Homeಕರ್ನಾಟಕಅಮಿತ್ ಶಾ ಸೂಚನೆಯಂತೆ ಗಲಭೆಗೆ ತಯಾರಿಯೇ?: ಪರಮೇಶ್ವರ್ ಮೇಲಿನ ಹಲ್ಲೆಗೆ ಕಾಂಗ್ರೆಸ್ ಆಕ್ರೋಶ

ಅಮಿತ್ ಶಾ ಸೂಚನೆಯಂತೆ ಗಲಭೆಗೆ ತಯಾರಿಯೇ?: ಪರಮೇಶ್ವರ್ ಮೇಲಿನ ಹಲ್ಲೆಗೆ ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ಮಾಜಿ ಉಪಮುಖ್ಯಮಂತ್ರಿ, ದಲಿತ ನಾಯಕ ಡಾ.ಜಿ.ಪರಮೇಶ್ವರ್‌ ಅವರ ಮೇಲೆ ನಡೆದಿರುವ ಕಲ್ಲು ತೂರಾಟಕ್ಕೆ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕೇಂದ್ರ ಗೃಹಸಚಿವರ ಹೇಳಿಕೆಯನ್ನು ಉಲ್ಲೇಖಿಸಿ, ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದೆ.

“ರಾಜ್ಯದಲ್ಲಿ ಆಗಲಿರುವ ಗಲಭೆಗಳಿಗೆ ಇದು ಪೂರ್ವ ಭಾವಿ ತಯಾರಿಯೇ?” ಇದು ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಕಲ್ಲು ತೂರಿದ್ದು, ಪರಮೇಶ್ವರ ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿದ್ದು, ಸಮೀಪದ ಅಕ್ಕಿರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ತುಮಕೂರಿನ ಸಿದ್ಧಾರ್ಥ ಮೆಡಿಕಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

“ಜಿ. ಪರಮೇಶ್ವರ ಅವರ ಮೇಲೆ ಷಡ್ಯಂತ್ರ ರೂಪಿಸಿ ಕಲ್ಲು ತೂರಿದ ಘಟನೆಯು ಕರ್ನಾಟಕವೇ ತಲೆತಗ್ಗಿಸುವಂತಹದ್ದು. ವಿರೋಧ ಪಕ್ಷಗಳ ನಾಯಕರ ಮೇಲೆ ಮೊದಲಿಂದಲೂ ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ. ಇದು ಅಮಿತ್ ಶಾ ಅವರ ‘ಗಲಭೆ ನಡೆಯುತ್ತದೆ’ ಎಂಬ ಎಚ್ಚರಿಕೆಯ ಹಿಂದಿನ ಪೂರ್ವಭಾವಿ ತಯಾರಿಗಳೇ? ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ?” ಎಂದು ಪ್ರಶ್ನಿಸಿದೆ.

“ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಯಾವ ಹಂತಕ್ಕೆ ತಂದಿಟ್ಟಿದ್ದೀರಿ ಆರಗ ಜ್ಞಾನೇಂದ್ರ ಅವರೇ? ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ದಾಳಿ ಮಾಡಿದವರ ಮೇಲೆ ಕ್ರಮವಿಲ್ಲ. ಪರಮೇಶ್ವರ ಅವರಿಗೆ ಸೂಕ್ತ ರಕ್ಷಣೆ ಇಲ್ಲ. ಇದೆಲ್ಲವೂ ಬಿಜೆಪಿಯ ವೈಫಲ್ಯವೋ, ಷಡ್ಯಂತ್ರವೋ? ಅಮಿತ್ ಶಾ ಅವರ ನಿರ್ದೇಶನದಂತೆ ‘ಗಲಭೆಯುಕ್ತ ಕರ್ನಾಟಕ’ ಮಾಡಲು ತಯಾರಿಯೇ?” ಎಂದು ಕೇಳಿದಿದೆ.

“ಉತ್ತರ ಪ್ರದೇಶ, ಬಿಹಾರದಿಂದ ಬಿಜೆಪಿ ಬಾಡಿಗೆ ಗೂಂಡಾಗಳನ್ನು ಕರೆಸಿ ಪ್ರತಿ ಕ್ಷೇತ್ರಗಳಲ್ಲಿ ಬಿಟ್ಟಿರುವುದು ವರದಿಯಾಗಿದೆ. ಈ ಗೂಂಡಾಪಡೆ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಷಡ್ಯಂತ್ರ ನಡೆಸಿರುವುದಕ್ಕೆ ಜಿ. ಪರಮೇಶ್ವರ ಅವರ ಮೇಲಿನ ಹಲ್ಲೆಯೇ ಸಾಕ್ಷಿ. ಚುನಾವಣಾ ಆಯುಕ್ತರು ಶಾಂತಿಯುತ ಮತದಾನ ನಡೆಸಲು ಕ್ರಮವಹಿಸಬೇಕು” ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆ ಉಂಟಾಗುತ್ತದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ಈಗಾಗಲೇ ದೂರು ಸಲ್ಲಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಗೌರವ್ ವಲ್ಲಭ್‌ರವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತೇರದಾಳದಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅಮಿತ್ ಶಾ, ”ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸರ್ಕಾರ ರಚಿಸಿದರೆ ರಾಜ್ಯವು ಗಲಭೆಗಳಿಂದ ತುಂಬಿಹೋಗುತ್ತದೆ. ವಂಶಾಡಳಿತ ಮುನ್ನೆಲೆಗೆ ಬರುತ್ತದೆ” ಎಂದು ಹೇಳಿದ್ದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

ಈ ಹೇಳಿಕೆಯನ್ನು ಖಂಡಿಸಿರುವ ಜೈರಾಮ್ ರಮೇಶ್ ಅವರು, ”ಭಯ ಹುಟ್ಟುಹಾಕುವ ಸಲುವಾಗಿಯೇ ಇಂತಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

“ಅಮಿತ್ ಶಾ ಹೇಳಿಕೆಯು ಅತ್ಯಂತ ನಿರ್ಲಜ್ಜತನದ ಮತ್ತು ಬೆದರಿಸುವ ಹೇಳಿಕೆಯಾಗಿದೆ. ಭಾರತದ ಮೊಟ್ಟಮೊದಲ ಗೃಹ ಸಚಿವರಿಂದ ನಿಷೇಧಿಸಲ್ಪಟ್ಟ ಸಂಘಟನೆ(ಆರ್ ಎಸ್ಎಸ್)ಗೆ ನಿಷ್ಠರಾಗಿರುವ ಕೇಂದ್ರ ಗೃಹ ಸಚಿವರು ಈಗ ಚುನಾವಣಾ ಪ್ರಚಾರದ ಸಮಯದಲ್ಲಿ ಸೋಲಿನ ಆತಂಕದಿಂದ ಬೆದರಿಕೆಗಳನ್ನು ಹಾಕುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...