Homeಮುಖಪುಟಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

- Advertisement -
- Advertisement -

ಕಾಶ್ಮೀರದ ಐತಿಹಾಸಿಕ ಅಂಜುಮನ್ ಔಕಾಫ್ ಜುಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅಧಿಕಾರಿಗಳು ನಿರಂತರವಾಗಿ ಅನುಮತಿ ನಿರಾಕರಿಸುತ್ತಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ಅಧಿಕೃತ ವಿವರಣೆಯನ್ನು ಕೊಟ್ಟಿಲ್ಲ. ಪ್ಯಾಲೆಸ್ತೀನ್‌ ಪರ ಪ್ರತಿಭಟನೆ ನಡೆಯಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಹುದು ಎಂದು ಕಲ್ಪಿತ ಕಾರಣವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ನಮಾಝ್‌ ನಡೆಯದೆ 10 ಶುಕ್ರವಾರಗಳೇ ಕಳೆದಿದ್ದು, ನಮ್ಮ ಧಾರ್ಮಿಕ ಹಕ್ಕನ್ನು ಅಧಿಕಾರಿಗಳು ಕಸಿದುಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

14ನೇ ಶತಮಾನದ ಅಂಜುಮನ್ ಔಕಾಫ್ ಜಮಾ ಮಸೀದಿಯ ಆಡಳಿತ ಮಂಡಳಿ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು,  ಶ್ರೀನಗರದ ಅಧಿಕಾರಿಗಳು ಹುರಿಯತ್ ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ. ಕಾಶ್ಮೀರದ ಮುಖ್ಯ ಧರ್ಮಗುರುಗಳೂ ಆಗಿರುವ ಮಿರ್ವೈಜ್ ಅವರು  ಶುಕ್ರವಾರದ ಪ್ರಾರ್ಥನೆ ಮತ್ತು ಇತರ ಪ್ರಮುಖ ಧಾರ್ಮಿಕ ದಿನಗಳಲ್ಲಿ ಮಸೀದಿಯಲ್ಲಿ ಮುಖ್ಯ ಧರ್ಮೋಪದೇಶವನ್ನು ನೀಡುತ್ತಿದ್ದರು. ಮಸೀದಿಯಲ್ಲಿ ಪ್ರಾರ್ಥನೆಗೆ ನಿರ್ಬಂಧಿಸಿರುವುದಕ್ಕೆ ಮತ್ತು ಧರ್ಮಗುರುವಿಗೆ ಗೃಹ ಬಂಧನ ವಿಧಿಸಿರುವುದಕ್ಕೆ ಅಧಿಕಾರಿಗಳು ಯಾವುದೇ ಕಾರಣವನ್ನು ನೀಡಿಲ್ಲ ಎಂದು ಮಸೀದಿಯ ವ್ಯವಸ್ಥಾಪಕ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಿರ್ವೈಜ್,  ಅಧಿಕಾರಿಗಳು ಜಾಮಿಯಾ ಮಸೀದಿಯನ್ನು ಗುರಿಯಾಗಿಸಿದ್ದಾರೆ. ಕಣಿವೆ ರಾಜ್ಯದ ಮುಸ್ಲಿಮರಿಗೆ ದುಃಖವನ್ನುಂಟುಮಾಡಲು ಮತ್ತು ಅವರಿಗೆ ಆಧುನಿಕ ಕಾಶ್ಮೀರದಲ್ಲಿ ಅವರ ಸ್ಥಾನಮಾನವನ್ನು ತೋರಿಸಲು ಈ ರೀತಿಯಾಗಿ ಮಾಡಲಾಗುತ್ತಿದೆ. ಮುಸ್ಲಿಮರ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡುವುದನ್ನು ಸರಕಾರ ನಿಲ್ಲಿಸಬೇಕು ಮತ್ತು ಅವರು ತಮ್ಮ ಮಸೀದಿಗಳಲ್ಲಿ ಅಡೆತಡೆಗಳಿಲ್ಲದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು. ಜನರ ಮೌನ ಮತ್ತು ಅವರ ಧಾರ್ಮಿಕ ಹಕ್ಕುಗಳ ಮೇಲೆ ಲಜ್ಜೆಗೆಟ್ಟು ದಾಳಿಗಳನ್ನು ಮಾಡುವಾಗ ಪ್ರತಿಕ್ರಿಯಿಸದಿರುವಿಕೆ ನಮ್ಮ ದೌರ್ಬಲ್ಯ ಎಂದು ತಪ್ಪಾಗಿ ಭಾವಿಸಬಾರದು ಎಂದು ಹೇಳಿದ್ದಾರೆ.

