Homeಮುಖಪುಟಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

- Advertisement -
- Advertisement -

ಕಾಶ್ಮೀರದ ಐತಿಹಾಸಿಕ ಅಂಜುಮನ್ ಔಕಾಫ್ ಜುಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅಧಿಕಾರಿಗಳು ನಿರಂತರವಾಗಿ ಅನುಮತಿ ನಿರಾಕರಿಸುತ್ತಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ಅಧಿಕೃತ ವಿವರಣೆಯನ್ನು ಕೊಟ್ಟಿಲ್ಲ. ಪ್ಯಾಲೆಸ್ತೀನ್‌ ಪರ ಪ್ರತಿಭಟನೆ ನಡೆಯಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಹುದು ಎಂದು ಕಲ್ಪಿತ ಕಾರಣವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ನಮಾಝ್‌ ನಡೆಯದೆ 10 ಶುಕ್ರವಾರಗಳೇ ಕಳೆದಿದ್ದು, ನಮ್ಮ ಧಾರ್ಮಿಕ ಹಕ್ಕನ್ನು ಅಧಿಕಾರಿಗಳು ಕಸಿದುಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

14ನೇ ಶತಮಾನದ ಅಂಜುಮನ್ ಔಕಾಫ್ ಜಮಾ ಮಸೀದಿಯ ಆಡಳಿತ ಮಂಡಳಿ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು,  ಶ್ರೀನಗರದ ಅಧಿಕಾರಿಗಳು ಹುರಿಯತ್ ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ. ಕಾಶ್ಮೀರದ ಮುಖ್ಯ ಧರ್ಮಗುರುಗಳೂ ಆಗಿರುವ ಮಿರ್ವೈಜ್ ಅವರು  ಶುಕ್ರವಾರದ ಪ್ರಾರ್ಥನೆ ಮತ್ತು ಇತರ ಪ್ರಮುಖ ಧಾರ್ಮಿಕ ದಿನಗಳಲ್ಲಿ ಮಸೀದಿಯಲ್ಲಿ ಮುಖ್ಯ ಧರ್ಮೋಪದೇಶವನ್ನು ನೀಡುತ್ತಿದ್ದರು. ಮಸೀದಿಯಲ್ಲಿ ಪ್ರಾರ್ಥನೆಗೆ ನಿರ್ಬಂಧಿಸಿರುವುದಕ್ಕೆ ಮತ್ತು ಧರ್ಮಗುರುವಿಗೆ ಗೃಹ ಬಂಧನ ವಿಧಿಸಿರುವುದಕ್ಕೆ ಅಧಿಕಾರಿಗಳು ಯಾವುದೇ ಕಾರಣವನ್ನು ನೀಡಿಲ್ಲ ಎಂದು ಮಸೀದಿಯ ವ್ಯವಸ್ಥಾಪಕ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಿರ್ವೈಜ್,  ಅಧಿಕಾರಿಗಳು ಜಾಮಿಯಾ ಮಸೀದಿಯನ್ನು ಗುರಿಯಾಗಿಸಿದ್ದಾರೆ. ಕಣಿವೆ ರಾಜ್ಯದ ಮುಸ್ಲಿಮರಿಗೆ ದುಃಖವನ್ನುಂಟುಮಾಡಲು ಮತ್ತು ಅವರಿಗೆ ಆಧುನಿಕ ಕಾಶ್ಮೀರದಲ್ಲಿ ಅವರ ಸ್ಥಾನಮಾನವನ್ನು ತೋರಿಸಲು ಈ ರೀತಿಯಾಗಿ ಮಾಡಲಾಗುತ್ತಿದೆ. ಮುಸ್ಲಿಮರ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡುವುದನ್ನು ಸರಕಾರ ನಿಲ್ಲಿಸಬೇಕು ಮತ್ತು ಅವರು ತಮ್ಮ ಮಸೀದಿಗಳಲ್ಲಿ ಅಡೆತಡೆಗಳಿಲ್ಲದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು. ಜನರ ಮೌನ ಮತ್ತು ಅವರ ಧಾರ್ಮಿಕ ಹಕ್ಕುಗಳ ಮೇಲೆ ಲಜ್ಜೆಗೆಟ್ಟು ದಾಳಿಗಳನ್ನು ಮಾಡುವಾಗ ಪ್ರತಿಕ್ರಿಯಿಸದಿರುವಿಕೆ ನಮ್ಮ ದೌರ್ಬಲ್ಯ ಎಂದು ತಪ್ಪಾಗಿ ಭಾವಿಸಬಾರದು ಎಂದು ಹೇಳಿದ್ದಾರೆ.

