Homeಮುಖಪುಟಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ. 

- Advertisement -
- Advertisement -

ಭಾರತ ಒಂದ ಕೃಷಿ ಪ್ರಧಾನ ದೇಶ, ಕೃಷಿ ಭಾರತದ ಬೆನ್ನೆಲುಬು ಎಂದು ಹಿಂದಿನಿಂದಲೂ ಇರುವ ಒಂದು ಮಾತು. ಹಾಗೆ ದೇಶದ 50% ಕ್ಕಿಂತ ಹೆಚ್ಚು ಜನರು ಕೃಷಿಯನ್ನು ಅವಲಂಭಿಸಿದ್ದಾರೆ. ಆದರೆ ವಿಶ್ವದಾದ್ಯಂತ ಕೊರೊನಾ ಸಮಯದಲ್ಲಿ ಎಲ್ಲಾ ಆರ್ಥಿಕ ಚಟುವಟಿಕೆಗಳು ನಿಂತು ಹೋದರೂ ಕೃಷಿ ಚಟುವಟಿಕೆ ಮಾತ್ರ ಮುಂದುವರೆದಿತ್ತು. ಕೃಷಿಯಿಂದ ಬೇಸತ್ತು ಉದ್ಯೋಗ ಅರಸಿಕೊಂಡು ಪೇಟೆಗೆ ಹೊರಟಿದ್ದ ಯುವಜನರು ಮರಳಿ ತಮ್ಮ ಹಳ್ಳಿಗೆ ತೆರಳಿ ಕೃಷಿ ಪ್ರಾರಂಭಿಸಿದ್ದರು.

ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳು ಜನರ ಪರವಾಗಿ ನಿಂತು ಜನಪರವಾಗಿ ಕೆಲಸ ಮಾಡಬೇಕಿತ್ತು. ಜನರ ಹಸಿವು ಸೇರಿದಂತೆ ಅವರ ಸಂಕಷ್ಟಗಳ ಪರಿಹಾರಕ್ಕೆ ಬೇಕಾಗಿ ಯೋಜನೆಗಳನ್ನು ತರಬೇಕಾಗಿತ್ತು. ಆದರೆ ಸರ್ಕಾರಗಳು ಏನು ಮಾಡಿದ್ದಾರೆ ಎಂದು ನೋಡಿದರೆ ನಿರಾಸೆ ಮೂಡುತ್ತದೆ. ಕೊರೊನಾ ನಿರ್ವಹಣೆಯಲ್ಲಿನ ಲೋಪದೋಷಗಳನ್ನು ಸರಿಪಡಿಸದೆ, ಅದರಲ್ಲಿ ನಡೆಯುತ್ತಿರುವ ಸಾಲು ಸಾಲು ಭ್ರಷ್ಟಾಚಾರ ಆರೋಪಗಳ ಬಗ್ಗೆ ಕಿವಿಕೊಡದೆ ಪ್ರಸ್ತುತ ಬಿಕ್ಕಟ್ಟಿಗೆ ಸಂಬಂಧವೆ ಇಲ್ಲದೆ ಹಲವಾರು ಕಾಯ್ದೆಗಳನ್ನು-ತಿದ್ದುಪಡಿಗಳನ್ನು ತಂದಿತು. ಮೂರು ಕೃಷಿ ಮಸೂದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಹೊರಡಿಸಿ ಯಾವುದೇ ಚರ್ಚೆ ನಡೆಸದೇ ಸಂಸತ್ತಿನಲ್ಲಿ ಅಂಗೀಕರಿಸಿದೆ. ಈ ಕಾಯ್ದೆಗಳು ರೈತವಿರೋಧಿ ಎಂದು ರೈತ ಸಂಘಟನೆಗಳು ಹಲವು ದಿನಗಳಿಂದ ಹೋರಾಟಕ್ಕಿಳಿದಿವೆ.

ಅಲ್ಲದೆ ಕೊರೊನಾದಿಂದಾಗಿ ಕಂಗೆಟ್ಟ ಆರ್ಥಿಕತೆಯನ್ನು ಸರಿಯಾಗಿಸುವ ನೆಪದಲ್ಲಿ ಕಾರ್ಮಿಕ ಕಾನೂನುಗಳನ್ನೇ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಈ ಕಾನೂನುಗಳ ವಿರುದ್ದ ಈಗಾಗಲೇ ನಿರಂತರ ಪ್ರತಿಭಟನೆ ನಡೆಯುತ್ತಲೇ ಇದ್ದರೂ ಸರ್ಕಾರಕ್ಕೆ ಈ ಧ್ವನಿ ಕೇಳಿಸುತ್ತಿಲ್ಲ ಅಥವಾ ಕೇಳಿಸದಂತೆ ನಟನೆ ಮಾಡುತ್ತಿದೆ.

