Homeಮುಖಪುಟಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ. 

- Advertisement -
- Advertisement -

ಭಾರತ ಒಂದ ಕೃಷಿ ಪ್ರಧಾನ ದೇಶ, ಕೃಷಿ ಭಾರತದ ಬೆನ್ನೆಲುಬು ಎಂದು ಹಿಂದಿನಿಂದಲೂ ಇರುವ ಒಂದು ಮಾತು. ಹಾಗೆ ದೇಶದ 50% ಕ್ಕಿಂತ ಹೆಚ್ಚು ಜನರು ಕೃಷಿಯನ್ನು ಅವಲಂಭಿಸಿದ್ದಾರೆ. ಆದರೆ ವಿಶ್ವದಾದ್ಯಂತ ಕೊರೊನಾ ಸಮಯದಲ್ಲಿ ಎಲ್ಲಾ ಆರ್ಥಿಕ ಚಟುವಟಿಕೆಗಳು ನಿಂತು ಹೋದರೂ ಕೃಷಿ ಚಟುವಟಿಕೆ ಮಾತ್ರ ಮುಂದುವರೆದಿತ್ತು. ಕೃಷಿಯಿಂದ ಬೇಸತ್ತು ಉದ್ಯೋಗ ಅರಸಿಕೊಂಡು ಪೇಟೆಗೆ ಹೊರಟಿದ್ದ ಯುವಜನರು ಮರಳಿ ತಮ್ಮ ಹಳ್ಳಿಗೆ ತೆರಳಿ ಕೃಷಿ ಪ್ರಾರಂಭಿಸಿದ್ದರು.

ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳು ಜನರ ಪರವಾಗಿ ನಿಂತು ಜನಪರವಾಗಿ ಕೆಲಸ ಮಾಡಬೇಕಿತ್ತು. ಜನರ ಹಸಿವು ಸೇರಿದಂತೆ ಅವರ ಸಂಕಷ್ಟಗಳ ಪರಿಹಾರಕ್ಕೆ ಬೇಕಾಗಿ ಯೋಜನೆಗಳನ್ನು ತರಬೇಕಾಗಿತ್ತು. ಆದರೆ ಸರ್ಕಾರಗಳು ಏನು ಮಾಡಿದ್ದಾರೆ ಎಂದು ನೋಡಿದರೆ ನಿರಾಸೆ ಮೂಡುತ್ತದೆ. ಕೊರೊನಾ ನಿರ್ವಹಣೆಯಲ್ಲಿನ ಲೋಪದೋಷಗಳನ್ನು ಸರಿಪಡಿಸದೆ, ಅದರಲ್ಲಿ ನಡೆಯುತ್ತಿರುವ ಸಾಲು ಸಾಲು ಭ್ರಷ್ಟಾಚಾರ ಆರೋಪಗಳ ಬಗ್ಗೆ ಕಿವಿಕೊಡದೆ ಪ್ರಸ್ತುತ ಬಿಕ್ಕಟ್ಟಿಗೆ ಸಂಬಂಧವೆ ಇಲ್ಲದೆ ಹಲವಾರು ಕಾಯ್ದೆಗಳನ್ನು-ತಿದ್ದುಪಡಿಗಳನ್ನು ತಂದಿತು. ಮೂರು ಕೃಷಿ ಮಸೂದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಹೊರಡಿಸಿ ಯಾವುದೇ ಚರ್ಚೆ ನಡೆಸದೇ ಸಂಸತ್ತಿನಲ್ಲಿ ಅಂಗೀಕರಿಸಿದೆ. ಈ ಕಾಯ್ದೆಗಳು ರೈತವಿರೋಧಿ ಎಂದು ರೈತ ಸಂಘಟನೆಗಳು ಹಲವು ದಿನಗಳಿಂದ ಹೋರಾಟಕ್ಕಿಳಿದಿವೆ.

ಅಲ್ಲದೆ ಕೊರೊನಾದಿಂದಾಗಿ ಕಂಗೆಟ್ಟ ಆರ್ಥಿಕತೆಯನ್ನು ಸರಿಯಾಗಿಸುವ ನೆಪದಲ್ಲಿ ಕಾರ್ಮಿಕ ಕಾನೂನುಗಳನ್ನೇ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಈ ಕಾನೂನುಗಳ ವಿರುದ್ದ ಈಗಾಗಲೇ ನಿರಂತರ ಪ್ರತಿಭಟನೆ ನಡೆಯುತ್ತಲೇ ಇದ್ದರೂ ಸರ್ಕಾರಕ್ಕೆ ಈ ಧ್ವನಿ ಕೇಳಿಸುತ್ತಿಲ್ಲ ಅಥವಾ ಕೇಳಿಸದಂತೆ ನಟನೆ ಮಾಡುತ್ತಿದೆ.

