Homeಕರ್ನಾಟಕಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

ಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

- Advertisement -
- Advertisement -

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಆಪ್ತ ಸಹಾಯಕಿ ವಿ.ಕೆ.ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಪ್ರಕರಣದ ಮೊದಲನೇ ಆರೋಪಿ ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಮತ್ತು ಎರಡನೇ ಆರೋಪಿ ಕರ್ನಾಟಕ ಕಾರಾಗೃಹ ಅಕಾಡೆಮಿಯ ಉಪ ನಿರ್ದೇಶಕಿ ಡಾ. ಆರ್ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ.

ಪ್ರಕರಣದ ತನಿಖೆ ಪೂರ್ಣಗೊಳಿಸಿ, ವರದಿ ಸಲ್ಲಿಸಲು ವಿಧಿಸಲಾಗಿರುವ ಗಡುವು ವಿಸ್ತರಣೆಗೆ ಕೋರಿ ಎಸಿಬಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಚಾರಣಾ ನ್ಯಾಯಾಲಯಕ್ಕೆ 2022 ರ ಜನವರಿ 7ರಂದು ದೋಷಾರೋಪ ಪಟ್ಟಿ ಸಲ್ಲಿಸಿದ ಬಗ್ಗೆ ಎಸಿಬಿ ಪರ ವಕೀಲ ಪಿ.ಎನ್‌.ಮನಮೋಹನ್‌ ಅವರ ಹೇಳಿಕೆ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

“ಆರೋಪಿಗಳಾದ ಕೃಷ್ಣ ಕುಮಾರ್ ಮತ್ತು ಡಾ. ಆರ್.ಅನಿತಾ ಅವರು ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ್ದಾರೆ. ಮಹಿಳಾ ಕೈದಿಗಳ ವಿಭಾಗದ ಕಾರಿಡಾರ್‌ ಅನ್ನು ಬಳಸಿಕೊಳ್ಳಲು, ಇತರೆ ಕೈದಿಗಳಿಂದ ಸ್ವತಂತ್ರವಾಗಿ ವಾಸಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ಮಂಚ ಹಾಗೂ ಹಾಸಿಗೆ ವ್ಯವಸ್ಥೆ ಒದಗಿಸಿದ್ದಾರೆ. ಅವರ ಸಂದರ್ಶನಕ್ಕೆ ಬಂದವರಿಗೆ ಜೈಲು ಅಧಿಕಾರಿಗಳ ಕಚೇರಿಯಲ್ಲಿಯೇ, ಹೆಚ್ಚಿನ ಸಮಯಾವಕಾಶ ನೀಡಿ, ಅವಕಾಶ ಮಾಡಿಕೊಟ್ಟಿರುವ ಬಗ್ಗೆ ದೃಢಪಟ್ಟಿರುತ್ತದೆ. ಇವರ ವಿರುದ್ಧ ಐಪಿಸಿ ಕಲಂ 120(ಬಿ) ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ -1988ರ ಕಲಂ 13(1)(ಸಿ) ಅಡಿಯಲ್ಲಿ ವಿಚಾರಣೆ ನಡೆಸಲು ಪೂರ್ವಾನುಮತಿ ನೀಡಲಾಗಿದೆ” ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಶಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಸಂಬಂಧ ಕಾರಾಗೃಹ ಡಿಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಎಚ್.ಎನ್. ಸತ್ಯನಾರಾಯಣ ಅವರು ನಿರ್ದೋಷಿಯಾಗಿದ್ದಾರೆ ಎಂದು ಎಸಿಬಿ ತನ್ನ ವರದಿಯಲ್ಲಿ ತಿಳಿಸಿದೆ” ಎಂದು ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಶಶಿಕಲಾ, ಮತ್ತವರ ಸಂಬಂಧಿ ಇಳವರಸಿಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಜೈಲಿನ ಅಧಿಕಾರಿಗಳು 2 ಕೋಟಿ ರೂಪಾಯಿ ಲಂಚ ಪಡೆದ ಆರೋಪವಿತ್ತು. ಈ ಪ್ರಕರಣವನ್ನು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಏಕ ಸದಸ್ಯ ಸಮಿತಿ ವಿಚಾರಣೆ ನಡೆಸಿ ವರದಿ ಸಲ್ಲಿಸಿತ್ತು. ನಂತರ ಎಸಿಬಿ ಪ್ರಕರಣದ ತನಿಖೆ ನಡೆಸಿತು. ಎಸಿಬಿ ವಿಳಂಬ ಮಾಡುತ್ತಿರುವುದಾಗಿ ಆಕ್ಷೇಪಿಸಿ, ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್.ಗೀತಾ ಎಂಬುವರು ಹೈಕೋರ್ಟ್‌ಗೆ 2021ರ ಮಾರ್ಚ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದರು.

ಎರಡು ತಿಂಗಳಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ 2021ರ ಜೂನ್‌ 11 ರಂದು ಹೈಕೋರ್ಟ್ ಎಸಿಬಿಗೆ ನಿರ್ದೇಶಿಸಿತ್ತು. ಹೈಕೋರ್ಟ್ ನೀಡಿದ್ದ ಗಡುವಿನಲ್ಲಿ ತನಿಖೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಎಸಿಬಿ ಮಧ್ಯಂತರ ಅರ್ಜಿ ಸಲ್ಲಿಸಿ, ಗಡುವು ವಿಸ್ತರಣೆಗೆ ಕೋರಿತ್ತು. 2017 ರಲ್ಲಿ ಅಕ್ರಮ ಆಸ್ತಿ ಗಳಿಗೆ ಪ್ರಕರಣದಡಿ ಜೈಲು ಸೇರಿದ್ದ ಶಶಿಕಲಾ ಹಾಗೂ ಇಳವರಸಿ 2021 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ: ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ ಸರ್ಕಾರದ ಆದೇಶ ರದ್ದು ಕೋರಿ ಆರೋಪಿ ಡಾ.ಆರ್ ಅನಿತಾ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ನೇತೃತ್ವದ ಏಕ ಸದಸ್ಯ ಪೀಠ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.


ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....