳನ್ನು ಗುರುತಿಸಿಕೊಂಡು, ಆಂಟೆನಾ ನಿಲ್ಲಿಸಿ ಸ್ಯಾಟಲೈಟ್ ಸಂಪರ್ಕಿಸಿದರೆ ವಾರಗಟ್ಟಲೆ ಮಾಡುವ ಭೂ ಅಳತೆಯನ್ನು ಒಂದು ಗಂಟೆಯಲ್ಲಿ ಮಾಡಬಹುದಾಗಿದೆ. ಇಂತಹ ಹೊಸ ಬಗೆಯ ಸಂಶೋಧನೆಗಳ ಚರ್ಚೆ ಸಂವಾದ ಸಂಶೋಧನ ಪ್ರಬಂಧಗಳು ಈ ಶಿಬಿರದಲ್ಲಿ ಮಂಡನೆಯಾದವು. ಇದರಲ್ಲಿ ಪ್ರವೀಣ್ ಅವರ ಕೃತಕ ಪುನರ್‍ಭರ್ತಿ ಕಾರ್ಯ, ಜಲ ಸಂಪನ್ಮೂಲ ನಿರ್ವಹಣೆ, ಹೈಡ್ರಾಲಾಜಿ, ಘನತ್ಯಾಜ್ಯ ನಿರ್ವಹಣೆ, ಭೂ ಗರ್ಭಕ್ಕೆ ನೀರನ್ನು ಪುನರ್ ಹಾಯಿಸುವ ಹೊಸ ವಿಧಾನ, ಭೂಮಿ ಮತ್ತು ಪರಿಸರ ವಿಜ್ಞಾನದ ಬಗೆಗಿನ ಹೊಸ ಬಗೆಯ ಆಲೋಚನೆಗಳು ಮತ್ತು ಜಿಯೋ ಇನ್ಫಾರ್ಮೆಟಿಕ್ಸ್ ಮತ್ತು ರಿಮೋಟ್ ಸೆನ್ಸಿಂಗ್ ವಿಷಯದಲ್ಲಿ ಪ್ರವೀಣ್ ಕುಮಾರ್ ಅವರ ತಜ್ಞತೆಯು ಗಮನಸೆಳೆಯಿತು. ಇದೆಲ್ಲದರ ಪರಿಣಾಮವಾಗಿ ಈ ಶಿಬಿರದಲ್ಲಿ ಪ್ರವೀಣ್ ಅವರನ್ನು `ಅಂತರಾಷ್ಟ್ರೀಯ ಪ್ರಯಾಣ ವಿದ್ಯಾರ್ಥಿ ವೇತನ’ಕ್ಕೆ ಆಯ್ಕೆಮಾಡಲಾಯಿತು. ಇದು ಪ್ರವೀಣ್ ಅವರ ಈತನಕದ ಜೀವಿತದ ದೊಡ್ಡ ಸಾಧನೆಯೆಂದೇ ಹೇಳಬೇಕು.

ಕುಡಿಯುವ ನೀರಿಗೆ ಬರ ಇರುವ, ಅಂತರ್ಜಲ ತುಂಬಾ ಆಳಕ್ಕೆ ಕುಸಿದಿರುವ ಜಗಳೂರಿನಂತಹ ಬರಡು ನೆಲದಲ್ಲಿ, ಭೂಗರ್ಭ ಶಾಸ್ತ್ರದಲ್ಲಿ ತಜ್ಞತೆ ಪಡೆದು, ತನ್ನ ಪಿಹೆಚ್‍ಡಿ ಸಂಶೋಧನೆಗೆ ಜಗಳೂರನ್ನೆ ಆಯ್ಕೆ ಮಾಡಿಕೊಂಡಿರುವುದು ವಿಶೇಷವಾಗಿದೆ. ಜಗಳೂರು ಭಾಗದ ಅಂತರ್ಜಲ ಹೆಚ್ಚಿಸುವ ಸಾಧ್ಯತೆಗಳ ಬಗ್ಗೆ ಶೋಧಿಸುತ್ತಿರುವ ದಲಿತ ಸಮುದಾಯಕ್ಕೆ ಸೇರಿದ ಯುವಕ ಪ್ರವೀಣ್ ಈ ಭಾಗದ ಭಗೀರಥನಂತೆಯೇ ಕಾಣುತ್ತಾನೆ.


ಇದನ್ನು ಓದಿ: ಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ…
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...