Homeಮುಖಪುಟಅತ್ಯಾಚಾರದಿಂದ ಗರ್ಭಿಣಿಯಾದ ಸಂತ್ರಸ್ತೆಗೆ ಕಾನೂನು ಹಕ್ಕುಗಳ ಬಗ್ಗೆ ತಿಳಿಸಬೇಕು- ಸುಪ್ರೀಂ

ಅತ್ಯಾಚಾರದಿಂದ ಗರ್ಭಿಣಿಯಾದ ಸಂತ್ರಸ್ತೆಗೆ ಕಾನೂನು ಹಕ್ಕುಗಳ ಬಗ್ಗೆ ತಿಳಿಸಬೇಕು- ಸುಪ್ರೀಂ

20 ವಾರಗಳನ್ನು ದಾಟಿದ ಅನಗತ್ಯ ಗರ್ಭಧಾರಣೆಯ ಪ್ರಕರಣಗಳನ್ನು ನಿರ್ಧರಿಸಲು ವೈದ್ಯಕೀಯ ಮಂಡಳಿಗಳ ನೇಮಕಕ್ಕೆ ಮಾರ್ಗಸೂಚಿಯನ್ನು ರೂಪಿಸಲು ಅರ್ಜಿಯಲ್ಲಿ ಕೋರಲಾಗಿದೆ.

- Advertisement -
- Advertisement -

ಅತ್ಯಾಚಾರದಿಂದ ಗರ್ಭಿಣಿಯಾದ ಸಂತ್ರಸ್ತೆಗೆ ತನ್ನ ಕಾನೂನು ಹಕ್ಕುಗಳ ಬಗ್ಗೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಜೊತೆಗೆ ಅನಗತ್ಯ ಗರ್ಭಧಾರಣೆಯ ಪ್ರಕರಣಗಳನ್ನು ನಿರ್ಧರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವೈದ್ಯಕೀಯ ಮಂಡಳಿಗಳನ್ನು ಸ್ಥಾಪಿಸುವ ಮನವಿಯ ಮೇಲೆ ಕೇಂದ್ರಕ್ಕೆ ನೋಟಿಸ್ ನೀಡಿದೆ.

ಮೆಡಿಕಲ್ ಟರ್ಮಿನೇಷನ್ ಆಫ್ ಪ್ರೆಗ್ನೆನ್ಸಿ ಕಾಯ್ದೆ-1971 ರ ಸೆಕ್ಷನ್ 3 ರ ಪ್ರಕಾರ 20 ವಾರಗಳ ನಂತರ ಗರ್ಭಧಾರಣೆಯನ್ನು ತೆಗೆದು ಹಾಕುವುದನ್ನು ನಿಷೇಧಿಸುತ್ತದೆ.

“ಒಬ್ಬ ಮಹಿಳೆ ಅತ್ಯಾಚಾರಕ್ಕೊಳಗಾಗಿದ್ದರೆ ಮತ್ತು ಗರ್ಭಿಣಿಯಾಗಿದ್ದರೆ, ಅವರಿಗೆ ಕಾನೂನು ಹಕ್ಕುಗಳ ಬಗ್ಗೆ ತಿಳಿಸಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ನ್ಯಾಯಪೀಠ ಹೇಳಿದೆ. ಈ ವಿಚಾರಗಳ ಕುರಿತು ನ್ಯಾಯಾಲಯವು ನಾಲ್ಕು ವಾರಗಳಲ್ಲಿ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ.

ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನೂ ಒಳಗೊಂಡ ನ್ಯಾಯಪೀಠ, ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವೈದ್ಯಕೀಯ ಮಂಡಳಿಗಳನ್ನು ಸ್ಥಾಪಿಸುವ ವಿಷಯ ಕುರಿತು ವಿಚಾರಣೆ ನಡೆಸಿತು. 14 ವರ್ಷದ ಅತ್ಯಾಚಾರ ಸಂತ್ರಸ್ತೆ ಪರವಾಗಿ ಹಾಜರಾದ ವಕೀಲ ವಿ.ಕೆ.ಬಿಜು, ಕೆಲವು ವೈದ್ಯಕೀಯ ಅಭಿಪ್ರಾಯದ ಕಾರಣದಿಂದಾಗಿ 26 ವಾರಗಳ ಗರ್ಭಧಾರಣೆಯನ್ನು ತೆಗೆಯದಿರಲು ನಿರ್ಧರಿಸಿದರು.

ಆದರೆ, ಪ್ರತಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ “20 ವಾರಗಳನ್ನು ದಾಟಿದ ಅನಗತ್ಯ ಗರ್ಭಧಾರಣೆಯ ಪ್ರಕರಣಗಳನ್ನು ನಿರ್ಧರಿಸಲು” ವೈದ್ಯಕೀಯ ಮಂಡಳಿಗಳ ನೇಮಕಕ್ಕೆ ಮಾರ್ಗಸೂಚಿಯನ್ನು ರೂಪಿಸಲು ಅರ್ಜಿಯಲ್ಲಿ ಕೋರಲಾಗಿದೆ.

ವಿಚಾರಣೆಯ ಸಮಯದಲ್ಲಿ, ವಕೀಲ ಬಿಜು ಅವರು ’ಈಗ ಗರ್ಭಪಾತಕ್ಕೆ ಅನುಮತಿ ಪಡೆಯುತ್ತಿಲ್ಲ’ ಎಂದು ಹೇಳಿದರು, ಆದರೆ ರಾಜ್ಯಗಳಲ್ಲಿ ವೈದ್ಯಕೀಯ ಮಂಡಳಿಗಳನ್ನು ಸ್ಥಾಪಿಸಲು ಕೋರಿದ್ದಾರೆ. ಜೊತೆಗೆ, “ನಾನು ಈ ಅರ್ಜಿಯನ್ನು ಬರೆಯುವಾಗ, ಸಂತ್ರಸ್ತೆಯ ಪೋಷಕರ ನೋವನ್ನು ನೋಡಿದೆ” ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಇಂತಹ ಪ್ರಕರಣಗಳನ್ನು ಪರಿಶೀಲಿಸಲು ಸ್ಥಳೀಯ ಮಂಡಳಿ ಇದ್ದರೆ ಅದು ಸಹಾಯಕವಾಗಲಿದೆ ಎಂದು ನ್ಯಾಯಪೀಠವು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭತಿಗೆ ತಿಳಿಸಿದೆ.


ಇದನ್ನೂ ಓದಿ: ಎಡಿಆರ್ ವರದಿ – 5 ವರ್ಷಗಳಲ್ಲಿ ಪಕ್ಷಾಂತರಗೊಂಡ 44.9% ಶಾಸಕರು ಸೇರಿದ್ದು ಬಿಜೆಪಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...