Homeಮುಖಪುಟಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

- Advertisement -
- Advertisement -

ಕಾಶ್ಮೀರದ ಐತಿಹಾಸಿಕ ಅಂಜುಮನ್ ಔಕಾಫ್ ಜುಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅಧಿಕಾರಿಗಳು ನಿರಂತರವಾಗಿ ಅನುಮತಿ ನಿರಾಕರಿಸುತ್ತಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ಅಧಿಕೃತ ವಿವರಣೆಯನ್ನು ಕೊಟ್ಟಿಲ್ಲ. ಪ್ಯಾಲೆಸ್ತೀನ್‌ ಪರ ಪ್ರತಿಭಟನೆ ನಡೆಯಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಹುದು ಎಂದು ಕಲ್ಪಿತ ಕಾರಣವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ನಮಾಝ್‌ ನಡೆಯದೆ 10 ಶುಕ್ರವಾರಗಳೇ ಕಳೆದಿದ್ದು, ನಮ್ಮ ಧಾರ್ಮಿಕ ಹಕ್ಕನ್ನು ಅಧಿಕಾರಿಗಳು ಕಸಿದುಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

14ನೇ ಶತಮಾನದ ಅಂಜುಮನ್ ಔಕಾಫ್ ಜಮಾ ಮಸೀದಿಯ ಆಡಳಿತ ಮಂಡಳಿ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು,  ಶ್ರೀನಗರದ ಅಧಿಕಾರಿಗಳು ಹುರಿಯತ್ ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ. ಕಾಶ್ಮೀರದ ಮುಖ್ಯ ಧರ್ಮಗುರುಗಳೂ ಆಗಿರುವ ಮಿರ್ವೈಜ್ ಅವರು  ಶುಕ್ರವಾರದ ಪ್ರಾರ್ಥನೆ ಮತ್ತು ಇತರ ಪ್ರಮುಖ ಧಾರ್ಮಿಕ ದಿನಗಳಲ್ಲಿ ಮಸೀದಿಯಲ್ಲಿ ಮುಖ್ಯ ಧರ್ಮೋಪದೇಶವನ್ನು ನೀಡುತ್ತಿದ್ದರು. ಮಸೀದಿಯಲ್ಲಿ ಪ್ರಾರ್ಥನೆಗೆ ನಿರ್ಬಂಧಿಸಿರುವುದಕ್ಕೆ ಮತ್ತು ಧರ್ಮಗುರುವಿಗೆ ಗೃಹ ಬಂಧನ ವಿಧಿಸಿರುವುದಕ್ಕೆ ಅಧಿಕಾರಿಗಳು ಯಾವುದೇ ಕಾರಣವನ್ನು ನೀಡಿಲ್ಲ ಎಂದು ಮಸೀದಿಯ ವ್ಯವಸ್ಥಾಪಕ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಿರ್ವೈಜ್,  ಅಧಿಕಾರಿಗಳು ಜಾಮಿಯಾ ಮಸೀದಿಯನ್ನು ಗುರಿಯಾಗಿಸಿದ್ದಾರೆ. ಕಣಿವೆ ರಾಜ್ಯದ ಮುಸ್ಲಿಮರಿಗೆ ದುಃಖವನ್ನುಂಟುಮಾಡಲು ಮತ್ತು ಅವರಿಗೆ ಆಧುನಿಕ ಕಾಶ್ಮೀರದಲ್ಲಿ ಅವರ ಸ್ಥಾನಮಾನವನ್ನು ತೋರಿಸಲು ಈ ರೀತಿಯಾಗಿ ಮಾಡಲಾಗುತ್ತಿದೆ. ಮುಸ್ಲಿಮರ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡುವುದನ್ನು ಸರಕಾರ ನಿಲ್ಲಿಸಬೇಕು ಮತ್ತು ಅವರು ತಮ್ಮ ಮಸೀದಿಗಳಲ್ಲಿ ಅಡೆತಡೆಗಳಿಲ್ಲದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು. ಜನರ ಮೌನ ಮತ್ತು ಅವರ ಧಾರ್ಮಿಕ ಹಕ್ಕುಗಳ ಮೇಲೆ ಲಜ್ಜೆಗೆಟ್ಟು ದಾಳಿಗಳನ್ನು ಮಾಡುವಾಗ ಪ್ರತಿಕ್ರಿಯಿಸದಿರುವಿಕೆ ನಮ್ಮ ದೌರ್ಬಲ್ಯ ಎಂದು ತಪ್ಪಾಗಿ ಭಾವಿಸಬಾರದು ಎಂದು ಹೇಳಿದ್ದಾರೆ.

