Homeಅಂತರಾಷ್ಟ್ರೀಯಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

ಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

- Advertisement -
- Advertisement -

ಅಕ್ರಮ ವಲಸಿಗರು ಎಂದು ಭಾರತೀಯ ಅಧಿಕಾರಿಗಳು ಬಲವಂತವಾಗಿ ಗಡಿಯಾಚೆಗೆ ತಳ್ಳಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾದೇಶದ ಜೈಲಿನಿಂದ ಸೋಮವಾರ (ಡಿಸೆಂಬರ್ 1) ಸಂಜೆ ಬಿಡುಗಡೆಯಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಸುನಾಲಿ ಖಾತೂನ್ ಎಂಬ ಮಹಿಳೆ, ಪತಿ ಡ್ಯಾನಿಶ್ ಎಸ್‌ಕೆ, ಎಂಟು ವರ್ಷದ ಮಗ ಶಬೀರ್ ಜೊತೆ ಸೋಮವಾರ ಸಂಜೆ 7.30ರ ಸುಮಾರಿಗೆ ಬಾಂಗ್ಲಾದ ಚಾಪೈನವಾಬ್‌ಗಂಜ್ ಜೈಲಿನಿಂದ ಹೊರಬಂದಿದ್ದಾರೆ. ಇವರ ಜೊತೆ ಗಡಿಪಾರಾಗಿ ಜೈಲು ಸೇರಿದ್ದ ಸ್ವೀಟಿ ಬೀಬಿ ಎಂಬ ಮತ್ತೊಬ್ಬರು ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳು ಕೂಡ ಇದೇ ವೇಳೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಚಾಪೈನವಾಬ್‌ಗಂಜ್‌ನ ಸ್ಥಳೀಯ ನ್ಯಾಯಾಲಯ ಮಾನವೀಯ ಆಧಾರದಲ್ಲಿ ಆರು ಮಂದಿಗೂ ಜಾಮೀನು ನೀಡಿದೆ. ಬಾಂಗ್ಲಾದೇಶದ ನಾಗರಿಕರೊಬ್ಬರು ಇವರ ಪರ ಶ್ಯೂರಿಟಿ ನಿಂತು 5,000 ಟಾಕಾ ಜಾಮೀನು ಬಾಂಡ್ ಒದಗಿಸಿದ್ದಾರೆ.

‘ಮಾನವೀಯ ಆಧಾರದ ಮೇಲೆ’ ಸುನಾಲಿ ಖಾತೂನ್ ಮತ್ತು ಅವರ ಮಗನಿಗೆ ಭಾರತಕ್ಕೆ ಮರಳಲು ಅವಕಾಶ ನೀಡುವುದನ್ನು ಪರಿಗಣಿಸುವಂತೆ ಭಾರತೀಯ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದ ದಿನವೇ ಖಾತೂನ್ ಮತ್ತು ಅವರ ಕುಟುಂಬಸ್ಥರು ಬಾಂಗ್ಲಾದ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಖಾತೂನ್ ಅವರು ಗರ್ಭಿಣಿಯಾಗಿರುವುದನ್ನು ಗಮನಿಸಿ, ಪಶ್ಚಿಮ ಬಂಗಾಳದ ಮಾಲ್ಡಾ ಗಡಿಯ ಮೂಲಕ ಭಾರತಕ್ಕೆ ವಾಪಾಸಾಗಲು ಅನುಮತಿ ನೀಡಬಹುದೇ ಎಂಬುದರ ಕುರಿತು ಸೂಚನೆಗಳನ್ನು ಪಡೆಯಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ.

ಆದರೆ, ಸುಪ್ರೀಂ ಕೋರ್ಟ್ ಖಾತೂನ್ ಅವರ ಪತಿಯ ವಾಪಸಾತಿ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಪ್ರಕರಣದ ಮುಂದಿನ ವಿಚಾರಣೆ ಬುಧವಾರ (ಡಿಸೆಂಬರ್ 3) ನಡೆಯಲಿದೆ.

ಚಾಪೈನವಾಬ್‌ಗಂಜ್ ನ್ಯಾಯಾಲಯ ಗಡಿಪಾರಾದವರ ಗುಂಪಿನಲ್ಲಿ ಗರ್ಭಿಣಿ ಮತ್ತು ಮಕ್ಕಳು ಇದ್ದಾರೆ ಎಂಬ ವಾದವನ್ನು ಅಂಗೀಕರಿಸಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ.

