Homeಮುಖಪುಟಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ. 

- Advertisement -
- Advertisement -

ಭಾರತ ಒಂದ ಕೃಷಿ ಪ್ರಧಾನ ದೇಶ, ಕೃಷಿ ಭಾರತದ ಬೆನ್ನೆಲುಬು ಎಂದು ಹಿಂದಿನಿಂದಲೂ ಇರುವ ಒಂದು ಮಾತು. ಹಾಗೆ ದೇಶದ 50% ಕ್ಕಿಂತ ಹೆಚ್ಚು ಜನರು ಕೃಷಿಯನ್ನು ಅವಲಂಭಿಸಿದ್ದಾರೆ. ಆದರೆ ವಿಶ್ವದಾದ್ಯಂತ ಕೊರೊನಾ ಸಮಯದಲ್ಲಿ ಎಲ್ಲಾ ಆರ್ಥಿಕ ಚಟುವಟಿಕೆಗಳು ನಿಂತು ಹೋದರೂ ಕೃಷಿ ಚಟುವಟಿಕೆ ಮಾತ್ರ ಮುಂದುವರೆದಿತ್ತು. ಕೃಷಿಯಿಂದ ಬೇಸತ್ತು ಉದ್ಯೋಗ ಅರಸಿಕೊಂಡು ಪೇಟೆಗೆ ಹೊರಟಿದ್ದ ಯುವಜನರು ಮರಳಿ ತಮ್ಮ ಹಳ್ಳಿಗೆ ತೆರಳಿ ಕೃಷಿ ಪ್ರಾರಂಭಿಸಿದ್ದರು.

ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳು ಜನರ ಪರವಾಗಿ ನಿಂತು ಜನಪರವಾಗಿ ಕೆಲಸ ಮಾಡಬೇಕಿತ್ತು. ಜನರ ಹಸಿವು ಸೇರಿದಂತೆ ಅವರ ಸಂಕಷ್ಟಗಳ ಪರಿಹಾರಕ್ಕೆ ಬೇಕಾಗಿ ಯೋಜನೆಗಳನ್ನು ತರಬೇಕಾಗಿತ್ತು. ಆದರೆ ಸರ್ಕಾರಗಳು ಏನು ಮಾಡಿದ್ದಾರೆ ಎಂದು ನೋಡಿದರೆ ನಿರಾಸೆ ಮೂಡುತ್ತದೆ. ಕೊರೊನಾ ನಿರ್ವಹಣೆಯಲ್ಲಿನ ಲೋಪದೋಷಗಳನ್ನು ಸರಿಪಡಿಸದೆ, ಅದರಲ್ಲಿ ನಡೆಯುತ್ತಿರುವ ಸಾಲು ಸಾಲು ಭ್ರಷ್ಟಾಚಾರ ಆರೋಪಗಳ ಬಗ್ಗೆ ಕಿವಿಕೊಡದೆ ಪ್ರಸ್ತುತ ಬಿಕ್ಕಟ್ಟಿಗೆ ಸಂಬಂಧವೆ ಇಲ್ಲದೆ ಹಲವಾರು ಕಾಯ್ದೆಗಳನ್ನು-ತಿದ್ದುಪಡಿಗಳನ್ನು ತಂದಿತು. ಮೂರು ಕೃಷಿ ಮಸೂದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಹೊರಡಿಸಿ ಯಾವುದೇ ಚರ್ಚೆ ನಡೆಸದೇ ಸಂಸತ್ತಿನಲ್ಲಿ ಅಂಗೀಕರಿಸಿದೆ. ಈ ಕಾಯ್ದೆಗಳು ರೈತವಿರೋಧಿ ಎಂದು ರೈತ ಸಂಘಟನೆಗಳು ಹಲವು ದಿನಗಳಿಂದ ಹೋರಾಟಕ್ಕಿಳಿದಿವೆ.

ಅಲ್ಲದೆ ಕೊರೊನಾದಿಂದಾಗಿ ಕಂಗೆಟ್ಟ ಆರ್ಥಿಕತೆಯನ್ನು ಸರಿಯಾಗಿಸುವ ನೆಪದಲ್ಲಿ ಕಾರ್ಮಿಕ ಕಾನೂನುಗಳನ್ನೇ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಈ ಕಾನೂನುಗಳ ವಿರುದ್ದ ಈಗಾಗಲೇ ನಿರಂತರ ಪ್ರತಿಭಟನೆ ನಡೆಯುತ್ತಲೇ ಇದ್ದರೂ ಸರ್ಕಾರಕ್ಕೆ ಈ ಧ್ವನಿ ಕೇಳಿಸುತ್ತಿಲ್ಲ ಅಥವಾ ಕೇಳಿಸದಂತೆ ನಟನೆ ಮಾಡುತ್ತಿದೆ.