ಸರ್ಕಾರ ತಾನು ರೈತರಿಗೆ ಒಳಿತು ಮಾಡುತ್ತಿದ್ದೇನೆ ಎಂದು ಹೇಳುತ್ತಲೇ ಕೃಷಿ ವಲಯದಲ್ಲೂ ಬೃಹತ್‌ ಬಂಡವಾಳಶಾಹಿಗಳನ್ನು ಇಳಿಸಲು ಹೊರಟಿದೆ. ಆರ್ಥಿಕತೆ ಮೇಲೆತ್ತುತ್ತೇವೆ ಎಂಬ ಹೆಸರಿನಲ್ಲಿ ಸುಮಾರು 200 ವರ್ಷಗಳ ಕಾಲ ಸಂಘರ್ಷ, ಹೋರಾಟ, ತ್ಯಾಗ ಮತ್ತು ಬಲಿದಾನಗಳಿಂದ ಪಡೆದ ಕಾರ್ಮಿಕರ ಹಕ್ಕುಗಳನ್ನು, ಕಾನೂನುಗಳನ್ನೇ ಸರ್ಕಾರ ಇಲ್ಲವಾಗಿಸಲು ಹೊರಟಿದೆ ಎಂಬುದು ರೈತ-ಕಾರ್ಮಿಕ ಸಂಘಟನೆಗಳ ಆರೋಪ.

ಈ ದೇಶದ ಸಂಪತ್ತನ್ನು ಸೃಷ್ಟಿಸುವ ಮೂಲಕ ಸುಭದ್ರ ದೇಶವನ್ನು ಕಟ್ಟುವ ರೈತ ಹಾಗೂ ಕಾರ್ಮಿಕರನ್ನು ಬಂಡವಾಳಶಾಹಿಗಳ ಗುಲಾಮರನ್ನಾಗಿಸಲು ಸರ್ಕಾರ ಹೊರಟಿದೆ. ಕೃಷಿ ನೀತಿಗಳ ಹೆಸರಿನಲ್ಲಿ ಕೃಷಿಯನ್ನು, ಆಹಾರ ಉತ್ಪನ್ನಗಳನ್ನು, ಅವುಗಳ ಮಾರುಕಟ್ಟೆಗಳನ್ನು ಬೃಹತ್ ಬಂಡವಾಳ ಶಾಹಿಗಳಿಗೆ ಪರಭಾರೆ ಮಾಡುತ್ತಲೆ, ಕಾರ್ಮಿಕರನ್ನು ಶೋಷಣೆ ಮಾಡುವ ಶತಮಾನಗಳಷ್ಟು ಹಿಂದೆ ಇದ್ದ ಕಾನೂನಗಳಿಗೆ ಮತ್ತೇ ಜಾರಿಗೆ ತರುತ್ತಿದೆ ಎಂದು ಹಲವು ಸಂಘಟನೆಗಳು ಹೋರಾಟಕ್ಕಿಳಿದಿವೆ.

ಈ ಹಿನ್ನಲೆಯಲ್ಲಿ ನವೆಂಬರ್‌ 26-27 ರಂದು ’ದೆಹಲಿ ಚಲೋ’ ನಡೆಯಲಿದೆ. ಎಐಕೆಎಸ್‌ಸಿಸಿ ನೇತೃತ್ವದಲ್ಲಿ 500 ಕ್ಕೂ ಹೆಚ್ಚಿನ ಪ್ರಮುಖ ರೈತ ಸಂಘಟನೆಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಕಾರ್ಮಿಕ ಕಾನೂನಿನ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ನೆವೆಂಬರ್‌ 26(ನಾಳೆ) ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ. ವಿದ್ಯಾರ್ಥಿ ಸಂಘಟನೆಗಳು ’ಹೊಸ ಶಿಕ್ಷಣ ನೀತಿ’ಯ ವಿರುದ್ದ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಈಗಾಗಲೇ ಕರ್ನಾಟಕದಿಂದ ಒಂದು ತಂಡ ದೆಹಲಿಗೆ ಹೊರಟಿದೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮುಷ್ಕರಗಳು ನಡೆಯಲಿದೆ. ಹರಿಯಾಣದ ರೈತ ಸಂಘಟನೆಗಳು ತೀವ್ರ ಪ್ರತಿಭಟನೆಗೆ ಸಿದ್ದತೆ ನಡೆಸಿದ ಬೆನ್ನಲ್ಲೆ ಸುಮಾರು 24 ರೈತ ಮುಖಂಡರನ್ನು ಬಂಧಿಸಲಾಗಿದೆ. ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ.


ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...