Homeಕರ್ನಾಟಕಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

- Advertisement -
- Advertisement -

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವುದಕ್ಕೆ ಮತ್ತು ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಎಲ್‌ಕೆಜಿ, ಯುಕೆಜಿ ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ” ಎಂದರು.

“ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು” ಎಂದರು.

“ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಪೂರ್ವ ಪ್ರಾಥಮಿಕ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

“ಪೂರ್ವ‌ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದರು.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ; ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಮುಂದಾದ ಶಿಕ್ಷಣ ಇಲಾಖೆ; ‘ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ’ ಸಮಿತಿಯಿಂದ ಸರ್ಕಾರಕ್ಕೆ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...