Homeಮುಖಪುಟಚಂದ್ರಶೇಖರ್ ಆಜಾದ್ ಭೇಟಿ ತಡೆ: ಪ್ರಯಾಗ್‌ರಾಜ್ ಗಲಭೆ, 67 ಬಂಧನ, 8 ಅಪ್ರಾಪ್ತ ವಯಸ್ಕರ ವಶ

ಚಂದ್ರಶೇಖರ್ ಆಜಾದ್ ಭೇಟಿ ತಡೆ: ಪ್ರಯಾಗ್‌ರಾಜ್ ಗಲಭೆ, 67 ಬಂಧನ, 8 ಅಪ್ರಾಪ್ತ ವಯಸ್ಕರ ವಶ

- Advertisement -
- Advertisement -

ಪ್ರಯಾಗ್‌ರಾಜ್: ಆಜಾದ್ ಸಮಾಜ್ ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಚಂದ್ರಶೇಖರ್ ಆಜಾದ್ ಇಸೋಟಾ ಗ್ರಾಮಕ್ಕೆ ಭೇಟಿ ನೀಡದಂತೆ ಪೊಲೀಸರು ತಡೆದಿದ್ದೇ ಪ್ರಯಾಗ್‌ರಾಜ್‌ನಲ್ಲಿ ಭಾರಿ ಘರ್ಷಣೆಗಳು ಭುಗಿಲೇಳಲು ಕಾರಣವಾಯಿತು. ಈ ಘಟನೆಗಳ ವೇಳೆ ನಡೆದ ವಿಧ್ವಂಸಕ ಕೃತ್ಯಗಳ ಆರೋಪದಡಿ ಉತ್ತರ ಪ್ರದೇಶ ಪೊಲೀಸರು 67 ಜನರನ್ನು ಬಂಧಿಸಿದ್ದು, ಎಂಟು ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದಿದ್ದಾರೆ.

ಕರ್ಛನಾ ಪ್ರದೇಶದ ಇಸೋಟಾ ಗ್ರಾಮದಲ್ಲಿ ಸುಟ್ಟು ಕರಕಲಾದ ದಲಿತ ವ್ಯಕ್ತಿ ದೇವಿ ಶಂಕರ್ ಅವರ ಕುಟುಂಬವನ್ನು ಭೇಟಿಯಾಗಲು ಸಂಸದ ಚಂದ್ರಶೇಖರ್ ಆಜಾದ್‌ಗೆ ಪೊಲೀಸರು ನಿರ್ಬಂಧ ವಿಧಿಸಿದ್ದರು. ನೆರೆಯ ಕೌಶಂಬಿ ಜಿಲ್ಲೆಯ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗುವುದಕ್ಕೂ ತಡೆ ಒಡ್ಡಿದ ಜಿಲ್ಲಾಡಳಿತ, ಕಾನೂನು ಸುವ್ಯವಸ್ಥೆ ಕಾರಣ ನೀಡಿತ್ತು. ಈ ನಿರಾಕರಣೆಯ ಬೆನ್ನಲ್ಲೇ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಆಜಾದ್ ಭೇಟಿ ರದ್ದಾದ ಸುದ್ದಿ ತಿಳಿಯುತ್ತಿದ್ದಂತೆ ಕೆರಳಿದ ಸಂಸದರ ಬೆಂಬಲಿಗರು, ಸುಮಾರು ಎರಡು ಗಂಟೆಗಳ ಕಾಲ ಉದ್ರಿಕ್ತರಾಗಿ ವರ್ತಿಸಿದ್ದಾರೆ. ಅವರು ವಿಧ್ವಂಸಕ ಕೃತ್ಯ, ಬೆಂಕಿ ಹಚ್ಚುವಿಕೆ, ಡಜನ್‌ಗೂ ಹೆಚ್ಚು ವಾಹನಗಳಿಗೆ ಹಾನಿ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಗುಂಪು ಕಲ್ಲು ತೂರಾಟದಿಂದ ಎರಡು ಪೊಲೀಸ್ ವಾಹನಗಳನ್ನು ಜಖಂ ಮಾಡಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ಘಟನೆ ಬೆನ್ನಲ್ಲೇ 53 ಹೆಸರಿಸಿದ ಹಾಗೂ 500ಕ್ಕೂ ಹೆಚ್ಚು ಅಜ್ಞಾತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಗಲಭೆಕೋರರ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದು, ಪರಿಸ್ಥಿತಿ ತಿಳಿಗೊಳಿಸಲು ಶ್ರಮಿಸುತ್ತಿದ್ದಾರೆ. ಉಪ ಪೊಲೀಸ್ ಆಯುಕ್ತ (ಯಮುನಾಪರ್) ವಿವೇಕ್ ಚಂದ್ರ ಯಾದವ್, ಘಟನೆಯಲ್ಲಿ ಭಾಗಿಯಾದವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಮತ್ತು ಗ್ಯಾಂಗ್‌ಸ್ಟರ್ ಕಾಯ್ದೆ ಅಡಿ ಕಠಿಣ ಕ್ರಮ ನಿಶ್ಚಿತ ಎಂದಿದ್ದಾರೆ. ಸಾರ್ವಜನಿಕ ಆಸ್ತಿಗೆ ಆದ ನಷ್ಟದ ಪರಿಹಾರವನ್ನು ಆರೋಪಿಗಳಿಂದಲೇ ವಸೂಲಿ ಮಾಡಲಾಗುವುದು. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮೂಲಕ ಇತರರ ಗುರುತಿಸುವಿಕೆ ಕಾರ್ಯ ಭರದಿಂದ ಸಾಗಿದೆ.

ಇದೇ ವೇಳೆ, ಕರ್ಛನಾದ ಗಲಭೆಗಳಲ್ಲಿ ತಮ್ಮ ಕಾರ್ಯಕರ್ತರ ಪಾತ್ರವಿಲ್ಲ ಎಂದು ಚಂದ್ರಶೇಖರ್ ಆಜಾದ್ ಸ್ಪಷ್ಟಪಡಿಸಿದ್ದಾರೆ. ಆಜಾದ್ ಸಮಾಜ್ ಪಕ್ಷದ ರಾಜ್ಯಾಧ್ಯಕ್ಷ ಸುನಿಲ್ ಕುಮಾರ್ ಚಿತ್ತೋಡ್ ಸಹ ಈ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದು, ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಪಕ್ಷದ ಸಂಬಂಧವಿಲ್ಲ ಎಂದಿದ್ದಾರೆ. “ಇದು ನಮ್ಮ ಚಳುವಳಿಯನ್ನು ದೂಷಿಸಲು ಮಾಡಿದ ಯೋಜಿತ ಪಿತೂರಿ” ಎಂದು ಪಕ್ಷವು ಬಲವಾಗಿ ಪ್ರತಿಪಾದಿಸಿದೆ.

‘ಕೊನೆ ಉಸಿರಿನವರೆಗೂ ಹೋರಾಡುತ್ತೇನೆ’: ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...