Homeಮುಖಪುಟರಂಝಾನ್ ಹಬ್ಬದಂದು ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಕ್ರಿಮಿನಲ್ ಕೇಸ್, ಪಾಸ್‌ಪೋರ್ಟ್‌- ಲೈಸನ್ಸ್ ರದ್ದು!

ರಂಝಾನ್ ಹಬ್ಬದಂದು ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಕ್ರಿಮಿನಲ್ ಕೇಸ್, ಪಾಸ್‌ಪೋರ್ಟ್‌- ಲೈಸನ್ಸ್ ರದ್ದು!

- Advertisement -
- Advertisement -

ಈದುಲ್ ಫಿತರ್ (ರಂಝಾನ್‌) ಹಬ್ಬಕ್ಕೂ ಮುನ್ನ ನಗರದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಿರುವ ಉತ್ತರ ಪ್ರದೇಶದ ಮೀರತ್ ಪೊಲೀಸರು, ರಸ್ತೆಯಲ್ಲಿ ನಮಾಝ್ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಪಾಸ್‌ಪೋರ್ಟ್‌ ಮತ್ತು ಡ್ರೈವಿಂಗ್ ಲೈಸನ್ಸ್ ರದ್ದುಗೊಳಿಸಲಾಗುವುದು ಎಂದಿದ್ದಾರೆ.

ಬುಧವಾರ, ಮೀರತ್ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ವಿಜಯ್ ಕುಮಾರ್ ಸಿಂಗ್ ಅವರಿಗೆ ಎಂಟು ಜನರ ಪಟ್ಟಿಯನ್ನು ಸಲ್ಲಿಸಿದ್ದು, ಅವರು ಕಳೆದ ವರ್ಷದ ಈದ್ ಸಮಯದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಬಾರದು ಎಂಬ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಆ ಎಂಟು ಜನರ ಡ್ರೈವಿಂಗ್ ಲೈಸನ್ಸ್ ಮತ್ತು ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.

“ಜನರು ಹತ್ತಿರದ ಮಸೀದಿಯಲ್ಲಿ ನಮಾಝ್ ಮಾಡಬೇಕು ಅಥವಾ ಸಮಯಕ್ಕೆ ಸರಿಯಾಗಿ ಈದ್ಗಾ ತಲುಪಬೇಕು ಎಂದು ನಾವು ಮನವಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ನಾವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದೇವೆ” ಎಂದು ಮೀರತ್ ನಗರ ಎಸ್ಪಿ ಆಯುಷ್ ವಿಕ್ರಮ್ ಸಿಂಗ್ ಹೇಳಿದ್ದಾರೆ.

“ಕಳೆದ ವರ್ಷ ಈದ್ ಹಬ್ಬದಂದು ಕೆಲವರು ರಸ್ತೆಯಲ್ಲಿ ನಮಾಝ್ ಮಾಡಿದ್ದರು. ನಾವು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಈ ಬಾರಿಯೂ ಯಾರಾದರೂ ಓಪನ್ ಜಾಗದಲ್ಲಿ ಪ್ರಾರ್ಥನೆಗೆ ಕುಳಿತರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾವು ನಿರಂತರವಾಗಿ ಮನವಿ ಮಾಡುತ್ತಿದ್ದೇವೆ” ಎಂದಿದ್ದಾರೆ.

ಒಬ್ಬ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದರೆ, ಅದು ಅವರ ಲೈಸನ್ಸ್ ಮತ್ತು ಪಾಸ್‌ಪೋರ್ಟ್ ರದ್ದತಿಗೆ ಕಾರಣವಾಗಬಹುದು. ಪ್ರಕರಣ ದಾಖಲಾದ ವ್ಯಕ್ತಿಗೆ ಪಾಸ್‌ಪೋರ್ಟ್ ಅಥವಾ ಲೈಸನ್ಸ್‌ಗೆ ಅರ್ಜಿ ಸಲ್ಲಿಸಲು ಎನ್‌ಒಸಿ (ನಿರಾಕ್ಷೇಪಣಾ ಪ್ರಮಾಣಪತ್ರ) ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

ನಿಯಮಗಳನ್ನು ಉಲ್ಲಂಘಿಸುವವರು ಪ್ರಕರಣ ದಾಖಲಿಸುವುದು ಮತ್ತು ಬಂಧನ ಸೇರಿದಂತೆ ತಕ್ಷಣದ ದಂಡನಾತ್ಮಕ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮೀರತ್ ವಲಯದ ಡಿಐಜಿ ಕಲಾನಿಧಿ ನೈಥಾನಿ ಹೇಳಿದ್ದಾರೆ.

