Homeಕರ್ನಾಟಕಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

ಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

- Advertisement -
- Advertisement -

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಆಪ್ತ ಸಹಾಯಕಿ ವಿ.ಕೆ.ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಪ್ರಕರಣದ ಮೊದಲನೇ ಆರೋಪಿ ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಮತ್ತು ಎರಡನೇ ಆರೋಪಿ ಕರ್ನಾಟಕ ಕಾರಾಗೃಹ ಅಕಾಡೆಮಿಯ ಉಪ ನಿರ್ದೇಶಕಿ ಡಾ. ಆರ್ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ.

ಪ್ರಕರಣದ ತನಿಖೆ ಪೂರ್ಣಗೊಳಿಸಿ, ವರದಿ ಸಲ್ಲಿಸಲು ವಿಧಿಸಲಾಗಿರುವ ಗಡುವು ವಿಸ್ತರಣೆಗೆ ಕೋರಿ ಎಸಿಬಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಚಾರಣಾ ನ್ಯಾಯಾಲಯಕ್ಕೆ 2022 ರ ಜನವರಿ 7ರಂದು ದೋಷಾರೋಪ ಪಟ್ಟಿ ಸಲ್ಲಿಸಿದ ಬಗ್ಗೆ ಎಸಿಬಿ ಪರ ವಕೀಲ ಪಿ.ಎನ್‌.ಮನಮೋಹನ್‌ ಅವರ ಹೇಳಿಕೆ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

“ಆರೋಪಿಗಳಾದ ಕೃಷ್ಣ ಕುಮಾರ್ ಮತ್ತು ಡಾ. ಆರ್.ಅನಿತಾ ಅವರು ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ್ದಾರೆ. ಮಹಿಳಾ ಕೈದಿಗಳ ವಿಭಾಗದ ಕಾರಿಡಾರ್‌ ಅನ್ನು ಬಳಸಿಕೊಳ್ಳಲು, ಇತರೆ ಕೈದಿಗಳಿಂದ ಸ್ವತಂತ್ರವಾಗಿ ವಾಸಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ಮಂಚ ಹಾಗೂ ಹಾಸಿಗೆ ವ್ಯವಸ್ಥೆ ಒದಗಿಸಿದ್ದಾರೆ. ಅವರ ಸಂದರ್ಶನಕ್ಕೆ ಬಂದವರಿಗೆ ಜೈಲು ಅಧಿಕಾರಿಗಳ ಕಚೇರಿಯಲ್ಲಿಯೇ, ಹೆಚ್ಚಿನ ಸಮಯಾವಕಾಶ ನೀಡಿ, ಅವಕಾಶ ಮಾಡಿಕೊಟ್ಟಿರುವ ಬಗ್ಗೆ ದೃಢಪಟ್ಟಿರುತ್ತದೆ. ಇವರ ವಿರುದ್ಧ ಐಪಿಸಿ ಕಲಂ 120(ಬಿ) ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ -1988ರ ಕಲಂ 13(1)(ಸಿ) ಅಡಿಯಲ್ಲಿ ವಿಚಾರಣೆ ನಡೆಸಲು ಪೂರ್ವಾನುಮತಿ ನೀಡಲಾಗಿದೆ” ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಶಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಸಂಬಂಧ ಕಾರಾಗೃಹ ಡಿಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಎಚ್.ಎನ್. ಸತ್ಯನಾರಾಯಣ ಅವರು ನಿರ್ದೋಷಿಯಾಗಿದ್ದಾರೆ ಎಂದು ಎಸಿಬಿ ತನ್ನ ವರದಿಯಲ್ಲಿ ತಿಳಿಸಿದೆ” ಎಂದು ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಶಶಿಕಲಾ, ಮತ್ತವರ ಸಂಬಂಧಿ ಇಳವರಸಿಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಜೈಲಿನ ಅಧಿಕಾರಿಗಳು 2 ಕೋಟಿ ರೂಪಾಯಿ ಲಂಚ ಪಡೆದ ಆರೋಪವಿತ್ತು. ಈ ಪ್ರಕರಣವನ್ನು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಏಕ ಸದಸ್ಯ ಸಮಿತಿ ವಿಚಾರಣೆ ನಡೆಸಿ ವರದಿ ಸಲ್ಲಿಸಿತ್ತು. ನಂತರ ಎಸಿಬಿ ಪ್ರಕರಣದ ತನಿಖೆ ನಡೆಸಿತು. ಎಸಿಬಿ ವಿಳಂಬ ಮಾಡುತ್ತಿರುವುದಾಗಿ ಆಕ್ಷೇಪಿಸಿ, ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್.ಗೀತಾ ಎಂಬುವರು ಹೈಕೋರ್ಟ್‌ಗೆ 2021ರ ಮಾರ್ಚ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದರು.

ಎರಡು ತಿಂಗಳಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ 2021ರ ಜೂನ್‌ 11 ರಂದು ಹೈಕೋರ್ಟ್ ಎಸಿಬಿಗೆ ನಿರ್ದೇಶಿಸಿತ್ತು. ಹೈಕೋರ್ಟ್ ನೀಡಿದ್ದ ಗಡುವಿನಲ್ಲಿ ತನಿಖೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಎಸಿಬಿ ಮಧ್ಯಂತರ ಅರ್ಜಿ ಸಲ್ಲಿಸಿ, ಗಡುವು ವಿಸ್ತರಣೆಗೆ ಕೋರಿತ್ತು. 2017 ರಲ್ಲಿ ಅಕ್ರಮ ಆಸ್ತಿ ಗಳಿಗೆ ಪ್ರಕರಣದಡಿ ಜೈಲು ಸೇರಿದ್ದ ಶಶಿಕಲಾ ಹಾಗೂ ಇಳವರಸಿ 2021 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ: ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ ಸರ್ಕಾರದ ಆದೇಶ ರದ್ದು ಕೋರಿ ಆರೋಪಿ ಡಾ.ಆರ್ ಅನಿತಾ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ನೇತೃತ್ವದ ಏಕ ಸದಸ್ಯ ಪೀಠ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.


ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...