Homeಕರ್ನಾಟಕಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

ಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

- Advertisement -
- Advertisement -

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಆಪ್ತ ಸಹಾಯಕಿ ವಿ.ಕೆ.ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಪ್ರಕರಣದ ಮೊದಲನೇ ಆರೋಪಿ ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಮತ್ತು ಎರಡನೇ ಆರೋಪಿ ಕರ್ನಾಟಕ ಕಾರಾಗೃಹ ಅಕಾಡೆಮಿಯ ಉಪ ನಿರ್ದೇಶಕಿ ಡಾ. ಆರ್ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ.

ಪ್ರಕರಣದ ತನಿಖೆ ಪೂರ್ಣಗೊಳಿಸಿ, ವರದಿ ಸಲ್ಲಿಸಲು ವಿಧಿಸಲಾಗಿರುವ ಗಡುವು ವಿಸ್ತರಣೆಗೆ ಕೋರಿ ಎಸಿಬಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಚಾರಣಾ ನ್ಯಾಯಾಲಯಕ್ಕೆ 2022 ರ ಜನವರಿ 7ರಂದು ದೋಷಾರೋಪ ಪಟ್ಟಿ ಸಲ್ಲಿಸಿದ ಬಗ್ಗೆ ಎಸಿಬಿ ಪರ ವಕೀಲ ಪಿ.ಎನ್‌.ಮನಮೋಹನ್‌ ಅವರ ಹೇಳಿಕೆ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

“ಆರೋಪಿಗಳಾದ ಕೃಷ್ಣ ಕುಮಾರ್ ಮತ್ತು ಡಾ. ಆರ್.ಅನಿತಾ ಅವರು ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ್ದಾರೆ. ಮಹಿಳಾ ಕೈದಿಗಳ ವಿಭಾಗದ ಕಾರಿಡಾರ್‌ ಅನ್ನು ಬಳಸಿಕೊಳ್ಳಲು, ಇತರೆ ಕೈದಿಗಳಿಂದ ಸ್ವತಂತ್ರವಾಗಿ ವಾಸಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ಮಂಚ ಹಾಗೂ ಹಾಸಿಗೆ ವ್ಯವಸ್ಥೆ ಒದಗಿಸಿದ್ದಾರೆ. ಅವರ ಸಂದರ್ಶನಕ್ಕೆ ಬಂದವರಿಗೆ ಜೈಲು ಅಧಿಕಾರಿಗಳ ಕಚೇರಿಯಲ್ಲಿಯೇ, ಹೆಚ್ಚಿನ ಸಮಯಾವಕಾಶ ನೀಡಿ, ಅವಕಾಶ ಮಾಡಿಕೊಟ್ಟಿರುವ ಬಗ್ಗೆ ದೃಢಪಟ್ಟಿರುತ್ತದೆ. ಇವರ ವಿರುದ್ಧ ಐಪಿಸಿ ಕಲಂ 120(ಬಿ) ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ -1988ರ ಕಲಂ 13(1)(ಸಿ) ಅಡಿಯಲ್ಲಿ ವಿಚಾರಣೆ ನಡೆಸಲು ಪೂರ್ವಾನುಮತಿ ನೀಡಲಾಗಿದೆ” ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಶಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಸಂಬಂಧ ಕಾರಾಗೃಹ ಡಿಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಎಚ್.ಎನ್. ಸತ್ಯನಾರಾಯಣ ಅವರು ನಿರ್ದೋಷಿಯಾಗಿದ್ದಾರೆ ಎಂದು ಎಸಿಬಿ ತನ್ನ ವರದಿಯಲ್ಲಿ ತಿಳಿಸಿದೆ” ಎಂದು ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಶಶಿಕಲಾ, ಮತ್ತವರ ಸಂಬಂಧಿ ಇಳವರಸಿಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಜೈಲಿನ ಅಧಿಕಾರಿಗಳು 2 ಕೋಟಿ ರೂಪಾಯಿ ಲಂಚ ಪಡೆದ ಆರೋಪವಿತ್ತು. ಈ ಪ್ರಕರಣವನ್ನು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಏಕ ಸದಸ್ಯ ಸಮಿತಿ ವಿಚಾರಣೆ ನಡೆಸಿ ವರದಿ ಸಲ್ಲಿಸಿತ್ತು. ನಂತರ ಎಸಿಬಿ ಪ್ರಕರಣದ ತನಿಖೆ ನಡೆಸಿತು. ಎಸಿಬಿ ವಿಳಂಬ ಮಾಡುತ್ತಿರುವುದಾಗಿ ಆಕ್ಷೇಪಿಸಿ, ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್.ಗೀತಾ ಎಂಬುವರು ಹೈಕೋರ್ಟ್‌ಗೆ 2021ರ ಮಾರ್ಚ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದರು.

ಎರಡು ತಿಂಗಳಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ 2021ರ ಜೂನ್‌ 11 ರಂದು ಹೈಕೋರ್ಟ್ ಎಸಿಬಿಗೆ ನಿರ್ದೇಶಿಸಿತ್ತು. ಹೈಕೋರ್ಟ್ ನೀಡಿದ್ದ ಗಡುವಿನಲ್ಲಿ ತನಿಖೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಎಸಿಬಿ ಮಧ್ಯಂತರ ಅರ್ಜಿ ಸಲ್ಲಿಸಿ, ಗಡುವು ವಿಸ್ತರಣೆಗೆ ಕೋರಿತ್ತು. 2017 ರಲ್ಲಿ ಅಕ್ರಮ ಆಸ್ತಿ ಗಳಿಗೆ ಪ್ರಕರಣದಡಿ ಜೈಲು ಸೇರಿದ್ದ ಶಶಿಕಲಾ ಹಾಗೂ ಇಳವರಸಿ 2021 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ: ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ ಸರ್ಕಾರದ ಆದೇಶ ರದ್ದು ಕೋರಿ ಆರೋಪಿ ಡಾ.ಆರ್ ಅನಿತಾ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ನೇತೃತ್ವದ ಏಕ ಸದಸ್ಯ ಪೀಠ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.


ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...