ಸರ್ಕಾರ ತಾನು ರೈತರಿಗೆ ಒಳಿತು ಮಾಡುತ್ತಿದ್ದೇನೆ ಎಂದು ಹೇಳುತ್ತಲೇ ಕೃಷಿ ವಲಯದಲ್ಲೂ ಬೃಹತ್‌ ಬಂಡವಾಳಶಾಹಿಗಳನ್ನು ಇಳಿಸಲು ಹೊರಟಿದೆ. ಆರ್ಥಿಕತೆ ಮೇಲೆತ್ತುತ್ತೇವೆ ಎಂಬ ಹೆಸರಿನಲ್ಲಿ ಸುಮಾರು 200 ವರ್ಷಗಳ ಕಾಲ ಸಂಘರ್ಷ, ಹೋರಾಟ, ತ್ಯಾಗ ಮತ್ತು ಬಲಿದಾನಗಳಿಂದ ಪಡೆದ ಕಾರ್ಮಿಕರ ಹಕ್ಕುಗಳನ್ನು, ಕಾನೂನುಗಳನ್ನೇ ಸರ್ಕಾರ ಇಲ್ಲವಾಗಿಸಲು ಹೊರಟಿದೆ ಎಂಬುದು ರೈತ-ಕಾರ್ಮಿಕ ಸಂಘಟನೆಗಳ ಆರೋಪ.

ಈ ದೇಶದ ಸಂಪತ್ತನ್ನು ಸೃಷ್ಟಿಸುವ ಮೂಲಕ ಸುಭದ್ರ ದೇಶವನ್ನು ಕಟ್ಟುವ ರೈತ ಹಾಗೂ ಕಾರ್ಮಿಕರನ್ನು ಬಂಡವಾಳಶಾಹಿಗಳ ಗುಲಾಮರನ್ನಾಗಿಸಲು ಸರ್ಕಾರ ಹೊರಟಿದೆ. ಕೃಷಿ ನೀತಿಗಳ ಹೆಸರಿನಲ್ಲಿ ಕೃಷಿಯನ್ನು, ಆಹಾರ ಉತ್ಪನ್ನಗಳನ್ನು, ಅವುಗಳ ಮಾರುಕಟ್ಟೆಗಳನ್ನು ಬೃಹತ್ ಬಂಡವಾಳ ಶಾಹಿಗಳಿಗೆ ಪರಭಾರೆ ಮಾಡುತ್ತಲೆ, ಕಾರ್ಮಿಕರನ್ನು ಶೋಷಣೆ ಮಾಡುವ ಶತಮಾನಗಳಷ್ಟು ಹಿಂದೆ ಇದ್ದ ಕಾನೂನಗಳಿಗೆ ಮತ್ತೇ ಜಾರಿಗೆ ತರುತ್ತಿದೆ ಎಂದು ಹಲವು ಸಂಘಟನೆಗಳು ಹೋರಾಟಕ್ಕಿಳಿದಿವೆ.

ಈ ಹಿನ್ನಲೆಯಲ್ಲಿ ನವೆಂಬರ್‌ 26-27 ರಂದು ’ದೆಹಲಿ ಚಲೋ’ ನಡೆಯಲಿದೆ. ಎಐಕೆಎಸ್‌ಸಿಸಿ ನೇತೃತ್ವದಲ್ಲಿ 500 ಕ್ಕೂ ಹೆಚ್ಚಿನ ಪ್ರಮುಖ ರೈತ ಸಂಘಟನೆಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಕಾರ್ಮಿಕ ಕಾನೂನಿನ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ನೆವೆಂಬರ್‌ 26(ನಾಳೆ) ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ. ವಿದ್ಯಾರ್ಥಿ ಸಂಘಟನೆಗಳು ’ಹೊಸ ಶಿಕ್ಷಣ ನೀತಿ’ಯ ವಿರುದ್ದ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಈಗಾಗಲೇ ಕರ್ನಾಟಕದಿಂದ ಒಂದು ತಂಡ ದೆಹಲಿಗೆ ಹೊರಟಿದೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮುಷ್ಕರಗಳು ನಡೆಯಲಿದೆ. ಹರಿಯಾಣದ ರೈತ ಸಂಘಟನೆಗಳು ತೀವ್ರ ಪ್ರತಿಭಟನೆಗೆ ಸಿದ್ದತೆ ನಡೆಸಿದ ಬೆನ್ನಲ್ಲೆ ಸುಮಾರು 24 ರೈತ ಮುಖಂಡರನ್ನು ಬಂಧಿಸಲಾಗಿದೆ. ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ.


ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...