Homeಮುಖಪುಟಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

- Advertisement -
- Advertisement -

ಕಾಶ್ಮೀರದ ಐತಿಹಾಸಿಕ ಅಂಜುಮನ್ ಔಕಾಫ್ ಜುಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅಧಿಕಾರಿಗಳು ನಿರಂತರವಾಗಿ ಅನುಮತಿ ನಿರಾಕರಿಸುತ್ತಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ಅಧಿಕೃತ ವಿವರಣೆಯನ್ನು ಕೊಟ್ಟಿಲ್ಲ. ಪ್ಯಾಲೆಸ್ತೀನ್‌ ಪರ ಪ್ರತಿಭಟನೆ ನಡೆಯಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಹುದು ಎಂದು ಕಲ್ಪಿತ ಕಾರಣವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ನಮಾಝ್‌ ನಡೆಯದೆ 10 ಶುಕ್ರವಾರಗಳೇ ಕಳೆದಿದ್ದು, ನಮ್ಮ ಧಾರ್ಮಿಕ ಹಕ್ಕನ್ನು ಅಧಿಕಾರಿಗಳು ಕಸಿದುಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

14ನೇ ಶತಮಾನದ ಅಂಜುಮನ್ ಔಕಾಫ್ ಜಮಾ ಮಸೀದಿಯ ಆಡಳಿತ ಮಂಡಳಿ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು,  ಶ್ರೀನಗರದ ಅಧಿಕಾರಿಗಳು ಹುರಿಯತ್ ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ. ಕಾಶ್ಮೀರದ ಮುಖ್ಯ ಧರ್ಮಗುರುಗಳೂ ಆಗಿರುವ ಮಿರ್ವೈಜ್ ಅವರು  ಶುಕ್ರವಾರದ ಪ್ರಾರ್ಥನೆ ಮತ್ತು ಇತರ ಪ್ರಮುಖ ಧಾರ್ಮಿಕ ದಿನಗಳಲ್ಲಿ ಮಸೀದಿಯಲ್ಲಿ ಮುಖ್ಯ ಧರ್ಮೋಪದೇಶವನ್ನು ನೀಡುತ್ತಿದ್ದರು. ಮಸೀದಿಯಲ್ಲಿ ಪ್ರಾರ್ಥನೆಗೆ ನಿರ್ಬಂಧಿಸಿರುವುದಕ್ಕೆ ಮತ್ತು ಧರ್ಮಗುರುವಿಗೆ ಗೃಹ ಬಂಧನ ವಿಧಿಸಿರುವುದಕ್ಕೆ ಅಧಿಕಾರಿಗಳು ಯಾವುದೇ ಕಾರಣವನ್ನು ನೀಡಿಲ್ಲ ಎಂದು ಮಸೀದಿಯ ವ್ಯವಸ್ಥಾಪಕ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಿರ್ವೈಜ್,  ಅಧಿಕಾರಿಗಳು ಜಾಮಿಯಾ ಮಸೀದಿಯನ್ನು ಗುರಿಯಾಗಿಸಿದ್ದಾರೆ. ಕಣಿವೆ ರಾಜ್ಯದ ಮುಸ್ಲಿಮರಿಗೆ ದುಃಖವನ್ನುಂಟುಮಾಡಲು ಮತ್ತು ಅವರಿಗೆ ಆಧುನಿಕ ಕಾಶ್ಮೀರದಲ್ಲಿ ಅವರ ಸ್ಥಾನಮಾನವನ್ನು ತೋರಿಸಲು ಈ ರೀತಿಯಾಗಿ ಮಾಡಲಾಗುತ್ತಿದೆ. ಮುಸ್ಲಿಮರ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡುವುದನ್ನು ಸರಕಾರ ನಿಲ್ಲಿಸಬೇಕು ಮತ್ತು ಅವರು ತಮ್ಮ ಮಸೀದಿಗಳಲ್ಲಿ ಅಡೆತಡೆಗಳಿಲ್ಲದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು. ಜನರ ಮೌನ ಮತ್ತು ಅವರ ಧಾರ್ಮಿಕ ಹಕ್ಕುಗಳ ಮೇಲೆ ಲಜ್ಜೆಗೆಟ್ಟು ದಾಳಿಗಳನ್ನು ಮಾಡುವಾಗ ಪ್ರತಿಕ್ರಿಯಿಸದಿರುವಿಕೆ ನಮ್ಮ ದೌರ್ಬಲ್ಯ ಎಂದು ತಪ್ಪಾಗಿ ಭಾವಿಸಬಾರದು ಎಂದು ಹೇಳಿದ್ದಾರೆ.

