Homeಮುಖಪುಟಹೊಟ್ಟೆಯಲ್ಲಿರುವುದು ಹೆಣ್ಣು ಮಗುವೆಂದು ತಿಳಿದು ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪತಿ!

ಹೊಟ್ಟೆಯಲ್ಲಿರುವುದು ಹೆಣ್ಣು ಮಗುವೆಂದು ತಿಳಿದು ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪತಿ!

- Advertisement -
- Advertisement -

ಹೊಟ್ಟೆಯಲ್ಲಿರುವುದು ಹೆಣ್ಣು ಮಗು ಎಂದು ತಿಳಿದು ಕೋಪಗೊಂಡ ಪತಿ ಬೆಂಕಿ ಹಚ್ಚಿದ ಹಿನ್ನಲೆ ಗರ್ಭಿಣಿ ಮೃತಪಟ್ಟ ಆಘಾತಕಾರಿ ಘಟನೆ ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದಿದೆ.

ರಾಧಾ ದೇವಿ(27) ಮೃತ ಮಹಿಳೆ. ಪತಿ ಬೆಂಕಿ ಹಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಈಕೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಮೃತ ರಾಧಾ ದೇವಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ಆಕೆಯ ಹೊಟ್ಟೆಯಲ್ಲಿರುವುದು ಹೆಣ್ಣು ಮಗು ಎಂದು ತಿಳಿದ ಪತಿ ರಂಜಿತ್ ಶಾ ಬೆಂಕಿ ಹಚ್ಚಿದ್ದಾರೆ. ಭ್ರೂಣದ ಲಿಂಗ ಪತ್ತೆಗಾಗಿ ಜಮುಯಿಯ ಖಾಸಗಿ ಕ್ಲಿನಿಕ್ ಒಂದರಲ್ಲಿ ರಂಜಿತ್ ಶಾ ಕಾನೂನು ಬಾಹಿರವಾಗಿ ಪತ್ನಿಗೆ ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿಸಿದ್ದ.

ಆರೋಪಿ ತನ್ನ ಪತ್ನಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಮಹಿಳೆಯನ್ನು ಆರಂಭದಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಸದರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬರ್ಹತ್ ಪೊಲೀಸ್ ಠಾಣೆಯ ಮುಖ್ಯಾಧಿಕಾರಿ ಎಕೆ ಆಜಾದ್, “ಸುದಾಮಪುರ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ ಎಂದು ನಮಗೆ ಮಾಹಿತಿ ದೊರೆತಿತ್ತು. ನಾವು ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದಿದೆವು. ಅಪರಾಧ ನಡೆದ ಸ್ಥಳದಲ್ಲಿ ಸೀಮೆ ಎಣ್ಣೆಯ ಬಾಟಲಿ ಮತ್ತು ಬೆಂಕಿಕಡ್ಡಿ ಪತ್ತೆಯಾಗಿದೆ. ಆರೋಪಿ ಹಾಗೂ ಆತನ ಇಡೀ ಕುಟುಂಬ ಪರಾರಿಯಾಗಿದ್ದಾರೆ. ಅವರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ” ಎಂದಿದ್ದಾರೆ.

ಪತಿ ಭ್ರೂಣ ಲಿಂಗ ಪತ್ತೆಗಾಗಿ ಅಲ್ಟ್ರಾಸೌಂಡ್ ಟೆಸ್ಟ್ ಮಾಡಿಸಿದ್ದಾನೆ. ಗಂಡು ಮಗುವಿಗಾಗಿ ಆತ ವಿಚ್ಚೇದನ ನೀಡಲು ಮುಂದಾಗಿದ್ದಾರೆ ಎಂದು ಮೃತ ಮಹಿಳೆ ಆಕೆಯ ಪೋಷಕರಿಗೆ ತಿಳಿಸಿದ್ದರು ಎಂದು ವರದಿಗಳು ಹೇಳಿವೆ.

ಮೃತಳ ಸೋದರ ಮಾವ ಕೇದಾರ್ ಶಾ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ಆರೋಪಿ ರಂಜಿತ್‌ಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿರುವುದರಿಂದ ಗಂಡು ಮಗು ಬೇಕಿತ್ತು. ಆತ ತನ್ನ ಹೆಂಡತಿಯನ್ನು ಖಾಸಗಿ ಕ್ಲಿನಿಕ್‌ಗೆ ಕರೆದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿಸಿದ್ದ. ಹೆಣ್ಣು ಮಗು ಎಂದು ತಿಳಿದು ಕೋಪಗೊಂಡಿದ್ದ” ಎಂದು ಹೇಳಿದ್ದಾರೆ.

ಕಳೆದ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಎಂಟು ತಿಂಗಳ ಗರ್ಭಿಣಿ ಮಹಿಳೆಯನ್ನು ಕೊಂದ ಆಕೆಯ ಪತಿ ಶವವನ್ನು ಹೂತು ಹಾಕಿದ್ದ. ಇಂಡಿಯಾ ಟುಡೇ ವರದಿ ಮಾಡಿರುವಂತೆ ಯುಪಿ ಪೊಲೀಸರು ಕೊಲೆ ಆರೋಪದ ಮೇಲೆ ಪತಿಯನ್ನು ಬಂಧಿಸಿದ್ದಾರೆ.

ಪ್ರಸವ ಪೂರ್ವ ಭ್ರೂಣ ಪತ್ತೆ ಮತ್ತು ಹತ್ಯೆ ಅಪರಾಧ :

ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಅಧಿನಿಯಮ 1994ರ ಪ್ರಕಾರ ಭಾರತದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧವಿದೆ. ಯಾವುದೇ ವ್ಯಕ್ತಿ ವೈಜ್ಞಾನಿಕ ತಂತ್ರಜ್ಞಾನಗಳನ್ನು ಭ್ರೂಣದ ಲಿಂಗ ಪತ್ತೆಗಾಗಿ ಬಳಸಿದರೆ, ಬಳಸಲು ಕಾರಣನಾದರೆ, ಸಹಾಯ ಮಾಡಿದರೆ, ಲಿಂಗಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯ ಮೇಲೆ ಒತ್ತಡ ಹೇರಿದರೆ ಅದು ಅಪರಾಧವಾಗುತ್ತದೆ. ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಪ್ರತಿಯೊಂದು ಕೇಂದ್ರದ ನೋಂದಣಿ ಈ ಅಧಿನಿಯಮದ ಅಡಿ ಕಡ್ಡಾಯವಾಗಿದೆ.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡಿದ ವ್ಯಕ್ತಿ ಶಿಕ್ಷಾರ್ಹ. ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗತ್ತದೆ. ಇಂತಹ ಕೃತ್ಯಕ್ಕೆ ಸಹಾಯ ಮಾಡುವ ವ್ಯಕ್ತಿಯೂ ಶಿಕ್ಷಾರ್ಹ. ಸಹಾಯ ಮಾಡುವವರಿಗೆ ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: ‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...