Homeಮುಖಪುಟಹೊಟ್ಟೆಯಲ್ಲಿರುವುದು ಹೆಣ್ಣು ಮಗುವೆಂದು ತಿಳಿದು ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪತಿ!

ಹೊಟ್ಟೆಯಲ್ಲಿರುವುದು ಹೆಣ್ಣು ಮಗುವೆಂದು ತಿಳಿದು ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪತಿ!

- Advertisement -
- Advertisement -

ಹೊಟ್ಟೆಯಲ್ಲಿರುವುದು ಹೆಣ್ಣು ಮಗು ಎಂದು ತಿಳಿದು ಕೋಪಗೊಂಡ ಪತಿ ಬೆಂಕಿ ಹಚ್ಚಿದ ಹಿನ್ನಲೆ ಗರ್ಭಿಣಿ ಮೃತಪಟ್ಟ ಆಘಾತಕಾರಿ ಘಟನೆ ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದಿದೆ.

ರಾಧಾ ದೇವಿ(27) ಮೃತ ಮಹಿಳೆ. ಪತಿ ಬೆಂಕಿ ಹಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಈಕೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಮೃತ ರಾಧಾ ದೇವಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ಆಕೆಯ ಹೊಟ್ಟೆಯಲ್ಲಿರುವುದು ಹೆಣ್ಣು ಮಗು ಎಂದು ತಿಳಿದ ಪತಿ ರಂಜಿತ್ ಶಾ ಬೆಂಕಿ ಹಚ್ಚಿದ್ದಾರೆ. ಭ್ರೂಣದ ಲಿಂಗ ಪತ್ತೆಗಾಗಿ ಜಮುಯಿಯ ಖಾಸಗಿ ಕ್ಲಿನಿಕ್ ಒಂದರಲ್ಲಿ ರಂಜಿತ್ ಶಾ ಕಾನೂನು ಬಾಹಿರವಾಗಿ ಪತ್ನಿಗೆ ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿಸಿದ್ದ.

ಆರೋಪಿ ತನ್ನ ಪತ್ನಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಮಹಿಳೆಯನ್ನು ಆರಂಭದಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಸದರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬರ್ಹತ್ ಪೊಲೀಸ್ ಠಾಣೆಯ ಮುಖ್ಯಾಧಿಕಾರಿ ಎಕೆ ಆಜಾದ್, “ಸುದಾಮಪುರ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ ಎಂದು ನಮಗೆ ಮಾಹಿತಿ ದೊರೆತಿತ್ತು. ನಾವು ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದಿದೆವು. ಅಪರಾಧ ನಡೆದ ಸ್ಥಳದಲ್ಲಿ ಸೀಮೆ ಎಣ್ಣೆಯ ಬಾಟಲಿ ಮತ್ತು ಬೆಂಕಿಕಡ್ಡಿ ಪತ್ತೆಯಾಗಿದೆ. ಆರೋಪಿ ಹಾಗೂ ಆತನ ಇಡೀ ಕುಟುಂಬ ಪರಾರಿಯಾಗಿದ್ದಾರೆ. ಅವರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ” ಎಂದಿದ್ದಾರೆ.

ಪತಿ ಭ್ರೂಣ ಲಿಂಗ ಪತ್ತೆಗಾಗಿ ಅಲ್ಟ್ರಾಸೌಂಡ್ ಟೆಸ್ಟ್ ಮಾಡಿಸಿದ್ದಾನೆ. ಗಂಡು ಮಗುವಿಗಾಗಿ ಆತ ವಿಚ್ಚೇದನ ನೀಡಲು ಮುಂದಾಗಿದ್ದಾರೆ ಎಂದು ಮೃತ ಮಹಿಳೆ ಆಕೆಯ ಪೋಷಕರಿಗೆ ತಿಳಿಸಿದ್ದರು ಎಂದು ವರದಿಗಳು ಹೇಳಿವೆ.

ಮೃತಳ ಸೋದರ ಮಾವ ಕೇದಾರ್ ಶಾ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ಆರೋಪಿ ರಂಜಿತ್‌ಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿರುವುದರಿಂದ ಗಂಡು ಮಗು ಬೇಕಿತ್ತು. ಆತ ತನ್ನ ಹೆಂಡತಿಯನ್ನು ಖಾಸಗಿ ಕ್ಲಿನಿಕ್‌ಗೆ ಕರೆದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿಸಿದ್ದ. ಹೆಣ್ಣು ಮಗು ಎಂದು ತಿಳಿದು ಕೋಪಗೊಂಡಿದ್ದ” ಎಂದು ಹೇಳಿದ್ದಾರೆ.

ಕಳೆದ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಎಂಟು ತಿಂಗಳ ಗರ್ಭಿಣಿ ಮಹಿಳೆಯನ್ನು ಕೊಂದ ಆಕೆಯ ಪತಿ ಶವವನ್ನು ಹೂತು ಹಾಕಿದ್ದ. ಇಂಡಿಯಾ ಟುಡೇ ವರದಿ ಮಾಡಿರುವಂತೆ ಯುಪಿ ಪೊಲೀಸರು ಕೊಲೆ ಆರೋಪದ ಮೇಲೆ ಪತಿಯನ್ನು ಬಂಧಿಸಿದ್ದಾರೆ.

ಪ್ರಸವ ಪೂರ್ವ ಭ್ರೂಣ ಪತ್ತೆ ಮತ್ತು ಹತ್ಯೆ ಅಪರಾಧ :

ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಅಧಿನಿಯಮ 1994ರ ಪ್ರಕಾರ ಭಾರತದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧವಿದೆ. ಯಾವುದೇ ವ್ಯಕ್ತಿ ವೈಜ್ಞಾನಿಕ ತಂತ್ರಜ್ಞಾನಗಳನ್ನು ಭ್ರೂಣದ ಲಿಂಗ ಪತ್ತೆಗಾಗಿ ಬಳಸಿದರೆ, ಬಳಸಲು ಕಾರಣನಾದರೆ, ಸಹಾಯ ಮಾಡಿದರೆ, ಲಿಂಗಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯ ಮೇಲೆ ಒತ್ತಡ ಹೇರಿದರೆ ಅದು ಅಪರಾಧವಾಗುತ್ತದೆ. ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಪ್ರತಿಯೊಂದು ಕೇಂದ್ರದ ನೋಂದಣಿ ಈ ಅಧಿನಿಯಮದ ಅಡಿ ಕಡ್ಡಾಯವಾಗಿದೆ.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡಿದ ವ್ಯಕ್ತಿ ಶಿಕ್ಷಾರ್ಹ. ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗತ್ತದೆ. ಇಂತಹ ಕೃತ್ಯಕ್ಕೆ ಸಹಾಯ ಮಾಡುವ ವ್ಯಕ್ತಿಯೂ ಶಿಕ್ಷಾರ್ಹ. ಸಹಾಯ ಮಾಡುವವರಿಗೆ ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: ‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...