Homeಮುಖಪುಟಮದುವೆಗೂ ಮುನ್ನ ಗರ್ಭಿಣಿಯಾದ ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೈದ ತಾಯಿ, ಸಹೋದರನ ಬಂಧನ

ಮದುವೆಗೂ ಮುನ್ನ ಗರ್ಭಿಣಿಯಾದ ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೈದ ತಾಯಿ, ಸಹೋದರನ ಬಂಧನ

- Advertisement -
- Advertisement -

ಮದುವೆಗೂ ಮುನ್ನ ಮಗಳು ಗರ್ಭಿಣಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದ ತಾಯಿ ಹಾಗೂ ಯುವತಿಯ ಸಹೋದರ ಆಕೆಗೆ ಬೆಂಕಿ ಹಚ್ಚಿದ ಘಟನೆ ಮೀರತ್‌ನಲ್ಲಿ ನಡೆದಿತ್ತು. ತೀವ್ರ ಗಾಯಗೊಂಡಿದ್ದ 19 ವರ್ಷ ವಯಸ್ಸಿನ ಗರ್ಭಿಣಿ ಐದು ದಿನಗಳ ಜೀವನ್ಮರಣ ಹೋರಾಟದ ಬಳಿಕ ಇಲ್ಲಿನ ಲಾಲಾ ಲಜಪತ್ ರಾಯ್ ಸ್ಮಾರಕ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾಳೆ.

ಈ ಘಟನೆ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಉತ್ತರ ಪ್ರದೇಶದ ಬಹದ್ದೂರ್‌ಗಢದ ನವಾಡ ಗ್ರಾಮದ ಸಂತ್ರಸ್ತೆಯ ತಾಯಿ ಮತ್ತು ಸಹೋದರ ಅವಳನ್ನು ಕಾಡಿಗೆ ಕರೆದೊಯ್ದರು, ಅಲ್ಲಿ ಅವರು ಮೊದಲು ಕತ್ತು ಸೀಳಿ ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ತಿಳಿಸಿದ್ದಾರೆ.

LLRM ಆಸ್ಪತ್ರೆಯ ಜನರಲ್ ಸರ್ಜನ್ ಡಾ ಹಿಮಾಂಶು ಸಂಘವಾನ್ ಮಾತನಾಡಿ, ”ಯುವತಿಯು 80% ಕ್ಕಿಂತ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದಳು. ತೀವ್ರವಾಗಿ ಸುಟ್ಟ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಕ್ಷಣವೇ ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಆಕೆಯ ಎದೆ ಮತ್ತು ದೇಹದ ಮೇಲ್ಭಾಗವು ಸಂಪೂರ್ಣವಾಗಿ ಸುಟ್ಟುಹೋಗಿದ್ದರಿಂದ ಆಕೆ ಉಸಿರಾಡಲು ಸಾಧ್ಯವಾಗಲಿಲ್ಲ. ಬುಧವಾರ ನಸುಕಿನ 2 ಗಂಟೆ ಸುಮಾರಿಗೆ ಗಾಯಗೊಂಡು ಸಾವನ್ನಪ್ಪಿದ್ದಾಳೆ” ಎಂದು ಹೇಳಿದ್ದಾರೆ.

”ಆಕೆಗೆ ಚಿಕಿತ್ಸೆ ನೀಡುತ್ತಿದ್ದ LLRM ಆಸ್ಪತ್ರೆಯ ಜನರಲ್ ಸರ್ಜನ್ ಮಾತನಾಡಿ, ”ಅವಳು ಗರ್ಭಿಣಿಯಾಗಿದ್ದಳು, ಆದರೆ ಆಕೆಯನ್ನು ಆಸ್ಪತ್ರೆಗೆ ಕರೆತರುವಾಗ ಭ್ರೂಣವು ಸತ್ತಿತ್ತು. ಆಕೆಯ ಸ್ಥಿತಿಯು ಸ್ಥಿರವಾದ ನಂತರ ನಾವು ಭ್ರೂಣವನ್ನು ತೆಗೆದುಹಾಕಲು ಯೋಜಿಸಿದ್ದೇವೆ, ಆದರೆ ಐದು ದಿನಗಳ ತೀವ್ರ ನಿಗಾದಲ್ಲಿ ಅವಳು ಹೃದಯ ಸ್ತಂಭನದಿಂದ ಬಳಲುತ್ತಿದ್ದಳು” ಎಂದು ತಿಳಿಸಿದ್ದಾರೆ.

ಬುಧವಾರ ಆಕೆಯ ಸಾವಿನ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಕೆಯ ತಾಯಿ ಅಸರ್ಫೀ ದೇವಿ ಮತ್ತು ಸಹೋದರ ಸುನೀಲ್ ಕುಮಾರ್ ಅವರನ್ನು ಬಂಧಿಸಲಾಗಿದೆ ಮತ್ತು ಇದೀಗ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು ಎಂದು ಎಎಸ್‌ಪಿ ಹಪುರ್ ರಾಜ್ ಕುಮಾರ್ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಉ.ಪ್ರದೇಶ: ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದಲೇ ನಿರಂತರವಾಗಿ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...