ನಾಲ್ಕು ವರ್ಷಗಳ ಗೃಹ ಬಂಧನದ ಬಳಿಕ ಮಿರ್ವೈಜ್ ಅವರನ್ನು ಇತ್ತೀಚೆಗೆ ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಅವರಿಗೆ ಶ್ರೀನಗರದ ನೌಹಟ್ಟಾ ಪ್ರದೇಶದ ಮಸೀದಿಯಲ್ಲಿ ಶುಕ್ರವಾರ ಧರ್ಮೋಪದೇಶವನ್ನು ನೀಡಲು ಅವಕಾಶ ಮಾಡಿಕೊಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಅವರು ಜನರನ್ನು ಉದ್ದೇಶಿಸಿ ಮಾತನಾಡುವಾಗ ಮಸೀದಿಯಲ್ಲಿ ಅವರು ಭಾವುಕರಾಗಿದ್ದರು. ಸಾವಿರಾರು ಜನರು ಮಸೀದಿಯಲ್ಲಿ ಅವರು ಭಾವುಕರಾಗಿ ಮಾತನಾಡುವುದರಿಂದ ಕಾನೂನು-ಸುವ್ಯವಸ್ಥೆ ಅಡಚಣೆಯಾಗಬಹುದು ಎನ್ನುವುದು ಅಧಿಕಾರಿಗಳು ಕೊಡುತ್ತಿರುವ ಕಾರಣವಾಗಿದೆ.

ಮಿರ್ವೈಜ್ ಅವರು ಸೆ.22 ರಂದು ಬಿಡುಗಡೆಯಾದಾಗಿನಿಂದ ಎರಡು ಶುಕ್ರವಾರ ಮಸೀದಿಯಲ್ಲಿ ತಮ್ಮ ಧರ್ಮೋಪದೇಶವನ್ನು ನೀಡಿದ್ದರು. ಅಧಿಕಾರಿಗಳು ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆಗೆ ಅನುಮತಿ ನಿರಾಕರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಮಸೀದಿಯ ಆಡಳಿತ ಮಂಡಳಿಯು ಅಧಿಕಾರಿಗಳು ಭದ್ರತಾ ಕಾಳಜಿಯ ಕಾರಣ ನೀಡಿ ಕಾಶ್ಮೀರದ ಜನರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್ಟಿಕಲ್ 370ನ್ನು ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರ ಸರ್ಕಾರದ  ಆಗಸ್ಟ್ 5, 2019ರ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ ವೇಳೆಯೇ ಈ ಐತಿಹಾಸಿಕ ಮಸೀದಿಯಲ್ಲಿ ಪ್ರಾರ್ಥನೆಗೆ ನಿರಾಕರಿಸಲಾಗಿದೆ.

ಕಳೆದ ತಿಂಗಳು ಗಾಝಾವನ್ನು ಬೆಂಬಲಿಸಿ ಪ್ರತಿಭಟನೆಗಳನ್ನು ನಡೆಸಬಹುದು ಎಂಬ ಆತಂಕದಿಂದ ಅಧಿಕಾರಿಗಳು ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಇದಲ್ಲದೆ ಸೂಫಿ ಸಂತರ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಸಮಸ್ಯೆಯನ್ನು ಪ್ರಸ್ತಾಪಿಸುವುದನ್ನು ತಪ್ಪಿಸಬೇಕು ಮತ್ತು ಪ್ಯಾಲೆಸ್ತೀನ್‌ ಸಮಸ್ಯೆ ಬಗ್ಗೆ ಮಸೀದಿಯಲ್ಲಿ ಧ್ವನಿ ಎತ್ತಬಾರದು ಎಂದು ಜಮ್ಮು-ಕಾಶ್ಮೀರದ ವಕ್ಫ್ ಮಂಡಳಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...