ನಾಲ್ಕು ವರ್ಷಗಳ ಗೃಹ ಬಂಧನದ ಬಳಿಕ ಮಿರ್ವೈಜ್ ಅವರನ್ನು ಇತ್ತೀಚೆಗೆ ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಅವರಿಗೆ ಶ್ರೀನಗರದ ನೌಹಟ್ಟಾ ಪ್ರದೇಶದ ಮಸೀದಿಯಲ್ಲಿ ಶುಕ್ರವಾರ ಧರ್ಮೋಪದೇಶವನ್ನು ನೀಡಲು ಅವಕಾಶ ಮಾಡಿಕೊಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಅವರು ಜನರನ್ನು ಉದ್ದೇಶಿಸಿ ಮಾತನಾಡುವಾಗ ಮಸೀದಿಯಲ್ಲಿ ಅವರು ಭಾವುಕರಾಗಿದ್ದರು. ಸಾವಿರಾರು ಜನರು ಮಸೀದಿಯಲ್ಲಿ ಅವರು ಭಾವುಕರಾಗಿ ಮಾತನಾಡುವುದರಿಂದ ಕಾನೂನು-ಸುವ್ಯವಸ್ಥೆ ಅಡಚಣೆಯಾಗಬಹುದು ಎನ್ನುವುದು ಅಧಿಕಾರಿಗಳು ಕೊಡುತ್ತಿರುವ ಕಾರಣವಾಗಿದೆ.

ಮಿರ್ವೈಜ್ ಅವರು ಸೆ.22 ರಂದು ಬಿಡುಗಡೆಯಾದಾಗಿನಿಂದ ಎರಡು ಶುಕ್ರವಾರ ಮಸೀದಿಯಲ್ಲಿ ತಮ್ಮ ಧರ್ಮೋಪದೇಶವನ್ನು ನೀಡಿದ್ದರು. ಅಧಿಕಾರಿಗಳು ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆಗೆ ಅನುಮತಿ ನಿರಾಕರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಮಸೀದಿಯ ಆಡಳಿತ ಮಂಡಳಿಯು ಅಧಿಕಾರಿಗಳು ಭದ್ರತಾ ಕಾಳಜಿಯ ಕಾರಣ ನೀಡಿ ಕಾಶ್ಮೀರದ ಜನರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್ಟಿಕಲ್ 370ನ್ನು ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರ ಸರ್ಕಾರದ  ಆಗಸ್ಟ್ 5, 2019ರ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ ವೇಳೆಯೇ ಈ ಐತಿಹಾಸಿಕ ಮಸೀದಿಯಲ್ಲಿ ಪ್ರಾರ್ಥನೆಗೆ ನಿರಾಕರಿಸಲಾಗಿದೆ.

ಕಳೆದ ತಿಂಗಳು ಗಾಝಾವನ್ನು ಬೆಂಬಲಿಸಿ ಪ್ರತಿಭಟನೆಗಳನ್ನು ನಡೆಸಬಹುದು ಎಂಬ ಆತಂಕದಿಂದ ಅಧಿಕಾರಿಗಳು ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಇದಲ್ಲದೆ ಸೂಫಿ ಸಂತರ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಸಮಸ್ಯೆಯನ್ನು ಪ್ರಸ್ತಾಪಿಸುವುದನ್ನು ತಪ್ಪಿಸಬೇಕು ಮತ್ತು ಪ್ಯಾಲೆಸ್ತೀನ್‌ ಸಮಸ್ಯೆ ಬಗ್ಗೆ ಮಸೀದಿಯಲ್ಲಿ ಧ್ವನಿ ಎತ್ತಬಾರದು ಎಂದು ಜಮ್ಮು-ಕಾಶ್ಮೀರದ ವಕ್ಫ್ ಮಂಡಳಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...