ನಾಲ್ಕು ವರ್ಷಗಳ ಗೃಹ ಬಂಧನದ ಬಳಿಕ ಮಿರ್ವೈಜ್ ಅವರನ್ನು ಇತ್ತೀಚೆಗೆ ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಅವರಿಗೆ ಶ್ರೀನಗರದ ನೌಹಟ್ಟಾ ಪ್ರದೇಶದ ಮಸೀದಿಯಲ್ಲಿ ಶುಕ್ರವಾರ ಧರ್ಮೋಪದೇಶವನ್ನು ನೀಡಲು ಅವಕಾಶ ಮಾಡಿಕೊಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಅವರು ಜನರನ್ನು ಉದ್ದೇಶಿಸಿ ಮಾತನಾಡುವಾಗ ಮಸೀದಿಯಲ್ಲಿ ಅವರು ಭಾವುಕರಾಗಿದ್ದರು. ಸಾವಿರಾರು ಜನರು ಮಸೀದಿಯಲ್ಲಿ ಅವರು ಭಾವುಕರಾಗಿ ಮಾತನಾಡುವುದರಿಂದ ಕಾನೂನು-ಸುವ್ಯವಸ್ಥೆ ಅಡಚಣೆಯಾಗಬಹುದು ಎನ್ನುವುದು ಅಧಿಕಾರಿಗಳು ಕೊಡುತ್ತಿರುವ ಕಾರಣವಾಗಿದೆ.

ಮಿರ್ವೈಜ್ ಅವರು ಸೆ.22 ರಂದು ಬಿಡುಗಡೆಯಾದಾಗಿನಿಂದ ಎರಡು ಶುಕ್ರವಾರ ಮಸೀದಿಯಲ್ಲಿ ತಮ್ಮ ಧರ್ಮೋಪದೇಶವನ್ನು ನೀಡಿದ್ದರು. ಅಧಿಕಾರಿಗಳು ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆಗೆ ಅನುಮತಿ ನಿರಾಕರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಮಸೀದಿಯ ಆಡಳಿತ ಮಂಡಳಿಯು ಅಧಿಕಾರಿಗಳು ಭದ್ರತಾ ಕಾಳಜಿಯ ಕಾರಣ ನೀಡಿ ಕಾಶ್ಮೀರದ ಜನರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್ಟಿಕಲ್ 370ನ್ನು ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರ ಸರ್ಕಾರದ  ಆಗಸ್ಟ್ 5, 2019ರ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ ವೇಳೆಯೇ ಈ ಐತಿಹಾಸಿಕ ಮಸೀದಿಯಲ್ಲಿ ಪ್ರಾರ್ಥನೆಗೆ ನಿರಾಕರಿಸಲಾಗಿದೆ.

ಕಳೆದ ತಿಂಗಳು ಗಾಝಾವನ್ನು ಬೆಂಬಲಿಸಿ ಪ್ರತಿಭಟನೆಗಳನ್ನು ನಡೆಸಬಹುದು ಎಂಬ ಆತಂಕದಿಂದ ಅಧಿಕಾರಿಗಳು ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಇದಲ್ಲದೆ ಸೂಫಿ ಸಂತರ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಸಮಸ್ಯೆಯನ್ನು ಪ್ರಸ್ತಾಪಿಸುವುದನ್ನು ತಪ್ಪಿಸಬೇಕು ಮತ್ತು ಪ್ಯಾಲೆಸ್ತೀನ್‌ ಸಮಸ್ಯೆ ಬಗ್ಗೆ ಮಸೀದಿಯಲ್ಲಿ ಧ್ವನಿ ಎತ್ತಬಾರದು ಎಂದು ಜಮ್ಮು-ಕಾಶ್ಮೀರದ ವಕ್ಫ್ ಮಂಡಳಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...