ಆದಾಗ್ಯೂ, ಅವರು ಬಾಂಗ್ಲಾದೇಶದಲ್ಲಿಯೇ ಇರಬೇಕು ಮತ್ತು ಅಗತ್ಯವಿದ್ದಾಗ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂಬ ಷರತ್ತುಗಳನ್ನು ಮ್ಯಾಜಿಸ್ಟ್ರೇಟ್ ವಿಧಿಸಿದ್ದಾರೆ. ಖಾತೂನ್‌ ಅವರಿಗೆ ಸೂಕ್ತ ವೈದ್ಯಕೀಯ ಆರೈಕೆ ನೀಡಬೇಕು ಮತ್ತು ಅಗತ್ಯವಿದ್ದರೆ ಆಸ್ಪತ್ರೆಗೆ ದಾಖಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ಟೈಮ್ಸ್ ಆಫ್ ಇಂಡಿಯಾ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಖಾತೂನ್, ಭಾರತಕ್ಕೆ ಮರಳಲು ಬಯಸುವುದಾಗಿ ಹೇಳಿಕೊಂಡಿದ್ದು, ಇತ್ತೀಚೆಗೆ ತನ್ನ ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಲವಾರು ತಿಂಗಳುಗಳಿಂದ ಈ ಕುಟುಂಬಗಳಿಗೆ ಸಹಾಯ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಎಸ್‌ಕೆ ಮೊಫೀಝುಲ್ ಅವರು, ಜಿಲ್ಲೆಯಲ್ಲಿ ಅವರಿಗೆ ಬಾಡಿಗೆ ವಸತಿ ವ್ಯವಸ್ಥೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಜಾಮೀನು ಆದೇಶದಲ್ಲಿ ಖಾತೂನ್ ಮತ್ತು ಉಳಿದವರನ್ನು ಭಾರತಕ್ಕೆ ವಾಪಸ್ ಕಳುಹಿಸುವ ಯಾವುದೇ ನಿರ್ದೇಶನವಿಲ್ಲ ಎಂಬುವುದಾಗಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಖಾತೂನ್, ಸ್ವೀಟಿ ಬೀಬಿ ಮತ್ತು ಅವರ ಕುಟುಂಬಗಳು ಪಶ್ಚಿಮ ಬಂಗಾಳದ ಬಿರ್ಬಮ್ ಜಿಲ್ಲೆಯವರು ಎಂದು ಹೇಳಿಕೊಂಡಿದ್ದಾರೆ. ಖಾತೂನ್, ಅವರ ಪತಿ ಮತ್ತು ಮಗನನ್ನು ಜೂನ್ 20ರಂದು ದೆಹಲಿಯಲ್ಲಿ ಬಂಧಿಸಲಾಗಿತ್ತು. ಆರು ದಿನಗಳ ನಂತರ ಮೂವರನ್ನೂ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿತ್ತು.

ಸೆಪ್ಟೆಂಬರ್ 26ರಂದು ಕಲ್ಕತ್ತಾ ಹೈಕೋರ್ಟ್ ಖಾತೂನ್ ಸೇರಿದಂತೆ ಆರು ಜನರ ವಿರುದ್ಧದ ಗಡಿಪಾರು ಆದೇಶವನ್ನು ರದ್ದುಗೊಳಿಸಿತ್ತು. ನಾಲ್ಕು ವಾರಗಳಲ್ಲಿ ಅವರನ್ನು ಪಶ್ಚಿಮ ಬಂಗಾಳಕ್ಕೆ ಮರಳಿ ಕರೆತರುವಂತೆ ನಿರ್ದೇಶಿಸಿತ್ತು.

ನಾಲ್ಕು ವಾರಗಳ ಅವಧಿ ಅಕ್ಟೋಬರ್ 24ರಂದು ಕೊನೆಗೊಂಡಿದೆ. ಅದಕ್ಕೂ ಎರಡು ದಿನಗಳ ಮೊದಲು ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಹೈಕೋರ್ಟ್‌ಗೆ ಈ ಪ್ರಕರಣವನ್ನು ವಿಚಾರಣೆ ನಡೆಸಲು ಅಧಿಕಾರವಿದೆಯೇ ಎಂದು ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮುಂದುವರಿದಿದೆ.

ಮೇ ತಿಂಗಳಿನಿಂದ, ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರೋ ಅಥವಾ ದಾಖಲೆರಹಿತ ವಲಸಿಗರೋ ಎಂಬುವುದನ್ನು ಸಾಬೀತುಪಡಿಸುವಂತೆ ಒತ್ತಾಯಿಸಲಾಗುತ್ತಿದೆ.

ಭಾರತೀಯ ಪ್ರಜೆಗಳಾದ ಹಲವಾರು ಕಾರ್ಮಿಕರನ್ನು ಅಕ್ರಮ ವಲಸಿಗರು ಎಂದು ಆರೋಪಿಸಿ ಈಗಾಗಲೇ ಬಲವಂತವಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ ಎಂಬ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...