Homeಮುಖಪುಟಹೊಟ್ಟೆಯಲ್ಲಿರುವುದು ಹೆಣ್ಣು ಮಗುವೆಂದು ತಿಳಿದು ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪತಿ!

ಹೊಟ್ಟೆಯಲ್ಲಿರುವುದು ಹೆಣ್ಣು ಮಗುವೆಂದು ತಿಳಿದು ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪತಿ!

- Advertisement -
- Advertisement -

ಹೊಟ್ಟೆಯಲ್ಲಿರುವುದು ಹೆಣ್ಣು ಮಗು ಎಂದು ತಿಳಿದು ಕೋಪಗೊಂಡ ಪತಿ ಬೆಂಕಿ ಹಚ್ಚಿದ ಹಿನ್ನಲೆ ಗರ್ಭಿಣಿ ಮೃತಪಟ್ಟ ಆಘಾತಕಾರಿ ಘಟನೆ ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದಿದೆ.

ರಾಧಾ ದೇವಿ(27) ಮೃತ ಮಹಿಳೆ. ಪತಿ ಬೆಂಕಿ ಹಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಈಕೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಮೃತ ರಾಧಾ ದೇವಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ಆಕೆಯ ಹೊಟ್ಟೆಯಲ್ಲಿರುವುದು ಹೆಣ್ಣು ಮಗು ಎಂದು ತಿಳಿದ ಪತಿ ರಂಜಿತ್ ಶಾ ಬೆಂಕಿ ಹಚ್ಚಿದ್ದಾರೆ. ಭ್ರೂಣದ ಲಿಂಗ ಪತ್ತೆಗಾಗಿ ಜಮುಯಿಯ ಖಾಸಗಿ ಕ್ಲಿನಿಕ್ ಒಂದರಲ್ಲಿ ರಂಜಿತ್ ಶಾ ಕಾನೂನು ಬಾಹಿರವಾಗಿ ಪತ್ನಿಗೆ ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿಸಿದ್ದ.

ಆರೋಪಿ ತನ್ನ ಪತ್ನಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಮಹಿಳೆಯನ್ನು ಆರಂಭದಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಸದರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬರ್ಹತ್ ಪೊಲೀಸ್ ಠಾಣೆಯ ಮುಖ್ಯಾಧಿಕಾರಿ ಎಕೆ ಆಜಾದ್, “ಸುದಾಮಪುರ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ ಎಂದು ನಮಗೆ ಮಾಹಿತಿ ದೊರೆತಿತ್ತು. ನಾವು ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದಿದೆವು. ಅಪರಾಧ ನಡೆದ ಸ್ಥಳದಲ್ಲಿ ಸೀಮೆ ಎಣ್ಣೆಯ ಬಾಟಲಿ ಮತ್ತು ಬೆಂಕಿಕಡ್ಡಿ ಪತ್ತೆಯಾಗಿದೆ. ಆರೋಪಿ ಹಾಗೂ ಆತನ ಇಡೀ ಕುಟುಂಬ ಪರಾರಿಯಾಗಿದ್ದಾರೆ. ಅವರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ” ಎಂದಿದ್ದಾರೆ.

ಪತಿ ಭ್ರೂಣ ಲಿಂಗ ಪತ್ತೆಗಾಗಿ ಅಲ್ಟ್ರಾಸೌಂಡ್ ಟೆಸ್ಟ್ ಮಾಡಿಸಿದ್ದಾನೆ. ಗಂಡು ಮಗುವಿಗಾಗಿ ಆತ ವಿಚ್ಚೇದನ ನೀಡಲು ಮುಂದಾಗಿದ್ದಾರೆ ಎಂದು ಮೃತ ಮಹಿಳೆ ಆಕೆಯ ಪೋಷಕರಿಗೆ ತಿಳಿಸಿದ್ದರು ಎಂದು ವರದಿಗಳು ಹೇಳಿವೆ.

ಮೃತಳ ಸೋದರ ಮಾವ ಕೇದಾರ್ ಶಾ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ಆರೋಪಿ ರಂಜಿತ್‌ಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿರುವುದರಿಂದ ಗಂಡು ಮಗು ಬೇಕಿತ್ತು. ಆತ ತನ್ನ ಹೆಂಡತಿಯನ್ನು ಖಾಸಗಿ ಕ್ಲಿನಿಕ್‌ಗೆ ಕರೆದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿಸಿದ್ದ. ಹೆಣ್ಣು ಮಗು ಎಂದು ತಿಳಿದು ಕೋಪಗೊಂಡಿದ್ದ” ಎಂದು ಹೇಳಿದ್ದಾರೆ.

ಕಳೆದ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಎಂಟು ತಿಂಗಳ ಗರ್ಭಿಣಿ ಮಹಿಳೆಯನ್ನು ಕೊಂದ ಆಕೆಯ ಪತಿ ಶವವನ್ನು ಹೂತು ಹಾಕಿದ್ದ. ಇಂಡಿಯಾ ಟುಡೇ ವರದಿ ಮಾಡಿರುವಂತೆ ಯುಪಿ ಪೊಲೀಸರು ಕೊಲೆ ಆರೋಪದ ಮೇಲೆ ಪತಿಯನ್ನು ಬಂಧಿಸಿದ್ದಾರೆ.

ಪ್ರಸವ ಪೂರ್ವ ಭ್ರೂಣ ಪತ್ತೆ ಮತ್ತು ಹತ್ಯೆ ಅಪರಾಧ :

ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಅಧಿನಿಯಮ 1994ರ ಪ್ರಕಾರ ಭಾರತದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧವಿದೆ. ಯಾವುದೇ ವ್ಯಕ್ತಿ ವೈಜ್ಞಾನಿಕ ತಂತ್ರಜ್ಞಾನಗಳನ್ನು ಭ್ರೂಣದ ಲಿಂಗ ಪತ್ತೆಗಾಗಿ ಬಳಸಿದರೆ, ಬಳಸಲು ಕಾರಣನಾದರೆ, ಸಹಾಯ ಮಾಡಿದರೆ, ಲಿಂಗಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯ ಮೇಲೆ ಒತ್ತಡ ಹೇರಿದರೆ ಅದು ಅಪರಾಧವಾಗುತ್ತದೆ. ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಪ್ರತಿಯೊಂದು ಕೇಂದ್ರದ ನೋಂದಣಿ ಈ ಅಧಿನಿಯಮದ ಅಡಿ ಕಡ್ಡಾಯವಾಗಿದೆ.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡಿದ ವ್ಯಕ್ತಿ ಶಿಕ್ಷಾರ್ಹ. ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗತ್ತದೆ. ಇಂತಹ ಕೃತ್ಯಕ್ಕೆ ಸಹಾಯ ಮಾಡುವ ವ್ಯಕ್ತಿಯೂ ಶಿಕ್ಷಾರ್ಹ. ಸಹಾಯ ಮಾಡುವವರಿಗೆ ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: ‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...