ಸಂಭಾಲ್‌ನಲ್ಲಿ, ಎಸ್‌ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಅವರು, ರಸ್ತೆಗಳಲ್ಲಿ ಪ್ರಾರ್ಥನೆ ಸಲ್ಲಿಸುವುದರ ವಿರುದ್ಧ ಪೊಲೀಸರು ಸೂಚನೆ ನೀಡಿದ್ದಾರೆ. ಯಾರೂ ರಸ್ತೆಗಳಲ್ಲಿ ನಮಾಝ್ ಮಾಡಬಾರದು. ಮನೆಗಳಲ್ಲಿ ಸಾಮೂಹಿಕ ನಮಾಝ್‌ಗೆ ಅವಕಾಶವಿಲ್ಲ. ಜನರು ತಮ್ಮ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಅವರು ಜಾಗರೂಕರಾಗಿರಬೇಕು” ಎಂದಿದ್ದಾರೆ.

ಈದ್ ಪ್ರಾರ್ಥನೆಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಆದೇಶ ಹೊರಡಿಸಲಾಗಿಲ್ಲ ಎಂದು ಅಲಿಘರ್ ಎಸ್ಪಿ ಮೃಗಾನಿಕ್ ಶೇಖರ್ ಪಾಠಕ್ ಹೇಳಿದ್ದಾರೆ. “ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪ್ರಾರ್ಥನೆ ಸಲ್ಲಿಸಬಾರದು ಎಂಬ ಯುಪಿ ಸರ್ಕಾರದ ಸಲಹೆಯನ್ನು ನಾವು ಪಾಲಿಸುತ್ತೇವೆ. ಶಾಂತಿ ಸಮಿತಿ ಸಭೆಯನ್ನು ಕರೆಯಲಾಗಿದೆ ಮತ್ತು ಜನರಿಗೆ ಸಲಹೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ನಾವು ಯಾವುದೇ ನಿರ್ದಿಷ್ಟ ಆದೇಶವನ್ನು ಹೊರಡಿಸಿಲ್ಲ ಎಂದು ಹತ್ರಾಸ್ ಎಸ್ಪಿ ಚಿರಂಜೀವ್ ನಾಥ್ ಸಿನ್ಹಾ ಹೇಳಿದ್ದಾರೆ. “ಸಮುದಾಯವನ್ನು ಲೆಕ್ಕಿಸದೆ ಯಾರಿಗೂ ರಸ್ತೆಗಳಲ್ಲಿ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ನಾವು ಅವಕಾಶ ನೀಡುವುದಿಲ್ಲ. ಇದು ಜನರ ಹಬ್ಬ ಮತ್ತು ಅವರು ತಮ್ಮ ಮನೆಯಲ್ಲಿ ಆಚರಿಸಬಹುದು” ಎಂದು ಎಂದಿದ್ದಾರೆ.

ಜನದಟ್ಟಣೆ ಇದ್ದಲ್ಲಿ, ಜನರು ಪಾಳಿಯಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದ್ದೇವೆ ಎಂದು ಗಾಝಿಯಾಬಾದ್ ಪೊಲೀಸರು ತಿಳಿಸಿದ್ದಾರೆ. “ನಾವು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಮಸೀದಿಗಳು ಮತ್ತು ಈದ್ಗಾ ಬಳಿ ಭದ್ರತಾ ಪಡೆಗಳನ್ನು ನಿಯೋಜಿಸಿದ್ದೇವೆ. ಡ್ರೋನ್‌ಗಳ ಮೂಲಕ ನಿರಂತರ ಕಣ್ಗಾವಲು ಇರುತ್ತದೆ” ಎಂದು ಟ್ರಾನ್ಸ್-ಹಿಂಡನ್‌ನ ಡಿಸಿಪಿ ದಶರಥ್ ನಿಮಿಷ್ ಪಾಟೀಲ್ ತಿಳಿಸಿದ್ದಾರೆ.

ಈದ್ ಶಾಪಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮುಸ್ಲಿಂ ಬಾಲಕನ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ: ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...

ತಮಿಳುನಾಡು ವಿಧಾನಸಭಾ ಚುನಾವಣೆ 2026| ದಕ್ಷಿಣ ರಾಜ್ಯಗಳು ‘ದೆಹಲಿ ತಂಡ’ವನ್ನು ಓಡಿಸಬೇಕು: ಉದಯನಿಧಿ ಸ್ಟಾಲಿನ್

ತಮಿಳುನಾಡು: ಮುಂಬರುವ ವಿಧಾನಸಭಾ ಚುನಾವಣೆಗಳು ತಮಿಳುನಾಡು ತಂಡ ಮತ್ತು ದೆಹಲಿ ತಂಡದ ನಡುವಿನ ಹೋರಾಟವಾಗಿದ್ದು, ದಕ್ಷಿಣ ರಾಜ್ಯವು ದೆಹಲಿಯನ್ನು "ಓಡಿಸಬೇಕು" ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಮತ್ತೊಮ್ಮೆ ಒತ್ತಾಯಿಸಿದ್ದಾರೆ. "ನಮ್ಮ ನಾಯಕ (ಎಂ.ಕೆ....

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...