Homeಮುಖಪುಟಚಂದ್ರಶೇಖರ್ ಆಜಾದ್ ಭೇಟಿ ತಡೆ: ಪ್ರಯಾಗ್‌ರಾಜ್ ಗಲಭೆ, 67 ಬಂಧನ, 8 ಅಪ್ರಾಪ್ತ ವಯಸ್ಕರ ವಶ

ಚಂದ್ರಶೇಖರ್ ಆಜಾದ್ ಭೇಟಿ ತಡೆ: ಪ್ರಯಾಗ್‌ರಾಜ್ ಗಲಭೆ, 67 ಬಂಧನ, 8 ಅಪ್ರಾಪ್ತ ವಯಸ್ಕರ ವಶ

- Advertisement -
- Advertisement -

ಪ್ರಯಾಗ್‌ರಾಜ್: ಆಜಾದ್ ಸಮಾಜ್ ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಚಂದ್ರಶೇಖರ್ ಆಜಾದ್ ಇಸೋಟಾ ಗ್ರಾಮಕ್ಕೆ ಭೇಟಿ ನೀಡದಂತೆ ಪೊಲೀಸರು ತಡೆದಿದ್ದೇ ಪ್ರಯಾಗ್‌ರಾಜ್‌ನಲ್ಲಿ ಭಾರಿ ಘರ್ಷಣೆಗಳು ಭುಗಿಲೇಳಲು ಕಾರಣವಾಯಿತು. ಈ ಘಟನೆಗಳ ವೇಳೆ ನಡೆದ ವಿಧ್ವಂಸಕ ಕೃತ್ಯಗಳ ಆರೋಪದಡಿ ಉತ್ತರ ಪ್ರದೇಶ ಪೊಲೀಸರು 67 ಜನರನ್ನು ಬಂಧಿಸಿದ್ದು, ಎಂಟು ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದಿದ್ದಾರೆ.

ಕರ್ಛನಾ ಪ್ರದೇಶದ ಇಸೋಟಾ ಗ್ರಾಮದಲ್ಲಿ ಸುಟ್ಟು ಕರಕಲಾದ ದಲಿತ ವ್ಯಕ್ತಿ ದೇವಿ ಶಂಕರ್ ಅವರ ಕುಟುಂಬವನ್ನು ಭೇಟಿಯಾಗಲು ಸಂಸದ ಚಂದ್ರಶೇಖರ್ ಆಜಾದ್‌ಗೆ ಪೊಲೀಸರು ನಿರ್ಬಂಧ ವಿಧಿಸಿದ್ದರು. ನೆರೆಯ ಕೌಶಂಬಿ ಜಿಲ್ಲೆಯ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗುವುದಕ್ಕೂ ತಡೆ ಒಡ್ಡಿದ ಜಿಲ್ಲಾಡಳಿತ, ಕಾನೂನು ಸುವ್ಯವಸ್ಥೆ ಕಾರಣ ನೀಡಿತ್ತು. ಈ ನಿರಾಕರಣೆಯ ಬೆನ್ನಲ್ಲೇ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಆಜಾದ್ ಭೇಟಿ ರದ್ದಾದ ಸುದ್ದಿ ತಿಳಿಯುತ್ತಿದ್ದಂತೆ ಕೆರಳಿದ ಸಂಸದರ ಬೆಂಬಲಿಗರು, ಸುಮಾರು ಎರಡು ಗಂಟೆಗಳ ಕಾಲ ಉದ್ರಿಕ್ತರಾಗಿ ವರ್ತಿಸಿದ್ದಾರೆ. ಅವರು ವಿಧ್ವಂಸಕ ಕೃತ್ಯ, ಬೆಂಕಿ ಹಚ್ಚುವಿಕೆ, ಡಜನ್‌ಗೂ ಹೆಚ್ಚು ವಾಹನಗಳಿಗೆ ಹಾನಿ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಗುಂಪು ಕಲ್ಲು ತೂರಾಟದಿಂದ ಎರಡು ಪೊಲೀಸ್ ವಾಹನಗಳನ್ನು ಜಖಂ ಮಾಡಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ಘಟನೆ ಬೆನ್ನಲ್ಲೇ 53 ಹೆಸರಿಸಿದ ಹಾಗೂ 500ಕ್ಕೂ ಹೆಚ್ಚು ಅಜ್ಞಾತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಗಲಭೆಕೋರರ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದು, ಪರಿಸ್ಥಿತಿ ತಿಳಿಗೊಳಿಸಲು ಶ್ರಮಿಸುತ್ತಿದ್ದಾರೆ. ಉಪ ಪೊಲೀಸ್ ಆಯುಕ್ತ (ಯಮುನಾಪರ್) ವಿವೇಕ್ ಚಂದ್ರ ಯಾದವ್, ಘಟನೆಯಲ್ಲಿ ಭಾಗಿಯಾದವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಮತ್ತು ಗ್ಯಾಂಗ್‌ಸ್ಟರ್ ಕಾಯ್ದೆ ಅಡಿ ಕಠಿಣ ಕ್ರಮ ನಿಶ್ಚಿತ ಎಂದಿದ್ದಾರೆ. ಸಾರ್ವಜನಿಕ ಆಸ್ತಿಗೆ ಆದ ನಷ್ಟದ ಪರಿಹಾರವನ್ನು ಆರೋಪಿಗಳಿಂದಲೇ ವಸೂಲಿ ಮಾಡಲಾಗುವುದು. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮೂಲಕ ಇತರರ ಗುರುತಿಸುವಿಕೆ ಕಾರ್ಯ ಭರದಿಂದ ಸಾಗಿದೆ.

ಇದೇ ವೇಳೆ, ಕರ್ಛನಾದ ಗಲಭೆಗಳಲ್ಲಿ ತಮ್ಮ ಕಾರ್ಯಕರ್ತರ ಪಾತ್ರವಿಲ್ಲ ಎಂದು ಚಂದ್ರಶೇಖರ್ ಆಜಾದ್ ಸ್ಪಷ್ಟಪಡಿಸಿದ್ದಾರೆ. ಆಜಾದ್ ಸಮಾಜ್ ಪಕ್ಷದ ರಾಜ್ಯಾಧ್ಯಕ್ಷ ಸುನಿಲ್ ಕುಮಾರ್ ಚಿತ್ತೋಡ್ ಸಹ ಈ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದು, ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಪಕ್ಷದ ಸಂಬಂಧವಿಲ್ಲ ಎಂದಿದ್ದಾರೆ. “ಇದು ನಮ್ಮ ಚಳುವಳಿಯನ್ನು ದೂಷಿಸಲು ಮಾಡಿದ ಯೋಜಿತ ಪಿತೂರಿ” ಎಂದು ಪಕ್ಷವು ಬಲವಾಗಿ ಪ್ರತಿಪಾದಿಸಿದೆ.

‘ಕೊನೆ ಉಸಿರಿನವರೆಗೂ ಹೋರಾಡುತ್ತೇನೆ’: ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...