ನಾಲ್ಕು ವರ್ಷಗಳ ಗೃಹ ಬಂಧನದ ಬಳಿಕ ಮಿರ್ವೈಜ್ ಅವರನ್ನು ಇತ್ತೀಚೆಗೆ ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಅವರಿಗೆ ಶ್ರೀನಗರದ ನೌಹಟ್ಟಾ ಪ್ರದೇಶದ ಮಸೀದಿಯಲ್ಲಿ ಶುಕ್ರವಾರ ಧರ್ಮೋಪದೇಶವನ್ನು ನೀಡಲು ಅವಕಾಶ ಮಾಡಿಕೊಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಅವರು ಜನರನ್ನು ಉದ್ದೇಶಿಸಿ ಮಾತನಾಡುವಾಗ ಮಸೀದಿಯಲ್ಲಿ ಅವರು ಭಾವುಕರಾಗಿದ್ದರು. ಸಾವಿರಾರು ಜನರು ಮಸೀದಿಯಲ್ಲಿ ಅವರು ಭಾವುಕರಾಗಿ ಮಾತನಾಡುವುದರಿಂದ ಕಾನೂನು-ಸುವ್ಯವಸ್ಥೆ ಅಡಚಣೆಯಾಗಬಹುದು ಎನ್ನುವುದು ಅಧಿಕಾರಿಗಳು ಕೊಡುತ್ತಿರುವ ಕಾರಣವಾಗಿದೆ.

ಮಿರ್ವೈಜ್ ಅವರು ಸೆ.22 ರಂದು ಬಿಡುಗಡೆಯಾದಾಗಿನಿಂದ ಎರಡು ಶುಕ್ರವಾರ ಮಸೀದಿಯಲ್ಲಿ ತಮ್ಮ ಧರ್ಮೋಪದೇಶವನ್ನು ನೀಡಿದ್ದರು. ಅಧಿಕಾರಿಗಳು ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆಗೆ ಅನುಮತಿ ನಿರಾಕರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಮಸೀದಿಯ ಆಡಳಿತ ಮಂಡಳಿಯು ಅಧಿಕಾರಿಗಳು ಭದ್ರತಾ ಕಾಳಜಿಯ ಕಾರಣ ನೀಡಿ ಕಾಶ್ಮೀರದ ಜನರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್ಟಿಕಲ್ 370ನ್ನು ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರ ಸರ್ಕಾರದ  ಆಗಸ್ಟ್ 5, 2019ರ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ ವೇಳೆಯೇ ಈ ಐತಿಹಾಸಿಕ ಮಸೀದಿಯಲ್ಲಿ ಪ್ರಾರ್ಥನೆಗೆ ನಿರಾಕರಿಸಲಾಗಿದೆ.

ಕಳೆದ ತಿಂಗಳು ಗಾಝಾವನ್ನು ಬೆಂಬಲಿಸಿ ಪ್ರತಿಭಟನೆಗಳನ್ನು ನಡೆಸಬಹುದು ಎಂಬ ಆತಂಕದಿಂದ ಅಧಿಕಾರಿಗಳು ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಇದಲ್ಲದೆ ಸೂಫಿ ಸಂತರ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಸಮಸ್ಯೆಯನ್ನು ಪ್ರಸ್ತಾಪಿಸುವುದನ್ನು ತಪ್ಪಿಸಬೇಕು ಮತ್ತು ಪ್ಯಾಲೆಸ್ತೀನ್‌ ಸಮಸ್ಯೆ ಬಗ್ಗೆ ಮಸೀದಿಯಲ್ಲಿ ಧ್ವನಿ ಎತ್ತಬಾರದು ಎಂದು ಜಮ್ಮು-ಕಾಶ್ಮೀರದ ವಕ್ಫ್ ಮಂಡಳಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...