Homeಮುಖಪುಟಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

- Advertisement -
- Advertisement -

ಮುಂದಿನ ವಾರ ಪ್ರಧಾನಿ ಮೋದಿ ಅವರು ಸಿಡ್ನಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಲಸಿಗರು ವೈವಿಧ್ಯತೆಯ ಅಭಿಪ್ರಾಯವನ್ನು ಪ್ರದರ್ಶಿಸಲು ಮುಂದಾಗಿದ್ದಾರೆ. ಮಂಗಳವಾರ ಬೃಹತ್ ಸಮುದಾಯ ಸಮಾರಂಭ ನಡೆಯಲಿದೆ. ಮರುದಿನ ಸಂಜೆ ಕ್ಯಾನ್‌ಬೆರಾದಲ್ಲಿ BBC ಡಾಕ್ಯುಮೆಂಟರಿ ಇಂಡಿಯಾ: ದಿ ಮೋದಿ ಕ್ವೆಶ್ಚನ್‌ನ ಪ್ರದರ್ಶನ ನಡೆಯಲಿದೆ.

ಈ ಸಾಕ್ಷ್ಯಚಿತ್ರದ ಸ್ಕ್ರೀನಿಂಗ್‌ಅನ್ನು ಡಯಾಸ್ಪೊರಾ ಸಂಸ್ಥೆಗಳ ಗುಂಪು ಕ್ಯಾನ್‌ಬೆರಾದಲ್ಲಿರುವ ಆಸ್ಟ್ರೇಲಿಯಾದ ಸಂಸತ್ ಭವನದಲ್ಲಿ ನಡೆಸುತ್ತದೆ. ಆಸ್ಟ್ರೇಲಿಯಾದ ಸಂಸತ್ತು ಬಾಡಿಗೆಗೆ ಹಲವಾರು ಸ್ಥಳಗಳನ್ನು ನೀಡುತ್ತದೆ, ಮತ್ತು ಸ್ಕ್ರೀನಿಂಗ್ ಎನ್ನುವುದು ಮಾನವ ಹಕ್ಕುಗಳ ಸಂಸ್ಥೆಯಾದ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಜೊತೆಗೆ ಡಯಾಸ್ಪೊರಾ ಗುಂಪುಗಳಿಂದ ಆಯೋಜಿಸಲ್ಪಟ್ಟ ಸಂಪೂರ್ಣ ಖಾಸಗಿ ಕಾರ್ಯಕ್ರಮ ಇದಾಗಿದೆ. ಮೋದಿ ಸರ್ಕಾರವು ಭಾರತದ ಸಂವಿಧಾನಾತ್ಮಕ ಮೂಲ ತತ್ವಗಳಿಂದ ದೂರ ಸರಿಯುತ್ತಿರುವ ಬಗ್ಗೆ ಗಮನ ಸೆಳೆಯಲು ಪ್ರಯತ್ನಿಸುತ್ತಿದೆ.

ಈ ಸ್ರಕೀನಿಂಗ್‌ ಕಾರ್ಯಕ್ರಮದಲ್ಲಿ ಅಮ್ನೆಸ್ಟಿ ಜೊತೆಗೆ, ಮಾನವ ಹಕ್ಕುಗಳಿಗಾಗಿ ಆಸ್ಟ್ರೇಲಿಯಾದ ಹಿಂದೂಗಳು ಮತ್ತು ನ್ಯೂಜಿಲೆಂಡ್ ಮತ್ತು ಮುಸ್ಲಿಂ ಕಲೆಕ್ಟಿವ್ ಸೇರಿವೆ.

ಪೆರಿಯಾರ್-ಅಂಬೇಡ್ಕರ್ ಥಾಟ್ ಸರ್ಕಲ್-ಆಸ್ಟ್ರೇಲಿಯಾ, ದಿ ಹ್ಯೂಮಾನಿಸಂ ಪ್ರಾಜೆಕ್ಟ್ ಮತ್ತು ಸೆಂಟರ್ ಫಾರ್ ಕಲ್ಚರ್-ಸೆಂಟ್ರೆಡ್ ಅಪ್ರೋಚ್ ಟು ರಿಸರ್ಚ್ ಅಂಡ್ ಎವಾಲ್ಯುಯೇಷನ್ ಸಂಸ್ಥೆಗಳು ಕೂಡ ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್
 

ಮೋದಿ ಅವರ ಆಸ್ಟ್ರೇಲಿಯಾ ಪ್ರವಾಸ ಸೋಮವಾರದಿಂದ ಮೂರು ದಿನಗಳ ಕಾಲ ನಡೆಯಲಿದ್ದು,ಈ ವೇಳೆ ಸಿಡ್ನಿಗೆ ಮಾತ್ರ ಭೇಟಿ ನೀಡಲಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆ ಮತ್ತು ವ್ಯಾಪಾರ ವಹಿವಾಟಿನ ಸಭೆಗಳ ಜೊತೆಗೆ, ಅವರು ಮರುದಿನ ಅಲ್ಬನೀಸ್ ಜೊತೆಗೆ ಅಲ್ಲಿಯ ದೊಡ್ಡ ಸಮುದಾಯದೊಂದಿಗೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮರುದಿನ ಸಂಜೆ ಕ್ಯಾನ್‌ಬೆರಾದಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವೇಳೆಗೆ ಮೋದಿ ಅವರು ಅಲ್ಲಿಂದ ಕಾಲ್ಕಿತ್ತುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಂದರೆ 2002ರ ಸಮಯದಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಮೋದಿ ಅವರ ಕ್ರಮಗಳನ್ನು ಈ ಎರಡು ಭಾಗಗಳ BBC ಸಾಕ್ಷ್ಯಚಿತ್ರವು  ಪರಿಶೀಲಿಸುತ್ತದೆ. ಈ ಸಾಕ್ಷ್ಯ ಚಿತ್ರದ ಪ್ರದರ್ಶನದ ನಂತರ ಗುಜರಾತ್ ಗಲಭೆಗಳು ಮತ್ತು 2014 ರಿಂದ ಅವರ ಆಡಳಿತದಲ್ಲಿರುವ ಭಾರತವನ್ನು ಕೇಂದ್ರೀಕರಿಸುವ ಚರ್ಚೆಯನ್ನು ನಡೆಸಲಾಗುವುದು. ಭಾಷಣಕಾರರಲ್ಲಿ ಮೋದಿ ವಿರುದ್ಧ ಮಾತನಾಡಿದ್ದ ಜೈಲಿನಲ್ಲಿರುವ ಗುಜರಾತ್ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಅವರ ಪುತ್ರಿ ಆಕಾಶಿ ಭಟ್ ಮತ್ತು ಭಾರತದಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಮಾಜಿ ಮುಖ್ಯಸ್ಥ ಆಕರ್ ಪಟೇಲ್ ಇರಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...