Homeಅಂತರಾಷ್ಟ್ರೀಯಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

ಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

- Advertisement -
- Advertisement -

ಅಕ್ರಮ ವಲಸಿಗರು ಎಂದು ಭಾರತೀಯ ಅಧಿಕಾರಿಗಳು ಬಲವಂತವಾಗಿ ಗಡಿಯಾಚೆಗೆ ತಳ್ಳಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾದೇಶದ ಜೈಲಿನಿಂದ ಸೋಮವಾರ (ಡಿಸೆಂಬರ್ 1) ಸಂಜೆ ಬಿಡುಗಡೆಯಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಸುನಾಲಿ ಖಾತೂನ್ ಎಂಬ ಮಹಿಳೆ, ಪತಿ ಡ್ಯಾನಿಶ್ ಎಸ್‌ಕೆ, ಎಂಟು ವರ್ಷದ ಮಗ ಶಬೀರ್ ಜೊತೆ ಸೋಮವಾರ ಸಂಜೆ 7.30ರ ಸುಮಾರಿಗೆ ಬಾಂಗ್ಲಾದ ಚಾಪೈನವಾಬ್‌ಗಂಜ್ ಜೈಲಿನಿಂದ ಹೊರಬಂದಿದ್ದಾರೆ. ಇವರ ಜೊತೆ ಗಡಿಪಾರಾಗಿ ಜೈಲು ಸೇರಿದ್ದ ಸ್ವೀಟಿ ಬೀಬಿ ಎಂಬ ಮತ್ತೊಬ್ಬರು ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳು ಕೂಡ ಇದೇ ವೇಳೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಚಾಪೈನವಾಬ್‌ಗಂಜ್‌ನ ಸ್ಥಳೀಯ ನ್ಯಾಯಾಲಯ ಮಾನವೀಯ ಆಧಾರದಲ್ಲಿ ಆರು ಮಂದಿಗೂ ಜಾಮೀನು ನೀಡಿದೆ. ಬಾಂಗ್ಲಾದೇಶದ ನಾಗರಿಕರೊಬ್ಬರು ಇವರ ಪರ ಶ್ಯೂರಿಟಿ ನಿಂತು 5,000 ಟಾಕಾ ಜಾಮೀನು ಬಾಂಡ್ ಒದಗಿಸಿದ್ದಾರೆ.

‘ಮಾನವೀಯ ಆಧಾರದ ಮೇಲೆ’ ಸುನಾಲಿ ಖಾತೂನ್ ಮತ್ತು ಅವರ ಮಗನಿಗೆ ಭಾರತಕ್ಕೆ ಮರಳಲು ಅವಕಾಶ ನೀಡುವುದನ್ನು ಪರಿಗಣಿಸುವಂತೆ ಭಾರತೀಯ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದ ದಿನವೇ ಖಾತೂನ್ ಮತ್ತು ಅವರ ಕುಟುಂಬಸ್ಥರು ಬಾಂಗ್ಲಾದ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಖಾತೂನ್ ಅವರು ಗರ್ಭಿಣಿಯಾಗಿರುವುದನ್ನು ಗಮನಿಸಿ, ಪಶ್ಚಿಮ ಬಂಗಾಳದ ಮಾಲ್ಡಾ ಗಡಿಯ ಮೂಲಕ ಭಾರತಕ್ಕೆ ವಾಪಾಸಾಗಲು ಅನುಮತಿ ನೀಡಬಹುದೇ ಎಂಬುದರ ಕುರಿತು ಸೂಚನೆಗಳನ್ನು ಪಡೆಯಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ.

ಆದರೆ, ಸುಪ್ರೀಂ ಕೋರ್ಟ್ ಖಾತೂನ್ ಅವರ ಪತಿಯ ವಾಪಸಾತಿ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಪ್ರಕರಣದ ಮುಂದಿನ ವಿಚಾರಣೆ ಬುಧವಾರ (ಡಿಸೆಂಬರ್ 3) ನಡೆಯಲಿದೆ.

ಚಾಪೈನವಾಬ್‌ಗಂಜ್ ನ್ಯಾಯಾಲಯ ಗಡಿಪಾರಾದವರ ಗುಂಪಿನಲ್ಲಿ ಗರ್ಭಿಣಿ ಮತ್ತು ಮಕ್ಕಳು ಇದ್ದಾರೆ ಎಂಬ ವಾದವನ್ನು ಅಂಗೀಕರಿಸಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ.

