Homeಮುಖಪುಟಗರ್ಭಿಣಿ ಆನೆ ಹತ್ಯೆ: ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಕಿಡಿಕಾರಿದ ನೆಟ್ಟಿಗರು

ಗರ್ಭಿಣಿ ಆನೆ ಹತ್ಯೆ: ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಕಿಡಿಕಾರಿದ ನೆಟ್ಟಿಗರು

- Advertisement -
- Advertisement -

ಸ್ಫೋಟಕ ತುಂಬಿದ ಅನಾನಸ್ ಹಣ್ಣನ್ನು ತಿಂದು ಗರ್ಭಿಣಿ ಆನೆಯೊಂದು ಮೃತಪಟ್ಟಿರುವ ಘಟನೆಯನ್ನು ವಿರೋಧಿಸಿ “ಇದು ಭಾರತೀಯ ಸಂಸ್ಕೃತಿಯಲ್ಲ” ಎಂದು ಹೇಳಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ ಹೇಳಿಕೆಗೆ ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಹೆದ್ದಾರಿಯಲ್ಲಿ ಕಷ್ಟಪಟ್ಟು ನಡೆದ ಗರ್ಭಿಣಿ ಮಹಿಳೆಯರಿಗೂ ಇದೇ ಅನುಕಂಪ ತೋರಿಸಿ ಎಂದು‌ ಜಾವಡೇಕರ್ ಅವರಿಗೆ ನೆಟ್ಟಿಗರು ಸವಾಲು ಹಾಕಿದ್ದಾರೆ.

ಕಳೆದ ಬುಧವಾರ ಕೇರಳದ ಪಾಲಕ್ಕಾಡ್‌ನ ಸೈಲೆಂಟ್ ವ್ಯಾಲಿ ರಾಷ್ಟ್ರೀಯ ಉದ್ಯಾನವನದ ಬಳಿಯ ಹಳ್ಳಿಯೊಂದಕ್ಕೆ ಗರ್ಭಿಣಿ ಕಾಡು ಆನೆಯೊಂದು ದಾರಿ ತಪ್ಪಿ ಬಂದಿದೆ. ಪಟಾಕಿ ತುಂಬಿದ ಅನಾನಸ್ ತಿಂದು ಆನೆಯೂ ಸಾವನ್ನಪ್ಪಿದೆ. ಈ ಘಟನೆಗೆ ಭಾರತದಾದ್ಯಂತ ಅನುಕಂಪದ ಅಲೆಯೇ ಸೃಷ್ಟಿಯಾಗಿದ್ದು ಹಲವಾರು ಜನರು ಇದಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದು ಕೇಂದ್ರ ಪರಿಸರ ಮತ್ತು ವನ್ಯ ಸಂರಕ್ಷಣೆ ಖಾತೆ ಸಚಿವರು ಟ್ವೀಟ್ ಮಾಡಿ “ಪಟಾಕಿಗಳನ್ನು ಇಟ್ಟು ಕೊಲ್ಲುವುದು ಭಾರತೀಯ ಸಂಸ್ಕೃತಿಯಲ್ಲ, ಕೇರಳದ ಮಲಪ್ಪುರಂನ ಆನೆ ಹತ್ಯೆಯ ಬಗ್ಗೆ ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ಗಮನಿಸಿದೆ. ಸರಿಯಾಗಿ ತನಿಖೆ ನಡೆಸಲು ಮತ್ತು ಅಪರಾಧಿಗಳನ್ನು ಬಂಧಿಸಲಾಗುವುದು” ಎಂದು ಹೇಳಿದ್ದಾರೆ. ಆದರೆ ಸಚಿವರ ಹೇಳಿಕೆಯಲ್ಲಿ ನಡೆದ ಸ್ಥಳವೂ ಮಲಪ್ಪುರಂ ಎಂದು ತಪ್ಪಾಗಿ ಸೂಚಿಸಲಾಗಿದೆ.

ಸಚಿವರ ಹೇಳಿಕೆಯಲ್ಲಿರುವ ದ್ವಂದ್ವತೆಯನ್ನು ಎತ್ತಿ ತೋರಿಸಿರುವ ಜಾಲತಾಣಿಗರು ಅವರ ವಿರುದ್ದ ಕಿಡಿ ಕಾರಿದ್ದಾರೆ. ಈ ಬಗ್ಗೆ ಬಿಹಾರದಲ್ಲಿ 200 ಕ್ಕೂ ಹೆಚ್ಚಿನ ನೀಲ್ಗಾಯ್‌ಗಳನ್ನು ಕೇಂದ್ರದ ಪರಿಸರ ಸಚಿವಾಲಯದ ಅನುಮತಿಯೊಂದಿಗೆ ಗುಂಡಿಟ್ಟು ಕೊಲ್ಲಲಾಗಿತ್ತು, ಹಾಗೂ ಇದನ್ನು ಪರಿಸರ ಸಚಿವ ಜಾವಡೇಕರ್‌ ಸಮರ್ತಿಸಿಕೊಂಡಿದ್ದರು ಎಂದು ಆಲ್ಟ್ ನ್ಯೂಸ್ ವರದಿಗಾರ ಮೊಹಮ್ಮದ್ ಝುಬೈರ್‌ ನೆನಪಿಸಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ನ ಬಿಸ್ಮಯ ಮಹಾಪಾತ್ರ, “ಭಾರತೀಯ ಸಂಸ್ಕೃತಿಯ ಬಗ್ಗೆ ಭಾರೀ ದೊಡ್ಡ ಮಾತು, ಏನು ಇದು ಭಾರತೀಯ ಸಂಸ್ಕೃತಿಯೇ” ಎಂದು ದೆಹಲಿ ಗಲಭೆಯಲ್ಲಿ ನಡೆದ ಹಿಂಸಾಚಾರದ ಚಿತ್ರವನ್ನು ಹಾಕಿದ್ದಾರೆ.

ಡೆರಿಲ್ ಎಂಬರವು, ಆತ್ಮೀಯ ಪ್ರಕಾಶ್ ಜಿ, ಇದು ತುಂಬಾ ಚೆನ್ನಾಗಿದೆ. ಹಾಗೆಯೇ ಕೇಂದ್ರ ಸರ್ಕಾರ ಇದೇ ಉತ್ಸಾಹವನ್ನು ಶ್ರಮಿಕ ರೈಲುಗಳಲ್ಲಿ ಸತ್ತ ಮನುಷ್ಯ ಜೀವಗಳ ಮೇಲೆಯೂ ತೋರಿಸಲಿ ಎಂದು ಹೇಳಿದ್ದಾರೆ.

ಆನೆ ಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಕುರಿತು ಎಸ್‌ಐಟಿಯನ್ನು ರಚಿಸಲಾಗಿದೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್‌ ಸಲ್ಲಿಸಲಾಗಿದೆಯಾದರೂ. ಈವರೆಗೆ ಯಾರನ್ನೂ ಬಂಧಿಸಿಲ್ಲ.


ಓದಿ: ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....