Homeಮುಖಪುಟಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

- Advertisement -
- Advertisement -

ಕಾಶ್ಮೀರದ ಐತಿಹಾಸಿಕ ಅಂಜುಮನ್ ಔಕಾಫ್ ಜುಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅಧಿಕಾರಿಗಳು ನಿರಂತರವಾಗಿ ಅನುಮತಿ ನಿರಾಕರಿಸುತ್ತಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ಅಧಿಕೃತ ವಿವರಣೆಯನ್ನು ಕೊಟ್ಟಿಲ್ಲ. ಪ್ಯಾಲೆಸ್ತೀನ್‌ ಪರ ಪ್ರತಿಭಟನೆ ನಡೆಯಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಹುದು ಎಂದು ಕಲ್ಪಿತ ಕಾರಣವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ನಮಾಝ್‌ ನಡೆಯದೆ 10 ಶುಕ್ರವಾರಗಳೇ ಕಳೆದಿದ್ದು, ನಮ್ಮ ಧಾರ್ಮಿಕ ಹಕ್ಕನ್ನು ಅಧಿಕಾರಿಗಳು ಕಸಿದುಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

14ನೇ ಶತಮಾನದ ಅಂಜುಮನ್ ಔಕಾಫ್ ಜಮಾ ಮಸೀದಿಯ ಆಡಳಿತ ಮಂಡಳಿ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು,  ಶ್ರೀನಗರದ ಅಧಿಕಾರಿಗಳು ಹುರಿಯತ್ ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ. ಕಾಶ್ಮೀರದ ಮುಖ್ಯ ಧರ್ಮಗುರುಗಳೂ ಆಗಿರುವ ಮಿರ್ವೈಜ್ ಅವರು  ಶುಕ್ರವಾರದ ಪ್ರಾರ್ಥನೆ ಮತ್ತು ಇತರ ಪ್ರಮುಖ ಧಾರ್ಮಿಕ ದಿನಗಳಲ್ಲಿ ಮಸೀದಿಯಲ್ಲಿ ಮುಖ್ಯ ಧರ್ಮೋಪದೇಶವನ್ನು ನೀಡುತ್ತಿದ್ದರು. ಮಸೀದಿಯಲ್ಲಿ ಪ್ರಾರ್ಥನೆಗೆ ನಿರ್ಬಂಧಿಸಿರುವುದಕ್ಕೆ ಮತ್ತು ಧರ್ಮಗುರುವಿಗೆ ಗೃಹ ಬಂಧನ ವಿಧಿಸಿರುವುದಕ್ಕೆ ಅಧಿಕಾರಿಗಳು ಯಾವುದೇ ಕಾರಣವನ್ನು ನೀಡಿಲ್ಲ ಎಂದು ಮಸೀದಿಯ ವ್ಯವಸ್ಥಾಪಕ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಿರ್ವೈಜ್,  ಅಧಿಕಾರಿಗಳು ಜಾಮಿಯಾ ಮಸೀದಿಯನ್ನು ಗುರಿಯಾಗಿಸಿದ್ದಾರೆ. ಕಣಿವೆ ರಾಜ್ಯದ ಮುಸ್ಲಿಮರಿಗೆ ದುಃಖವನ್ನುಂಟುಮಾಡಲು ಮತ್ತು ಅವರಿಗೆ ಆಧುನಿಕ ಕಾಶ್ಮೀರದಲ್ಲಿ ಅವರ ಸ್ಥಾನಮಾನವನ್ನು ತೋರಿಸಲು ಈ ರೀತಿಯಾಗಿ ಮಾಡಲಾಗುತ್ತಿದೆ. ಮುಸ್ಲಿಮರ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡುವುದನ್ನು ಸರಕಾರ ನಿಲ್ಲಿಸಬೇಕು ಮತ್ತು ಅವರು ತಮ್ಮ ಮಸೀದಿಗಳಲ್ಲಿ ಅಡೆತಡೆಗಳಿಲ್ಲದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು. ಜನರ ಮೌನ ಮತ್ತು ಅವರ ಧಾರ್ಮಿಕ ಹಕ್ಕುಗಳ ಮೇಲೆ ಲಜ್ಜೆಗೆಟ್ಟು ದಾಳಿಗಳನ್ನು ಮಾಡುವಾಗ ಪ್ರತಿಕ್ರಿಯಿಸದಿರುವಿಕೆ ನಮ್ಮ ದೌರ್ಬಲ್ಯ ಎಂದು ತಪ್ಪಾಗಿ ಭಾವಿಸಬಾರದು ಎಂದು ಹೇಳಿದ್ದಾರೆ.

