Homeಮುಖಪುಟಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

- Advertisement -
- Advertisement -

ಮುಂದಿನ ವಾರ ಪ್ರಧಾನಿ ಮೋದಿ ಅವರು ಸಿಡ್ನಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಲಸಿಗರು ವೈವಿಧ್ಯತೆಯ ಅಭಿಪ್ರಾಯವನ್ನು ಪ್ರದರ್ಶಿಸಲು ಮುಂದಾಗಿದ್ದಾರೆ. ಮಂಗಳವಾರ ಬೃಹತ್ ಸಮುದಾಯ ಸಮಾರಂಭ ನಡೆಯಲಿದೆ. ಮರುದಿನ ಸಂಜೆ ಕ್ಯಾನ್‌ಬೆರಾದಲ್ಲಿ BBC ಡಾಕ್ಯುಮೆಂಟರಿ ಇಂಡಿಯಾ: ದಿ ಮೋದಿ ಕ್ವೆಶ್ಚನ್‌ನ ಪ್ರದರ್ಶನ ನಡೆಯಲಿದೆ.

ಈ ಸಾಕ್ಷ್ಯಚಿತ್ರದ ಸ್ಕ್ರೀನಿಂಗ್‌ಅನ್ನು ಡಯಾಸ್ಪೊರಾ ಸಂಸ್ಥೆಗಳ ಗುಂಪು ಕ್ಯಾನ್‌ಬೆರಾದಲ್ಲಿರುವ ಆಸ್ಟ್ರೇಲಿಯಾದ ಸಂಸತ್ ಭವನದಲ್ಲಿ ನಡೆಸುತ್ತದೆ. ಆಸ್ಟ್ರೇಲಿಯಾದ ಸಂಸತ್ತು ಬಾಡಿಗೆಗೆ ಹಲವಾರು ಸ್ಥಳಗಳನ್ನು ನೀಡುತ್ತದೆ, ಮತ್ತು ಸ್ಕ್ರೀನಿಂಗ್ ಎನ್ನುವುದು ಮಾನವ ಹಕ್ಕುಗಳ ಸಂಸ್ಥೆಯಾದ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಜೊತೆಗೆ ಡಯಾಸ್ಪೊರಾ ಗುಂಪುಗಳಿಂದ ಆಯೋಜಿಸಲ್ಪಟ್ಟ ಸಂಪೂರ್ಣ ಖಾಸಗಿ ಕಾರ್ಯಕ್ರಮ ಇದಾಗಿದೆ. ಮೋದಿ ಸರ್ಕಾರವು ಭಾರತದ ಸಂವಿಧಾನಾತ್ಮಕ ಮೂಲ ತತ್ವಗಳಿಂದ ದೂರ ಸರಿಯುತ್ತಿರುವ ಬಗ್ಗೆ ಗಮನ ಸೆಳೆಯಲು ಪ್ರಯತ್ನಿಸುತ್ತಿದೆ.

ಈ ಸ್ರಕೀನಿಂಗ್‌ ಕಾರ್ಯಕ್ರಮದಲ್ಲಿ ಅಮ್ನೆಸ್ಟಿ ಜೊತೆಗೆ, ಮಾನವ ಹಕ್ಕುಗಳಿಗಾಗಿ ಆಸ್ಟ್ರೇಲಿಯಾದ ಹಿಂದೂಗಳು ಮತ್ತು ನ್ಯೂಜಿಲೆಂಡ್ ಮತ್ತು ಮುಸ್ಲಿಂ ಕಲೆಕ್ಟಿವ್ ಸೇರಿವೆ.

ಪೆರಿಯಾರ್-ಅಂಬೇಡ್ಕರ್ ಥಾಟ್ ಸರ್ಕಲ್-ಆಸ್ಟ್ರೇಲಿಯಾ, ದಿ ಹ್ಯೂಮಾನಿಸಂ ಪ್ರಾಜೆಕ್ಟ್ ಮತ್ತು ಸೆಂಟರ್ ಫಾರ್ ಕಲ್ಚರ್-ಸೆಂಟ್ರೆಡ್ ಅಪ್ರೋಚ್ ಟು ರಿಸರ್ಚ್ ಅಂಡ್ ಎವಾಲ್ಯುಯೇಷನ್ ಸಂಸ್ಥೆಗಳು ಕೂಡ ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್
 

ಮೋದಿ ಅವರ ಆಸ್ಟ್ರೇಲಿಯಾ ಪ್ರವಾಸ ಸೋಮವಾರದಿಂದ ಮೂರು ದಿನಗಳ ಕಾಲ ನಡೆಯಲಿದ್ದು,ಈ ವೇಳೆ ಸಿಡ್ನಿಗೆ ಮಾತ್ರ ಭೇಟಿ ನೀಡಲಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆ ಮತ್ತು ವ್ಯಾಪಾರ ವಹಿವಾಟಿನ ಸಭೆಗಳ ಜೊತೆಗೆ, ಅವರು ಮರುದಿನ ಅಲ್ಬನೀಸ್ ಜೊತೆಗೆ ಅಲ್ಲಿಯ ದೊಡ್ಡ ಸಮುದಾಯದೊಂದಿಗೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮರುದಿನ ಸಂಜೆ ಕ್ಯಾನ್‌ಬೆರಾದಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವೇಳೆಗೆ ಮೋದಿ ಅವರು ಅಲ್ಲಿಂದ ಕಾಲ್ಕಿತ್ತುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಂದರೆ 2002ರ ಸಮಯದಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಮೋದಿ ಅವರ ಕ್ರಮಗಳನ್ನು ಈ ಎರಡು ಭಾಗಗಳ BBC ಸಾಕ್ಷ್ಯಚಿತ್ರವು  ಪರಿಶೀಲಿಸುತ್ತದೆ. ಈ ಸಾಕ್ಷ್ಯ ಚಿತ್ರದ ಪ್ರದರ್ಶನದ ನಂತರ ಗುಜರಾತ್ ಗಲಭೆಗಳು ಮತ್ತು 2014 ರಿಂದ ಅವರ ಆಡಳಿತದಲ್ಲಿರುವ ಭಾರತವನ್ನು ಕೇಂದ್ರೀಕರಿಸುವ ಚರ್ಚೆಯನ್ನು ನಡೆಸಲಾಗುವುದು. ಭಾಷಣಕಾರರಲ್ಲಿ ಮೋದಿ ವಿರುದ್ಧ ಮಾತನಾಡಿದ್ದ ಜೈಲಿನಲ್ಲಿರುವ ಗುಜರಾತ್ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಅವರ ಪುತ್ರಿ ಆಕಾಶಿ ಭಟ್ ಮತ್ತು ಭಾರತದಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಮಾಜಿ ಮುಖ್ಯಸ್ಥ ಆಕರ್ ಪಟೇಲ್ ಇರಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...