Homeಮುಖಪುಟಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು - ಸಿದ್ದರಾಮಯ್ಯ ಆಗ್ರಹ

ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

ನಳಿನ್ ಕುಮಾರ್ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ.

- Advertisement -
- Advertisement -

ದಕ್ಷಿಣ ಕನ್ನಡದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರನ್ನು ತನಿಖೆಗೊಳಪಡಿಸಬೇಕು ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ಈಗ ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ. ಈ ಬೆಳವಣಿಗೆಗಳನ್ನು ಕೂಡಾ ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿದರೆ ಸತ್ಯ ಬಯಲಾದೀತು.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಸಚಿವ ಸುನೀಲ್ ಕುಮಾರ್, ವಿ.ಎಚ್.ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದಿದ್ದಾರೆ.

ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಸರ್ಕಾರ ತೋರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಅದರಲ್ಲೂ ಮುಖ್ಯವಾಗಿ ಬಿಲ್ಲವ ಯುವಕರೇ ಕೋಮು ಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ಸಹ ಅವರು ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ದುಷ್ಕರ್ಮಿಗಳ ದಾಳಿಯಿಂದ ಬಲಿಯಾಗಿದ್ದ ಮಸೂದ್ ಮನೆಗೆ ಹೋಗದಿರಲು ಕಾರಣ ಏನೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮೃತ ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಅದು ಅವರ ಸಂಘಟನೆಗೆ ಸಂಬಂಧಿಸಿದ್ದು, ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ಭೇದಭಾವ ಆಗದಂತೆ ಎಚ್ಚರಿಕೆ ವಹಿಸುವುದು ಮುಖ್ಯಮಂತ್ರಿಗಳ ಕರ್ತವ್ಯವಾಗಿದೆ. ಆದರೆ ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಆರ್.ಎಸ್.ಎಸ್ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ. ಅವರ ಕುರ್ಚಿಯ ಉಳಿವು, ರಾಜ್ಯದ ಅಳಿವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಭೇಟಿ ನೀಡಿದ ವೇಳೆ ಭಾರೀ ಪ್ರತಿಭಟನೆಯನ್ನು ಎದುರಿಸಬೇಕಾಯಿತು. ಬಿಜೆಪಿ ಕಾರ್ಯಕರ್ತರು ನಳಿನ್ ಕುಮಾರ್ ಅವರಿಗೆ ಧಿಕ್ಕಾರ ಕೂಗಿದರು. ‘ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ’ ಎಂದು ಪ್ರಶ್ನಿಸಿದ ಅವರು, ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರವೀಣ್ ನೆಟ್ಟಾರ್ ಅವರ ಅಂತಿಮ‌ ದರ್ಶನಕ್ಕಾಗಿ ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಕಟೀಲ್ ಇದ್ದ ಕಾರನ್ನು ಉರುಳಿಸಲೂ ಕಾರ್ಯಕರ್ತರು ಯತ್ನಿಸಿದರು. ಟೈರ್​ಗಳಿಂದ ಗಾಳಿ ಹೊರಬಿಟ್ಟರು. ಪರಿಸ್ಥಿತಿ ಕೈಮೀರುವುದು ಮನಗಂಡ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚೆದುರಿಸಿದರು. ಪೊಲೀಸ್ ಭದ್ರತೆಯಲ್ಲಿಯೇ ನಳಿನ್ ಕುಮಾರ್ ಕಟೀಲ್ ಸ್ಥಳದಿಂದ ಹೊರನಡೆಯಬೇಕಾಗಿತ್ತು.

ಇದನ್ನೂ ಓದಿ; ಪ್ರವೀಣ್‌ ಕೊಲೆ ಪ್ರಕರಣ: ನಳಿನ್‌ ಕಾರು ಉರುಳಿಸಲು ಬಿಜೆಪಿ ಕಾರ್ಯಕರ್ತರ ಯತ್ನ; ಲಾಠಿ ಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...