Homeಮುಖಪುಟಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

- Advertisement -
- Advertisement -

ಮುಂದಿನ ವಾರ ಪ್ರಧಾನಿ ಮೋದಿ ಅವರು ಸಿಡ್ನಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಲಸಿಗರು ವೈವಿಧ್ಯತೆಯ ಅಭಿಪ್ರಾಯವನ್ನು ಪ್ರದರ್ಶಿಸಲು ಮುಂದಾಗಿದ್ದಾರೆ. ಮಂಗಳವಾರ ಬೃಹತ್ ಸಮುದಾಯ ಸಮಾರಂಭ ನಡೆಯಲಿದೆ. ಮರುದಿನ ಸಂಜೆ ಕ್ಯಾನ್‌ಬೆರಾದಲ್ಲಿ BBC ಡಾಕ್ಯುಮೆಂಟರಿ ಇಂಡಿಯಾ: ದಿ ಮೋದಿ ಕ್ವೆಶ್ಚನ್‌ನ ಪ್ರದರ್ಶನ ನಡೆಯಲಿದೆ.

ಈ ಸಾಕ್ಷ್ಯಚಿತ್ರದ ಸ್ಕ್ರೀನಿಂಗ್‌ಅನ್ನು ಡಯಾಸ್ಪೊರಾ ಸಂಸ್ಥೆಗಳ ಗುಂಪು ಕ್ಯಾನ್‌ಬೆರಾದಲ್ಲಿರುವ ಆಸ್ಟ್ರೇಲಿಯಾದ ಸಂಸತ್ ಭವನದಲ್ಲಿ ನಡೆಸುತ್ತದೆ. ಆಸ್ಟ್ರೇಲಿಯಾದ ಸಂಸತ್ತು ಬಾಡಿಗೆಗೆ ಹಲವಾರು ಸ್ಥಳಗಳನ್ನು ನೀಡುತ್ತದೆ, ಮತ್ತು ಸ್ಕ್ರೀನಿಂಗ್ ಎನ್ನುವುದು ಮಾನವ ಹಕ್ಕುಗಳ ಸಂಸ್ಥೆಯಾದ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಜೊತೆಗೆ ಡಯಾಸ್ಪೊರಾ ಗುಂಪುಗಳಿಂದ ಆಯೋಜಿಸಲ್ಪಟ್ಟ ಸಂಪೂರ್ಣ ಖಾಸಗಿ ಕಾರ್ಯಕ್ರಮ ಇದಾಗಿದೆ. ಮೋದಿ ಸರ್ಕಾರವು ಭಾರತದ ಸಂವಿಧಾನಾತ್ಮಕ ಮೂಲ ತತ್ವಗಳಿಂದ ದೂರ ಸರಿಯುತ್ತಿರುವ ಬಗ್ಗೆ ಗಮನ ಸೆಳೆಯಲು ಪ್ರಯತ್ನಿಸುತ್ತಿದೆ.

ಈ ಸ್ರಕೀನಿಂಗ್‌ ಕಾರ್ಯಕ್ರಮದಲ್ಲಿ ಅಮ್ನೆಸ್ಟಿ ಜೊತೆಗೆ, ಮಾನವ ಹಕ್ಕುಗಳಿಗಾಗಿ ಆಸ್ಟ್ರೇಲಿಯಾದ ಹಿಂದೂಗಳು ಮತ್ತು ನ್ಯೂಜಿಲೆಂಡ್ ಮತ್ತು ಮುಸ್ಲಿಂ ಕಲೆಕ್ಟಿವ್ ಸೇರಿವೆ.

ಪೆರಿಯಾರ್-ಅಂಬೇಡ್ಕರ್ ಥಾಟ್ ಸರ್ಕಲ್-ಆಸ್ಟ್ರೇಲಿಯಾ, ದಿ ಹ್ಯೂಮಾನಿಸಂ ಪ್ರಾಜೆಕ್ಟ್ ಮತ್ತು ಸೆಂಟರ್ ಫಾರ್ ಕಲ್ಚರ್-ಸೆಂಟ್ರೆಡ್ ಅಪ್ರೋಚ್ ಟು ರಿಸರ್ಚ್ ಅಂಡ್ ಎವಾಲ್ಯುಯೇಷನ್ ಸಂಸ್ಥೆಗಳು ಕೂಡ ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್
 

ಮೋದಿ ಅವರ ಆಸ್ಟ್ರೇಲಿಯಾ ಪ್ರವಾಸ ಸೋಮವಾರದಿಂದ ಮೂರು ದಿನಗಳ ಕಾಲ ನಡೆಯಲಿದ್ದು,ಈ ವೇಳೆ ಸಿಡ್ನಿಗೆ ಮಾತ್ರ ಭೇಟಿ ನೀಡಲಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆ ಮತ್ತು ವ್ಯಾಪಾರ ವಹಿವಾಟಿನ ಸಭೆಗಳ ಜೊತೆಗೆ, ಅವರು ಮರುದಿನ ಅಲ್ಬನೀಸ್ ಜೊತೆಗೆ ಅಲ್ಲಿಯ ದೊಡ್ಡ ಸಮುದಾಯದೊಂದಿಗೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮರುದಿನ ಸಂಜೆ ಕ್ಯಾನ್‌ಬೆರಾದಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವೇಳೆಗೆ ಮೋದಿ ಅವರು ಅಲ್ಲಿಂದ ಕಾಲ್ಕಿತ್ತುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಂದರೆ 2002ರ ಸಮಯದಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಮೋದಿ ಅವರ ಕ್ರಮಗಳನ್ನು ಈ ಎರಡು ಭಾಗಗಳ BBC ಸಾಕ್ಷ್ಯಚಿತ್ರವು  ಪರಿಶೀಲಿಸುತ್ತದೆ. ಈ ಸಾಕ್ಷ್ಯ ಚಿತ್ರದ ಪ್ರದರ್ಶನದ ನಂತರ ಗುಜರಾತ್ ಗಲಭೆಗಳು ಮತ್ತು 2014 ರಿಂದ ಅವರ ಆಡಳಿತದಲ್ಲಿರುವ ಭಾರತವನ್ನು ಕೇಂದ್ರೀಕರಿಸುವ ಚರ್ಚೆಯನ್ನು ನಡೆಸಲಾಗುವುದು. ಭಾಷಣಕಾರರಲ್ಲಿ ಮೋದಿ ವಿರುದ್ಧ ಮಾತನಾಡಿದ್ದ ಜೈಲಿನಲ್ಲಿರುವ ಗುಜರಾತ್ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಅವರ ಪುತ್ರಿ ಆಕಾಶಿ ಭಟ್ ಮತ್ತು ಭಾರತದಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಮಾಜಿ ಮುಖ್ಯಸ್ಥ ಆಕರ್ ಪಟೇಲ್ ಇರಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....