Homeಮುಖಪುಟಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು - ಸಿದ್ದರಾಮಯ್ಯ ಆಗ್ರಹ

ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

ನಳಿನ್ ಕುಮಾರ್ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ.

- Advertisement -
- Advertisement -

ದಕ್ಷಿಣ ಕನ್ನಡದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರನ್ನು ತನಿಖೆಗೊಳಪಡಿಸಬೇಕು ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ಈಗ ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ. ಈ ಬೆಳವಣಿಗೆಗಳನ್ನು ಕೂಡಾ ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿದರೆ ಸತ್ಯ ಬಯಲಾದೀತು.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಸಚಿವ ಸುನೀಲ್ ಕುಮಾರ್, ವಿ.ಎಚ್.ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದಿದ್ದಾರೆ.

ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಸರ್ಕಾರ ತೋರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಅದರಲ್ಲೂ ಮುಖ್ಯವಾಗಿ ಬಿಲ್ಲವ ಯುವಕರೇ ಕೋಮು ಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ಸಹ ಅವರು ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ದುಷ್ಕರ್ಮಿಗಳ ದಾಳಿಯಿಂದ ಬಲಿಯಾಗಿದ್ದ ಮಸೂದ್ ಮನೆಗೆ ಹೋಗದಿರಲು ಕಾರಣ ಏನೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮೃತ ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಅದು ಅವರ ಸಂಘಟನೆಗೆ ಸಂಬಂಧಿಸಿದ್ದು, ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ಭೇದಭಾವ ಆಗದಂತೆ ಎಚ್ಚರಿಕೆ ವಹಿಸುವುದು ಮುಖ್ಯಮಂತ್ರಿಗಳ ಕರ್ತವ್ಯವಾಗಿದೆ. ಆದರೆ ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಆರ್.ಎಸ್.ಎಸ್ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ. ಅವರ ಕುರ್ಚಿಯ ಉಳಿವು, ರಾಜ್ಯದ ಅಳಿವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಭೇಟಿ ನೀಡಿದ ವೇಳೆ ಭಾರೀ ಪ್ರತಿಭಟನೆಯನ್ನು ಎದುರಿಸಬೇಕಾಯಿತು. ಬಿಜೆಪಿ ಕಾರ್ಯಕರ್ತರು ನಳಿನ್ ಕುಮಾರ್ ಅವರಿಗೆ ಧಿಕ್ಕಾರ ಕೂಗಿದರು. ‘ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ’ ಎಂದು ಪ್ರಶ್ನಿಸಿದ ಅವರು, ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರವೀಣ್ ನೆಟ್ಟಾರ್ ಅವರ ಅಂತಿಮ‌ ದರ್ಶನಕ್ಕಾಗಿ ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಕಟೀಲ್ ಇದ್ದ ಕಾರನ್ನು ಉರುಳಿಸಲೂ ಕಾರ್ಯಕರ್ತರು ಯತ್ನಿಸಿದರು. ಟೈರ್​ಗಳಿಂದ ಗಾಳಿ ಹೊರಬಿಟ್ಟರು. ಪರಿಸ್ಥಿತಿ ಕೈಮೀರುವುದು ಮನಗಂಡ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚೆದುರಿಸಿದರು. ಪೊಲೀಸ್ ಭದ್ರತೆಯಲ್ಲಿಯೇ ನಳಿನ್ ಕುಮಾರ್ ಕಟೀಲ್ ಸ್ಥಳದಿಂದ ಹೊರನಡೆಯಬೇಕಾಗಿತ್ತು.

ಇದನ್ನೂ ಓದಿ; ಪ್ರವೀಣ್‌ ಕೊಲೆ ಪ್ರಕರಣ: ನಳಿನ್‌ ಕಾರು ಉರುಳಿಸಲು ಬಿಜೆಪಿ ಕಾರ್ಯಕರ್ತರ ಯತ್ನ; ಲಾಠಿ ಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...