Homeಮುಖಪುಟಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

- Advertisement -
- Advertisement -

ಮುಂದಿನ ವಾರ ಪ್ರಧಾನಿ ಮೋದಿ ಅವರು ಸಿಡ್ನಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಲಸಿಗರು ವೈವಿಧ್ಯತೆಯ ಅಭಿಪ್ರಾಯವನ್ನು ಪ್ರದರ್ಶಿಸಲು ಮುಂದಾಗಿದ್ದಾರೆ. ಮಂಗಳವಾರ ಬೃಹತ್ ಸಮುದಾಯ ಸಮಾರಂಭ ನಡೆಯಲಿದೆ. ಮರುದಿನ ಸಂಜೆ ಕ್ಯಾನ್‌ಬೆರಾದಲ್ಲಿ BBC ಡಾಕ್ಯುಮೆಂಟರಿ ಇಂಡಿಯಾ: ದಿ ಮೋದಿ ಕ್ವೆಶ್ಚನ್‌ನ ಪ್ರದರ್ಶನ ನಡೆಯಲಿದೆ.

ಈ ಸಾಕ್ಷ್ಯಚಿತ್ರದ ಸ್ಕ್ರೀನಿಂಗ್‌ಅನ್ನು ಡಯಾಸ್ಪೊರಾ ಸಂಸ್ಥೆಗಳ ಗುಂಪು ಕ್ಯಾನ್‌ಬೆರಾದಲ್ಲಿರುವ ಆಸ್ಟ್ರೇಲಿಯಾದ ಸಂಸತ್ ಭವನದಲ್ಲಿ ನಡೆಸುತ್ತದೆ. ಆಸ್ಟ್ರೇಲಿಯಾದ ಸಂಸತ್ತು ಬಾಡಿಗೆಗೆ ಹಲವಾರು ಸ್ಥಳಗಳನ್ನು ನೀಡುತ್ತದೆ, ಮತ್ತು ಸ್ಕ್ರೀನಿಂಗ್ ಎನ್ನುವುದು ಮಾನವ ಹಕ್ಕುಗಳ ಸಂಸ್ಥೆಯಾದ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಜೊತೆಗೆ ಡಯಾಸ್ಪೊರಾ ಗುಂಪುಗಳಿಂದ ಆಯೋಜಿಸಲ್ಪಟ್ಟ ಸಂಪೂರ್ಣ ಖಾಸಗಿ ಕಾರ್ಯಕ್ರಮ ಇದಾಗಿದೆ. ಮೋದಿ ಸರ್ಕಾರವು ಭಾರತದ ಸಂವಿಧಾನಾತ್ಮಕ ಮೂಲ ತತ್ವಗಳಿಂದ ದೂರ ಸರಿಯುತ್ತಿರುವ ಬಗ್ಗೆ ಗಮನ ಸೆಳೆಯಲು ಪ್ರಯತ್ನಿಸುತ್ತಿದೆ.

ಈ ಸ್ರಕೀನಿಂಗ್‌ ಕಾರ್ಯಕ್ರಮದಲ್ಲಿ ಅಮ್ನೆಸ್ಟಿ ಜೊತೆಗೆ, ಮಾನವ ಹಕ್ಕುಗಳಿಗಾಗಿ ಆಸ್ಟ್ರೇಲಿಯಾದ ಹಿಂದೂಗಳು ಮತ್ತು ನ್ಯೂಜಿಲೆಂಡ್ ಮತ್ತು ಮುಸ್ಲಿಂ ಕಲೆಕ್ಟಿವ್ ಸೇರಿವೆ.

ಪೆರಿಯಾರ್-ಅಂಬೇಡ್ಕರ್ ಥಾಟ್ ಸರ್ಕಲ್-ಆಸ್ಟ್ರೇಲಿಯಾ, ದಿ ಹ್ಯೂಮಾನಿಸಂ ಪ್ರಾಜೆಕ್ಟ್ ಮತ್ತು ಸೆಂಟರ್ ಫಾರ್ ಕಲ್ಚರ್-ಸೆಂಟ್ರೆಡ್ ಅಪ್ರೋಚ್ ಟು ರಿಸರ್ಚ್ ಅಂಡ್ ಎವಾಲ್ಯುಯೇಷನ್ ಸಂಸ್ಥೆಗಳು ಕೂಡ ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್
 

ಮೋದಿ ಅವರ ಆಸ್ಟ್ರೇಲಿಯಾ ಪ್ರವಾಸ ಸೋಮವಾರದಿಂದ ಮೂರು ದಿನಗಳ ಕಾಲ ನಡೆಯಲಿದ್ದು,ಈ ವೇಳೆ ಸಿಡ್ನಿಗೆ ಮಾತ್ರ ಭೇಟಿ ನೀಡಲಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆ ಮತ್ತು ವ್ಯಾಪಾರ ವಹಿವಾಟಿನ ಸಭೆಗಳ ಜೊತೆಗೆ, ಅವರು ಮರುದಿನ ಅಲ್ಬನೀಸ್ ಜೊತೆಗೆ ಅಲ್ಲಿಯ ದೊಡ್ಡ ಸಮುದಾಯದೊಂದಿಗೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮರುದಿನ ಸಂಜೆ ಕ್ಯಾನ್‌ಬೆರಾದಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವೇಳೆಗೆ ಮೋದಿ ಅವರು ಅಲ್ಲಿಂದ ಕಾಲ್ಕಿತ್ತುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಂದರೆ 2002ರ ಸಮಯದಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಮೋದಿ ಅವರ ಕ್ರಮಗಳನ್ನು ಈ ಎರಡು ಭಾಗಗಳ BBC ಸಾಕ್ಷ್ಯಚಿತ್ರವು  ಪರಿಶೀಲಿಸುತ್ತದೆ. ಈ ಸಾಕ್ಷ್ಯ ಚಿತ್ರದ ಪ್ರದರ್ಶನದ ನಂತರ ಗುಜರಾತ್ ಗಲಭೆಗಳು ಮತ್ತು 2014 ರಿಂದ ಅವರ ಆಡಳಿತದಲ್ಲಿರುವ ಭಾರತವನ್ನು ಕೇಂದ್ರೀಕರಿಸುವ ಚರ್ಚೆಯನ್ನು ನಡೆಸಲಾಗುವುದು. ಭಾಷಣಕಾರರಲ್ಲಿ ಮೋದಿ ವಿರುದ್ಧ ಮಾತನಾಡಿದ್ದ ಜೈಲಿನಲ್ಲಿರುವ ಗುಜರಾತ್ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಅವರ ಪುತ್ರಿ ಆಕಾಶಿ ಭಟ್ ಮತ್ತು ಭಾರತದಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಮಾಜಿ ಮುಖ್ಯಸ್ಥ ಆಕರ್ ಪಟೇಲ್ ಇರಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...