ಆದಾಗ್ಯೂ, ಅವರು ಬಾಂಗ್ಲಾದೇಶದಲ್ಲಿಯೇ ಇರಬೇಕು ಮತ್ತು ಅಗತ್ಯವಿದ್ದಾಗ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂಬ ಷರತ್ತುಗಳನ್ನು ಮ್ಯಾಜಿಸ್ಟ್ರೇಟ್ ವಿಧಿಸಿದ್ದಾರೆ. ಖಾತೂನ್‌ ಅವರಿಗೆ ಸೂಕ್ತ ವೈದ್ಯಕೀಯ ಆರೈಕೆ ನೀಡಬೇಕು ಮತ್ತು ಅಗತ್ಯವಿದ್ದರೆ ಆಸ್ಪತ್ರೆಗೆ ದಾಖಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ಟೈಮ್ಸ್ ಆಫ್ ಇಂಡಿಯಾ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಖಾತೂನ್, ಭಾರತಕ್ಕೆ ಮರಳಲು ಬಯಸುವುದಾಗಿ ಹೇಳಿಕೊಂಡಿದ್ದು, ಇತ್ತೀಚೆಗೆ ತನ್ನ ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಲವಾರು ತಿಂಗಳುಗಳಿಂದ ಈ ಕುಟುಂಬಗಳಿಗೆ ಸಹಾಯ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಎಸ್‌ಕೆ ಮೊಫೀಝುಲ್ ಅವರು, ಜಿಲ್ಲೆಯಲ್ಲಿ ಅವರಿಗೆ ಬಾಡಿಗೆ ವಸತಿ ವ್ಯವಸ್ಥೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಜಾಮೀನು ಆದೇಶದಲ್ಲಿ ಖಾತೂನ್ ಮತ್ತು ಉಳಿದವರನ್ನು ಭಾರತಕ್ಕೆ ವಾಪಸ್ ಕಳುಹಿಸುವ ಯಾವುದೇ ನಿರ್ದೇಶನವಿಲ್ಲ ಎಂಬುವುದಾಗಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಖಾತೂನ್, ಸ್ವೀಟಿ ಬೀಬಿ ಮತ್ತು ಅವರ ಕುಟುಂಬಗಳು ಪಶ್ಚಿಮ ಬಂಗಾಳದ ಬಿರ್ಬಮ್ ಜಿಲ್ಲೆಯವರು ಎಂದು ಹೇಳಿಕೊಂಡಿದ್ದಾರೆ. ಖಾತೂನ್, ಅವರ ಪತಿ ಮತ್ತು ಮಗನನ್ನು ಜೂನ್ 20ರಂದು ದೆಹಲಿಯಲ್ಲಿ ಬಂಧಿಸಲಾಗಿತ್ತು. ಆರು ದಿನಗಳ ನಂತರ ಮೂವರನ್ನೂ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿತ್ತು.

ಸೆಪ್ಟೆಂಬರ್ 26ರಂದು ಕಲ್ಕತ್ತಾ ಹೈಕೋರ್ಟ್ ಖಾತೂನ್ ಸೇರಿದಂತೆ ಆರು ಜನರ ವಿರುದ್ಧದ ಗಡಿಪಾರು ಆದೇಶವನ್ನು ರದ್ದುಗೊಳಿಸಿತ್ತು. ನಾಲ್ಕು ವಾರಗಳಲ್ಲಿ ಅವರನ್ನು ಪಶ್ಚಿಮ ಬಂಗಾಳಕ್ಕೆ ಮರಳಿ ಕರೆತರುವಂತೆ ನಿರ್ದೇಶಿಸಿತ್ತು.

ನಾಲ್ಕು ವಾರಗಳ ಅವಧಿ ಅಕ್ಟೋಬರ್ 24ರಂದು ಕೊನೆಗೊಂಡಿದೆ. ಅದಕ್ಕೂ ಎರಡು ದಿನಗಳ ಮೊದಲು ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಹೈಕೋರ್ಟ್‌ಗೆ ಈ ಪ್ರಕರಣವನ್ನು ವಿಚಾರಣೆ ನಡೆಸಲು ಅಧಿಕಾರವಿದೆಯೇ ಎಂದು ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮುಂದುವರಿದಿದೆ.

ಮೇ ತಿಂಗಳಿನಿಂದ, ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರೋ ಅಥವಾ ದಾಖಲೆರಹಿತ ವಲಸಿಗರೋ ಎಂಬುವುದನ್ನು ಸಾಬೀತುಪಡಿಸುವಂತೆ ಒತ್ತಾಯಿಸಲಾಗುತ್ತಿದೆ.

ಭಾರತೀಯ ಪ್ರಜೆಗಳಾದ ಹಲವಾರು ಕಾರ್ಮಿಕರನ್ನು ಅಕ್ರಮ ವಲಸಿಗರು ಎಂದು ಆರೋಪಿಸಿ ಈಗಾಗಲೇ ಬಲವಂತವಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ ಎಂಬ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...