ನಾಲ್ಕು ವರ್ಷಗಳ ಗೃಹ ಬಂಧನದ ಬಳಿಕ ಮಿರ್ವೈಜ್ ಅವರನ್ನು ಇತ್ತೀಚೆಗೆ ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಅವರಿಗೆ ಶ್ರೀನಗರದ ನೌಹಟ್ಟಾ ಪ್ರದೇಶದ ಮಸೀದಿಯಲ್ಲಿ ಶುಕ್ರವಾರ ಧರ್ಮೋಪದೇಶವನ್ನು ನೀಡಲು ಅವಕಾಶ ಮಾಡಿಕೊಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಅವರು ಜನರನ್ನು ಉದ್ದೇಶಿಸಿ ಮಾತನಾಡುವಾಗ ಮಸೀದಿಯಲ್ಲಿ ಅವರು ಭಾವುಕರಾಗಿದ್ದರು. ಸಾವಿರಾರು ಜನರು ಮಸೀದಿಯಲ್ಲಿ ಅವರು ಭಾವುಕರಾಗಿ ಮಾತನಾಡುವುದರಿಂದ ಕಾನೂನು-ಸುವ್ಯವಸ್ಥೆ ಅಡಚಣೆಯಾಗಬಹುದು ಎನ್ನುವುದು ಅಧಿಕಾರಿಗಳು ಕೊಡುತ್ತಿರುವ ಕಾರಣವಾಗಿದೆ.

ಮಿರ್ವೈಜ್ ಅವರು ಸೆ.22 ರಂದು ಬಿಡುಗಡೆಯಾದಾಗಿನಿಂದ ಎರಡು ಶುಕ್ರವಾರ ಮಸೀದಿಯಲ್ಲಿ ತಮ್ಮ ಧರ್ಮೋಪದೇಶವನ್ನು ನೀಡಿದ್ದರು. ಅಧಿಕಾರಿಗಳು ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆಗೆ ಅನುಮತಿ ನಿರಾಕರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಮಸೀದಿಯ ಆಡಳಿತ ಮಂಡಳಿಯು ಅಧಿಕಾರಿಗಳು ಭದ್ರತಾ ಕಾಳಜಿಯ ಕಾರಣ ನೀಡಿ ಕಾಶ್ಮೀರದ ಜನರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್ಟಿಕಲ್ 370ನ್ನು ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರ ಸರ್ಕಾರದ  ಆಗಸ್ಟ್ 5, 2019ರ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ ವೇಳೆಯೇ ಈ ಐತಿಹಾಸಿಕ ಮಸೀದಿಯಲ್ಲಿ ಪ್ರಾರ್ಥನೆಗೆ ನಿರಾಕರಿಸಲಾಗಿದೆ.

ಕಳೆದ ತಿಂಗಳು ಗಾಝಾವನ್ನು ಬೆಂಬಲಿಸಿ ಪ್ರತಿಭಟನೆಗಳನ್ನು ನಡೆಸಬಹುದು ಎಂಬ ಆತಂಕದಿಂದ ಅಧಿಕಾರಿಗಳು ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಇದಲ್ಲದೆ ಸೂಫಿ ಸಂತರ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಸಮಸ್ಯೆಯನ್ನು ಪ್ರಸ್ತಾಪಿಸುವುದನ್ನು ತಪ್ಪಿಸಬೇಕು ಮತ್ತು ಪ್ಯಾಲೆಸ್ತೀನ್‌ ಸಮಸ್ಯೆ ಬಗ್ಗೆ ಮಸೀದಿಯಲ್ಲಿ ಧ್ವನಿ ಎತ್ತಬಾರದು ಎಂದು ಜಮ್ಮು-ಕಾಶ್ಮೀರದ ವಕ್ಫ್ ಮಂಡಳಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...