ಸರ್ಕಾರ ತಾನು ರೈತರಿಗೆ ಒಳಿತು ಮಾಡುತ್ತಿದ್ದೇನೆ ಎಂದು ಹೇಳುತ್ತಲೇ ಕೃಷಿ ವಲಯದಲ್ಲೂ ಬೃಹತ್‌ ಬಂಡವಾಳಶಾಹಿಗಳನ್ನು ಇಳಿಸಲು ಹೊರಟಿದೆ. ಆರ್ಥಿಕತೆ ಮೇಲೆತ್ತುತ್ತೇವೆ ಎಂಬ ಹೆಸರಿನಲ್ಲಿ ಸುಮಾರು 200 ವರ್ಷಗಳ ಕಾಲ ಸಂಘರ್ಷ, ಹೋರಾಟ, ತ್ಯಾಗ ಮತ್ತು ಬಲಿದಾನಗಳಿಂದ ಪಡೆದ ಕಾರ್ಮಿಕರ ಹಕ್ಕುಗಳನ್ನು, ಕಾನೂನುಗಳನ್ನೇ ಸರ್ಕಾರ ಇಲ್ಲವಾಗಿಸಲು ಹೊರಟಿದೆ ಎಂಬುದು ರೈತ-ಕಾರ್ಮಿಕ ಸಂಘಟನೆಗಳ ಆರೋಪ.

ಈ ದೇಶದ ಸಂಪತ್ತನ್ನು ಸೃಷ್ಟಿಸುವ ಮೂಲಕ ಸುಭದ್ರ ದೇಶವನ್ನು ಕಟ್ಟುವ ರೈತ ಹಾಗೂ ಕಾರ್ಮಿಕರನ್ನು ಬಂಡವಾಳಶಾಹಿಗಳ ಗುಲಾಮರನ್ನಾಗಿಸಲು ಸರ್ಕಾರ ಹೊರಟಿದೆ. ಕೃಷಿ ನೀತಿಗಳ ಹೆಸರಿನಲ್ಲಿ ಕೃಷಿಯನ್ನು, ಆಹಾರ ಉತ್ಪನ್ನಗಳನ್ನು, ಅವುಗಳ ಮಾರುಕಟ್ಟೆಗಳನ್ನು ಬೃಹತ್ ಬಂಡವಾಳ ಶಾಹಿಗಳಿಗೆ ಪರಭಾರೆ ಮಾಡುತ್ತಲೆ, ಕಾರ್ಮಿಕರನ್ನು ಶೋಷಣೆ ಮಾಡುವ ಶತಮಾನಗಳಷ್ಟು ಹಿಂದೆ ಇದ್ದ ಕಾನೂನಗಳಿಗೆ ಮತ್ತೇ ಜಾರಿಗೆ ತರುತ್ತಿದೆ ಎಂದು ಹಲವು ಸಂಘಟನೆಗಳು ಹೋರಾಟಕ್ಕಿಳಿದಿವೆ.

ಈ ಹಿನ್ನಲೆಯಲ್ಲಿ ನವೆಂಬರ್‌ 26-27 ರಂದು ’ದೆಹಲಿ ಚಲೋ’ ನಡೆಯಲಿದೆ. ಎಐಕೆಎಸ್‌ಸಿಸಿ ನೇತೃತ್ವದಲ್ಲಿ 500 ಕ್ಕೂ ಹೆಚ್ಚಿನ ಪ್ರಮುಖ ರೈತ ಸಂಘಟನೆಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಕಾರ್ಮಿಕ ಕಾನೂನಿನ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ನೆವೆಂಬರ್‌ 26(ನಾಳೆ) ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ. ವಿದ್ಯಾರ್ಥಿ ಸಂಘಟನೆಗಳು ’ಹೊಸ ಶಿಕ್ಷಣ ನೀತಿ’ಯ ವಿರುದ್ದ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಈಗಾಗಲೇ ಕರ್ನಾಟಕದಿಂದ ಒಂದು ತಂಡ ದೆಹಲಿಗೆ ಹೊರಟಿದೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮುಷ್ಕರಗಳು ನಡೆಯಲಿದೆ. ಹರಿಯಾಣದ ರೈತ ಸಂಘಟನೆಗಳು ತೀವ್ರ ಪ್ರತಿಭಟನೆಗೆ ಸಿದ್ದತೆ ನಡೆಸಿದ ಬೆನ್ನಲ್ಲೆ ಸುಮಾರು 24 ರೈತ ಮುಖಂಡರನ್ನು ಬಂಧಿಸಲಾಗಿದೆ. ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ.


ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...