Homeಮುಖಪುಟಚಂದ್ರಶೇಖರ್ ಆಜಾದ್ ಭೇಟಿ ತಡೆ: ಪ್ರಯಾಗ್‌ರಾಜ್ ಗಲಭೆ, 67 ಬಂಧನ, 8 ಅಪ್ರಾಪ್ತ ವಯಸ್ಕರ ವಶ

ಚಂದ್ರಶೇಖರ್ ಆಜಾದ್ ಭೇಟಿ ತಡೆ: ಪ್ರಯಾಗ್‌ರಾಜ್ ಗಲಭೆ, 67 ಬಂಧನ, 8 ಅಪ್ರಾಪ್ತ ವಯಸ್ಕರ ವಶ

- Advertisement -
- Advertisement -

ಪ್ರಯಾಗ್‌ರಾಜ್: ಆಜಾದ್ ಸಮಾಜ್ ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಚಂದ್ರಶೇಖರ್ ಆಜಾದ್ ಇಸೋಟಾ ಗ್ರಾಮಕ್ಕೆ ಭೇಟಿ ನೀಡದಂತೆ ಪೊಲೀಸರು ತಡೆದಿದ್ದೇ ಪ್ರಯಾಗ್‌ರಾಜ್‌ನಲ್ಲಿ ಭಾರಿ ಘರ್ಷಣೆಗಳು ಭುಗಿಲೇಳಲು ಕಾರಣವಾಯಿತು. ಈ ಘಟನೆಗಳ ವೇಳೆ ನಡೆದ ವಿಧ್ವಂಸಕ ಕೃತ್ಯಗಳ ಆರೋಪದಡಿ ಉತ್ತರ ಪ್ರದೇಶ ಪೊಲೀಸರು 67 ಜನರನ್ನು ಬಂಧಿಸಿದ್ದು, ಎಂಟು ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದಿದ್ದಾರೆ.

ಕರ್ಛನಾ ಪ್ರದೇಶದ ಇಸೋಟಾ ಗ್ರಾಮದಲ್ಲಿ ಸುಟ್ಟು ಕರಕಲಾದ ದಲಿತ ವ್ಯಕ್ತಿ ದೇವಿ ಶಂಕರ್ ಅವರ ಕುಟುಂಬವನ್ನು ಭೇಟಿಯಾಗಲು ಸಂಸದ ಚಂದ್ರಶೇಖರ್ ಆಜಾದ್‌ಗೆ ಪೊಲೀಸರು ನಿರ್ಬಂಧ ವಿಧಿಸಿದ್ದರು. ನೆರೆಯ ಕೌಶಂಬಿ ಜಿಲ್ಲೆಯ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗುವುದಕ್ಕೂ ತಡೆ ಒಡ್ಡಿದ ಜಿಲ್ಲಾಡಳಿತ, ಕಾನೂನು ಸುವ್ಯವಸ್ಥೆ ಕಾರಣ ನೀಡಿತ್ತು. ಈ ನಿರಾಕರಣೆಯ ಬೆನ್ನಲ್ಲೇ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಆಜಾದ್ ಭೇಟಿ ರದ್ದಾದ ಸುದ್ದಿ ತಿಳಿಯುತ್ತಿದ್ದಂತೆ ಕೆರಳಿದ ಸಂಸದರ ಬೆಂಬಲಿಗರು, ಸುಮಾರು ಎರಡು ಗಂಟೆಗಳ ಕಾಲ ಉದ್ರಿಕ್ತರಾಗಿ ವರ್ತಿಸಿದ್ದಾರೆ. ಅವರು ವಿಧ್ವಂಸಕ ಕೃತ್ಯ, ಬೆಂಕಿ ಹಚ್ಚುವಿಕೆ, ಡಜನ್‌ಗೂ ಹೆಚ್ಚು ವಾಹನಗಳಿಗೆ ಹಾನಿ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಗುಂಪು ಕಲ್ಲು ತೂರಾಟದಿಂದ ಎರಡು ಪೊಲೀಸ್ ವಾಹನಗಳನ್ನು ಜಖಂ ಮಾಡಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ಘಟನೆ ಬೆನ್ನಲ್ಲೇ 53 ಹೆಸರಿಸಿದ ಹಾಗೂ 500ಕ್ಕೂ ಹೆಚ್ಚು ಅಜ್ಞಾತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಗಲಭೆಕೋರರ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದು, ಪರಿಸ್ಥಿತಿ ತಿಳಿಗೊಳಿಸಲು ಶ್ರಮಿಸುತ್ತಿದ್ದಾರೆ. ಉಪ ಪೊಲೀಸ್ ಆಯುಕ್ತ (ಯಮುನಾಪರ್) ವಿವೇಕ್ ಚಂದ್ರ ಯಾದವ್, ಘಟನೆಯಲ್ಲಿ ಭಾಗಿಯಾದವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಮತ್ತು ಗ್ಯಾಂಗ್‌ಸ್ಟರ್ ಕಾಯ್ದೆ ಅಡಿ ಕಠಿಣ ಕ್ರಮ ನಿಶ್ಚಿತ ಎಂದಿದ್ದಾರೆ. ಸಾರ್ವಜನಿಕ ಆಸ್ತಿಗೆ ಆದ ನಷ್ಟದ ಪರಿಹಾರವನ್ನು ಆರೋಪಿಗಳಿಂದಲೇ ವಸೂಲಿ ಮಾಡಲಾಗುವುದು. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮೂಲಕ ಇತರರ ಗುರುತಿಸುವಿಕೆ ಕಾರ್ಯ ಭರದಿಂದ ಸಾಗಿದೆ.

ಇದೇ ವೇಳೆ, ಕರ್ಛನಾದ ಗಲಭೆಗಳಲ್ಲಿ ತಮ್ಮ ಕಾರ್ಯಕರ್ತರ ಪಾತ್ರವಿಲ್ಲ ಎಂದು ಚಂದ್ರಶೇಖರ್ ಆಜಾದ್ ಸ್ಪಷ್ಟಪಡಿಸಿದ್ದಾರೆ. ಆಜಾದ್ ಸಮಾಜ್ ಪಕ್ಷದ ರಾಜ್ಯಾಧ್ಯಕ್ಷ ಸುನಿಲ್ ಕುಮಾರ್ ಚಿತ್ತೋಡ್ ಸಹ ಈ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದು, ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಪಕ್ಷದ ಸಂಬಂಧವಿಲ್ಲ ಎಂದಿದ್ದಾರೆ. “ಇದು ನಮ್ಮ ಚಳುವಳಿಯನ್ನು ದೂಷಿಸಲು ಮಾಡಿದ ಯೋಜಿತ ಪಿತೂರಿ” ಎಂದು ಪಕ್ಷವು ಬಲವಾಗಿ ಪ್ರತಿಪಾದಿಸಿದೆ.

‘ಕೊನೆ ಉಸಿರಿನವರೆಗೂ ಹೋರಾಡುತ್ತೇನೆ’: ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...